Homeಕರ್ನಾಟಕಕಾರ್ಕಳ: ರಸ್ತೆಗೆ ಗೋಡ್ಸೆ ಹೆಸರು; ಬೋರ್ಡ್ ತೆರವು ಮಾಡಿಸಿದ ಕಾಂಗ್ರೆಸ್ ಮುಖಂಡರು

ಕಾರ್ಕಳ: ರಸ್ತೆಗೆ ಗೋಡ್ಸೆ ಹೆಸರು; ಬೋರ್ಡ್ ತೆರವು ಮಾಡಿಸಿದ ಕಾಂಗ್ರೆಸ್ ಮುಖಂಡರು

- Advertisement -
- Advertisement -

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಯಾರೋ ಕಿಡಿಗೇಡಿಗಳು ಇಟ್ಟಿದ್ದು ವಿವಾದ ಸ್ವರೂಪ ಪಡೆದ ಬೆನ್ನಲ್ಲೇ ಸ್ಥಳೀಯ ಮುಖಂಡರು ಕ್ರಮ ವಹಿಸಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್‌ ಅವರು ಪ್ರತಿನಿಧಿಸುತ್ತಿರುವುದು ವಿವಾದದ ಕೇಂದ್ರ ಸ್ಥಾನ ಪಡೆದ ಬಳಿಕ ‘ಗೋಡ್ಸೆ ರಸ್ತೆ’ ಫಲಕ ತೆರವಾಗಿದೆ.

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕ ಹಾಕಲಾಗಿತ್ತು. ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ. ಕ್ರಮ ವಹಿಸಲಾಗುವುದು” ಎಂದು ತಿಳಿಸಿದ್ದರು.

ಫಲಕ ಹಾಕಿದ್ದ ಘಟನೆ ಬಗ್ಗೆ ಸಚಿವ ಸುನೀಲ್‌ ಕುಮಾರ್ ಪ್ರತಿಕ್ರಿಯಿಸಿದ್ದು, “ಫಲಕ ಹಾಕುವುದು ಅಥವಾ ಗೋಡ್ಸೆ ಹೆಸರಿಡುವುದು ಪಂಚಾಯತ್‌ನ ನಿರ್ಧಾರವಲ್ಲ. ಫಲಕವನ್ನು ಪಂಚಾಯತ್‌ ಹಾಕಿಲ್ಲ, ಯಾರೋ ಖಾಸಗಿ ವ್ಯಕ್ತಿಗಳು ಹಾಕಿದ್ದಾರೆ. ತನಿಖೆ ನಡೆಸಿ, ವಸ್ತುಸ್ಥಿತಿಯನ್ನು ಮುಂದಿಡಲಾಗುತ್ತದೆ” ಎಂದು ಹೇಳಿದ್ದಾರೆ.

ಆ ನಂತರದಲ್ಲಿ ಪಂಚಾಯತ್‌ ಸದಸ್ಯರು, ಕಾಂಗ್ರೆಸ್ ಮುಖಂಡರು, ಅಧಿಕಾರಿಗಳ ನೇತೃತ್ವದಲ್ಲಿ ತೆರಳಿ ಫಲಕ ತೆರವಿಗೆ ಕ್ರಮ ವಹಿಸಿದ್ದಾರೆ.

“ನಾಥೂರಾಮ್‌ ಗೋಡ್ಸೆ ಫಲಕವನ್ನು ಇಂದು ಬೆಳಿಗ್ಗೆ ತೆರವು ಮಾಡಲಾಗಿದೆ” ಎಂದು ಬೋಳ ಗ್ರಾಪಂ ಉಪಾಧ್ಯಕ್ಷ ಕಿರಣ್‌ಕುಮಾರ್ ಶೆಟ್ಟಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಯುವ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು.

ಯುವ ಕಾಂಗ್ರೆಸ್ ಮುಖಂಡ ದೀಪಕ್‌ ಕೋಟ್ಯಾನ್‌ ಮಾತನಾಡಿ, “ಯಾರೋ ಕಿಡಿಗೇಡಿಗಳು ದೇಶದ ಮೊದಲ ಭಯೋತ್ಪಾದಕ ನಾಥೂರಾಮ್‌ ಗೋಡ್ಸೆ ಹೆಸರನ್ನು ಯಾರೋ ಇಟ್ಟಿದ್ದರು. ಬ್ಲಾಕ್‌ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ಎಚ್ಚರಿಕೆ ನೀಡಿದೆವು. ಇದರಿಂದ ಎಚ್ಚೆತ್ತ ಬೋಳ ಗ್ರಾಪಂ ಪಿಡಿಒ ಹಾಗೂ ಆಡಳಿತ ವರ್ಗ ಬೋರ್ಡ್ ತೆರವುಗೊಳಿಸಿದೆ” ಎಂದು ತಿಳಿಸಿದ್ದಾರೆ.

