Homeಕರ್ನಾಟಕಹಿಂದುತ್ವದ ಅಜೆಂಡಾಗಳಿಗೆ ಬಲಿಯಾಗುತ್ತಿರುವ ‘ಹಿಂದೂ’ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು

ಹಿಂದುತ್ವದ ಅಜೆಂಡಾಗಳಿಗೆ ಬಲಿಯಾಗುತ್ತಿರುವ ‘ಹಿಂದೂ’ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು

- Advertisement -
- Advertisement -

ಕಳೆದ ಆರೇಳು ತಿಂಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಸಂಬಂಧಿ ಗೊಂದಲಗಳು ಹೆಚ್ಚು ಬಾಧಿಸುತ್ತಿರುವುದು ಮತ್ತು ಮುಂದೆ ಬಾಧಿಸಲಿರುವುದು ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು. ಈಗಾಗಲೇ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ನಡುವೆ ದೊಡ್ಡ ಕಂದಕ ನಿರ್ಮಾಣವಾಗಿದೆ. ಈ ಅಸಮಾನತೆಯನ್ನು ಇಲ್ಲವಾಗಿಸಿವುದು ಶಿಕ್ಷಣ ಕ್ಷೇತ್ರದಲ್ಲಿ ನಡೆಯಬೇಕಿರುವ ಅಗತ್ಯದ ಕೆಲಸ. ಆದರೆ ದಿನೇ ದಿನೇ ಈ ಅಂತರ ಹೆಚ್ಚಾಗುತ್ತಲೇ ಇದೆ.

ರಾಜ್ಯದ ಯೂನಿವರ್ಸಿಟಿಗಳಿಂದ ಹೊರಗೆ ಬಂದ ತಕ್ಷಣ ಒಂದೋ ಉದ್ಯೋಗ ಅಥವಾ ಉನ್ನತ ಶಿಕ್ಷಣಕ್ಕೆ ಹೋಗಬೇಕು. ಆದರೆ ಈ ಎರಡಕ್ಕೂ ಬೇಕಾದ ಕೌಶಲ್ಯವನ್ನು ಹೊಂದಿರದೇ ಇದ್ದಾಗ ವಿದ್ಯಾರ್ಥಿಗಳು ಅನೇಕ ಸಂಕಷ್ಟಗಳನ್ನು ಎದುರಿಸಬೇಕಾಗಿ ಬರುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈಗಾಗಲೇ ದೇಶ ನಿರುದ್ಯೋಗದ ಸಮಸ್ಯೆಯಿಂದ ಬಳಲುತ್ತಿದೆ. ಆದರೆ ಉದ್ಯೋಗಗಳು ಇಲ್ಲವೆಂದಲ್ಲ. ಆದರೆ ಈ ಉದ್ಯೋಗ ಪಡೆಯಲು ಬೇಕಾದ ಕೌಶಲ್ಯಗಳ ಕೊರತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಇದೆ. ಅಲ್ಲದೇ ಈ ಕೌಶಲ್ಯಗಳನ್ನು ಬೋಧಿಸುವ ಪಠ್ಯ ಕ್ರಮವೂ ನಮ್ಮಲ್ಲಿ ಇಲ್ಲ.

ಇದನ್ನೂ ಓದಿ: ಶಾಲೆಗಳಲ್ಲಿ ಹಿಜಾಬ್‌‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ಗ್ರಾಮೀಣ ಭಾಗದಲ್ಲಿ ಇರುವ ಖಾಸಗಿಯೂ ಸೇರಿದಂತೆ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಇಂಗ್ಲಿಷ್ ಮಾತನಾಡುವುದಿಲ್ಲ. ವಿದ್ಯಾರ್ಥಿಗಳನ್ನು ಬಿಡಿ, ಉಪನ್ಯಾಸಕರೂ ತರಗತಿ ಮುಗಿದ ಮೇಲೆ ಇಂಗ್ಲೀಷ್‌ನಲ್ಲಿ ಮಾತನಾಡುವುದಿಲ್ಲ. ತರಗತಿಯಲ್ಲಿ ಪಾಠ ಮಾಡಲು ಬಳಸುವ ಇಂಗ್ಲೀಷ್ ಕೂಡ ಉತ್ತಮವಾಗಿಲ್ಲ.
ಈ ವಿದ್ಯಾರ್ಥಿಗಳು ಉದ್ಯೋಗ ನಿಮಿತ್ತ ಉನ್ನತ ಸಂಸ್ಥೆಗಳಿಗೆ ಹೋಗುವಾಗ ಅವರ ಸಂವಹನ ಸಾಮರ್ಥ್ಯ ನೋಡಿ ಬಾಗಿಲನ್ನು ಮುಚ್ಚುತ್ತಾರೆ. ಇವರಲ್ಲಿ ಸ್ಕಿಲ್ ಇದ್ದೂ, ಜ್ಞಾನ ಇದ್ದರೂ ಅದನ್ನು ಹೊರಗೆ ಹಾಕುವ ‘Presentation Skill’ ನ ಕೊರತೆ ಇರುತ್ತದೆ.

