Homeಮುಖಪುಟಆರ್‌ಎಸ್‌ಎಸ್‌ ಮುಖ್ಯಸ್ಥರ ಮಾತನ್ನು ಪಾಲಿಸುತ್ತವೆಯೇ ಬಜರಂಗದಳ, ಬಿಜೆಪಿ, ಎಬಿವಿಪಿ, ವಿಎಚ್‌ಪಿ ಇತ್ಯಾದಿ?

ಆರ್‌ಎಸ್‌ಎಸ್‌ ಮುಖ್ಯಸ್ಥರ ಮಾತನ್ನು ಪಾಲಿಸುತ್ತವೆಯೇ ಬಜರಂಗದಳ, ಬಿಜೆಪಿ, ಎಬಿವಿಪಿ, ವಿಎಚ್‌ಪಿ ಇತ್ಯಾದಿ?

ಮಸೀದಿ ಕೆಡವಿ ಮಂದಿರ ಹುಡುಕುವ ಹೋರಾಟದಲ್ಲಿ ಆರ್‌ಎಸ್‌ಎಸ್‌ ಇಲ್ಲ ಎಂದು ಮೋಹನ್‌ ಭಾಗವತ್‌ ಹೇಳಿದರೆ, ಮತ್ತೊಂದೆಡೆ ಪ್ರವಾದಿ ಮುಹಮ್ಮದ್‌ ಅವರನ್ನು ಅವಹೇಳನ ಮಾಡಿದ ವಕ್ತಾರರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಈ ವಿದ್ಯಮಾನಗಳನ್ನು ಹೇಗೆ ನೋಡಬೇಕು?

- Advertisement -
- Advertisement -

ಎರಡು ಸುದ್ದಿಗಳು. ಮೊದಲನೆಯದು, ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವುದು ಬೇಡ. ಆ ಹೋರಾಟದಲ್ಲಿ ಆರ್‌ಎಸ್‌ಎಸ್‌ ಇಲ್ಲ: ಮೋಹನ್ ಭಾಗವತ್. ಎರಡನೆಯದು, ಮೊಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದ, ಬಿಜೆಪಿ ಓರ್ವ ವಕ್ತಾರೆ ಅಮಾನತು, ಓರ್ವ ವಕ್ತಾರ ಉಚ್ಛಾಟನೆ.

ಅಯೋಧ್ಯೆ ರಾಮಮಂದಿರದ ನಂತರ ಕಾಶಿ ಜ್ಞಾನವ್ಯಾಪಿ ಮಸೀದಿ, ಮಥುರಾ ಶ್ರೀಕೃಷ್ಣ ದೇವಸ್ಥಾನಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು ಎಂಬ ಕೂಗು ಇತ್ತು. ನಂತರ ಅದು ತಾಜಮಹಲ್, ಕುತುಬ್ ಮೀನಾರ್ ನಂತಹ ಜಾಗತಿಕ ಪ್ರಸಿದ್ಧ ಸ್ಥಳವೂ ಸೇರಿ, ಶ್ರೀರಂಗಪಟ್ಟಣ, ಮಂಗಳೂರು ಬಳಿ ಮಳಲಿ ಮಸೀದಿ ಸೇರಿದಂತೆ ದೇಶದ ಹಲವೆಡೆ ಮಸೀದಿ ದೇವಸ್ಥಾನವಾಗಿತ್ತು. ಅದರ ಸರ್ವೇ ಆಗಲಿ ಎಂಬ ಕೂಗು ವ್ಯಾಪಿಸಿತು.
ಇದೀಗ ಆರ್‌ಎಸ್‌ಎಸ್‌ನ ಸುಪ್ರೀಂ ಮೋಹನ್ ಭಾಗವತ್ ಸ್ಪಷ್ಟವಾಗಿ, “ಪ್ರತೀ ಮಸೀದಿಯಲ್ಲೂ ಹಿಂದೂ ದೇವರನ್ನು ಹುಡುಕುವ ಹೋರಾಟದಲ್ಲಿ ನಾವಿಲ್ಲ. ಇತಿಹಾಸದ ತಪ್ಪುಗಳನ್ನು ನಾವೂ ಮಾಡಿದ್ದಲ್ಲ, ಮುಸ್ಲಿಮರೂ ಮಾಡಿದ್ದಲ್ಲ. ಒಂದೆರಡು ಪ್ರಮುಖ ಕ್ಷೇತ್ರದ ಕುರಿತು ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳಬೇಕು. ಉಳಿದಂತೆ ಹೋರಾಟಕ್ಕೆ ನಾವಿಲ್ಲ” ಎಂದು ಹೇಳಿಬಿಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರ್‌ಎಸ್‌ಎಸ್‌ನಲ್ಲಿ ಒಂದಿಷ್ಟು ನಿಯಮವಿದೆ. ಅದರಲ್ಲಿ ಒಂದು “ಸೂಚನೆ” ಇದೆ. ಅಂದರೆ ಸಂಘದ ಸ್ವಯಂ ಸೇವಕರಿಗೆ ಮೇಲಿನಿಂದ ಬರುವ ಸೂಚನೆ ಪಾಲಿಸುವುದು ಕಡ್ಡಾಯ. ಅದನ್ನು ಪ್ರಶ್ನಿಸುವಂತಿಲ್ಲ, ಉಲ್ಲಂಘಿಸುವಂತಿಲ್ಲ. ಹಾಗೇ ಮಾಡಿದವರನ್ನು ‘ಉಪೇಕ್ಷೆ’ ಮಾಡುವ ಮೂಲಕ ನಿರ್ಲಕ್ಷ್ಯ ಮಾಡುತ್ತಾರೆ. ಯಾವುದೇ ಜವಾಬ್ದಾರಿ ಕೊಡುವುದಿಲ್ಲ. ತನ್ನಿಂದ ತಾನೇ ಆತ ಮೂಲೆಗೆ ಸರಿಯಬೇಕಾದ ಪರಿಸ್ಥಿತಿ.