“ಬೋರ್ಡ್ ಹಾಕುವಂತಹ ಘಟನೆಗಳು ಖಂಡನೀಯ ಹಾಗೂ ಖೇದಕರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶ ಎತ್ತ ಸಾಗುತ್ತಿದೆ? ಯುವಕರಿಗೆ ಎಂತಹ ಸಂದೇಶವನ್ನು ನೀಡುತ್ತಿದ್ದಾರೆ ಎಂಬುದು ಕಳವಳಕಾರಿ ವಿಚಾರವಾಗಿದೆ. ಮುಂದೆ ಏನಾದರೂ ಇದು ಮರುಕಳುಸಿದರೆ ಉಡುಪಿ ಕಾಂಗ್ರೆಸ್‌ ಘಟಕವು ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕರಾದ ಬಿ.ಕೆ.ಹರಿಪ್ರಸಾದ್‌ ಪ್ರತಿಕ್ರಿಯೆ ನೀಡಿದ್ದು, “ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು. ಅದು ಥೇಟ್ ಕಾರ್ಕಳದ ರಸ್ತೆಗೆ ಇಟ್ಟಿದ್ದ ಗೋಡ್ಸೆಯ ನಾಮಫಲಕವನ್ನ ಕಿತ್ತು ಹಾಕಿದಂತೆ. ನಾಮ ಫಲಕ ತೆರವುಗೊಳಿಸಿ ಅದೇ ಜಾಗದಲ್ಲಿ ಶ್ರೀ ನಾರಾಯಣ ಗುರುಗಳ ಹೆಸರಿಡಲು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸಕ್ಕೆ ಸಲಾಂ” ಎಂದಿದ್ದಾರೆ.

ಘಟನೆ ಬೆಳಕಿಗೆ ಬಂದ ತಕ್ಷಣ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್‌, “ತಾಲಿಬಾನಿಗಳನ್ನು ಬಿಜೆಪಿ ಉಗ್ರಗಾಮಿಗಳು ಎಂದು ಕರೆಯುತ್ತಿತ್ತು. ಭಾರತದಲ್ಲಿ ತಾಲಿಬಾನ್ ನಿಷೇಧಿತ ಸಂಘಟನೆ. ಆದರೆ, ಕೇಂದ್ರ ಸರ್ಕಾರ ಗೋಧಿ, ಔಷಧ, ಹಣ ಮುಂತಾದ ನೆರವನ್ನು ಅಫ್ಘನ್ ಸರ್ಕಾರಕ್ಕೆ ರವಾನೆ ಮಾಡಿ ತಾಲಿಬಾನಿಗಳ ಜತೆ ಸ್ನೇಹ-ಪ್ರೀತಿಯ ಅಪ್ಪುಗೆ ಮಾಡುತ್ತಿದ್ದಂತೆ ಉಡುಪಿಯಲ್ಲಿ ದೇಶದ್ರೋಹಿ ಗೋಡ್ಸೆ ರಸ್ತೆ ತಲೆ ಎತ್ತಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

“ಮಹಾತ್ಮಗಾಂಧಿಯನ್ನು ಕೊಲ್ಲುವ ಮೂಲಕ ಸ್ವತಂತ್ರ ಭಾರತದಲ್ಲಿ ಭಯೋತ್ಪಾದನೆ ಉದ್ಘಾಟಿಸಿದ ಉಗ್ರ ನಾಥೂ ಗೋಡ್ಸೆ. ಭಾರತೀಯರ ಪಾಲಿಗೆ ಈತ ತಾಲಿಬಾನಿಗಳಿಗಿಂತ ಅತ್ಯುಗ್ರ ಪಾಪಿ. ತಾಲಿಬಾನಿಗಳ ಸ್ನೇಹಕ್ಕೆ ಕೈ ಚಾಚಿದ ಬಳಿಕ ಬಿಜೆಪಿಗೆ ಉಗ್ರರ ಬಗ್ಗೆ ಪ್ರೀತಿ ಹೆಚ್ಚಾಗುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಕ್ಷಣ ಎಚ್ಚೆತ್ತು ಫಲಕ ಕಿತ್ತೆಸೆದ ಎಲ್ಲರೂ ಅಭಿನಂದನಾರ್ಹರು! ಹೀಗೆ ಬಿಟ್ಟರೆ ಒಂದು ದಿನ, ನರಹಂತಕ ವೀರಪ್ಪನ್ ನಿಂದ ಹಿಡಿದು ನರಭಕ್ಷಕ ಇದೀ ಅಮೀನ್ ವರೆಗೆ ಎಲ್ಲಾ ಜನದ್ರೋಹಿಗಳೂ ನಾಗರೀಕ ಸಮಾಜದಲ್ಲಿ ಸ್ಮರಣೆಯ ಸ್ಥಾನ ಪಡೆಯುತ್ತಾರೆ – ‘ಚಕ್ರ’ದಿಂದ ‘ತೀರ್ಥ’ ಬಂದಂತೆ!

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...