Homeಮುಖಪುಟಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮತ್ತೊಬ್ಬ ಶಂಕಿತ ಆರೋಪಿ ಬಂಧನ

ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮತ್ತೊಬ್ಬ ಶಂಕಿತ ಆರೋಪಿ ಬಂಧನ

ಮೃತ ಸಿಧು ಮೂಸೆವಾಲಾ ಅವರ ಕುಟುಂಬವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಭೇಟಿಯಾಗಲಿದ್ದಾರೆ

- Advertisement -
- Advertisement -

ಇತ್ತೀಚೆಗೆ ನಡೆದ ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ (28) ಹತ್ಯೆಗೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಮತ್ತೋರ್ವ ಶಂಕಿತ ಆರೋಪಿಯನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಭಾನುವಾರ ಸಂಜೆ ಹರಿಯಾಣದ ಫತೇಹಾಬಾದ್‌ನಿಂದ ದೇವಿಂದರ್ ಅಲಿಯಾಸ್ ಕಾಲಾ ಎಂಬುವರನ್ನು ಬಂಧಿಸಲಾಗಿದೆ. ಹತ್ಯೆಯಲ್ಲಿ ಭಾಗಿಯಾಗಿರುವ ಇಬ್ಬರು ಶಂಕಿತರು ಆತನೊಂದಿಗೆ ತಂಗಿದ್ದರು ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.

ಜೂನ್ 3 ರಂದು, ಪಂಜಾಬ್ ಪೊಲೀಸರು ಫತೇಹಾಬಾದ್‌ನಿಂದ ಇತರ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದರು. ಗಾಯಕ ಮೂಸೆವಾಲಾ ಹತ್ಯೆಯಲ್ಲಿ ಅವರ ಪಾತ್ರಗಳ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಈ ವೇಳೆ ಸಿಕ್ಕ ಮಾಹಿತಿ ಆಧಾರದಲ್ಲಿ ದೇವಿಂದರ್‌ ಅವರನ್ನು ಬಂಧಿಸಲಾಗಿದೆ.

ಮೇ 16 ಮತ್ತು 17 ರಂದು ದೇವಿಂದರ್ ಕಾಲಾ ಇಬ್ಬರು ಶಂಕಿತ ಆರೋಪಿಗಳಾದ ಕೇಶವ್ ಮತ್ತು ಚರಂಜೀತ್ ಅವರಿಗೆ ಆಶ್ರಯ ನೀಡಿದ್ದರು ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಹಿಂದೆ ಪವನ್ ಮತ್ತು ನಸೀಬ್ ಎಂಬ ಆರೋಪಿಗಳನ್ನು ಪೊಲೀಸರು ಭಿರ್ದಾನದಿಂದ ಬಂಧಿಸಿದ್ದರು.

ಇದನ್ನೂ ಓದಿ: ಪಂಜಾಬ್‌: ಸರ್ಕಾರ ಭದ್ರತೆ ಹಿಂತೆಗೆದುಕೊಂಡ ಒಂದೇ ದಿನದಲ್ಲಿ ಕಾಂಗ್ರೆಸ್‌‌ ನಾಯಕನ ಗುಂಡಿಕ್ಕಿ ಹತ್ಯೆ

ಕಾಂಗ್ರೆಸ್ ನಾಯಕ ಮತ್ತು ಪಂಜಾಬಿ ಗಾಯಕರಾಗಿದ್ದ ಸಿಧು ಮೂಸೆವಾಲಾ ಅವರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದ ಘಟನೆ ಮೇ 29 ರ ಭಾನುವಾರ ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ನಡೆದಿತ್ತು. ಕೆನಡಾ ಮೂಲದ ಗೋಲ್ಡಿ ಬ್ರಾರ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದರು.

ಪಂಜಾಬ್ ಸರ್ಕಾರ ಅವರ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿತ್ತು. ಅವರ ಜೊತೆಗೆ 424 ಜನರ ಭದ್ರತೆಯನ್ನು ಪಂಜಾಬ್ ಪೊಲೀಸರು ಹಿಂತೆಗೆದುಕೊಂಡಿತ್ತು. ರಾಜ್ಯ ಪೊಲೀಸರು ಈ ಘಟನೆಯನ್ನು ಗ್ಯಾಂಗ್ ನಡುವಿನ ಪೈಪೋಟಿಯ ಪ್ರಕರಣ ಎಂದು ಕರೆದಿದ್ದಾರೆ. ಹತ್ಯೆಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡವಿದೆ ಎಂದು ಹೇಳಿದ್ದಾರೆ.

ಮೃತ ಸಿಧು ಮೂಸೆವಾಲಾ ಅವರ ಕುಟುಂಬವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ (ಜೂನ್ 7) ಭೇಟಿಯಾಗಲಿದ್ದಾರೆ. ಮೂಸೆವಾಲಾ ಪಂಜಾಬ್‌ನ ಮಾನ್ಸಾದಿಂದ ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ, ಎಎಪಿ ಅಭ್ಯರ್ಥಿ ವಿಜಯ್ ಸಿಂಗ್ಲಾ ವಿರುದ್ಧ ಸೋತಿದ್ದರು.


 ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ಹುಳುಕು ಬಿಚ್ಚಿಡುತ್ತಿವೆ ತಮಿಳು, ಮಲಯಾಳಂ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....