Homeರಾಷ್ಟ್ರೀಯ‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ - ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ – ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

- Advertisement -
- Advertisement -

ಅತ್ಯಾಚಾರ ಸಂಸ್ಕೃತಿಯನ್ನು ಪ್ರಚಾರ ಮಾಡುವ ಮತ್ತು ಅಶ್ಲೀಲ ಸಂಭಾಷಣೆಯನ್ನು ಒಳಗೊಂಡಿದ್ದ ‘ಲೇಯರ್‌‌ ಶಾಟ್’‌ ಸುಗಂಧ ದ್ರವ್ಯದ ವಿವಾದಾತ್ಮಕ ಜಾಹಿರಾತನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್‌ ಮತ್ತು ಯೂಟ್ಯೂಬ್‌ಗೆ ಕೇಳಲಾಗಿದೆ ಎಂದು ವರದಿಯಾಗಿದೆ. ಪ್ರಕರಣದ ವಿಚಾರವಾಗಿ, ‘ಭಾರತೀಯ ಜಾಹೀರಾತು ಗುಣಮಟ್ಟ ಮಂಡಳಿ’ಯು ಸಂಬಂಧಪಟ್ಟ ನಿಯಂತ್ರಣ ಸಂಸ್ಥೆಯಿಂದ ವಿಚಾರಣೆ ನಡೆಸುತ್ತಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

“ಜಾಹಿರಾತಿನ ವಿಡಿಯೊ ಮಹಿಳೆಯರ ಘನೆತೆಗೆ ಹಾನಿಕಾರಕವಾಗಿದೆ. ಇದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) 2021 ರ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಎರಡೂ ಸಾಮಾಜಿಕ ಮಾಧ್ಯಮಗಳಿಗೆ ವೇದಿಕೆಗಳಿಗೆ ಸರ್ಕಾರದಿಂದ ಪತ್ರಗಳನ್ನು ಕಳುಹಿಸಲಾಗಿದೆ” ಮೂಲಗಳು ತಿಳಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮಧ್ಯೆ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿಲ್ವಾಲ್‌, “ಲೇಯರ್‌ ಶಾಟ್‌ ಡಿಯೋಡರೆಂಟ್ ಜಾಹೀರಾತು ಅತ್ಯಾಚಾರ ಸಂಸ್ಕೃತಿಯನ್ನು ಸ್ಪಷ್ಟವಾಗಿ ಉತ್ತೇಜಿಸುತ್ತದೆ. ಇದಕ್ಕೆ ಕಂಪೆನಿಯ ಮಾಲಕರು ಉತ್ತರದಾಯಿಗಲಾಗಿದ್ದಾರೆ. ಅವರ ವಿರುದ್ದ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದ್ದು, ಮಾಹಿತಿ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದ್ದೇವೆ” ಎಂದು ಹೇಳಿದ್ದಾರೆ.

ಹಲವು ಟ್ವಿಟರ್ ಬಳಕೆದಾರರ ಪ್ರಕಾರ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಜಾಹೀರಾತುಗಳನ್ನು ಪ್ರಸಾರ ಮಾಡಲಾಗಿದೆ. ವಿವಾದಾತ್ಮಕ ಎರಡೂ ಜಾಹೀರಾತುಗಳಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಲು ಸೂಚಿಸುವ ಅಶ್ಲೀಲ ಪದಗಳನ್ನು ಬಳಸಲಾಗಿದ್ದು, ಅತ್ಯಾಚಾರ ಸಂಸ್ಕೃತಿಯನ್ನು ಉತ್ತೇಜಿಸಲಾಗಿದೆ.

