Homeರಾಷ್ಟ್ರೀಯಪ್ರವಾದಿಯನ್ನು ಅವಹೇಳನ ಮಾಡಿದ ಬಿಜೆಪಿಯ ತಪ್ಪಿಗೆ ಭಾರತ ಯಾಕೆ ಕ್ಷಮೆ ಕೇಳಬೇಕು?: ಮೋದಿಗೆ ಕೆಟಿಆ‌‌ರ್‌ ಪ್ರಶ್ನೆ

ಪ್ರವಾದಿಯನ್ನು ಅವಹೇಳನ ಮಾಡಿದ ಬಿಜೆಪಿಯ ತಪ್ಪಿಗೆ ಭಾರತ ಯಾಕೆ ಕ್ಷಮೆ ಕೇಳಬೇಕು?: ಮೋದಿಗೆ ಕೆಟಿಆ‌‌ರ್‌ ಪ್ರಶ್ನೆ

ಪ್ರವಾದಿ ಮುಹಮ್ಮದ್‌ ಅವರನ್ನು ಅವಹೇಳನ ಮಾಡಿರುವ ಬಗ್ಗೆ ಭಾರತ ಸರ್ಕಾರ ಸಾರ್ವಜನಿಕ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿತ್ತು

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ವಕ್ತಾರೆ ನೂಪುರ್‌ ಶರ್ಮಾ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಗಲ್ಫ್‌ ದೇಶಗಳು ತೀವ್ರ ಪ್ರತಿಭಟನೆ ದಾಖಲಿಸಿದ್ದು, ಭಾರತದ ರಾಯಭಾರಿಗಳಿಗೆ ಸಮನ್ಸ್‌ ನೀಡಿದೆ. ಈ ಬಗ್ಗೆ ತೆಲಂಗಾಣ ಸಚಿವ ಕೆ.ಟಿ. ರಾಮರಾವ್ ಅವರು ಮೋದಿ ನೇತೃತ್ವದ ಒಕ್ಕೂಟ ಸರ್ಕಾರವನ್ನು ಗುರಿಯಾಗಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೆಟಿಆರ್ ಅವರು, “ಪ್ರಧಾನಿ ಮೋದಿ ಅವರೇ, ಬಿಜೆಪಿಯ ಮತಾಂಧರ ದ್ವೇಷದ ಭಾಷಣಗಳಿಗೆ ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಭಾರತ ಯಾಕೆ ಕ್ಷಮೆಯಾಚಿಸಬೇಕು. ಬಿಜೆಪಿ ದಿನವಿಡೀ ದ್ವೇಷವನ್ನು ಉಗುಳುವುದು ಮತ್ತು ಹರಡುವುದಕ್ಕಾಗಿ ಪ್ರತಿ ಭಾರತೀಯರಲ್ಲಿ ಕ್ಷಮೆಯಾಚಿಸಬೇಕು. ಕ್ಷಮೆ ಕೇಳಬೇಕಾದ್ದು ಬಿಜೆಪಿಯೇ ಹೊರತು ಇಡೀ ಭಾರತವಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಅವರು ಮಹಾತ್ಮ ಗಾಂಧಿಯವರ ಹತ್ಯೆಯನ್ನು ಸಮರ್ಥಿಸಿದಾಗ ಪ್ರಧಾನಿಯ ಮೌನವು ಆಘಾತಕಾರಿಯಾಗಿದೆ ಎಂದು ಸಚಿವರು ಹೇಳಿದ್ದಾರೆ.

“ನಾನು ನಿಮಗೆ ನೆನಪಿಸುತ್ತೇನೆ ಸರ್; ನೀವು ಏನು ಅನುಮತಿಸುತ್ತೀರೋ ಅದನ್ನೇ ನೀವು ಪ್ರಚಾರ ಮಾಡುತ್ತೀರಿ. ಮೇಲಿನವರ ಮೌನ ಸಮ್ಮತಿ ಧರ್ಮಾಂಧತೆ ಮತ್ತು ದ್ವೇಷವನ್ನು ಉತ್ತೇಜಿಸುತ್ತದೆ” ಎಂದು ಕೆಟಿಆರ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರಿಂದ ಪ್ರವಾದಿ ನಿಂದನೆ ಪ್ರಕರಣ: ಕತಾರ್‌, ಕುವೈತ್‌, ಇರಾನ್‌ ದೇಶಗಳಿಂದ ಭಾರತ ರಾಯಭಾರಿಗೆ ಸಮನ್ಸ್‌

ಬಿಜೆಪಿಯ ವಕ್ತಾರೆಯಾದ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ವಿರುದ್ಧದ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ, ಇಂತಹ ಹೇಳಿಕೆಗಳನ್ನು ನೀಡುವವರನ್ನು ಬಿಜೆಪಿ ಜೈಲಿಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

