Homeರಾಷ್ಟ್ರೀಯ‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ - ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

‘ಬಾಡಿ ಸ್ಪ್ರೇ ಜಾಹೀರಾತಿನಲ್ಲಿ ಅತ್ಯಾಚಾರ ಸಂಸ್ಕೃತಿ ಪ್ರಚಾರ’ – ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಆದೇಶ

- Advertisement -
- Advertisement -

ಅತ್ಯಾಚಾರ ಸಂಸ್ಕೃತಿಯನ್ನು ಪ್ರಚಾರ ಮಾಡುವ ಮತ್ತು ಅಶ್ಲೀಲ ಸಂಭಾಷಣೆಯನ್ನು ಒಳಗೊಂಡಿದ್ದ ‘ಲೇಯರ್‌‌ ಶಾಟ್’‌ ಸುಗಂಧ ದ್ರವ್ಯದ ವಿವಾದಾತ್ಮಕ ಜಾಹಿರಾತನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್‌ ಮತ್ತು ಯೂಟ್ಯೂಬ್‌ಗೆ ಕೇಳಲಾಗಿದೆ ಎಂದು ವರದಿಯಾಗಿದೆ. ಪ್ರಕರಣದ ವಿಚಾರವಾಗಿ, ‘ಭಾರತೀಯ ಜಾಹೀರಾತು ಗುಣಮಟ್ಟ ಮಂಡಳಿ’ಯು ಸಂಬಂಧಪಟ್ಟ ನಿಯಂತ್ರಣ ಸಂಸ್ಥೆಯಿಂದ ವಿಚಾರಣೆ ನಡೆಸುತ್ತಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

“ಜಾಹಿರಾತಿನ ವಿಡಿಯೊ ಮಹಿಳೆಯರ ಘನೆತೆಗೆ ಹಾನಿಕಾರಕವಾಗಿದೆ. ಇದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) 2021 ರ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಎರಡೂ ಸಾಮಾಜಿಕ ಮಾಧ್ಯಮಗಳಿಗೆ ವೇದಿಕೆಗಳಿಗೆ ಸರ್ಕಾರದಿಂದ ಪತ್ರಗಳನ್ನು ಕಳುಹಿಸಲಾಗಿದೆ” ಮೂಲಗಳು ತಿಳಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಮಧ್ಯೆ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿಲ್ವಾಲ್‌, “ಲೇಯರ್‌ ಶಾಟ್‌ ಡಿಯೋಡರೆಂಟ್ ಜಾಹೀರಾತು ಅತ್ಯಾಚಾರ ಸಂಸ್ಕೃತಿಯನ್ನು ಸ್ಪಷ್ಟವಾಗಿ ಉತ್ತೇಜಿಸುತ್ತದೆ. ಇದಕ್ಕೆ ಕಂಪೆನಿಯ ಮಾಲಕರು ಉತ್ತರದಾಯಿಗಲಾಗಿದ್ದಾರೆ. ಅವರ ವಿರುದ್ದ ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದ್ದು, ಮಾಹಿತಿ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದ್ದೇವೆ” ಎಂದು ಹೇಳಿದ್ದಾರೆ.

ಹಲವು ಟ್ವಿಟರ್ ಬಳಕೆದಾರರ ಪ್ರಕಾರ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಜಾಹೀರಾತುಗಳನ್ನು ಪ್ರಸಾರ ಮಾಡಲಾಗಿದೆ. ವಿವಾದಾತ್ಮಕ ಎರಡೂ ಜಾಹೀರಾತುಗಳಲ್ಲಿ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಲು ಸೂಚಿಸುವ ಅಶ್ಲೀಲ ಪದಗಳನ್ನು ಬಳಸಲಾಗಿದ್ದು, ಅತ್ಯಾಚಾರ ಸಂಸ್ಕೃತಿಯನ್ನು ಉತ್ತೇಜಿಸಲಾಗಿದೆ.

