Homeಕರ್ನಾಟಕಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

ಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

- Advertisement -
- Advertisement -

| ಅನಿಲ್.ಎಸ್ ಚಲ್ಯ |

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ

ತುತ್ತು ಅನ್ನ ತಿನ್ನೋಕೆ, ಬೊಗಸೆ ನೀರು ಕುಡಿಯೋಕೆ, ತುಂಡುಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ, ಅಂಗೈ ಅಗಲ ಜಾಗ ಸಾಕು ಹಾಯಾಗಿರೋಕೆ ಎಂದು ಹಾಡಿ ಜೀವನದ ಸೂಕ್ಷ್ಮತೆಯನ್ನು ಸಾರಿದ್ದ ಕನ್ನಡ ಚಿತ್ರರಂಗದ ಮೇರು ನಟ ವಿಷ್ಣುವರ್ಧನ್ ಅಭಿಮಾನಿಗಳನ್ನಗಲಿ ಹತ್ತು ವರ್ಷಗಳೇ ಕಳೆದಿವೆ. ವಿಷ್ಣುವಿನ ಸ್ಮಾರಕಕ್ಕೆ ಅಂಗೈ ಅಗಲ ಜಾಗವೂ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಶೋಚÀನೀಯ. ಸರ್ಕಾರ, ಅಭಿಮಾನಿಗಳು ಮತ್ತು ಕುಟುಂಬದವರ ಅಸಮಾಧಾನ ಅಸಹಕಾರಗಳಿಂದ ಒಬ್ಬ ಧೀಮಂತ ನಟ ದಿನನಿತ್ಯದ ಚರ್ಚೆಯ ವಿಷಯವಾಗಿದ್ದಾರೆ. ವಿಷ್ಣು ಕುಚುಕು ಗೆಳೆಯ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಇಹಲೋಕ ತ್ಯಜಿಸಿದಾಗ ಅಂಬರೀಶ್ ಸ್ಮಾರಕ ನಿರ್ಮಾಣದ ವಿಷಯ ಪ್ರಸ್ತಾಪವಾಗಿತ್ತು. ಆಗಲೂ ಸಹ ವಿಷ್ಣು ಸ್ಮಾರಕ ನಿರ್ಮಾಣದ ಚರ್ಚೆ ಮುನ್ನೆಲೆಗೆ ಬಂದಿತ್ತು..

ಅಂಬರೀಶ್ ಸ್ಮಾರಕದ ಜೊತೆಗೆ ಕಂಠೀರವ ಸ್ಟುಡಿಯೋದಲ್ಲೇ ವಿಷ್ಣು ಸ್ಮಾರಕವನ್ನು ನಿರ್ಮಿಸುವ ನಿರ್ಧಾರವನ್ನು ಸರ್ಕಾರ ವ್ಯಕ್ತಪಡಿಸಿತ್ತು. ಇದಕ್ಕೆ ಅಭಿಮಾನಿಗಳು ಮತ್ತು ವಿಷ್ಣು ಕುಟುಂಬದಿಂದ ತೀವ್ರ ವಿರೋಧ ವ್ಯಕ್ತವಾದ ಮೇಲೆ ಸರ್ಕಾರ ಆ ವಿಚಾರದಲ್ಲಿ ತುಟಿ ಬಿಚ್ಚಲಿಲ್ಲ. ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ನೋಡಿ ಬೇಸರಗೊಂಡ ಅಭಿಮಾನಿಯೊಬ್ಬ ತಾನೆ ಸ್ಮಾರಕಕ್ಕೆ ಜಾಗ ಕೊಡುವುದಾಗಿ ಹೇಳಿ ಸರ್ಕಾರದ ಮೇಲಿನ ಆಕ್ರೋಶ ವ್ಯಕ್ತಪಡಿಸಿದ್ದ. ಈ ಮಧ್ಯೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ದಿಢೀರನೆ ಭೂಮಿ ಪೂಜೆಗೆ ಮುಂದಾಗಿರುವುದರಿಂದ ಸ್ಮಾರಕದ ವಿಚಾರ ಮತ್ತೆ ವಿವಾದದ ರೂಪ ಪಡೆದಿದೆ..

