Homeಕರ್ನಾಟಕಹಿಂದುತ್ವದ ಅಜೆಂಡಾಗಳಿಗೆ ಬಲಿಯಾಗುತ್ತಿರುವ ‘ಹಿಂದೂ’ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು

ಹಿಂದುತ್ವದ ಅಜೆಂಡಾಗಳಿಗೆ ಬಲಿಯಾಗುತ್ತಿರುವ ‘ಹಿಂದೂ’ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು

- Advertisement -
- Advertisement -

ಕಳೆದ ಆರೇಳು ತಿಂಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಸಂಬಂಧಿ ಗೊಂದಲಗಳು ಹೆಚ್ಚು ಬಾಧಿಸುತ್ತಿರುವುದು ಮತ್ತು ಮುಂದೆ ಬಾಧಿಸಲಿರುವುದು ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು. ಈಗಾಗಲೇ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ನಡುವೆ ದೊಡ್ಡ ಕಂದಕ ನಿರ್ಮಾಣವಾಗಿದೆ. ಈ ಅಸಮಾನತೆಯನ್ನು ಇಲ್ಲವಾಗಿಸಿವುದು ಶಿಕ್ಷಣ ಕ್ಷೇತ್ರದಲ್ಲಿ ನಡೆಯಬೇಕಿರುವ ಅಗತ್ಯದ ಕೆಲಸ. ಆದರೆ ದಿನೇ ದಿನೇ ಈ ಅಂತರ ಹೆಚ್ಚಾಗುತ್ತಲೇ ಇದೆ.

ರಾಜ್ಯದ ಯೂನಿವರ್ಸಿಟಿಗಳಿಂದ ಹೊರಗೆ ಬಂದ ತಕ್ಷಣ ಒಂದೋ ಉದ್ಯೋಗ ಅಥವಾ ಉನ್ನತ ಶಿಕ್ಷಣಕ್ಕೆ ಹೋಗಬೇಕು. ಆದರೆ ಈ ಎರಡಕ್ಕೂ ಬೇಕಾದ ಕೌಶಲ್ಯವನ್ನು ಹೊಂದಿರದೇ ಇದ್ದಾಗ ವಿದ್ಯಾರ್ಥಿಗಳು ಅನೇಕ ಸಂಕಷ್ಟಗಳನ್ನು ಎದುರಿಸಬೇಕಾಗಿ ಬರುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈಗಾಗಲೇ ದೇಶ ನಿರುದ್ಯೋಗದ ಸಮಸ್ಯೆಯಿಂದ ಬಳಲುತ್ತಿದೆ. ಆದರೆ ಉದ್ಯೋಗಗಳು ಇಲ್ಲವೆಂದಲ್ಲ. ಆದರೆ ಈ ಉದ್ಯೋಗ ಪಡೆಯಲು ಬೇಕಾದ ಕೌಶಲ್ಯಗಳ ಕೊರತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಇದೆ. ಅಲ್ಲದೇ ಈ ಕೌಶಲ್ಯಗಳನ್ನು ಬೋಧಿಸುವ ಪಠ್ಯ ಕ್ರಮವೂ ನಮ್ಮಲ್ಲಿ ಇಲ್ಲ.

ಇದನ್ನೂ ಓದಿ: ಶಾಲೆಗಳಲ್ಲಿ ಹಿಜಾಬ್‌‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ಗ್ರಾಮೀಣ ಭಾಗದಲ್ಲಿ ಇರುವ ಖಾಸಗಿಯೂ ಸೇರಿದಂತೆ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಇಂಗ್ಲಿಷ್ ಮಾತನಾಡುವುದಿಲ್ಲ. ವಿದ್ಯಾರ್ಥಿಗಳನ್ನು ಬಿಡಿ, ಉಪನ್ಯಾಸಕರೂ ತರಗತಿ ಮುಗಿದ ಮೇಲೆ ಇಂಗ್ಲೀಷ್‌ನಲ್ಲಿ ಮಾತನಾಡುವುದಿಲ್ಲ. ತರಗತಿಯಲ್ಲಿ ಪಾಠ ಮಾಡಲು ಬಳಸುವ ಇಂಗ್ಲೀಷ್ ಕೂಡ ಉತ್ತಮವಾಗಿಲ್ಲ.
ಈ ವಿದ್ಯಾರ್ಥಿಗಳು ಉದ್ಯೋಗ ನಿಮಿತ್ತ ಉನ್ನತ ಸಂಸ್ಥೆಗಳಿಗೆ ಹೋಗುವಾಗ ಅವರ ಸಂವಹನ ಸಾಮರ್ಥ್ಯ ನೋಡಿ ಬಾಗಿಲನ್ನು ಮುಚ್ಚುತ್ತಾರೆ. ಇವರಲ್ಲಿ ಸ್ಕಿಲ್ ಇದ್ದೂ, ಜ್ಞಾನ ಇದ್ದರೂ ಅದನ್ನು ಹೊರಗೆ ಹಾಕುವ ‘Presentation Skill’ ನ ಕೊರತೆ ಇರುತ್ತದೆ.