“ಯಾವುದೇ ಧರ್ಮದ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸುವುದು ಸೂಕ್ತವಲ್ಲ. ಈ ವಿಷಯದಲ್ಲಿ ಬಿಜೆಪಿಯು ತನ್ನ ಜನರಿಗೆ ಕಟ್ಟುನಿಟ್ಟಿನ ಕುಣಿಕೆ ಬಿಗಿಗೊಳಿಸಬೇಕು. ಅವರನ್ನು ಅಮಾನತುಗೊಳಿಸುವುದು ಮತ್ತು ಹೊರಹಾಕುವುದು ಮಾತ್ರವಲ್ಲ, ಅದರ ಜೊತೆಗೆ ಕಠಿಣ ಕಾನೂನುಗಳ ಅಡಿಯಲ್ಲಿ ಜೈಲಿಗೆ ಕಳುಹಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, “ಭಾರತವು ಕ್ಷಮೆ ಕೇಳಬೇಕಾದ ಯಾವುದೇ ತಪ್ಪನ್ನು ಮಾಡಿಲ್ಲ. ತಮ್ಮು ಆಗಿದ್ದು ಬಿಜೆಪಿಯಾಗಿದೆ. ದೇಶವೇಕೆ ಅದನ್ನು ಸರಿದೂಗಿಸಬೇಕು? ಕತಾರ್ ಮತ್ತು ಕುವೈತ್‌‌ ಪ್ರಧಾನಿಗೆ ಅವರ ರಾಜಧರ್ಮವನ್ನು ನೆನಪಿಸುತ್ತಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ?” ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

“ಪ್ರಧಾನಿ ಮತ್ತು ಅವರ ಪಕ್ಷವು ದೇಶವನ್ನು ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ. ಇಲ್ಲಿ ಯಾವುದೇ ಭಾರತೀಯನ ತಪ್ಪನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಭಾರತವು ಯಾವಾಗಲೂ ಸಂವಿಧಾನದಲ್ಲಿ ಪ್ರತಿಪಾದಿಸಿದ ಮೌಲ್ಯಗಳನ್ನು ಗೌರವಿಸುತ್ತದೆ. ಆದರೆ ಬಿಜೆಪಿ ಅದನ್ನು ಮಾಡುವುದಿಲ್ಲ. ಅವರು ಮಾಡಿರುವ ತಪ್ಪಿಗೆ ಅವರೇ ಕ್ಷಮೆಯಾಚಿಸಬೇಕು” ಎಂದು ಅವರು ಹೇಳಿದ್ದಾರೆ.

ಸಮಯಕ್ಕೆ ಸರಿಯಾಗಿ ಮಾತನಾಡಿದರೆ ದೇಶ ಮುಜುಗರಕ್ಕೀಡಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಪವನ್‌ ಖೇರಾ ಹೇಳಿದ್ದು, “ನಿಮ್ಮಿಂದಾಗಿ ನಮಗೆ ಮುಜುಗರ ಉಂಟಾಗಿದೆ. ಪ್ರಧಾನಿ ದೇಶದ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಬಿಜೆಪಿ ವಕ್ತಾರೆಯ ವಿವಾದಾತ್ಮಕ ಹೇಳಿಕೆಗಳಿಂದ ಭಾರತವು ಗಲ್ಫ್‌ ರಾಷ್ಟ್ರಗಳಿಂದ ಭಾರಿ ಪ್ರತಿಭಟನೆ ಎದುರಿಸುತ್ತಿದೆ. ಇದುವರೆಗೆ ಸೌದಿ ಅರೇಬಿಯಾ, ಕತಾರ್, ಬಹ್ರೇನ್ ಮತ್ತು ಇರಾನ್ ಈ  ಟೀಕೆಗಳನ್ನು ತೀವ್ರವಾಗಿ ಖಂಡಿಸಿದ್ದು, ಹೇಳಿಕೆಯನ್ನು “ಇಸ್ಲಾಮೋಫೋಬಿಕ್” ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಕತಾರ್ ಮತ್ತು ಬಹ್ರೇನ್ ದೇಶಗಳು ಭಾರತೀಯ ರಾಯಭಾರಿಯನ್ನು ಕರೆಸಿದ್ದು, ತಮ್ಮ ವಿರೋಧವನ್ನು ತಿಳಿಸಿವೆ. ಭಾರತ ಸರ್ಕಾರವು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿದೆ. ಜೊತಗೆ ಪಕ್ಷದ ವಕ್ತಾರೆಯ ವಿರುದ್ಧ ಬಿಜೆಪಿ ಕೈಗೊಂಡಿರುವ ಕ್ರಮವನ್ನು ಬಹ್ರೇನ್ ಮತ್ತು ಸೌದಿ ಅರೇಬಿಯಾ ಸ್ವಾಗತಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...