Homeಮುಖಪುಟಹೈದರಾಬಾದ್: ಬಾಲಕಿ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬೆಳಕಿಗೆ ಬಂದ ಮತ್ತಷ್ಟು ಕೇಸ್‌ಗಳು

ಹೈದರಾಬಾದ್: ಬಾಲಕಿ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬೆಳಕಿಗೆ ಬಂದ ಮತ್ತಷ್ಟು ಕೇಸ್‌ಗಳು

ಜುಬ್ಲಿ ಹಿಲ್ಸ್ ಪ್ರಕರಣದ ಬಳಿಕ ಈವರೆಗೆ 4 ಅಪ್ರಾಪ್ತೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ

- Advertisement -
- Advertisement -

ಇತ್ತೀಚೆಗೆ ಹೈದರಾಬಾದ್‌ನ ಜುಬ್ಲಿ ಹಿಲ್ಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ದೇಶದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮತ್ತಷ್ಟು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇಲ್ಲಿಯವರೆಗೆ ಒಟ್ಟು ನಾಲ್ಕು ಅಪ್ರಾಪ್ತೆಯರ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ.

ಮೇ 31 ರಂದು ನಡೆದಿದ್ದ ಎರಡು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಇಂದು ಮತ್ತೆರಡು ಪ್ರಕರಣ ಬೆಳಕಿಗೆ ಬಂದಿದ್ದು, ಅಪ್ರಾಪ್ತ ವಯಸ್ಕರಲ್ಲಿಯ ಇಂತಹ ಸಾಮೂಹಿಕ ಅತ್ಯಾಚಾರದ ವಿಕೃತಿ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಅನಾಥಾಶ್ರಮದಲ್ಲಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಏಪ್ರಿಲ್ 22 ರಂದು ಕಾರಿನಲ್ಲಿ ಅತ್ಯಾಚಾರವೆಸಗಲಾಗಿದ್ದು, ಇದೀಗ ಈ ಘಟನೆ ಬೆಳಕಿಗೆ ಬಂದಿದೆ. 16 ವರ್ಷದ ಬಾಲಕಿಯೊಬ್ಬರು ಹುಟ್ಟುಹಬ್ಬ ಆಚರಿಸಲು ಹೋಗಿದ್ದಾಗ ಏಕಾಂತದಲ್ಲಿ ಮಾತನಾಡುವ ನೆಪದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪೋಟೋ ಸ್ಟುಡಿಯೋದಲ್ಲಿ ಕೆಲಸ ಮಾಡುವ 23 ವರ್ಷದ ಆರೋಪಿ ಸುರೇಶ್ ಎಂಬಾತನನ್ನು ಬಂಧಿಸಲಾಗಿದ್ದು, ರಾಮಗೋಪಾಲಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಬಾಲಕಿಯು ತನ್ನ ಮೇಲೆ ಥಿಯೇಟರ್‌ನಲ್ಲಿ ಅತ್ಯಾಚಾರವೆಸಗಲಾಗಿದೆ ಎಂದು ಆರೋಪಿಸಿದ್ದಾರೆ. ಅಪ್ರಾಪ್ತ ಬಾಲಕಿಗೆ ಸಿನಿಮಾ ತೋರಿಸುವ ಆಮಿಷವೊಡ್ಡಿ ಅತ್ಯಾಚಾರ ಮಾಡಿದ್ದಾನೆ. ಆರೋಪಿಯೂ ಅಪ್ರಾಪ್ತ ವಯಸ್ಕನಾಗಿದ್ದು, ಕೆಲ ತಿಂಗಳಿಂದ ಬಾಲಕಿಯೊಂದಿಗೆ ಸಂಪರ್ಕದಲ್ಲಿದ್ದ. ಘಟನೆ ಒಂದು ತಿಂಗಳ ಹಿಂದೆ ನಡೆದಿದ್ದು, ರಾಜೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಇನ್ನು ಅಜ್ಜಿ ಮನೆಗೆ ಹೋಗುತ್ತಿದ್ದ 12 ವರ್ಷದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮೇ 31 ರಂದು ಈ ಘಟನೆ ನಡೆದಿದ್ದು, ಬಾಲಕಿ ಕಾಣೆಯಾಗಿದ್ದಳು. ಜೂನ್ 1 ರಂದು ಸುಲ್ತಾನ್‌ಶಾಹಿ ಪ್ರದೇಶದಲ್ಲಿ ಪೊಲೀಸರಿಗೆ ಸಿಕ್ಕಿದ್ದರು. ಕ್ಯಾಬ್ ಚಾಲಕ ಆಕೆಯನ್ನು ಕೊಂಡೂರ್ಗ್‌ನಲ್ಲಿರುವ ಸ್ನೇಹಿತನ ಮನೆಗೆ ಕರೆದೊಯ್ದು ಅಲ್ಲಿ ಇಬ್ಬರೂ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಇಬ್ಬರು ಆರೋಪಿಗಳಾದ ಕ್ಯಾಬ್ ಚಾಲಕ ಶೇಕ್ ಕಲೀಮ್ ಅಲಿ (36) ಮತ್ತು ಮೊಹಮ್ಮದ್ ಲುಕ್ಮಾನ್ ಅಹ್ಮದ್ (36) ಅವರನ್ನು ಬಂಧಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಉದ್ಯೋಗಿಯಾಗಿರುವ ಸೂಫಿಯಾನ್ (21) ಎಂಬಾತ ಚಾರ್ಮಿನಾರ್‌ನ ಜವಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುವ ಬಾಲಕಿಗೆ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಹುಡುಕಲಾಗುತ್ತಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಸುದರ್ಶನ್ ಹೇಳಿದ್ದರು.

ಮೇ 28 ರಂದು ಹೈದರಾಬಾದ್‌ನ ಜುಬ್ಲಿ ಹಿಲ್ಸ್‌ ಪ್ರದೇಶದಲ್ಲಿ ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದಾಗ 17 ವರ್ಷದ ಬಾಲಕಿಯ ಮೇಲೆ ರಾಜಕೀಯ ಕುಟುಂಬಗಳ ಅಪ್ರಾಪ್ತ ವಯಸ್ಕರು ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈ ಘಟನೆ ರಾಜಕೀಯ ಕೆಸರೆರಚಾಟಕ್ಕೂ ತಿರುಗಿದೆ.

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.


ಇದನ್ನೂ ಓದಿ: ಹೈದರಾಬಾದ್: ಮತ್ತಿಬ್ಬರು ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...