ವಿಶ್ವವಿದ್ಯಾಲಯಲ್ಲಿ ಒಬ್ಬ ಪಿಎಚ್‌ಡಿ ವಿದ್ಯಾರ್ಥಿಯ ಮೌಖಿಕ ಪರೀಕ್ಷೆಯಲ್ಲಿ ಭಾಗವಹಿಸಿದ್ದೆ. ಆಕೆ ತನ್ನ ಪಿಪಿಟಿಯಲ್ಲಿ ಕಮಲಾದೇವಿ ಚಟ್ಟೋಪಾಧ್ಯಾಯ ಅವರ ಹೆಸರನ್ನು ಉಲ್ಲೇಖ ಮಾಡಿದ್ದರು. ಪರೀಕ್ಷಕರು ಆಕೆಯಲ್ಲಿ ‘ಕಮಲಾದೇವಿ ಚಟ್ಟೋಪಾಧ್ಯಾಯ ಯಾರು?’ ಎಂದು ಕೇಳಿದರು. ನಾಲ್ಕೈದು ವರ್ಷ ಸಂಶೋಧನೆ ನಡೆಸಿರುವ ವಿದ್ಯಾರ್ಥಿಗೆ ಕಮಲಾದೇವಿ ಚಟ್ಟೋಪಾಧ್ಯಾಯ ಯಾರು ಎಂದೇ ಗೊತ್ತಿರಲಿಲ್ಲ! ಆದರೆ ಅವರ ಸಂಶೋಧನಾ ಪ್ರಬಂಧವನ್ನು ಪಿಎಚ್‌ಡಿ ಪದವಿಗೆ ಸ್ವೀಕರಿಸಲಾಯಿತು!

ಹಾಗಾದರೆ ನಮ್ಮ ವಿವಿಗಳಿಂದ ಹೊರಬರುವ ಸಂಶೋಧನೆಗಳ ಗುಣಮಟ್ಟ ಹೇಗಿರಬಹುದು? ಒಂದು ವೇಳೆ ಇದೇ ವಿದ್ಯಾರ್ಥಿಗಳು ಮುಂದೆ ಶಿಕ್ಷಕರಾದರು ಮಕ್ಕಳ ಗತಿ ಏನು?

ನಾನು ಎಂ.ಎ ಓದುವಾಗ ಸಂಶೋಧನ ವಿಧಾನಗಳ ಬಗ್ಗೆ ಇರುವ ಪಾಠ ಯಾವತ್ತೂ ನೆನಪಲ್ಲಿ ಉಳಿಯಲೇ ಇಲ್ಲ. ತರಗತಿಯ ವಿದ್ಯಾರ್ಥಿಗಳಿಗೆ ‘ಸಂಶೋಧನೆ ಎಂದರೇನು? ಸಂಶೋಧನೆ ಯಾಕೆ ಮಾಡಬೇಕು?’ ಎಂಬ ಅತ್ಯಂತ ಬೇಸಿಕ್ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಾಗದ ಹಾಗೆ ವಿದ್ಯಾರ್ಥಿಗಳನ್ನು ತಯಾರಿ ಮಾಡಲಾಗಿದೆ. ಹೀಗಿರುವ ವಿದ್ಯಾರ್ಥಿಗಳು ದೇಶದ ಉನ್ನತ ಶಿಕ್ಷಣ ಸಂಸ್ಥೆಗಳ ಒಳಗೆ ಹೇಗೆ ಪ್ರವೇಶ ಪಡೆಯಲು ಸಾಧ್ಯ?