ವಿಶ್ವವಿದ್ಯಾಲಯಲ್ಲಿ ಒಬ್ಬ ಪಿಎಚ್‌ಡಿ ವಿದ್ಯಾರ್ಥಿಯ ಮೌಖಿಕ ಪರೀಕ್ಷೆಯಲ್ಲಿ ಭಾಗವಹಿಸಿದ್ದೆ. ಆಕೆ ತನ್ನ ಪಿಪಿಟಿಯಲ್ಲಿ ಕಮಲಾದೇವಿ ಚಟ್ಟೋಪಾಧ್ಯಾಯ ಅವರ ಹೆಸರನ್ನು ಉಲ್ಲೇಖ ಮಾಡಿದ್ದರು. ಪರೀಕ್ಷಕರು ಆಕೆಯಲ್ಲಿ ‘ಕಮಲಾದೇವಿ ಚಟ್ಟೋಪಾಧ್ಯಾಯ ಯಾರು?’ ಎಂದು ಕೇಳಿದರು. ನಾಲ್ಕೈದು ವರ್ಷ ಸಂಶೋಧನೆ ನಡೆಸಿರುವ ವಿದ್ಯಾರ್ಥಿಗೆ ಕಮಲಾದೇವಿ ಚಟ್ಟೋಪಾಧ್ಯಾಯ ಯಾರು ಎಂದೇ ಗೊತ್ತಿರಲಿಲ್ಲ! ಆದರೆ ಅವರ ಸಂಶೋಧನಾ ಪ್ರಬಂಧವನ್ನು ಪಿಎಚ್‌ಡಿ ಪದವಿಗೆ ಸ್ವೀಕರಿಸಲಾಯಿತು!

ಹಾಗಾದರೆ ನಮ್ಮ ವಿವಿಗಳಿಂದ ಹೊರಬರುವ ಸಂಶೋಧನೆಗಳ ಗುಣಮಟ್ಟ ಹೇಗಿರಬಹುದು? ಒಂದು ವೇಳೆ ಇದೇ ವಿದ್ಯಾರ್ಥಿಗಳು ಮುಂದೆ ಶಿಕ್ಷಕರಾದರು ಮಕ್ಕಳ ಗತಿ ಏನು?

ನಾನು ಎಂ.ಎ ಓದುವಾಗ ಸಂಶೋಧನ ವಿಧಾನಗಳ ಬಗ್ಗೆ ಇರುವ ಪಾಠ ಯಾವತ್ತೂ ನೆನಪಲ್ಲಿ ಉಳಿಯಲೇ ಇಲ್ಲ. ತರಗತಿಯ ವಿದ್ಯಾರ್ಥಿಗಳಿಗೆ ‘ಸಂಶೋಧನೆ ಎಂದರೇನು? ಸಂಶೋಧನೆ ಯಾಕೆ ಮಾಡಬೇಕು?’ ಎಂಬ ಅತ್ಯಂತ ಬೇಸಿಕ್ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಾಗದ ಹಾಗೆ ವಿದ್ಯಾರ್ಥಿಗಳನ್ನು ತಯಾರಿ ಮಾಡಲಾಗಿದೆ. ಹೀಗಿರುವ ವಿದ್ಯಾರ್ಥಿಗಳು ದೇಶದ ಉನ್ನತ ಶಿಕ್ಷಣ ಸಂಸ್ಥೆಗಳ ಒಳಗೆ ಹೇಗೆ ಪ್ರವೇಶ ಪಡೆಯಲು ಸಾಧ್ಯ?

