Homeರಾಷ್ಟ್ರೀಯಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

- Advertisement -
- Advertisement -

ಪ್ರವಾದಿ ಮುಹಮ್ಮದ್‌ ಅವರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ ಅಮಾನತುಗೊಳಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ಬಿಜೆಪಿಯು ಇಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ನೀಡಿದ್ದ ತನ್ನ ಹೇಳಿಕೆಯಲ್ಲಿ ತಿಳಿಸಿದ್ದರು.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೂಪುರ್‌ ಶರ್ಮಾ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಗಳ ವಿರುದ್ದದ ಆಕ್ರೋಶಗಳನ್ನು ಶಮನಗೊಳಿಸಲು ಪಕ್ಷವು ಪ್ರಯತ್ನಿಸುತ್ತಿದೆ. ಶನಿವಾರವಷ್ಟೆ, ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ ಮತ್ತು ಯಾವುದೇ ಧಾರ್ಮಿಕ ವ್ಯಕ್ತಿತ್ವವನ್ನು ಅವಮಾನಿಸುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿಕೊಂಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ, ಪ್ರತಿಯೊಂದು ಧರ್ಮವು ಅರಳಿತು ಮತ್ತು ಪ್ರವರ್ಧಮಾನಕ್ಕೆ ಬಂದಿದೆ. ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ” ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ಕೋಮು ಸಾಮರಸ್ಯ ಸಾರುವ ಉರುಸುಗಳು

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಬಿಜೆಪಿ ಅಂತಹ ಜನರನ್ನು ಅಥವಾ ತತ್ವಶಾಸ್ತ್ರವನ್ನು ಪ್ರಚಾರ ಮಾಡುವುದಿಲ್ಲ. ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ಆಯ್ಕೆಯ ಯಾವುದೇ ಧರ್ಮವನ್ನು ಆಚರಿಸಲು ಮತ್ತು ಪ್ರತಿ ಧರ್ಮವನ್ನು ಗೌರವಿಸಲು ಹಕ್ಕನ್ನು ನೀಡುತ್ತದೆ” ಎಂದು ಪಕ್ಷವೂ ಹೇಳಿತ್ತು.

ಇದೀಗ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಅಮಾನತು ಮಾಡಿದೆ. ನೂಪುರ್ ಶರ್ಮಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರೆ, ನವೀನ್ ಜಿಂದಾಲ್ ಪಕ್ಷದ ದೆಹಲಿ ಮಾಧ್ಯಮ ಘಟಕದ ಮುಖ್ಯಸ್ಥರಾಗಿದ್ದಾರೆ.

ಕಳೆದ ವಾರ ಟಿವಿ ಚರ್ಚೆಯ ಸಂದರ್ಭದಲ್ಲಿ ನೂಪುರ್‌ ಶರ್ಮಾ ಅವರು ಪ್ರವಾದಿಯನ್ನು ಅವಮಾನಿಸುವ ಉದ್ದೇಶದಿಂದ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯ ವಿರುದ್ಧ ಮುಸ್ಲಿಮರು ಭಾರಿ ಆಕ್ರೋಶ ಮತ್ತು ಪ್ರತಿಭಟನೆಯನ್ನು ನಡೆಸಿದ್ದರು. ಈ ಮಧ್ಯೆ ನವೀನ್ ಕುಮಾರ್ ಅವರು ಪ್ರವಾದಿಯವರ ಬಗ್ಗೆ ಟ್ವೀಟ್ ಮಾಡಿದ್ದು ವಿವಾದವು ಮತ್ತುಷ್ಟು ಬಿಗಡಾಯಿಸುವಂತೆ ಮಾಡಿತ್ತು.

ಇದನ್ನೂ ಓದಿ: ರೈತಬಂಧು ಪ್ರವಾದಿ ಮುಹಮ್ಮದ್ (ಸ) : ಮಿಸ್ರಿಯಾ ಐ ಪಜೀರ್

ಈ ವಿವಾದಾತ್ಮಕ ಹೇಳಿಕೆಗಳನ್ನು ಪ್ರತಿಭಟಿಸಿ ಮಾರುಕಟ್ಟೆಗಳನ್ನು ಮುಚ್ಚುವ ಕರೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಘರ್ಷಣೆಯಲ್ಲಿ 20 ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ.