ದಿನೇ ದಿನೇ ಸಂಶೋಧನಾ ಕ್ಷೇತದಲ್ಲಿ ಹೊಸ ಹೊಸ ಬದಲಾವಣೆಗಳು ನಡೆಯುತ್ತಿವೆ. ಸಂಶೋಧನೆಯಲ್ಲಿ ಬಳಕೆಯಾಗುವ ಪರಿಭಾಷೆಗಳು ಬದಲಾಗುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಹೊಸ ಅನ್ವೇಷಣೆಗಳು ನಡೆಯುತ್ತಿವೆ. ಆದರೆ ಇದ್ಯಾವುದೂ ನಮ್ಮ ಮಕ್ಕಳ ಅರಿವಿಗೆ ಬರುತ್ತಿಲ್ಲ. ತರಗತಿಗಳು ಅಪ್ಡೇಟ್ ಆಗುತ್ತಿಲ್ಲ. ಶಿಕ್ಷಕರು ಹೊಸತನಕ್ಕೆ ತೆರೆದುಕೊಳ್ಳುತ್ತಿಲ್ಲ.

ಇದನ್ನೂ ಓದಿ: ಹಿಜಾಬ್ ವಿವಾದದ ಸುತ್ತ ದ್ವೇಷದ ಹುತ್ತ; ಹಿಂದುತ್ವದಲ್ಲಿ ಬಿರುಕು ಮತ್ತು ನಂಜಿನ ನೀರಡಿಕೆ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇರುವ ಒಂದು ಒಳ್ಳೆಯ ಅವಕಾಶ ಎಂದರೆ ಭಿನ್ನ ಭಾಷಿಲ ಮತ್ತು ಸಾಂಸ್ಕೃತಿಕ ವಲಯದಲ್ಲಿ ಬದುಕಲು ಇರುವ ಅವಕಾಶ. ನಾನು ಏಳೆಂಟು ಭಾಷೆಗಳಲ್ಲಿ ಮಾತನಾಡಬಲ್ಲೆ ಎಂಬುದು ತರಗತಿಯ ಹೊರಗೆ ಕಲಿತ ಪಾಠ. ಜಾತಿ, ಭಾಷಿಕ ಸಮುದಾಯಗಳು, ಗ್ರಾಮೀಣ ಬದುಕು, ಜಾನಪದ, ಸಮಾಜದ ಬೇರೆ ಬೇರೆ ಸ್ತರಗಳನ್ನು ಅರಿತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮಾಜ ಶಾಸ್ತ್ರವನ್ನು ಅರಿಯಲು ಸುಲಭವಾಗುತ್ತದೆ. ಈ ವಿಚಾರದಲ್ಲಿ ನಗರ ಭಾಗದ ವಿದ್ಯಾರ್ಥಿಗಳು ಹಿಂದುಳಿಯುತ್ತಾರೆ.

ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಮುಖ್ಯವಾಗಿ ಇರಬೇಕಾದ ಅಂಶವೊಂದು ಇರುವುದಿಲ್ಲ. ಅದು ಲೋಕ ಜ್ಞಾನವನ್ನು ತಮ್ಮ ಶೈಕ್ಷಣಿಕ ಕೆಲಸದಲ್ಲಿ ಬಳಸಿಕೊಳ್ಳುವ ಕ್ರಮ ಗೊತ್ತಿರುವುದಿಲ್ಲ. ಇದನ್ನು ನೀಡಬೇಕಾದ ಕೆಲಸ ಶಿಕ್ಷಣ ಸಂಸ್ಥೆಗಳದ್ದು. ಅದಕ್ಕೆ ಬೇಕಾದ ಪರಿಭಾಷೆಗಳನ್ನು ಮಕ್ಕಳಿಗೆ ಹೇಳಿಕೊಡಬೇಕು.

