Homeಮುಖಪುಟಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮತ್ತೊಬ್ಬ ಶಂಕಿತ ಆರೋಪಿ ಬಂಧನ

ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮತ್ತೊಬ್ಬ ಶಂಕಿತ ಆರೋಪಿ ಬಂಧನ

ಮೃತ ಸಿಧು ಮೂಸೆವಾಲಾ ಅವರ ಕುಟುಂಬವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಭೇಟಿಯಾಗಲಿದ್ದಾರೆ

- Advertisement -
- Advertisement -

ಇತ್ತೀಚೆಗೆ ನಡೆದ ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ (28) ಹತ್ಯೆಗೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಮತ್ತೋರ್ವ ಶಂಕಿತ ಆರೋಪಿಯನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಭಾನುವಾರ ಸಂಜೆ ಹರಿಯಾಣದ ಫತೇಹಾಬಾದ್‌ನಿಂದ ದೇವಿಂದರ್ ಅಲಿಯಾಸ್ ಕಾಲಾ ಎಂಬುವರನ್ನು ಬಂಧಿಸಲಾಗಿದೆ. ಹತ್ಯೆಯಲ್ಲಿ ಭಾಗಿಯಾಗಿರುವ ಇಬ್ಬರು ಶಂಕಿತರು ಆತನೊಂದಿಗೆ ತಂಗಿದ್ದರು ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.

ಜೂನ್ 3 ರಂದು, ಪಂಜಾಬ್ ಪೊಲೀಸರು ಫತೇಹಾಬಾದ್‌ನಿಂದ ಇತರ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದರು. ಗಾಯಕ ಮೂಸೆವಾಲಾ ಹತ್ಯೆಯಲ್ಲಿ ಅವರ ಪಾತ್ರಗಳ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಈ ವೇಳೆ ಸಿಕ್ಕ ಮಾಹಿತಿ ಆಧಾರದಲ್ಲಿ ದೇವಿಂದರ್‌ ಅವರನ್ನು ಬಂಧಿಸಲಾಗಿದೆ.

ಮೇ 16 ಮತ್ತು 17 ರಂದು ದೇವಿಂದರ್ ಕಾಲಾ ಇಬ್ಬರು ಶಂಕಿತ ಆರೋಪಿಗಳಾದ ಕೇಶವ್ ಮತ್ತು ಚರಂಜೀತ್ ಅವರಿಗೆ ಆಶ್ರಯ ನೀಡಿದ್ದರು ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಹಿಂದೆ ಪವನ್ ಮತ್ತು ನಸೀಬ್ ಎಂಬ ಆರೋಪಿಗಳನ್ನು ಪೊಲೀಸರು ಭಿರ್ದಾನದಿಂದ ಬಂಧಿಸಿದ್ದರು.

ಇದನ್ನೂ ಓದಿ: ಪಂಜಾಬ್‌: ಸರ್ಕಾರ ಭದ್ರತೆ ಹಿಂತೆಗೆದುಕೊಂಡ ಒಂದೇ ದಿನದಲ್ಲಿ ಕಾಂಗ್ರೆಸ್‌‌ ನಾಯಕನ ಗುಂಡಿಕ್ಕಿ ಹತ್ಯೆ

ಕಾಂಗ್ರೆಸ್ ನಾಯಕ ಮತ್ತು ಪಂಜಾಬಿ ಗಾಯಕರಾಗಿದ್ದ ಸಿಧು ಮೂಸೆವಾಲಾ ಅವರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದ ಘಟನೆ ಮೇ 29 ರ ಭಾನುವಾರ ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ನಡೆದಿತ್ತು. ಕೆನಡಾ ಮೂಲದ ಗೋಲ್ಡಿ ಬ್ರಾರ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದರು.

ಪಂಜಾಬ್ ಸರ್ಕಾರ ಅವರ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿತ್ತು. ಅವರ ಜೊತೆಗೆ 424 ಜನರ ಭದ್ರತೆಯನ್ನು ಪಂಜಾಬ್ ಪೊಲೀಸರು ಹಿಂತೆಗೆದುಕೊಂಡಿತ್ತು. ರಾಜ್ಯ ಪೊಲೀಸರು ಈ ಘಟನೆಯನ್ನು ಗ್ಯಾಂಗ್ ನಡುವಿನ ಪೈಪೋಟಿಯ ಪ್ರಕರಣ ಎಂದು ಕರೆದಿದ್ದಾರೆ. ಹತ್ಯೆಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡವಿದೆ ಎಂದು ಹೇಳಿದ್ದಾರೆ.

ಮೃತ ಸಿಧು ಮೂಸೆವಾಲಾ ಅವರ ಕುಟುಂಬವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ (ಜೂನ್ 7) ಭೇಟಿಯಾಗಲಿದ್ದಾರೆ. ಮೂಸೆವಾಲಾ ಪಂಜಾಬ್‌ನ ಮಾನ್ಸಾದಿಂದ ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ, ಎಎಪಿ ಅಭ್ಯರ್ಥಿ ವಿಜಯ್ ಸಿಂಗ್ಲಾ ವಿರುದ್ಧ ಸೋತಿದ್ದರು.


 ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ಹುಳುಕು ಬಿಚ್ಚಿಡುತ್ತಿವೆ ತಮಿಳು, ಮಲಯಾಳಂ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...