ಇದನ್ನೂ ಓದಿರಿ: ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ಈಗ ಸಂಘದ ಸಂಯೋಜನೆಯಲ್ಲಿ (ಸಹ ಸಂಘಟನೆಗಳು) ಅನೇಕವಿವೆ. ವಿಹೆಚ್‌ಪಿ, ಬಿಜೆಪಿ, ಅಭಾವಿಪ, ಭಜರಂಗದಳ, ದುರ್ಗಾವಾಹಿನಿ ಇತ್ಯಾದಿ. (ರಾಮ ಸೇನೆ, ಹಿಂದೂ ಮಹಾಸಭಾ ಇದರ ಒಳಗಿರದ ಸ್ವತಂತ್ರ ಸಂಘಟನೆಗಳು. ಆದರೂ ಅವರು ಆರ್‌ಎಸ್‌ಎಸ್‌ಅನ್ನು ವಿರೋಧಿಸುವುದಿಲ್ಲ.)

ಈ ಸಹ ಸಂಘಟನೆಗಳು ಸರ ಸಂಘಚಾಲಕರ ಸೂಚನೆಯನ್ನು ಬೈಠಕ್ ಗಳ ಮೂಲಕ ಪ್ರತೀ ಕಾರ್ಯಕರ್ತರಿಗೆ ತಲುಪಿಸಲೇಬೇಕು. ಅದು ಅನುಶಾಸನದ ನೆಲೆಗಟ್ಟಿನಲ್ಲಿ. (ನಾನು ಸಂಘದಲ್ಲಿ ಇದ್ದಾಗ ಈ ಪದ್ಧತಿ ಇತ್ತು. ಇದೆಲ್ಲಾ ಬದಲಾಗಿರಲಿಕ್ಕಿಲ್ಲವೆಂದು ಭಾವಿಸಿದ್ದೇನೆ.)

ಈಗ ಮೋಹನ್ ಭಾಗವತರ ಮಾತನ್ನು ಸಂಘದ ಪ್ರತಿಯೊಬ್ಬನೂ ಕಡ್ಡಾಯವಾಗಿ ಪಾಲಿಸಲೇಬೇಕು. ಆತ ಬಿಜೆಪಿಯಲ್ಲಿರಲಿ, ಭಜರಂಗದಳದಲ್ಲಿರಲಿ. ಆತ ತಾನು ಆರ್‌ಎಸ್‌ಎಸ್‌ ಅಲ್ಲ, ಕೇವಲ ಬಿಜೆಪಿ ಅಥವಾ ಅಭಾವಿಪ ಎಂದು ಹೇಳಿಕೊಳ್ಳಬಹುದು. ಆಗ ಆತನ ನಿಲುವು ಸಂಘದ್ದು ಆಗಿರುವುದಿಲ್ಲ. ಅದಕ್ಕೆ ಬೆಲೆಯೂ ಇಲ್ಲ. ಸಂಘದ ಹೆಸರು ದುರುಪಯೋಗ ಮಾಡಿಕೊಂಡರೆ ಸಂಘದವರು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ.

ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ. ಅದರ ಬಹುತೇಕ ನಾಯಕರು ತಾವು ಆರ್‌ಎಸ್‌ಎಸ್‌ ಎಂದೇ ಹೇಳುವುದು. (ಶಾಖೆಗೆ ಹೋಗದವರೂ ಹಾಗೇ ಹೇಳಿಕೊಳ್ಳುತ್ತಿರುವುದೂ ಇದೆ.)

ಇದನ್ನೂ ಓದಿರಿ: ಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

ಈಶ್ವರಪ್ಪನವರು “ಹೌದ್ರೀ, ಸಂಘದ ಆದೇಶದಂತೆ ನಾವು ನಡೆಯುವುದು… ಏನೀಗ?” ಎಂದು ವಿಧಾನಸೌಧದಲ್ಲೇ ಗುಡುಗಿರುವುದು ದಾಖಲಾಗಿದೆ. ಸಿ.ಟಿ.ರವಿ, ಯತ್ನಾಳ್‌, ಅಶೋಕ್‌, ನಳೀನ್‌ ಇತ್ಯಾದಿ ನಾಯಕರು ತಾವು ಆರ್‌ಎಸ್‌ಎಸ್‌ ಎಂದೇ ಹೇಳುವುದು. ಅದು ನಿಜ ಕೂಡಾ.

ಆರ್‌ಎಸ್‌ಎಸ್‌ನ ಕೆಳ ಹಂತದಿಂದ ರಾಷ್ಟ್ರ ಮಟ್ಟದವರಗೆ ನಿರಂತರವಾಗಿ ಪರಿವಾರ ಬೈಠಕ್ ನಡೆಯುತ್ತದೆ. ಅಲ್ಲಿ ಕೆಲವು ವಿಷಯಗಳಲ್ಲಿ ಅಭಿಪ್ರಾಯ ಕ್ರೂಢೀಕರಿಸಿ ಬೈಠಕ್ ಆಗುತ್ತದೆ. ಏಕ ಅಭಿಪ್ರಾಯ ಘೋಷಣೆಯಾಗುತ್ತದೆ. ಜಿಲ್ಲಾಮಟ್ಟದಿಂದ ರಾಷ್ಟ್ರ ಮಟ್ಟದತನಕ ಆರ್‌ಎಸ್‌ಎಸ್‌ನ ಓರ್ವ ವ್ಯಕ್ತಿಯನ್ನು ಸಂಘಟನಾ ಕಾರ್ಯದರ್ಶಿ ಎಂದು ಬಿಜೆಪಿಗೆ ನೀಡಲಾಗುತ್ತದೆ. ಆತ ಸಂಘ ಮತ್ತು ಬಿಜೆಪಿ ನಡುವೆ co-ordinator ಆಗಿ ಕಾರ್ಯ ನಿರ್ವಹಿಸುತ್ತಾನೆ. ಬಿಜೆಪಿಗೆ ಸಂಘ ಕೇವಲ ಸಲಹೆ ಕೊಡುವುದಲ್ಲ, ಆದೇಶ ಅಥವಾ ಸೂಚನೆಯನ್ನೂ ಕೊಡುತ್ತದೆ. ಅಲ್ಲಿಗೆ ಸಂಘ ಪಕ್ಷ ರಾಜಕಾರಣದಲ್ಲಿ ನೇರ ಪಾತ್ರ ವಹಿಸುತ್ತದೆ.

ಸಂಘ ಒಂದು ಸಂಘಟನೆಯಾಗಿ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿದೆ. ಅದು ಸಾರ್ವಜನಿಕವಾಗಿ ತನ್ನನ್ನು ತಾನು ತೆರೆದುಕೊಂಡಿದೆ. ಹೀಗಿರುವಾಗ ನೀವು ಸಂಘದ ವಿಮರ್ಶೆ ಮಾಡಬಾರದು, ಪ್ರಶ್ನೆ ಕೇಳಬಾರದು ಅನ್ನುವುದು ಸರಿಯಲ್ಲ. ಅದು ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರೀಯತೆಯನ್ನು ಬೆಳೆಸುವ ಪಾರದರ್ಶಕ ಸಂಸ್ಥೆ ಎಂದು ಘೋಷಣೆ ಮಾಡಿಕೊಂಡಿರುವಾಗ ಮತ್ತು ದಿನನಿತ್ಯ ಒಂದಿಲ್ಲ ಒಂದು ದೇಶದ ಸಾರ್ವಜನಿಕ ಬದುಕಿನ ಸಂಗತಿಗಳಲ್ಲಿ ಪಾಲ್ಗೊಳ್ಳುವಾಗ ಅದರ ಕುರಿತು ಚರ್ಚೆ ತೀರಾ ಸಹಜ ಪ್ರತಿಕ್ರಿಯೆ ಆಗಿದೆ.