ಈ ಎಲ್ಲಾ ಸಮಸ್ಯೆಗಳ ಮಧ್ಯೆ ಹಿಂದುತ್ವ ಶಿಕ್ಷಣ ಸಂಸ್ಥೆಗಳಲ್ಲಿ ತಂದಿಡುತ್ತಿರುವ ಗೊಂದಲಗಳು ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಬದುಕನ್ನು ಸಂಪೂರ್ಣವಾಗಿ ನಾಶ ಮಾಡಲು ಸಿದ್ದವಾಗಿದೆ.

ಕೇವಲ ಹಿಜಾಬ್ ಸಮಸ್ಯೆಯನ್ನೇ ತೆಗೆದುಕೊಳ್ಳೋಣ. ಇದು ಕೇವಲ ಭಿನ್ನ ಕೋಮಿನ ಮಕ್ಕಳ ಮಧ್ಯೆ ದ್ವೇಷವನ್ನು ಹುಟ್ಟಿಸಿದ್ದು ಮಾತ್ರವಲ್ಲ, ಅದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ಅಪಾಯಕ್ಕೆ ಒಡ್ಡಿದೆ.

ಇದನ್ನೂ ಓದಿ: ಹಿಂದುತ್ವ ರಾಜಕಾರಣ; ಹಿಜಾಬಿನ ಅಪರಾಧೀಕರಣ

1. ಹಿಂದುತ್ವ, ಹಿಜಾಬ್, ಜಟ್ಕಾ ಕಟ್, ಮಂದಿರ – ಮಸೀದಿ… ಇವೆಲ್ಲವೂ ಈ ಶತಮಾನದ ವಿದ್ಯಾರ್ಥಿ ಸಮುದಾಯವನ್ನು ತಮ್ಮ ಶೈಕ್ಷಣಿಕ ಜೀವನದ ಬಗ್ಗೆ ನಿರ್ಲಕ್ಷ್ಯ ತಾಳುವಂತೆ ಮಾಡಿದೆ. ಬಿಜೆಪಿ ಹಾಗೂ ಸಂಘ ಪರಿವಾರ ಹರಡುತ್ತಿರುವ ದ್ವೇಷದ ನರೆಟಿವ್‌ಗಳನ್ನು ಹಂಚಲು ಸ್ವತಂತ್ರ ಆಲೋಚನೆ ಮಾಡಬೇಕಾದ ವಿದ್ಯಾರ್ಥಿಗಳು ಬಳಕೆಯಾಗುತ್ತಿದ್ದಾರೆ.

2. ಸಮಾಜವನ್ನು ಅರ್ಥ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಾಮರ್ಥ್ಯ ಕಮ್ಮಿಯಾಗಿದೆ. ಹಿಂದುತ್ವ ಹೇಳಿಕೊಡುವ ಸಮಾಜ ವ್ಯವಸ್ಥೆ ಅಸ್ತಿತ್ವದಲ್ಲಿಯೇ ಇಲ್ಲ. ಅದು ಕಲಿಸುವ ಸಂಸ್ಕೃತಿ ನೆಲಮೂಲದ ಸಂಸ್ಕೃತಿಯೇ ಅಲ್ಲ. ಹೀಗಿರುವಾಗ ಇಸ್ಲಾಂ ಜೊತೆಗೆ ಎಂದೆಂದಿಗೂ ಬೆಸೆದುಕೊಳ್ಳುವ ನಾಥ ಪಂಥ, ದತ್ತ ಪಂಥಗಳು ನಮ್ಮ ಮಕ್ಕಳಿಗೆ ಅರ್ಥವಾಗದೆ ಹೋಗಬಹುದು.

3. ಭಾರತವನ್ನು ವೈವಿಧ್ಯತೆಯ ಕಾರಣಕ್ಕಾಗಿ ವಿಶಿಷ್ಟ ದೇಶ ಎಂದು ನಾವು ಪರಿಗಣಿಸುತ್ತೇವೆ. ಈ ವೈವಿಧ್ಯತೆಯನ್ನು ಅರಿಯದೆ, ಒಪ್ಪಿಕೊಳ್ಳದೇ ದೇಶವನ್ನು, ಸಂಸ್ಕೃತಿಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ!