ಇದನ್ನೂ ಓದಿ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಮೊದಲ ಜಾಹೀರಾತಿನಲ್ಲಿ, ಪ್ರೇಮಿಗಳಿರುವ ಬೆಡ್‌‌ ರೂಂಗೆ ನಾಲ್ವರು ಯುವಕರು ಪ್ರವೇಶಿಸಿ, ‘ಶಾಟ್ ಮಾರಾ ಲಗ್ತಾ ಹೈ’ (ನೀವು ಶಾಟ್ ತೆಗೆದುಕೊಂಡಿದ್ದೀರಿ ಎಂದು ತೋರುತ್ತಿದೆ?) ಎಂದು ಕೇಳುತ್ತಾರೆ. ಈ ವೇಳೆ ಯುವತಿಯೊಂದಿಗೆ ಇರುವ ಯುವಕ ‘ಹೌದು’ ಎಂದು ಉತ್ತರಿಸುತ್ತಾನೆ. ಅವನ ಮಾತನ್ನು ಕೇಳಿದ ಯುವತಿ ಅಘಾತ ವ್ಯಕ್ತಪಡಿಸುತ್ತಾಳೆ. ಈ ವೇಳೆ ಒಳಗೆ ಪ್ರವೇಶಿಸಿದ ಯುವಕರಲ್ಲಿ ಒಬ್ಬ ವ್ಯಕ್ತಿ ಈಗ ನಮ್ಮ ಸರದಿ ಎಂದು ತೋಳು ಚಾಚುತ್ತಾ, ಹಾಸಿಗೆಯನ್ನು ಸಮೀಪಿಸುತ್ತಾನೆ. ಈ ವೇಳೆ ಯುವತಿ ತನ್ನ ಮೇಲೆ ದಾಳಿಗೆ ಬರುತ್ತಿದ್ದಾರೆ ಎಂದು ಭಾವಿಸಿ ಮತ್ತಷ್ಟು ಭಯಪಡುತ್ತಾಳೆ. ಆದರೆ ತೋಳು ಚಾಚಿದ ಯುವಕ ಅಲ್ಲಿರುವ ‘ಶಾಟ್’ ಸುಗಂಧ ದ್ರವ್ಯವನ್ನು ಎತ್ತಿಕೊಳ್ಳುತ್ತಾನೆ.

ಎರಡನೇ ಜಾಹೀರಾತನ್ನು, ಅಂಗಡಿಯೊಂದರಲ್ಲಿ ಚಿತ್ರೀಕರಿಸಲಾಗಿದೆ. ಅಲ್ಲಿ ಯುವಕರ ಗುಂಪೊಂದು ಯುವತಿಯೊಬ್ಬರ ಹಿಂದೆ ನಿಂತು ಸಂಭಾಷಣೆ ನಡೆಸುತ್ತದೆ. ಅವರಲ್ಲಿ ಒಬ್ಬ ಯುವಕ, “ಹಮ್ ಚಾರ್ ಔರ್ ಯೇ ಸಿರ್ಫ್ ಏಕ್ (ನಾವು ನಾಲ್ವರು ಮತ್ತು ಇದು ಕೇವಲ ಒಂದೇ)” ಎಂದು ಹೇಳುತ್ತಾನೆ. ಈ ವೇಳೆ ಮತ್ತೊಬ್ಬ ವ್ಯಕ್ತಿ, “ಕೌನ್ ಲೆಗಾ ಶಾಟ್” (ಯಾರು ಶಾಟ್ ತೆಗೆದುಕೊಳ್ಳುತ್ತೀರಿ)?” ಎಂದು ಹೇಳುತ್ತಾನೆ. ಈ ಸಂಭಾಷಣೆಯನ್ನು ಕೇಳಿದ ಯುವತಿ ಭಯ ಮತ್ತು ಕೋಪದಿಂದ ತಿರುಗಿ ಅವರನ್ನು ನೋಡುತ್ತಾಳೆ. ಈ ವೇಳೆ ಅವರು ಸುಗಂಧ ದ್ರವ್ಯಕ್ಕೆ ಕೈಚಾಚಿ ಅದನ್ನು ಎತ್ತಿಕೊಳ್ಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...