Homeಅಂತರಾಷ್ಟ್ರೀಯಬಿಜೆಪಿ ಮುಖಂಡರಿಂದ ಪ್ರವಾದಿ ನಿಂದನೆ ಪ್ರಕರಣ: 15 ರಾಷ್ಟ್ರಗಳ ಖಂಡನೆ

ಬಿಜೆಪಿ ಮುಖಂಡರಿಂದ ಪ್ರವಾದಿ ನಿಂದನೆ ಪ್ರಕರಣ: 15 ರಾಷ್ಟ್ರಗಳ ಖಂಡನೆ

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು 15 ಪ್ರಮುಖ ರಾಷ್ಟ್ರಗಳು ಕಟು ಶಬ್ದಗಳಲ್ಲಿ ಖಂಡಿಸಿವೆ.

ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಓಮನ್, ಯುಎಇ, ಜೋರ್ಡಾನ್, ಅಫ್ಘಾನಿಸ್ತಾನ, ಬಹ್ರೇನ್, ಮಾಲ್ಡೀವ್ಸ್, ಲಿಬಿಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮ ಪ್ರತಿಭಟನೆಯನ್ನು ದಾಖಲಿಸಿವೆ.

ಕತಾರ್, ಇರಾನ್ ಮತ್ತು ಬಹ್ರೇನ್ ದೇಶಗಳು ಭಾರತೀಯ ರಾಯಭಾರಿಯನ್ನು ಕರೆಸಿದ್ದು, ತಮ್ಮ ವಿರೋಧವನ್ನು ತಿಳಿಸಿವೆ. ಭಾರತ ಸರ್ಕಾರವು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿದೆ. ಜೊತಗೆ ಪಕ್ಷದ ವಕ್ತಾರೆಯ ವಿರುದ್ಧ ಬಿಜೆಪಿ ಕೈಗೊಂಡಿರುವ ಕ್ರಮವನ್ನು ಬಹ್ರೇನ್ ಮತ್ತು ಸೌದಿ ಅರೇಬಿಯಾ ಸ್ವಾಗತಿಸಿವೆ.

ಟಿಆರ್‌ಎಸ್ ಪಕ್ಷದ ಸಚಿವ ಕೆ.ಟಿ. ರಾಮರಾವ್ ಪ್ರತಿಕ್ರಿಯಿಸಿದ್ದು, “ಪ್ರಧಾನಿ ಮೋದಿ ಅವರೇ, ಬಿಜೆಪಿಯ ಮತಾಂಧರ ದ್ವೇಷದ ಭಾಷಣಗಳಿಗೆ ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಭಾರತ ಯಾಕೆ ಕ್ಷಮೆಯಾಚಿಸಬೇಕು. ಬಿಜೆಪಿ ದಿನವಿಡೀ ದ್ವೇಷವನ್ನು ಉಗುಳುವುದು ಮತ್ತು ಹರಡುವುದಕ್ಕಾಗಿ ಪ್ರತಿ ಭಾರತೀಯರಲ್ಲಿ ಕ್ಷಮೆಯಾಚಿಸಬೇಕು. ಕ್ಷಮೆ ಕೇಳಬೇಕಾದ್ದು ಬಿಜೆಪಿಯೇ ಹೊರತು ಇಡೀ ಭಾರತವಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, “ಭಾರತವು ಕ್ಷಮೆ ಕೇಳಬೇಕಾದ ಯಾವುದೇ ತಪ್ಪನ್ನು ಮಾಡಿಲ್ಲ. ತಪ್ಪಿ ಆಗಿದ್ದು ಬಿಜೆಪಿಯಿಂದ. ದೇಶವೇಕೆ ಅದನ್ನು ಸರಿದೂಗಿಸಬೇಕು? ಕತಾರ್ ಮತ್ತು ಕುವೈತ್‌‌ ನಮ್ಮ ಪ್ರಧಾನಿಗೆ ಅವರ ರಾಜಧರ್ಮವನ್ನು ನೆನಪಿಸುತ್ತಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ?” ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಕಳೆದ ವಾರ ಟಿವಿ ಚರ್ಚೆಯ ಸಂದರ್ಭದಲ್ಲಿ ನೂಪುರ್‌ ಶರ್ಮಾ ಅವರು ಪ್ರವಾದಿಯನ್ನು ಅವಮಾನಿಸುವ ಉದ್ದೇಶದಿಂದ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯ ವಿರುದ್ಧ ಮುಸ್ಲಿಮರು ಭಾರಿ ಆಕ್ರೋಶ ಮತ್ತು ಪ್ರತಿಭಟನೆಯನ್ನು ನಡೆಸಿದ್ದರು. ಈ ಮಧ್ಯೆಯೆ ನವೀನ್ ಕುಮಾರ್ ಅವರು ಪ್ರವಾದಿಯವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದು ವಿವಾದವು ಮತ್ತುಷ್ಟು ಬಿಗಡಾಯಿಸುವಂತೆ ಮಾಡಿತ್ತು.

ನೂಪುರ್ ಶರ್ಮಾ ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿದ್ದರೆ, ನವೀನ್ ಜಿಂದಾಲ್ ಪಕ್ಷದ ದೆಹಲಿ ಮಾಧ್ಯಮ ಘಟಕದ ಮುಖ್ಯಸ್ಥರಾಗಿದ್ದಾರೆ. ಇದೀಗ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಿದೆ. ಆದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಪಕ್ಷಗಳು ಒತ್ತಾಯಿಸಿವೆ.

ಪ್ರವಾದಿ ನಿಂದನೆ ಮಾಡಿದ ಆ ಇಬ್ಬರು ಮುಖಂಡರನ್ನು ಅಮಾನತು ಮಾಡಿರುವುದು ಬಿಜೆಪಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾಗಿ ಮೋದಿ ವಿರುದ್ಧ ಕಿಡಿಕಾರಿರುವ ಅವರು #maulanamodi (#ಮೌಲಾನಾಮೋದಿ), #ModiShamesIndia (#ಮೋದಿಶೇಮ್ಸ್‌ಇಂಡಿಯಾ) ಹ್ಯಾಷ್‌ ಟ್ಯಾಗ್‌ಗಳ ಬಳಸಿ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; #ಮೋದಿಶೇಮ್ಸ್‌ಇಂಡಿಯಾ #ಮೌಲಾನಾಮೋದಿ ಹ್ಯಾಷ್‌ಟ್ಯಾಗ್‌ ಟ್ವಿಟ್ಟರ್‌‌ನಲ್ಲಿ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರವಾದಿಗೆ ಅವಮಾನ ಆಗಿದೆ ಅಂತ ಬೊಬ್ಬೋ ಹೊಡಿಯೋ ನಾಮಾರ್ದರು,ಕಲಬೆರಕೆಗಳು ಹಿಂದೂ ದೇವರಿಗೆ ಇದೇ ಕಲಬೆರಕೆಗಳು ಅವಮಾನಿಸಿದಾಗ ಎಲ್ಲಾ ಮಾಧ್ಯಮಗಳು,ಕಲಬೆರಕೆಗಳು ಸಗಣಿ ತಿಂತಿದ್ವ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...