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕಾರ್ಕಳ-ಹೆಬ್ರಿ: ಅಹಿಂಸೆಯ ಜೈನ ಕಾಶಿಯಲ್ಲಿ ಹಿಂಸೋನ್ಮಾದದ ಹಿಂದುತ್ವ ಕಾಳಗ!

4. ಹಿಜಾಬ್ ತಕರಾರಿನ ಜೊತೆ ಹುಟ್ಟಿಕೊಳ್ಳುವ ಅನ್ಯಮತ ದ್ವೇಷ, ಜಾತೀಯತೆ ಮಕ್ಕಳಿಗೆ ಭಿನ್ನ ಸಮುದಾಯಗಳ ಜೊತೆಗೆ ಬದುಕುವ ಸುವರ್ಣ ಅವಕಾಶ ಇಲ್ಲದಾಗಿತ್ತದೆ. ಈಗ ಮುಸ್ಲಿಂ ಮತ್ತು ಕ್ರೈಸ್ತ ವಿದ್ಯಾರ್ಥಿ ಜೊತೆಗೆ ಮಾತನಾಡದೆ ಇರುವ ಒಬ್ಬ ಹಿಂದೂ ವಿದ್ಯಾರ್ಥಿಗೆ ಬ್ಯಾರಿ ಭಾಷೆ, ಮಲಯಾಳಂ ಭಾಷೆ, ಕೊಂಕಣಿ ಭಾಷೆ ಕಲಿಯುವ ಅವಕಾಶ ತಪ್ಪಿ ಹೋಗುತ್ತದೆ.

5. ಒಬ್ಬ ಭಿನ್ನ ಸಂಸ್ಕೃತಿಯ, ಭಾಷಿಕ ಸ್ನೇಹಿತ ಇದ್ದರೆ ನಾವೊಂದು ಬೇರೆಯೇ ಸಂಸ್ಕೃತಿಯನ್ನು ತಿಳಿದುಕೊಂಡ ಹಾಗೆ. ದೇಶದ ‘ಆತ್ಮ’ ಕೂಡಾ ಇದುವೇ ಆಗಿದೆ.

6. ಕೋಮುವಾದ ಹೇಳುವ ಕಥನಗಳು ಎಲ್ಲವೂ ಮಕ್ಕಳ ಸ್ವತಂತ್ರ ಆಲೋಚನೆಯನ್ನು ನಾಶ ಮಾಡುತ್ತವೆ.
“ಮಂಗಳೂರಿನ ಬೆಳಿಯ ಪಲ್ಲಿ ಒಂದು ದೇವಸ್ಥಾನ” ಎಂದು ಹಿಂದುತ್ವ ಹೇಳಿದರೆ ನಮ್ಮ ವಿದ್ಯಾರ್ಥಿಗಳು ಅದನ್ನು ನಂಬಿದರೆ “ಹೌದಾ? ಆಗಿದ್ದರೆ ಅಲ್ಲಿ ಏನಿದೆ? ಅದರ ಇತಿಹಾಸ ಏನು….” ಈ ಯಾವ ಪ್ರಶ್ನೆಯೂ ಉದ್ಭವಿಸುವುದಿಲ್ಲ. ಮಕ್ಕಳು ಯೋಚನೆ ಮಾಡದೆ ಒಪ್ಪಿಕೊಳ್ಳಬೇಕು ಎಂಬುದೇ ಕೋಮುವಾದದ ದೊಡ್ಡ ತಂತ್ರ! ಹೀಗಾದರೆ ಮಕ್ಕಳು ಶಿಕ್ಷಣ ಪಡೆದು ಮಾಡುವುದಾದರೂ ಏನನ್ನು?