ದಿನೇ ದಿನೇ ಸಂಶೋಧನಾ ಕ್ಷೇತದಲ್ಲಿ ಹೊಸ ಹೊಸ ಬದಲಾವಣೆಗಳು ನಡೆಯುತ್ತಿವೆ. ಸಂಶೋಧನೆಯಲ್ಲಿ ಬಳಕೆಯಾಗುವ ಪರಿಭಾಷೆಗಳು ಬದಲಾಗುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಹೊಸ ಅನ್ವೇಷಣೆಗಳು ನಡೆಯುತ್ತಿವೆ. ಆದರೆ ಇದ್ಯಾವುದೂ ನಮ್ಮ ಮಕ್ಕಳ ಅರಿವಿಗೆ ಬರುತ್ತಿಲ್ಲ. ತರಗತಿಗಳು ಅಪ್ಡೇಟ್ ಆಗುತ್ತಿಲ್ಲ. ಶಿಕ್ಷಕರು ಹೊಸತನಕ್ಕೆ ತೆರೆದುಕೊಳ್ಳುತ್ತಿಲ್ಲ.

ಇದನ್ನೂ ಓದಿ: ಹಿಜಾಬ್ ವಿವಾದದ ಸುತ್ತ ದ್ವೇಷದ ಹುತ್ತ; ಹಿಂದುತ್ವದಲ್ಲಿ ಬಿರುಕು ಮತ್ತು ನಂಜಿನ ನೀರಡಿಕೆ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇರುವ ಒಂದು ಒಳ್ಳೆಯ ಅವಕಾಶ ಎಂದರೆ ಭಿನ್ನ ಭಾಷಿಲ ಮತ್ತು ಸಾಂಸ್ಕೃತಿಕ ವಲಯದಲ್ಲಿ ಬದುಕಲು ಇರುವ ಅವಕಾಶ. ನಾನು ಏಳೆಂಟು ಭಾಷೆಗಳಲ್ಲಿ ಮಾತನಾಡಬಲ್ಲೆ ಎಂಬುದು ತರಗತಿಯ ಹೊರಗೆ ಕಲಿತ ಪಾಠ. ಜಾತಿ, ಭಾಷಿಕ ಸಮುದಾಯಗಳು, ಗ್ರಾಮೀಣ ಬದುಕು, ಜಾನಪದ, ಸಮಾಜದ ಬೇರೆ ಬೇರೆ ಸ್ತರಗಳನ್ನು ಅರಿತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮಾಜ ಶಾಸ್ತ್ರವನ್ನು ಅರಿಯಲು ಸುಲಭವಾಗುತ್ತದೆ. ಈ ವಿಚಾರದಲ್ಲಿ ನಗರ ಭಾಗದ ವಿದ್ಯಾರ್ಥಿಗಳು ಹಿಂದುಳಿಯುತ್ತಾರೆ.

ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಮುಖ್ಯವಾಗಿ ಇರಬೇಕಾದ ಅಂಶವೊಂದು ಇರುವುದಿಲ್ಲ. ಅದು ಲೋಕ ಜ್ಞಾನವನ್ನು ತಮ್ಮ ಶೈಕ್ಷಣಿಕ ಕೆಲಸದಲ್ಲಿ ಬಳಸಿಕೊಳ್ಳುವ ಕ್ರಮ ಗೊತ್ತಿರುವುದಿಲ್ಲ. ಇದನ್ನು ನೀಡಬೇಕಾದ ಕೆಲಸ ಶಿಕ್ಷಣ ಸಂಸ್ಥೆಗಳದ್ದು. ಅದಕ್ಕೆ ಬೇಕಾದ ಪರಿಭಾಷೆಗಳನ್ನು ಮಕ್ಕಳಿಗೆ ಹೇಳಿಕೊಡಬೇಕು.