ಬೆಂಗಳೂರಿನ ಅಭಿಮಾನ್ ಸ್ಟೂಡಿಯೋದಲ್ಲಿ 2009ರಲ್ಲಿ ವಿಷ್ಣು ಅಂತಿಮ ಸಂಸ್ಕಾರವನ್ನು ಮಾಡಲಾಗಿತ್ತು. ಅಭಿಮಾನ್ ಸ್ಟುಡಿಯೋ ನಿರ್ಮಾಣಕ್ಕಾಗಿ 20 ಎಕರೆ ಜಾಗವನ್ನು ಸರ್ಕಾರವೇ ಬಾಲಕೃಷ್ಣವರಿಗೆ ಮಂಜೂರು ಮಾಡಿತ್ತು. ಅದರಲ್ಲಿ 10 ಎಕರೆ ಜಾಗವನ್ನು ಬಾಲಕೃಷ್ಣರ ಮಗ ಮಾರಾಟ ಮಾಡಲು ಮುಂದಾಗಿದ್ದರು. ಹಾಗಾಗಿ ಅಭಿಮಾನ್ ಸ್ಟುಡಿಯೋ ಬಾಲಣ್ಣನ ಕುಟುಂಬದ ವ್ಯಾಜ್ಯವಾಗಿ ಹೈ ಕೋರ್ಟ್ ಮೆಟ್ಟಿಲೇರಿತ್ತು. ಆದರೂ ಅಭಿಮಾನ್ ಸ್ಟುಡಿಯೋದಲ್ಲೇ ಸಂಸ್ಕಾರ ಮಾಡಿದ್ದರಿಂದ ವಿಷ್ಣು ಸ್ಮಾರಕವನ್ನು ಅಲ್ಲಯೇ ಕಟ್ಟಲು ಸರ್ಕಾರ ಮುಂದಾಗಿತ್ತು. ವ್ಯಾಜ್ಯವಿದ್ದರಿಂದ ಹೈ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿತ್ತು. ಹೀಗಾಗಿ ವಿಷ್ಣು ಕುಟುಂಬ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ಕೋರಿಕೆ ಸಲ್ಲಿಸಿತ್ತು. ಅದರಂತೆ 2016 ಮೈಸೂರಿನಲ್ಲಿ 5 ಎಕರೆ ಜಾಗವನ್ನು ಸರ್ಕಾರ ಮಂಜೂರು ಮಾಡಿತ್ತು. ಹೀಗೆ ಅವರ್ ಬಿಟ್ ಇವರ್ ಬಿಟ್ ಇನ್ಯಾರು ಎಂಬಂತೆ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಓಡಾಡಿಸುತ್ತಾ ಸರ್ಕಾರ ಕಣ್ಣಾಮುಚ್ಚಾಲೆಯ ಆಟವಾಡುತ್ತಿದರೆ, ಇತ್ತ ಮೈಸೂರಿನಲ್ಲಿ ರೈತರು ತಮ್ಮ ಜಾಗವನ್ನು ಬಿಟ್ಟುಕೊಡಲು ನಿರಾಕರಿಸಿ, ಕೋರ್ಟ್ ಮೆಟ್ಟಿಲೇರಿದ್ದರು.

ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾದರೆ ರೈತರ ಅನುಮತಿಯೊಂದಿಗೆ, ಆ ಜಾಗದ ಮಾರುಕಟ್ಟೆ ಬೆಲೆಗಿಂತ ನಾಲ್ಕು ಪಟ್ಟು ಹೆಚ್ಚು ಬೆಲೆಕೊಟ್ಟು, ಅದು ಕೃಷಿ ಭೂಮಿಯಾಗಿದ್ದಲ್ಲಿ ಬೇರೆಡೆ ಭೂಮಿಯನ್ನೂ ಕೊಟ್ಟು ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಆ ಜಾಗಕ್ಕೆ ಇದಾವುದೂ ಅಪ್ಲೈ ಆಗಿಲ್ಲ. ಕಡಿಮೆ ಬೆಲೆ ಕೊಟ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಹೆಚ್ಚಿನ ಕಾಂಪೆನ್ಸೇಷನ್ ಕೊಡಬೇಕು ಎಂದು ಆ ಭೂಮಿಯ ಮಾಲೀಕರಾದ ರೈತರು ಕೋರ್ಟ್‍ನಲ್ಲಿ ಅಫಿಡವಿಟ್ ಸಲ್ಲಿಸಿದ್ದಾರೆ.

ಸದ್ಯಕ್ಕೆ ಆ ವಿಚಾರ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೆಲ್ಲದರ ನಡುವೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ಭೂಮಿ ಪೂಜೆ ಮಾಡಲು ಹೋಗಿದ್ದರಿಂದ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಕೋರ್ಟ್‍ನಲ್ಲಿ ಕೇಸು ನಡೆಯುತ್ತಿರುವಾಗಲೇ ಭೂಮಿ ಪೂಜೆ ಮಾಡಲು ಹೇಗೆ ಸಾಧ್ಯ ಎಂದು ರೈತರು ತಡೆಯೊಡ್ಡಿದ್ದಾರೆ. ಇಲ್ಲ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದು ಅನಿರುದ್ ಇಂಗ್ಲಿಷ್‍ನಲ್ಲಿದ್ದ ಒಂದು ಲೆಟರ್ ತೋರಿಸಿದ್ದಾರೆ. ಅದು ಕೋರ್ಟ್ ಆದೇಶ ಅಲ್ಲ, ಆಗಿದ್ದರೂ ನಮಗೆ ಇಂಗ್ಲಿಷ್ ಅರ್ಥವಾಗುವುದಿಲ್ಲ ಕನ್ನಡದಲ್ಲಿ ಲೆಟರ್ ತೆಗೆದುಕೊಂಡು ಬನ್ನಿ ಎಂದು ರೈತರು ವಾಪಸ್ ಕಳಿಸಿದ್ದಾರೆ.

ಕೋರ್ಟ್ ಆದೇಶ ಬರದೆ, ತಮಗೆ ಕಾಂಪೆನ್ಸೇಷನ್ ಸಿಗದೆ ಭೂಮಿ ಪೂಜೆ ಮಾಡಿ ಸ್ಮಾರಕ ಕಟ್ಟಿದರೆ ತಮಗೆ ನ್ಯಾಯ ಸಿಗುವುದಿಲ್ಲ, ಪರಿಹಾರವೂ ಬರುವುದಿಲ್ಲ, ಆ ವಿಚಾರ ಹಾಗೇ ಮುಚ್ಚಿಹೋಗುತ್ತದೆ ಎಂಬುದು ರೈತರ ಆತಂಕ. ಅದಷ್ಟೇ ಅಲ್ಲದೆ ಕೋರ್ಟ್ ಆದೇಶ ನೀಡಿದ್ದೇ ಆದಲ್ಲಿ ಪ್ರತಿವಾದಿಗೂ ಆದೇಶದ ಕಾಪಿ ನೀಡಲಾಗುತ್ತದೆ. ಆದರೆ ರೈತರಿಗೆ ಕೋರ್ಟ್‍ನಿಂದಾಗಲಿ ಅಥವಾ ತಮ್ಮ ಲಾಯರ್‍ನಿಂದಗಲೀ ಯಾವುದೇ ಆದೇಶದ ಪ್ರತಿ ದೊರೆತಿಲ್ಲ. ಇದು ಅನಿರುದ್ ಯಾವುದೋ ಅರ್ಥವಾಗದ ಲೆಟರ್ ತಂದು ನಮ್ಮನ್ನು ಯಾಮಾರಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಬಹುಶಃ ರೈತರ ಆತಂಕ ಸತ್ಯವೂ ಆಗಿರಬಹುದು. ಹಾಗೊಂದು ವೇಳೆ ಅನಿರುದ್ ರೈತರಿಗೆ ಯಾವುದೋ ಪತ್ರವನ್ನು ತೋರಿಸಿದ್ದೇ ಆಗಿದ್ದಲ್ಲಿ ಅದು ರೈತರಿಗಷ್ಟೇ ಅಲ್ಲ ವಿಷ್ಣು ಜೀವಿಸಿದ್ದ ಆದರ್ಶದ ಬದುಕಿಗೆ ಮಾಡುವ ಮೋಸವೂ, ಅವಮಾನವೂ ಆಗಿರುತ್ತದೆ. ಈಗಾಗಲೇ 10 ವರ್ಷ ಕಳೆದಿದ್ದು ಇನ್ನೂ ಸ್ಮಾರಕ ನಿರ್ಮಾಣವಾಗದೇ ಇರುವುದು ವಿಷ್ಣು ಕುಟುಂಬ ಮತ್ತು ಅಭಿಮಾನಿಗಳಿಗೆ ಬೇಸರದ ವಿಚಾರವೇ ಆಗಿದ್ದರೂ, ಆ ಕಾರಣಕ್ಕೆ ಮೋಸ ಮಾಡಿ ಸ್ಮಾರಕ ಕಟ್ಟುವುದರಿಂದ ಯಾವ ಪ್ರಯೋಜನವೂ ಆಗುವುದಿಲ್ಲ.

