Homeಕರ್ನಾಟಕಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

ಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

- Advertisement -
- Advertisement -

| ಅನಿಲ್.ಎಸ್ ಚಲ್ಯ |

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ

ತುತ್ತು ಅನ್ನ ತಿನ್ನೋಕೆ, ಬೊಗಸೆ ನೀರು ಕುಡಿಯೋಕೆ, ತುಂಡುಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ, ಅಂಗೈ ಅಗಲ ಜಾಗ ಸಾಕು ಹಾಯಾಗಿರೋಕೆ ಎಂದು ಹಾಡಿ ಜೀವನದ ಸೂಕ್ಷ್ಮತೆಯನ್ನು ಸಾರಿದ್ದ ಕನ್ನಡ ಚಿತ್ರರಂಗದ ಮೇರು ನಟ ವಿಷ್ಣುವರ್ಧನ್ ಅಭಿಮಾನಿಗಳನ್ನಗಲಿ ಹತ್ತು ವರ್ಷಗಳೇ ಕಳೆದಿವೆ. ವಿಷ್ಣುವಿನ ಸ್ಮಾರಕಕ್ಕೆ ಅಂಗೈ ಅಗಲ ಜಾಗವೂ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಶೋಚÀನೀಯ. ಸರ್ಕಾರ, ಅಭಿಮಾನಿಗಳು ಮತ್ತು ಕುಟುಂಬದವರ ಅಸಮಾಧಾನ ಅಸಹಕಾರಗಳಿಂದ ಒಬ್ಬ ಧೀಮಂತ ನಟ ದಿನನಿತ್ಯದ ಚರ್ಚೆಯ ವಿಷಯವಾಗಿದ್ದಾರೆ. ವಿಷ್ಣು ಕುಚುಕು ಗೆಳೆಯ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಇಹಲೋಕ ತ್ಯಜಿಸಿದಾಗ ಅಂಬರೀಶ್ ಸ್ಮಾರಕ ನಿರ್ಮಾಣದ ವಿಷಯ ಪ್ರಸ್ತಾಪವಾಗಿತ್ತು. ಆಗಲೂ ಸಹ ವಿಷ್ಣು ಸ್ಮಾರಕ ನಿರ್ಮಾಣದ ಚರ್ಚೆ ಮುನ್ನೆಲೆಗೆ ಬಂದಿತ್ತು..

ಅಂಬರೀಶ್ ಸ್ಮಾರಕದ ಜೊತೆಗೆ ಕಂಠೀರವ ಸ್ಟುಡಿಯೋದಲ್ಲೇ ವಿಷ್ಣು ಸ್ಮಾರಕವನ್ನು ನಿರ್ಮಿಸುವ ನಿರ್ಧಾರವನ್ನು ಸರ್ಕಾರ ವ್ಯಕ್ತಪಡಿಸಿತ್ತು. ಇದಕ್ಕೆ ಅಭಿಮಾನಿಗಳು ಮತ್ತು ವಿಷ್ಣು ಕುಟುಂಬದಿಂದ ತೀವ್ರ ವಿರೋಧ ವ್ಯಕ್ತವಾದ ಮೇಲೆ ಸರ್ಕಾರ ಆ ವಿಚಾರದಲ್ಲಿ ತುಟಿ ಬಿಚ್ಚಲಿಲ್ಲ. ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ನೋಡಿ ಬೇಸರಗೊಂಡ ಅಭಿಮಾನಿಯೊಬ್ಬ ತಾನೆ ಸ್ಮಾರಕಕ್ಕೆ ಜಾಗ ಕೊಡುವುದಾಗಿ ಹೇಳಿ ಸರ್ಕಾರದ ಮೇಲಿನ ಆಕ್ರೋಶ ವ್ಯಕ್ತಪಡಿಸಿದ್ದ. ಈ ಮಧ್ಯೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ದಿಢೀರನೆ ಭೂಮಿ ಪೂಜೆಗೆ ಮುಂದಾಗಿರುವುದರಿಂದ ಸ್ಮಾರಕದ ವಿಚಾರ ಮತ್ತೆ ವಿವಾದದ ರೂಪ ಪಡೆದಿದೆ..