ಈ ಎಲ್ಲಾ ಸಮಸ್ಯೆಗಳ ಮಧ್ಯೆ ಹಿಂದುತ್ವ ಶಿಕ್ಷಣ ಸಂಸ್ಥೆಗಳಲ್ಲಿ ತಂದಿಡುತ್ತಿರುವ ಗೊಂದಲಗಳು ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಬದುಕನ್ನು ಸಂಪೂರ್ಣವಾಗಿ ನಾಶ ಮಾಡಲು ಸಿದ್ದವಾಗಿದೆ.

ಕೇವಲ ಹಿಜಾಬ್ ಸಮಸ್ಯೆಯನ್ನೇ ತೆಗೆದುಕೊಳ್ಳೋಣ. ಇದು ಕೇವಲ ಭಿನ್ನ ಕೋಮಿನ ಮಕ್ಕಳ ಮಧ್ಯೆ ದ್ವೇಷವನ್ನು ಹುಟ್ಟಿಸಿದ್ದು ಮಾತ್ರವಲ್ಲ, ಅದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ಅಪಾಯಕ್ಕೆ ಒಡ್ಡಿದೆ.

ಇದನ್ನೂ ಓದಿ: ಹಿಂದುತ್ವ ರಾಜಕಾರಣ; ಹಿಜಾಬಿನ ಅಪರಾಧೀಕರಣ

1. ಹಿಂದುತ್ವ, ಹಿಜಾಬ್, ಜಟ್ಕಾ ಕಟ್, ಮಂದಿರ – ಮಸೀದಿ… ಇವೆಲ್ಲವೂ ಈ ಶತಮಾನದ ವಿದ್ಯಾರ್ಥಿ ಸಮುದಾಯವನ್ನು ತಮ್ಮ ಶೈಕ್ಷಣಿಕ ಜೀವನದ ಬಗ್ಗೆ ನಿರ್ಲಕ್ಷ್ಯ ತಾಳುವಂತೆ ಮಾಡಿದೆ. ಬಿಜೆಪಿ ಹಾಗೂ ಸಂಘ ಪರಿವಾರ ಹರಡುತ್ತಿರುವ ದ್ವೇಷದ ನರೆಟಿವ್‌ಗಳನ್ನು ಹಂಚಲು ಸ್ವತಂತ್ರ ಆಲೋಚನೆ ಮಾಡಬೇಕಾದ ವಿದ್ಯಾರ್ಥಿಗಳು ಬಳಕೆಯಾಗುತ್ತಿದ್ದಾರೆ.

2. ಸಮಾಜವನ್ನು ಅರ್ಥ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಾಮರ್ಥ್ಯ ಕಮ್ಮಿಯಾಗಿದೆ. ಹಿಂದುತ್ವ ಹೇಳಿಕೊಡುವ ಸಮಾಜ ವ್ಯವಸ್ಥೆ ಅಸ್ತಿತ್ವದಲ್ಲಿಯೇ ಇಲ್ಲ. ಅದು ಕಲಿಸುವ ಸಂಸ್ಕೃತಿ ನೆಲಮೂಲದ ಸಂಸ್ಕೃತಿಯೇ ಅಲ್ಲ. ಹೀಗಿರುವಾಗ ಇಸ್ಲಾಂ ಜೊತೆಗೆ ಎಂದೆಂದಿಗೂ ಬೆಸೆದುಕೊಳ್ಳುವ ನಾಥ ಪಂಥ, ದತ್ತ ಪಂಥಗಳು ನಮ್ಮ ಮಕ್ಕಳಿಗೆ ಅರ್ಥವಾಗದೆ ಹೋಗಬಹುದು.

3. ಭಾರತವನ್ನು ವೈವಿಧ್ಯತೆಯ ಕಾರಣಕ್ಕಾಗಿ ವಿಶಿಷ್ಟ ದೇಶ ಎಂದು ನಾವು ಪರಿಗಣಿಸುತ್ತೇವೆ. ಈ ವೈವಿಧ್ಯತೆಯನ್ನು ಅರಿಯದೆ, ಒಪ್ಪಿಕೊಳ್ಳದೇ ದೇಶವನ್ನು, ಸಂಸ್ಕೃತಿಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ!