ಸಂಘದಿಂದಲೇ ಬಂದ ಮತ್ತು ಖಡಕ್ಕಾಗಿ ಹಾಗೇ ಹೇಳಿಕೊಳ್ಳುವ ಮಂತ್ರಿಗಳ ಭ್ರಷ್ಟಾಚಾರ ಅಥವಾ ಯಾವುದಾರೂ ತಪ್ಪು ಆದಾಗ ಅದು ವೈಯಕ್ತಿಕ ಎಂದು ಹೇಳಿ ಮುಗಿಸಲಾಗದು. ಅದು ಸಂಘದ product. ಕಾಂಗ್ರೆಸ್ ಕಮ್ಯುನಿಸ್ಟ್‌ನ productಗಳು ಸರಿ ಇಲ್ಲದಿದ್ದರೆ ಹೇಗೆ ಉತ್ತರದಾಯಿತ್ವವಾಗುತ್ತದೋ ಹಾಗೇ ಸಂಘವೂ ಉತ್ತರದಾಯಿತ್ವವಾಗುತ್ತದೆ.

ನಾವು ಸಂಘಕ್ಕೆ ಹೋಗುತ್ತಿದ್ದಾಗ, ನೀವು ಯಾವ ಪಕ್ಷಕ್ಕೇ ಬೇಕಾದರೂ ಹೋಗಿ, ಒಳ್ಳೆಯವರಾಗಿರಿ, ರಾಷ್ಟ್ರೀಯವಾದಿಗಳಾಗಿರಿ ಅಂತಿತ್ತು. 1989ರ ನಂತರ ಅದು ಹಿಂದುತ್ವ ಆಧರಿತ ಬಿಜೆಪಿಯನ್ನು ಬೆಂಬಲಿಸಿತು. ಈಗ ಸಂಘದವರು ನೇರ ಬಿಜೆಪಿಯೇ ಆಗಿರಬೇಕು ಅನ್ನುವ ಅಲಿಖಿತ ನಿಯಮ ಬಂದಾಗಿದೆ. ಹಾಗಾಗಿ ಬಿಜೆಪಿ ಅಂದರೆ ಸಂಘ. ಸಂಘದವರು ಬಿಜೆಪಿಯಾಗಿದೆ. ಇಲ್ಲಿ ರಾಜಕೀಯವಾಗಿ ಬೇರೆ ಪಕ್ಷದ ಪ್ರವೇಶವಾಗುವುದಿಲ್ಲ. ಬಿಜೆಪಿ ಪ್ರಮುಖ ನಾಯಕ ತಾನು ಆರ್‌ಎಸ್‌ಎಸ್‌ ಎಂದು ಪದೇ ಪದೇ ಹೇಳುತ್ತ, ರಾಜಕಾರಣದಲ್ಲಿ ಮಾತನಾಡುವಾಗ ಅದು ಆರ್‌ಎಸ್‌ಎಸ್‌ ಹೊರತುಪಡಿಸಿ ಅನ್ನುವುದು ಕಷ್ಟಸಾಧ್ಯ.