ಒಂದು ಗುಂಪು ಮತ್ತೊಂದು ಗುಂಪು ನೀಡಿದ್ದ ಬಂದ್‌ ಕರೆಯನ್ನು ವಿರೋಧಿಸಿತ್ತು. ಇದು ಘರ್ಷಣೆಗೆ ಕಾರಣವಾಗಿ ಪ್ರದೇಶದಲ್ಲಿ ಕಲ್ಲು ತೂರಾಟ ಸಂಭವಿಸಿದ್ದವು. ನಂತರ ಪೊಲೀಸರು ಗುಂಪನ್ನು ಚದುರಿಸಲು ಮತ್ತು ಹೆಚ್ಚಿನ ಹಿಂಸಾಚಾರವನ್ನು ತಡೆಯಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದರು. ಪ್ರಕರಣದಲ್ಲಿ ಪೊಲೀಸರು 36 ಮಂದಿಯನ್ನು ಬಂಧಿಸಿದ್ದು, 1,500 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಘರ್ಷಣೆ ನಡೆದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ಥಳದಿಂದ 80 ಕಿಲೋಮೀಟರ್ ದೂರದಲ್ಲಿ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ‘ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ!

ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಯ ವಿರುದ್ಧ ಮಹಾರಾಷ್ಟ್ರದ ಅನೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಅದರೆ ಅವರು ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದು, ತನಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಹೇಳಿದ್ದರು.

ಭಾರತದ ಆಡಳಿತ ಪಕ್ಷದ ವಕ್ತಾರೆಯ ಹೇಳಿಕೆಗಳ ವಿರುದ್ಧ ಅರಬ್ ರಾಷ್ಟ್ರಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೇಳಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಹ್ಯಾಶ್‌ಟ್ಯಾಗ್‌ಗಳೊಂದಿಗೆ, ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಲಾಗಿತ್ತು. ಇದರ ನಂತರ ಬಿಜೆಪಿ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಅರಬ್ ಮಹಿಳೆಯರ ವಿರುದ್ದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ

ಈ ಹಿಂದೆ ಬಿಜೆಪಿ ಸಂಸದ ತೇಜಸ್ವಿಸೂರ್ಯ ಅವರು ಅರಬ್ ಮಹಿಳೆಯರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವೇಳೆ ಕೂಡಾ ಅರಬ್ ದೇಶಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ತೇಜಸ್ವಿ ಸೂರ್ಯ ತನ್ನ ಹೇಳಿಕೆಯಲ್ಲಿ, “95% ಅರಬ್ ಮಹಿಳೆಯರು ಕಳೆದ ಕೆಲವು ನೂರು ವರ್ಷಗಳಲ್ಲಿ ಎಂದಿಗೂ ಸುಖವನ್ನು ಕಾಣಲಿಲ್ಲ. ಪ್ರತಿಯೊಬ್ಬ ತಾಯಿಯು ಮಕ್ಕಳನ್ನು ಲೈಂಗಿಕ ಕ್ರಿಯೆಯಲ್ಲಿ ಹುಟ್ಟಿಸಿದ್ದಾರೆಯೇ ಹೊರತು ಪ್ರೀತಿಯಿಂದಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಈ ಟ್ವೀಟ್ ಗೆ ಸಾಕಷ್ಟು ವಿರೋಧ ವ್ಯಕ್ತವಾಗಿ, ಗಲ್ಪ್‌‌ ರಾಷ್ಟ್ರಗಳು ಮತ್ತು ಭಾರತದ ನಡುವೆ ಸೌಹಾರ್ದಯುತ ಸಂಬಂಧವಿದ್ದು, ನಮ್ಮ ಮಹಿಳೆಯ ಬಗ್ಗೆ ಅತ್ಯಂತ ಕೀಳಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕ್ರಮ ಜರುಗಿಸಬೇಕು ಎಂಬ ಆಗ್ರಹ ಬಂದಿತ್ತು. ಯುಎಇಯಲ್ಲಿನ ಭಾರತದ ರಾಯಭಾರಿಯಾಗಿದ್ದ ಪವನ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಬಿಜೆಪಿ ಅವರ ವಿರುದ್ಧ ಯಾವುದೆ ಗಂಭೀರ ಕ್ರಮ ಕೈಗೊಂಡಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....