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕಾರ್ಕಳ-ಹೆಬ್ರಿ: ಅಹಿಂಸೆಯ ಜೈನ ಕಾಶಿಯಲ್ಲಿ ಹಿಂಸೋನ್ಮಾದದ ಹಿಂದುತ್ವ ಕಾಳಗ!

4. ಹಿಜಾಬ್ ತಕರಾರಿನ ಜೊತೆ ಹುಟ್ಟಿಕೊಳ್ಳುವ ಅನ್ಯಮತ ದ್ವೇಷ, ಜಾತೀಯತೆ ಮಕ್ಕಳಿಗೆ ಭಿನ್ನ ಸಮುದಾಯಗಳ ಜೊತೆಗೆ ಬದುಕುವ ಸುವರ್ಣ ಅವಕಾಶ ಇಲ್ಲದಾಗಿತ್ತದೆ. ಈಗ ಮುಸ್ಲಿಂ ಮತ್ತು ಕ್ರೈಸ್ತ ವಿದ್ಯಾರ್ಥಿ ಜೊತೆಗೆ ಮಾತನಾಡದೆ ಇರುವ ಒಬ್ಬ ಹಿಂದೂ ವಿದ್ಯಾರ್ಥಿಗೆ ಬ್ಯಾರಿ ಭಾಷೆ, ಮಲಯಾಳಂ ಭಾಷೆ, ಕೊಂಕಣಿ ಭಾಷೆ ಕಲಿಯುವ ಅವಕಾಶ ತಪ್ಪಿ ಹೋಗುತ್ತದೆ.

5. ಒಬ್ಬ ಭಿನ್ನ ಸಂಸ್ಕೃತಿಯ, ಭಾಷಿಕ ಸ್ನೇಹಿತ ಇದ್ದರೆ ನಾವೊಂದು ಬೇರೆಯೇ ಸಂಸ್ಕೃತಿಯನ್ನು ತಿಳಿದುಕೊಂಡ ಹಾಗೆ. ದೇಶದ ‘ಆತ್ಮ’ ಕೂಡಾ ಇದುವೇ ಆಗಿದೆ.

6. ಕೋಮುವಾದ ಹೇಳುವ ಕಥನಗಳು ಎಲ್ಲವೂ ಮಕ್ಕಳ ಸ್ವತಂತ್ರ ಆಲೋಚನೆಯನ್ನು ನಾಶ ಮಾಡುತ್ತವೆ.
“ಮಂಗಳೂರಿನ ಬೆಳಿಯ ಪಲ್ಲಿ ಒಂದು ದೇವಸ್ಥಾನ” ಎಂದು ಹಿಂದುತ್ವ ಹೇಳಿದರೆ ನಮ್ಮ ವಿದ್ಯಾರ್ಥಿಗಳು ಅದನ್ನು ನಂಬಿದರೆ “ಹೌದಾ? ಆಗಿದ್ದರೆ ಅಲ್ಲಿ ಏನಿದೆ? ಅದರ ಇತಿಹಾಸ ಏನು….” ಈ ಯಾವ ಪ್ರಶ್ನೆಯೂ ಉದ್ಭವಿಸುವುದಿಲ್ಲ. ಮಕ್ಕಳು ಯೋಚನೆ ಮಾಡದೆ ಒಪ್ಪಿಕೊಳ್ಳಬೇಕು ಎಂಬುದೇ ಕೋಮುವಾದದ ದೊಡ್ಡ ತಂತ್ರ! ಹೀಗಾದರೆ ಮಕ್ಕಳು ಶಿಕ್ಷಣ ಪಡೆದು ಮಾಡುವುದಾದರೂ ಏನನ್ನು?