ಈಗ ಬಿಜೆಪಿ ಮುಸ್ಲಿಂ ಧರ್ಮಕ್ಕೆ ಅಪಮಾನ ಮಾಡಿದೆ ಎಂದು ವಕ್ತಾರರನ್ನು ತೆಗೆದಿದೆ. ಭಾಗವತ್ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ತಾವು ಆರ್‌ಎಸ್‌ಎಸ್‌ ಎಂದು ಹೇಳಿಕೊಳ್ಳುವ ಸ್ವಯಂ ಸೇವಕ ಬಿಜೆಪಿ ಅಥವಾ ಭಜರಂಗದಳ ಅಥವಾ ಜಾಗರಣ ವೇದಿಕೆ ಎಲ್ಲಿಯೇ ಇರಲಿ ಆತ ಇನ್ನು ಮುಂದೆ ಹೊಸ ಹೊಸ ಮಸೀದಿಯಲ್ಲಿ ದೇವರನ್ನು ಹುಡುಕುವಂತಿಲ್ಲ, ಇಸ್ಲಾಂ ಧರ್ಮವನ್ನು ಅವಹೇಳನ ಮಾಡುವಂತಿಲ್ಲ. ಹಾಗೆ ಮಾಡುವುದು ಮಾತೃ ದ್ರೋಹವಾಗುತ್ತದೆ. ಪರಿವಾರದಲ್ಲಿರದ, ಆದರೆ ಆರ್‌ಎಸ್‌ಎಸ್‌ ತನ್ನ ತಾಯಿ ಅನ್ನುವ ಮುತಾಲಿಕರಂಥವರೂ ಕೂಡಾ ತಮ್ಮ ನಿಲುವು ಬದಲಿಸಬೇಕು ಅಥವಾ ಆರ್‌ಎಸ್‌ಎಸ್‌ಗೆ ವಿರುದ್ದ ನಿಲ್ಲಬೇಕು.

ಜಗತ್ತಿನ ಹಳೆಯ ಇತಿಹಾಸ ಯುದ್ಧ ಯುಗ. ಹಿಂದೂಗಳ ಮೇಲೆ ಮೊಘಲರು, ಡಚ್ಚರು, ಪೋರ್ಚುಗೀಸರು, ಬ್ರಿಟಿಷರು, ಗ್ರೀಕರು ಹೀಗೆ ಹಲವರ ಆಕ್ರಮಣವಾಗಿದೆ. ಹಿಂದೂ ರಾಜರ ಮೇಲೆ ಹಿಂದೂ ರಾಜರ, ಮುಸ್ಲಿಂ ರಾಜನ ಮೇಲೆ ಮುಸ್ಲಿಂ ರಾಜನ, ಬೌದ್ಧರ ಮೇಲೆ ಹಿಂದೂಗಳ, ಜೈನರ ಮೇಲೆ ಹಿಂದೂಗಳ, ಹಿಂದೂಗಳ ಮೇಲೆ ಬೌದ್ಧರ ಹೀಗೆ ಯಾವುದೂ ಆಗಿಲ್ಲ ಅನ್ನುವಂತಿಲ್ಲ. ಅನೇಕ ದೇಶಗಳ ಇತಿಹಾಸವೂ ಇದೇ ರೀತಿ. ನಮ್ಮದು ಮಾತ್ರವಲ್ಲ. ಯಾಕೆಂದರೆ ಅದು ಯುದ್ಧ ಯಗ. ಹಾಗಾಗಿ ಭಾಗವತ್ ಅವರ ನಿರ್ಧಾರ ಸರಿ. ಅದನ್ನು ಜಾರಿಗೆ ತರಬೇಕಾದುದು ಮತ್ತು ಸಂಘದವರಲ್ಲದಿದ್ದರೂ ಸಂಘದ ಹೆಸರು ಹೇಳಿ, ಹಾದಿ ಬೀದಿಯಲ್ಲಿ ಹಿಂದುತ್ವದ ಗಲಾಟೆ ಮಾಡುವವರನ್ನು ನಿಯಂತ್ರಣ ಮಾಡಬೇಕಾದುದೂ ಅವರೇ. ಯಾಕೆಂದರೆ ಅವರದೇ ಸರ್ಕಾರ ಈಗ ಇರುವುದು.