ರೈತರೂ ಭೂಮಿಯನ್ನು ಕೊಡುವುದೇ ಇಲ್ಲ ಎಂದೇನು ಹೇಳುತ್ತಿಲ್ಲ, ಇನ್ನೂ ಹೆಚ್ಚಿನ ಪರಿಹಾರವನ್ನಷ್ಟೇ ಕೇಳುತ್ತಿದ್ದಾರೆ. ಹಾಗಾಗಿ ಕೋರ್ಟ್‍ನಲ್ಲಿ ಆ ವಿಚಾರ ತೀರ್ಮಾನವಾಗಬೇಕಿದೆ. ಹೀಗಿರುವಾಗ ದುಡುಕಿನ ತೀರ್ಮಾನದಲ್ಲಿ ಕೋರ್ಟ್ ವಿಚಾರಣೆಯಲ್ಲಿರುವಾಗಲೇ ಭೂಮಿ ಪೂಜೆಗೆ ಮುಂದಾಗಿರುವುದು ಕಾನೂನು ಉಲ್ಲಂಘನೆಯೂ ಆಗುತ್ತದೆ. ಹಾಗಾಗಿ ಕಾನೂನು ಉಲ್ಲಂಘಿಸುವುದು, ರೈತರಿಗೆ ಮೋಸ ಮಾಡುವುದು ವಿಷ್ಣು ಬದುಕಿನ ಘನತೆಗೆ ಕಪ್ಪು ಚುಕ್ಕೆಯನ್ನು ತಂದೊಡ್ಡುತ್ತದೆ. ಕೋರ್ಟ್ ವ್ಯಾಜ್ಯ ಮುಗಿಯುವವರೆಗೆ ವಿಷ್ಣು ಕುಟುಂಬ ಕಾಯಬೇಕು.

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ.

ವಿಷ್ಣು ನಿಧನದ ಸಮಯದಲ್ಲಿ ನಮ್ಮ ಗೌರಿ ಮೇಡಂ ‘ವಿಷ್ಣು ಬಗ್ಗೆ ಜಗತ್ತು ಇನ್ನಷ್ಟು ಔದಾರ್ಯ ತೋರಬೇಕಿತ್ತು’ ಎಂದು ಬರೆದಿದ್ದರು. ಅಂತೆಯೇ ಸರ್ಕಾರ ವಿಷ್ಣು ಸ್ಮಾರಕಕ್ಕೂ ಔದಾರ್ಯ ತೋರಬೇಕಾಗಿದೆ ಎಂದೆನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...