ಬೆಂಗಳೂರಿನ ಅಭಿಮಾನ್ ಸ್ಟೂಡಿಯೋದಲ್ಲಿ 2009ರಲ್ಲಿ ವಿಷ್ಣು ಅಂತಿಮ ಸಂಸ್ಕಾರವನ್ನು ಮಾಡಲಾಗಿತ್ತು. ಅಭಿಮಾನ್ ಸ್ಟುಡಿಯೋ ನಿರ್ಮಾಣಕ್ಕಾಗಿ 20 ಎಕರೆ ಜಾಗವನ್ನು ಸರ್ಕಾರವೇ ಬಾಲಕೃಷ್ಣವರಿಗೆ ಮಂಜೂರು ಮಾಡಿತ್ತು. ಅದರಲ್ಲಿ 10 ಎಕರೆ ಜಾಗವನ್ನು ಬಾಲಕೃಷ್ಣರ ಮಗ ಮಾರಾಟ ಮಾಡಲು ಮುಂದಾಗಿದ್ದರು. ಹಾಗಾಗಿ ಅಭಿಮಾನ್ ಸ್ಟುಡಿಯೋ ಬಾಲಣ್ಣನ ಕುಟುಂಬದ ವ್ಯಾಜ್ಯವಾಗಿ ಹೈ ಕೋರ್ಟ್ ಮೆಟ್ಟಿಲೇರಿತ್ತು. ಆದರೂ ಅಭಿಮಾನ್ ಸ್ಟುಡಿಯೋದಲ್ಲೇ ಸಂಸ್ಕಾರ ಮಾಡಿದ್ದರಿಂದ ವಿಷ್ಣು ಸ್ಮಾರಕವನ್ನು ಅಲ್ಲಯೇ ಕಟ್ಟಲು ಸರ್ಕಾರ ಮುಂದಾಗಿತ್ತು. ವ್ಯಾಜ್ಯವಿದ್ದರಿಂದ ಹೈ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿತ್ತು. ಹೀಗಾಗಿ ವಿಷ್ಣು ಕುಟುಂಬ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ಕೋರಿಕೆ ಸಲ್ಲಿಸಿತ್ತು. ಅದರಂತೆ 2016 ಮೈಸೂರಿನಲ್ಲಿ 5 ಎಕರೆ ಜಾಗವನ್ನು ಸರ್ಕಾರ ಮಂಜೂರು ಮಾಡಿತ್ತು. ಹೀಗೆ ಅವರ್ ಬಿಟ್ ಇವರ್ ಬಿಟ್ ಇನ್ಯಾರು ಎಂಬಂತೆ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಓಡಾಡಿಸುತ್ತಾ ಸರ್ಕಾರ ಕಣ್ಣಾಮುಚ್ಚಾಲೆಯ ಆಟವಾಡುತ್ತಿದರೆ, ಇತ್ತ ಮೈಸೂರಿನಲ್ಲಿ ರೈತರು ತಮ್ಮ ಜಾಗವನ್ನು ಬಿಟ್ಟುಕೊಡಲು ನಿರಾಕರಿಸಿ, ಕೋರ್ಟ್ ಮೆಟ್ಟಿಲೇರಿದ್ದರು.

ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾದರೆ ರೈತರ ಅನುಮತಿಯೊಂದಿಗೆ, ಆ ಜಾಗದ ಮಾರುಕಟ್ಟೆ ಬೆಲೆಗಿಂತ ನಾಲ್ಕು ಪಟ್ಟು ಹೆಚ್ಚು ಬೆಲೆಕೊಟ್ಟು, ಅದು ಕೃಷಿ ಭೂಮಿಯಾಗಿದ್ದಲ್ಲಿ ಬೇರೆಡೆ ಭೂಮಿಯನ್ನೂ ಕೊಟ್ಟು ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಆ ಜಾಗಕ್ಕೆ ಇದಾವುದೂ ಅಪ್ಲೈ ಆಗಿಲ್ಲ. ಕಡಿಮೆ ಬೆಲೆ ಕೊಟ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಹೆಚ್ಚಿನ ಕಾಂಪೆನ್ಸೇಷನ್ ಕೊಡಬೇಕು ಎಂದು ಆ ಭೂಮಿಯ ಮಾಲೀಕರಾದ ರೈತರು ಕೋರ್ಟ್‍ನಲ್ಲಿ ಅಫಿಡವಿಟ್ ಸಲ್ಲಿಸಿದ್ದಾರೆ.

ಸದ್ಯಕ್ಕೆ ಆ ವಿಚಾರ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೆಲ್ಲದರ ನಡುವೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ಭೂಮಿ ಪೂಜೆ ಮಾಡಲು ಹೋಗಿದ್ದರಿಂದ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಕೋರ್ಟ್‍ನಲ್ಲಿ ಕೇಸು ನಡೆಯುತ್ತಿರುವಾಗಲೇ ಭೂಮಿ ಪೂಜೆ ಮಾಡಲು ಹೇಗೆ ಸಾಧ್ಯ ಎಂದು ರೈತರು ತಡೆಯೊಡ್ಡಿದ್ದಾರೆ. ಇಲ್ಲ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದು ಅನಿರುದ್ ಇಂಗ್ಲಿಷ್‍ನಲ್ಲಿದ್ದ ಒಂದು ಲೆಟರ್ ತೋರಿಸಿದ್ದಾರೆ. ಅದು ಕೋರ್ಟ್ ಆದೇಶ ಅಲ್ಲ, ಆಗಿದ್ದರೂ ನಮಗೆ ಇಂಗ್ಲಿಷ್ ಅರ್ಥವಾಗುವುದಿಲ್ಲ ಕನ್ನಡದಲ್ಲಿ ಲೆಟರ್ ತೆಗೆದುಕೊಂಡು ಬನ್ನಿ ಎಂದು ರೈತರು ವಾಪಸ್ ಕಳಿಸಿದ್ದಾರೆ.

ಕೋರ್ಟ್ ಆದೇಶ ಬರದೆ, ತಮಗೆ ಕಾಂಪೆನ್ಸೇಷನ್ ಸಿಗದೆ ಭೂಮಿ ಪೂಜೆ ಮಾಡಿ ಸ್ಮಾರಕ ಕಟ್ಟಿದರೆ ತಮಗೆ ನ್ಯಾಯ ಸಿಗುವುದಿಲ್ಲ, ಪರಿಹಾರವೂ ಬರುವುದಿಲ್ಲ, ಆ ವಿಚಾರ ಹಾಗೇ ಮುಚ್ಚಿಹೋಗುತ್ತದೆ ಎಂಬುದು ರೈತರ ಆತಂಕ. ಅದಷ್ಟೇ ಅಲ್ಲದೆ ಕೋರ್ಟ್ ಆದೇಶ ನೀಡಿದ್ದೇ ಆದಲ್ಲಿ ಪ್ರತಿವಾದಿಗೂ ಆದೇಶದ ಕಾಪಿ ನೀಡಲಾಗುತ್ತದೆ. ಆದರೆ ರೈತರಿಗೆ ಕೋರ್ಟ್‍ನಿಂದಾಗಲಿ ಅಥವಾ ತಮ್ಮ ಲಾಯರ್‍ನಿಂದಗಲೀ ಯಾವುದೇ ಆದೇಶದ ಪ್ರತಿ ದೊರೆತಿಲ್ಲ. ಇದು ಅನಿರುದ್ ಯಾವುದೋ ಅರ್ಥವಾಗದ ಲೆಟರ್ ತಂದು ನಮ್ಮನ್ನು ಯಾಮಾರಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಬಹುಶಃ ರೈತರ ಆತಂಕ ಸತ್ಯವೂ ಆಗಿರಬಹುದು. ಹಾಗೊಂದು ವೇಳೆ ಅನಿರುದ್ ರೈತರಿಗೆ ಯಾವುದೋ ಪತ್ರವನ್ನು ತೋರಿಸಿದ್ದೇ ಆಗಿದ್ದಲ್ಲಿ ಅದು ರೈತರಿಗಷ್ಟೇ ಅಲ್ಲ ವಿಷ್ಣು ಜೀವಿಸಿದ್ದ ಆದರ್ಶದ ಬದುಕಿಗೆ ಮಾಡುವ ಮೋಸವೂ, ಅವಮಾನವೂ ಆಗಿರುತ್ತದೆ. ಈಗಾಗಲೇ 10 ವರ್ಷ ಕಳೆದಿದ್ದು ಇನ್ನೂ ಸ್ಮಾರಕ ನಿರ್ಮಾಣವಾಗದೇ ಇರುವುದು ವಿಷ್ಣು ಕುಟುಂಬ ಮತ್ತು ಅಭಿಮಾನಿಗಳಿಗೆ ಬೇಸರದ ವಿಚಾರವೇ ಆಗಿದ್ದರೂ, ಆ ಕಾರಣಕ್ಕೆ ಮೋಸ ಮಾಡಿ ಸ್ಮಾರಕ ಕಟ್ಟುವುದರಿಂದ ಯಾವ ಪ್ರಯೋಜನವೂ ಆಗುವುದಿಲ್ಲ.

