Homeಅಂತರಾಷ್ಟ್ರೀಯಬಿಜೆಪಿ ಮುಖಂಡರಿಂದ ಪ್ರವಾದಿ ನಿಂದನೆ ಪ್ರಕರಣ: 15 ರಾಷ್ಟ್ರಗಳ ಖಂಡನೆ

ಬಿಜೆಪಿ ಮುಖಂಡರಿಂದ ಪ್ರವಾದಿ ನಿಂದನೆ ಪ್ರಕರಣ: 15 ರಾಷ್ಟ್ರಗಳ ಖಂಡನೆ

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು 15 ಪ್ರಮುಖ ರಾಷ್ಟ್ರಗಳು ಕಟು ಶಬ್ದಗಳಲ್ಲಿ ಖಂಡಿಸಿವೆ.

ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಓಮನ್, ಯುಎಇ, ಜೋರ್ಡಾನ್, ಅಫ್ಘಾನಿಸ್ತಾನ, ಬಹ್ರೇನ್, ಮಾಲ್ಡೀವ್ಸ್, ಲಿಬಿಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮ ಪ್ರತಿಭಟನೆಯನ್ನು ದಾಖಲಿಸಿವೆ.

ಕತಾರ್, ಇರಾನ್ ಮತ್ತು ಬಹ್ರೇನ್ ದೇಶಗಳು ಭಾರತೀಯ ರಾಯಭಾರಿಯನ್ನು ಕರೆಸಿದ್ದು, ತಮ್ಮ ವಿರೋಧವನ್ನು ತಿಳಿಸಿವೆ. ಭಾರತ ಸರ್ಕಾರವು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿದೆ. ಜೊತಗೆ ಪಕ್ಷದ ವಕ್ತಾರೆಯ ವಿರುದ್ಧ ಬಿಜೆಪಿ ಕೈಗೊಂಡಿರುವ ಕ್ರಮವನ್ನು ಬಹ್ರೇನ್ ಮತ್ತು ಸೌದಿ ಅರೇಬಿಯಾ ಸ್ವಾಗತಿಸಿವೆ.

ಟಿಆರ್‌ಎಸ್ ಪಕ್ಷದ ಸಚಿವ ಕೆ.ಟಿ. ರಾಮರಾವ್ ಪ್ರತಿಕ್ರಿಯಿಸಿದ್ದು, “ಪ್ರಧಾನಿ ಮೋದಿ ಅವರೇ, ಬಿಜೆಪಿಯ ಮತಾಂಧರ ದ್ವೇಷದ ಭಾಷಣಗಳಿಗೆ ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಭಾರತ ಯಾಕೆ ಕ್ಷಮೆಯಾಚಿಸಬೇಕು. ಬಿಜೆಪಿ ದಿನವಿಡೀ ದ್ವೇಷವನ್ನು ಉಗುಳುವುದು ಮತ್ತು ಹರಡುವುದಕ್ಕಾಗಿ ಪ್ರತಿ ಭಾರತೀಯರಲ್ಲಿ ಕ್ಷಮೆಯಾಚಿಸಬೇಕು. ಕ್ಷಮೆ ಕೇಳಬೇಕಾದ್ದು ಬಿಜೆಪಿಯೇ ಹೊರತು ಇಡೀ ಭಾರತವಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, “ಭಾರತವು ಕ್ಷಮೆ ಕೇಳಬೇಕಾದ ಯಾವುದೇ ತಪ್ಪನ್ನು ಮಾಡಿಲ್ಲ. ತಪ್ಪಿ ಆಗಿದ್ದು ಬಿಜೆಪಿಯಿಂದ. ದೇಶವೇಕೆ ಅದನ್ನು ಸರಿದೂಗಿಸಬೇಕು? ಕತಾರ್ ಮತ್ತು ಕುವೈತ್‌‌ ನಮ್ಮ ಪ್ರಧಾನಿಗೆ ಅವರ ರಾಜಧರ್ಮವನ್ನು ನೆನಪಿಸುತ್ತಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ?” ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಕಳೆದ ವಾರ ಟಿವಿ ಚರ್ಚೆಯ ಸಂದರ್ಭದಲ್ಲಿ ನೂಪುರ್‌ ಶರ್ಮಾ ಅವರು ಪ್ರವಾದಿಯನ್ನು ಅವಮಾನಿಸುವ ಉದ್ದೇಶದಿಂದ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯ ವಿರುದ್ಧ ಮುಸ್ಲಿಮರು ಭಾರಿ ಆಕ್ರೋಶ ಮತ್ತು ಪ್ರತಿಭಟನೆಯನ್ನು ನಡೆಸಿದ್ದರು. ಈ ಮಧ್ಯೆಯೆ ನವೀನ್ ಕುಮಾರ್ ಅವರು ಪ್ರವಾದಿಯವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದು ವಿವಾದವು ಮತ್ತುಷ್ಟು ಬಿಗಡಾಯಿಸುವಂತೆ ಮಾಡಿತ್ತು.

ನೂಪುರ್ ಶರ್ಮಾ ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿದ್ದರೆ, ನವೀನ್ ಜಿಂದಾಲ್ ಪಕ್ಷದ ದೆಹಲಿ ಮಾಧ್ಯಮ ಘಟಕದ ಮುಖ್ಯಸ್ಥರಾಗಿದ್ದಾರೆ. ಇದೀಗ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಿದೆ. ಆದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಪಕ್ಷಗಳು ಒತ್ತಾಯಿಸಿವೆ.

ಪ್ರವಾದಿ ನಿಂದನೆ ಮಾಡಿದ ಆ ಇಬ್ಬರು ಮುಖಂಡರನ್ನು ಅಮಾನತು ಮಾಡಿರುವುದು ಬಿಜೆಪಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾಗಿ ಮೋದಿ ವಿರುದ್ಧ ಕಿಡಿಕಾರಿರುವ ಅವರು #maulanamodi (#ಮೌಲಾನಾಮೋದಿ), #ModiShamesIndia (#ಮೋದಿಶೇಮ್ಸ್‌ಇಂಡಿಯಾ) ಹ್ಯಾಷ್‌ ಟ್ಯಾಗ್‌ಗಳ ಬಳಸಿ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; #ಮೋದಿಶೇಮ್ಸ್‌ಇಂಡಿಯಾ #ಮೌಲಾನಾಮೋದಿ ಹ್ಯಾಷ್‌ಟ್ಯಾಗ್‌ ಟ್ವಿಟ್ಟರ್‌‌ನಲ್ಲಿ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರವಾದಿಗೆ ಅವಮಾನ ಆಗಿದೆ ಅಂತ ಬೊಬ್ಬೋ ಹೊಡಿಯೋ ನಾಮಾರ್ದರು,ಕಲಬೆರಕೆಗಳು ಹಿಂದೂ ದೇವರಿಗೆ ಇದೇ ಕಲಬೆರಕೆಗಳು ಅವಮಾನಿಸಿದಾಗ ಎಲ್ಲಾ ಮಾಧ್ಯಮಗಳು,ಕಲಬೆರಕೆಗಳು ಸಗಣಿ ತಿಂತಿದ್ವ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...