5. ಮಕ್ಕಳಿಗೆ ಪಾಠ ಹೇಳುವ ಕ್ರಮ, ಪಠ್ಯ ಮಾತ್ರವಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೇ ಅನೇಕ ಸಮಸ್ಯೆಗಳು ಇವೆ. ತಮಗೆ ಪಾಠ ಮಾಡುತ್ತಿರುವ ಶೈಕ್ಷಣಿಕ ಹಿನ್ನಲೆ, ಬೋಧನೆಯ ಗುಣಮಟ್ಟ ಇದ್ಯಾವುದರ ಬಗ್ಗೆ ಮಕ್ಕಳು ಪ್ರಶ್ನೆ ಎತ್ತುತ್ತಿಲ್ಲ! ಸ್ಕಾಲರ್ ಶಿಪ್ ಇಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ. ಯುಜಿಸಿಯು ಮಾನವಿಕ ವಿಭಾಗದ ಅನೇಕ ವಿಷಯಗಳಿಗೆ ಫೆಲೋಶಿಪ್ ಕಡಿಮೆ ಮಾಡಿದೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಚಿಂತಿಸಲು ಹೋಗದ ಮಕ್ಕಳು ತಮ್ಮ ಪಕ್ಕ ಕೂರುವ ವಿದ್ಯಾರ್ಥಿನಿ ಹಾಕುವ ಹಿಜಾಬ್ ಅನ್ನು ಪ್ರಶ್ನೆ ಮಾಡುತ್ತಾರೆ!

ಇದನ್ನೂ ಓದಿ: ಭಗತ್ ಸಿಂಗ್ ಬದಲು ಹೆಡಗೇವಾರ್ ಪಾಠ; ಮಕ್ಕಳ ಮೇಲೆ ಹಿಂದುತ್ವದ ಪ್ರಯೋಗ

6. ಕೋಮುವಾದ ಉಡುಪಿ, ಸುಳ್ಯ, ಪುತ್ತೂರು….ಇಂಥ ಗ್ರಾಮೀಣ ಭಾಗದ ವಿದ್ಯಾರ್ಥಿಳನ್ನು ಹೆಚ್ಚು ಟಾರ್ಗೆಟ್ ಮಾಡುತ್ತವೆ. ಈ ಎಲ್ಲಾ ವಿದ್ಯಾರ್ಥಿಗಳು ಅತ್ಯಂತ ಬಡ, ಕೆಳ ಮಧ್ಯಮ ವರ್ಗದ ವಿದ್ಯಾರ್ಥಿಗಳು. ಇವರನ್ನು ಶಿಕ್ಷಣದ ಕಡೆ ಗಮನ ನೀಡದಂತೆ ಮಾಡಿ, ಸ್ವತಂತ್ರ ಚಿಂತನೆ ಮಾಡದ ಹಾಗೆ ಮಾಡಿ, ಪ್ರಶ್ನೆಗಳು ಹುಟ್ಟದ ಹಾಗೆ ಮಾಡಿ ಯಾವ ಸೃಜನಾತ್ಮಕ ಕೆಲಸದಲ್ಲೂ ತೊಡಗದ ಹಾಗೆ ಮಾಡುತ್ತಿದೆ.

7. ಕೋಮುವಾದ ಗ್ರಾಮೀಣ ಮತ್ತು ನಗರ ಕೇಂದ್ರಿತ ವಿದ್ಯಾರ್ಥಿಗಳ ನಡುವಿನ ಅಸಮಾನತೆಯನ್ನು ಹೆಚ್ಚು ಮಾಡುತ್ತಿದೆ. ಇದರ ಪರಿಣಾಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಾರೆ.

ಒಟ್ಟಾರೆಯಾಗಿ, ಹೊಸ ಪಠ್ಯ ಪುಸ್ತಕ ವಿವಾದ ಸೇರಿದಂತೆ ಸಧ್ಯ ನಾಡಿನಲ್ಲಿ ನಡೆಯುತ್ತಿರುವ ಎಲ್ಲಾ ಗೊಂದಲಗಳು ಗ್ರಾಮೀಣ ಮಕ್ಕಳು ಬದುಕನ್ನು ನಾಶ ಮಾಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋಮುವಾದವನ್ನು ಸೃಷ್ಟಿ ಮಾಡೋರು ಅಶಿಕ್ಷಿತ ಸಂಘಟನೆ ಗಳ ಸದಸ್ಯರು , ಮೊದಲು ಅವರನ್ನು ಶಿಕ್ಷಿತರನ್ನಾಗಿ ಮಾಡಬೇಕು….. ಕಾನೂನಿನ ಸರಿಯಾದ ಬಳಕೆ ಯಾದರೆ ಸಂಘರ್ಷ ಗಳು ನಡೆಯುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...