ಇದನ್ನೂ ಓದಿ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಮೊದಲ ಜಾಹೀರಾತಿನಲ್ಲಿ, ಪ್ರೇಮಿಗಳಿರುವ ಬೆಡ್‌‌ ರೂಂಗೆ ನಾಲ್ವರು ಯುವಕರು ಪ್ರವೇಶಿಸಿ, ‘ಶಾಟ್ ಮಾರಾ ಲಗ್ತಾ ಹೈ’ (ನೀವು ಶಾಟ್ ತೆಗೆದುಕೊಂಡಿದ್ದೀರಿ ಎಂದು ತೋರುತ್ತಿದೆ?) ಎಂದು ಕೇಳುತ್ತಾರೆ. ಈ ವೇಳೆ ಯುವತಿಯೊಂದಿಗೆ ಇರುವ ಯುವಕ ‘ಹೌದು’ ಎಂದು ಉತ್ತರಿಸುತ್ತಾನೆ. ಅವನ ಮಾತನ್ನು ಕೇಳಿದ ಯುವತಿ ಅಘಾತ ವ್ಯಕ್ತಪಡಿಸುತ್ತಾಳೆ. ಈ ವೇಳೆ ಒಳಗೆ ಪ್ರವೇಶಿಸಿದ ಯುವಕರಲ್ಲಿ ಒಬ್ಬ ವ್ಯಕ್ತಿ ಈಗ ನಮ್ಮ ಸರದಿ ಎಂದು ತೋಳು ಚಾಚುತ್ತಾ, ಹಾಸಿಗೆಯನ್ನು ಸಮೀಪಿಸುತ್ತಾನೆ. ಈ ವೇಳೆ ಯುವತಿ ತನ್ನ ಮೇಲೆ ದಾಳಿಗೆ ಬರುತ್ತಿದ್ದಾರೆ ಎಂದು ಭಾವಿಸಿ ಮತ್ತಷ್ಟು ಭಯಪಡುತ್ತಾಳೆ. ಆದರೆ ತೋಳು ಚಾಚಿದ ಯುವಕ ಅಲ್ಲಿರುವ ‘ಶಾಟ್’ ಸುಗಂಧ ದ್ರವ್ಯವನ್ನು ಎತ್ತಿಕೊಳ್ಳುತ್ತಾನೆ.

ಎರಡನೇ ಜಾಹೀರಾತನ್ನು, ಅಂಗಡಿಯೊಂದರಲ್ಲಿ ಚಿತ್ರೀಕರಿಸಲಾಗಿದೆ. ಅಲ್ಲಿ ಯುವಕರ ಗುಂಪೊಂದು ಯುವತಿಯೊಬ್ಬರ ಹಿಂದೆ ನಿಂತು ಸಂಭಾಷಣೆ ನಡೆಸುತ್ತದೆ. ಅವರಲ್ಲಿ ಒಬ್ಬ ಯುವಕ, “ಹಮ್ ಚಾರ್ ಔರ್ ಯೇ ಸಿರ್ಫ್ ಏಕ್ (ನಾವು ನಾಲ್ವರು ಮತ್ತು ಇದು ಕೇವಲ ಒಂದೇ)” ಎಂದು ಹೇಳುತ್ತಾನೆ. ಈ ವೇಳೆ ಮತ್ತೊಬ್ಬ ವ್ಯಕ್ತಿ, “ಕೌನ್ ಲೆಗಾ ಶಾಟ್” (ಯಾರು ಶಾಟ್ ತೆಗೆದುಕೊಳ್ಳುತ್ತೀರಿ)?” ಎಂದು ಹೇಳುತ್ತಾನೆ. ಈ ಸಂಭಾಷಣೆಯನ್ನು ಕೇಳಿದ ಯುವತಿ ಭಯ ಮತ್ತು ಕೋಪದಿಂದ ತಿರುಗಿ ಅವರನ್ನು ನೋಡುತ್ತಾಳೆ. ಈ ವೇಳೆ ಅವರು ಸುಗಂಧ ದ್ರವ್ಯಕ್ಕೆ ಕೈಚಾಚಿ ಅದನ್ನು ಎತ್ತಿಕೊಳ್ಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...