5. ಮಕ್ಕಳಿಗೆ ಪಾಠ ಹೇಳುವ ಕ್ರಮ, ಪಠ್ಯ ಮಾತ್ರವಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೇ ಅನೇಕ ಸಮಸ್ಯೆಗಳು ಇವೆ. ತಮಗೆ ಪಾಠ ಮಾಡುತ್ತಿರುವ ಶೈಕ್ಷಣಿಕ ಹಿನ್ನಲೆ, ಬೋಧನೆಯ ಗುಣಮಟ್ಟ ಇದ್ಯಾವುದರ ಬಗ್ಗೆ ಮಕ್ಕಳು ಪ್ರಶ್ನೆ ಎತ್ತುತ್ತಿಲ್ಲ! ಸ್ಕಾಲರ್ ಶಿಪ್ ಇಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ. ಯುಜಿಸಿಯು ಮಾನವಿಕ ವಿಭಾಗದ ಅನೇಕ ವಿಷಯಗಳಿಗೆ ಫೆಲೋಶಿಪ್ ಕಡಿಮೆ ಮಾಡಿದೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಚಿಂತಿಸಲು ಹೋಗದ ಮಕ್ಕಳು ತಮ್ಮ ಪಕ್ಕ ಕೂರುವ ವಿದ್ಯಾರ್ಥಿನಿ ಹಾಕುವ ಹಿಜಾಬ್ ಅನ್ನು ಪ್ರಶ್ನೆ ಮಾಡುತ್ತಾರೆ!

ಇದನ್ನೂ ಓದಿ: ಭಗತ್ ಸಿಂಗ್ ಬದಲು ಹೆಡಗೇವಾರ್ ಪಾಠ; ಮಕ್ಕಳ ಮೇಲೆ ಹಿಂದುತ್ವದ ಪ್ರಯೋಗ

6. ಕೋಮುವಾದ ಉಡುಪಿ, ಸುಳ್ಯ, ಪುತ್ತೂರು….ಇಂಥ ಗ್ರಾಮೀಣ ಭಾಗದ ವಿದ್ಯಾರ್ಥಿಳನ್ನು ಹೆಚ್ಚು ಟಾರ್ಗೆಟ್ ಮಾಡುತ್ತವೆ. ಈ ಎಲ್ಲಾ ವಿದ್ಯಾರ್ಥಿಗಳು ಅತ್ಯಂತ ಬಡ, ಕೆಳ ಮಧ್ಯಮ ವರ್ಗದ ವಿದ್ಯಾರ್ಥಿಗಳು. ಇವರನ್ನು ಶಿಕ್ಷಣದ ಕಡೆ ಗಮನ ನೀಡದಂತೆ ಮಾಡಿ, ಸ್ವತಂತ್ರ ಚಿಂತನೆ ಮಾಡದ ಹಾಗೆ ಮಾಡಿ, ಪ್ರಶ್ನೆಗಳು ಹುಟ್ಟದ ಹಾಗೆ ಮಾಡಿ ಯಾವ ಸೃಜನಾತ್ಮಕ ಕೆಲಸದಲ್ಲೂ ತೊಡಗದ ಹಾಗೆ ಮಾಡುತ್ತಿದೆ.

7. ಕೋಮುವಾದ ಗ್ರಾಮೀಣ ಮತ್ತು ನಗರ ಕೇಂದ್ರಿತ ವಿದ್ಯಾರ್ಥಿಗಳ ನಡುವಿನ ಅಸಮಾನತೆಯನ್ನು ಹೆಚ್ಚು ಮಾಡುತ್ತಿದೆ. ಇದರ ಪರಿಣಾಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಾರೆ.

ಒಟ್ಟಾರೆಯಾಗಿ, ಹೊಸ ಪಠ್ಯ ಪುಸ್ತಕ ವಿವಾದ ಸೇರಿದಂತೆ ಸಧ್ಯ ನಾಡಿನಲ್ಲಿ ನಡೆಯುತ್ತಿರುವ ಎಲ್ಲಾ ಗೊಂದಲಗಳು ಗ್ರಾಮೀಣ ಮಕ್ಕಳು ಬದುಕನ್ನು ನಾಶ ಮಾಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋಮುವಾದವನ್ನು ಸೃಷ್ಟಿ ಮಾಡೋರು ಅಶಿಕ್ಷಿತ ಸಂಘಟನೆ ಗಳ ಸದಸ್ಯರು , ಮೊದಲು ಅವರನ್ನು ಶಿಕ್ಷಿತರನ್ನಾಗಿ ಮಾಡಬೇಕು….. ಕಾನೂನಿನ ಸರಿಯಾದ ಬಳಕೆ ಯಾದರೆ ಸಂಘರ್ಷ ಗಳು ನಡೆಯುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...