ಇದನ್ನೂ ಓದಿರಿ: ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

ಹಳೆಯದನ್ನೆಲ್ಲ, ಈಗ ಸರಿ ಮಾಡುತ್ತೇನೆ. ಭಾರತದ 30 ಸಾವಿರ ಮಸೀದಿ ಒಳಗಡೆ ಹುಡುಕುತ್ತೇನೆ, ಬೌದ್ಧರ ಸ್ತೂಪಗಳು, ಜೈನರ ಬಸದಿಗಳು ದೇವಸ್ಥಾನವಾಗಿದೆ ಅದನ್ನೂ ಅಗೆದು ನೋಡುತ್ತೇನೆ ಎನ್ನುವುದು ಹೊಸ ಜಗತ್ತಿನಲ್ಲಿ ಅಸಾಧ್ಯವಾದುದು. ಇಂದಿನ ಜಗತ್ತು ಪರಸ್ಪರ ತಳುಕು ಹಾಕಿಕೊಂಡಾಗಿದೆ. ಒಬ್ಬರನ್ನೊಬ್ಬರು ಬಿಟ್ಟು ಬದುಕದ ನಿಸರ್ಗ ನಿಯಮವೊಂದು ನಮ್ಮನ್ನು ಆವರಿಸಿಯಾಗಿದೆ. ಅದಕ್ಕೆ ಬಿಜೆಪಿ ವಕ್ತಾರರು ಹುದ್ದೆ ಕಳೆದುಕೊಂಡದ್ದು. ಮುಸ್ಲಿಂ ವ್ಯಾಪಾರಿಯೊಂದಿಗೆ ಕೋಟ್ಯಾಂತರ ವ್ಯವಹಾರ ಕುದುರಿಸಿದ ಮೋದಿ ಸರ್ಕಾರ, ಏಕಾಏಕಿ ಮುಸ್ಲಿಂ ಧರ್ಮ ಅವಹೇಳನ ಆಗುವಾಗ ಮೌನಕ್ಕೆ ಸರಿಯುವಂತಿಲ್ಲ. ಮುಸ್ಲಿಂ ರಾಷ್ಟ್ರಗಳಲ್ಲಿ ನಮ್ಮವರ ವರ್ತನೆಗಳನ್ನು ಗಂಭೀರವಾಗಿಸಿ, ಅಲ್ಲಿಯೂ ವ್ಯಾಪಾರ ವಹಿವಾಟು ಬಹಿಷ್ಕಾರ , ಭಾರತೀಯ ಉದ್ಯೋಗಿಗಳನ್ನು ಕೈಬಿಡುವ ಚಿಂತನೆ ಜೋರಾಗಿದೆ. ನಾವು ಸಾಮೂಹಿಕವಾಗಿ ಮಸೀದಿ ಅಗೆದರೆ, ನಿಮ್ಮ ದೇವಸ್ಥಾನದಲ್ಲಿ ಬಸದಿಯಿದೆ, ಬೌದ್ಧ ವಿಹಾರವಿದೆ, ಶೈವ ವೈಷ್ಣವ, ಹನುಮನ ಹುಟ್ಟು ಹೀಗೆ ಪಟ್ಟಿ ಬೆಳೆದರೆ ದೇಶ ಛಿದ್ರವಾಗುತ್ತದೆ. ಹಾಗೇ ಆಗಬಾರದು ಅನ್ನುವುದು ರಾಷ್ಟ್ರೀಯವಾದ.

ಇತಿಹಾಸ ಬೇಕು ನಿಜ. ಆದರೆ ಭೌತಿಕವಾಗಿ ಇತಿಹಾಸವನ್ನು ತಿದ್ದುವುದೇ ವರ್ತಮಾನವಾದರೆ ಭವಿಷ್ಯ ಭಯಾನಕವಾಗುತ್ತದೆ. ಯಾಕೆಂದರೆ ಇತಿಹಾಸ ಬಹುತೇಕ ಯುದ್ಧಯಗವಾಗಿತ್ತು. ಅದಕ್ಕೆ ವರ್ತಮಾನದ ನಾವು ಯಾರೂ ಉತ್ತರದಾಯಿಯೂ ಅಲ್ಲ, ಜವಾಬ್ದಾರಿಯೂ ಅಲ್ಲ. ನಾವು ಭವಿಷ್ಯದ ಸುಂದರ ಚಿತ್ರವೊಂದಕ್ಕೆ ನಕ್ಷೆ ಬರೆದು ಬರುವ ನಾಳೆಗೆ ಅದನ್ನು ಕಟ್ಟಿಕೊಡುವುದೇ ವರ್ತಮಾನವಾಗಬೇಕು. ನಮ್ಮ ವರ್ತಮಾನವೇ ನಾಳೆಗೆ ಇತಿಹಾಸ. ಹಳೆಯದನ್ನು ಬಿಟ್ಟು, ಹೊಸತನ್ನು ಕಟ್ಟುವ. ನಮ್ಮ ಮುಂದಿನ ಪೀಳಿಗೆ ನಮ್ಮ ಇತಿಹಾಸವನ್ನು ಕಣ್ಣರಳಿಸಿ ವಾವ್… ಎಂಬ ಉದ್ಗಾರ ತೆಗೆಯುವಂತೆ ಮಾಡೋಣ.

(ಲೇಖಕರು, ಸಂಘ ಪರಿವಾರದ ಮಾಜಿ ನಾಯಕರು, ಕರಾವಳಿಯ ಭಾಗದ ಶಿಕ್ಷಣತಜ್ಞರೂ ಹೌದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...