ರೈತರೂ ಭೂಮಿಯನ್ನು ಕೊಡುವುದೇ ಇಲ್ಲ ಎಂದೇನು ಹೇಳುತ್ತಿಲ್ಲ, ಇನ್ನೂ ಹೆಚ್ಚಿನ ಪರಿಹಾರವನ್ನಷ್ಟೇ ಕೇಳುತ್ತಿದ್ದಾರೆ. ಹಾಗಾಗಿ ಕೋರ್ಟ್‍ನಲ್ಲಿ ಆ ವಿಚಾರ ತೀರ್ಮಾನವಾಗಬೇಕಿದೆ. ಹೀಗಿರುವಾಗ ದುಡುಕಿನ ತೀರ್ಮಾನದಲ್ಲಿ ಕೋರ್ಟ್ ವಿಚಾರಣೆಯಲ್ಲಿರುವಾಗಲೇ ಭೂಮಿ ಪೂಜೆಗೆ ಮುಂದಾಗಿರುವುದು ಕಾನೂನು ಉಲ್ಲಂಘನೆಯೂ ಆಗುತ್ತದೆ. ಹಾಗಾಗಿ ಕಾನೂನು ಉಲ್ಲಂಘಿಸುವುದು, ರೈತರಿಗೆ ಮೋಸ ಮಾಡುವುದು ವಿಷ್ಣು ಬದುಕಿನ ಘನತೆಗೆ ಕಪ್ಪು ಚುಕ್ಕೆಯನ್ನು ತಂದೊಡ್ಡುತ್ತದೆ. ಕೋರ್ಟ್ ವ್ಯಾಜ್ಯ ಮುಗಿಯುವವರೆಗೆ ವಿಷ್ಣು ಕುಟುಂಬ ಕಾಯಬೇಕು.

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ.

ವಿಷ್ಣು ನಿಧನದ ಸಮಯದಲ್ಲಿ ನಮ್ಮ ಗೌರಿ ಮೇಡಂ ‘ವಿಷ್ಣು ಬಗ್ಗೆ ಜಗತ್ತು ಇನ್ನಷ್ಟು ಔದಾರ್ಯ ತೋರಬೇಕಿತ್ತು’ ಎಂದು ಬರೆದಿದ್ದರು. ಅಂತೆಯೇ ಸರ್ಕಾರ ವಿಷ್ಣು ಸ್ಮಾರಕಕ್ಕೂ ಔದಾರ್ಯ ತೋರಬೇಕಾಗಿದೆ ಎಂದೆನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...