Homeಅಂತರಾಷ್ಟ್ರೀಯಬಿಜೆಪಿ ಮುಖಂಡರಿಂದ ಪ್ರವಾದಿ ನಿಂದನೆ ಪ್ರಕರಣ: 15 ರಾಷ್ಟ್ರಗಳ ಖಂಡನೆ

ಬಿಜೆಪಿ ಮುಖಂಡರಿಂದ ಪ್ರವಾದಿ ನಿಂದನೆ ಪ್ರಕರಣ: 15 ರಾಷ್ಟ್ರಗಳ ಖಂಡನೆ

- Advertisement -
- Advertisement -

ಬಿಜೆಪಿಯ ರಾಷ್ಟ್ರೀಯ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು 15 ಪ್ರಮುಖ ರಾಷ್ಟ್ರಗಳು ಕಟು ಶಬ್ದಗಳಲ್ಲಿ ಖಂಡಿಸಿವೆ.

ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಓಮನ್, ಯುಎಇ, ಜೋರ್ಡಾನ್, ಅಫ್ಘಾನಿಸ್ತಾನ, ಬಹ್ರೇನ್, ಮಾಲ್ಡೀವ್ಸ್, ಲಿಬಿಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮ ಪ್ರತಿಭಟನೆಯನ್ನು ದಾಖಲಿಸಿವೆ.

ಕತಾರ್, ಇರಾನ್ ಮತ್ತು ಬಹ್ರೇನ್ ದೇಶಗಳು ಭಾರತೀಯ ರಾಯಭಾರಿಯನ್ನು ಕರೆಸಿದ್ದು, ತಮ್ಮ ವಿರೋಧವನ್ನು ತಿಳಿಸಿವೆ. ಭಾರತ ಸರ್ಕಾರವು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿದೆ. ಜೊತಗೆ ಪಕ್ಷದ ವಕ್ತಾರೆಯ ವಿರುದ್ಧ ಬಿಜೆಪಿ ಕೈಗೊಂಡಿರುವ ಕ್ರಮವನ್ನು ಬಹ್ರೇನ್ ಮತ್ತು ಸೌದಿ ಅರೇಬಿಯಾ ಸ್ವಾಗತಿಸಿವೆ.

ಟಿಆರ್‌ಎಸ್ ಪಕ್ಷದ ಸಚಿವ ಕೆ.ಟಿ. ರಾಮರಾವ್ ಪ್ರತಿಕ್ರಿಯಿಸಿದ್ದು, “ಪ್ರಧಾನಿ ಮೋದಿ ಅವರೇ, ಬಿಜೆಪಿಯ ಮತಾಂಧರ ದ್ವೇಷದ ಭಾಷಣಗಳಿಗೆ ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಭಾರತ ಯಾಕೆ ಕ್ಷಮೆಯಾಚಿಸಬೇಕು. ಬಿಜೆಪಿ ದಿನವಿಡೀ ದ್ವೇಷವನ್ನು ಉಗುಳುವುದು ಮತ್ತು ಹರಡುವುದಕ್ಕಾಗಿ ಪ್ರತಿ ಭಾರತೀಯರಲ್ಲಿ ಕ್ಷಮೆಯಾಚಿಸಬೇಕು. ಕ್ಷಮೆ ಕೇಳಬೇಕಾದ್ದು ಬಿಜೆಪಿಯೇ ಹೊರತು ಇಡೀ ಭಾರತವಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, “ಭಾರತವು ಕ್ಷಮೆ ಕೇಳಬೇಕಾದ ಯಾವುದೇ ತಪ್ಪನ್ನು ಮಾಡಿಲ್ಲ. ತಪ್ಪಿ ಆಗಿದ್ದು ಬಿಜೆಪಿಯಿಂದ. ದೇಶವೇಕೆ ಅದನ್ನು ಸರಿದೂಗಿಸಬೇಕು? ಕತಾರ್ ಮತ್ತು ಕುವೈತ್‌‌ ನಮ್ಮ ಪ್ರಧಾನಿಗೆ ಅವರ ರಾಜಧರ್ಮವನ್ನು ನೆನಪಿಸುತ್ತಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ?” ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಕಳೆದ ವಾರ ಟಿವಿ ಚರ್ಚೆಯ ಸಂದರ್ಭದಲ್ಲಿ ನೂಪುರ್‌ ಶರ್ಮಾ ಅವರು ಪ್ರವಾದಿಯನ್ನು ಅವಮಾನಿಸುವ ಉದ್ದೇಶದಿಂದ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯ ವಿರುದ್ಧ ಮುಸ್ಲಿಮರು ಭಾರಿ ಆಕ್ರೋಶ ಮತ್ತು ಪ್ರತಿಭಟನೆಯನ್ನು ನಡೆಸಿದ್ದರು. ಈ ಮಧ್ಯೆಯೆ ನವೀನ್ ಕುಮಾರ್ ಅವರು ಪ್ರವಾದಿಯವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದು ವಿವಾದವು ಮತ್ತುಷ್ಟು ಬಿಗಡಾಯಿಸುವಂತೆ ಮಾಡಿತ್ತು.

ನೂಪುರ್ ಶರ್ಮಾ ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿದ್ದರೆ, ನವೀನ್ ಜಿಂದಾಲ್ ಪಕ್ಷದ ದೆಹಲಿ ಮಾಧ್ಯಮ ಘಟಕದ ಮುಖ್ಯಸ್ಥರಾಗಿದ್ದಾರೆ. ಇದೀಗ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಿದೆ. ಆದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಪಕ್ಷಗಳು ಒತ್ತಾಯಿಸಿವೆ.

ಪ್ರವಾದಿ ನಿಂದನೆ ಮಾಡಿದ ಆ ಇಬ್ಬರು ಮುಖಂಡರನ್ನು ಅಮಾನತು ಮಾಡಿರುವುದು ಬಿಜೆಪಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾಗಿ ಮೋದಿ ವಿರುದ್ಧ ಕಿಡಿಕಾರಿರುವ ಅವರು #maulanamodi (#ಮೌಲಾನಾಮೋದಿ), #ModiShamesIndia (#ಮೋದಿಶೇಮ್ಸ್‌ಇಂಡಿಯಾ) ಹ್ಯಾಷ್‌ ಟ್ಯಾಗ್‌ಗಳ ಬಳಸಿ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; #ಮೋದಿಶೇಮ್ಸ್‌ಇಂಡಿಯಾ #ಮೌಲಾನಾಮೋದಿ ಹ್ಯಾಷ್‌ಟ್ಯಾಗ್‌ ಟ್ವಿಟ್ಟರ್‌‌ನಲ್ಲಿ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರವಾದಿಗೆ ಅವಮಾನ ಆಗಿದೆ ಅಂತ ಬೊಬ್ಬೋ ಹೊಡಿಯೋ ನಾಮಾರ್ದರು,ಕಲಬೆರಕೆಗಳು ಹಿಂದೂ ದೇವರಿಗೆ ಇದೇ ಕಲಬೆರಕೆಗಳು ಅವಮಾನಿಸಿದಾಗ ಎಲ್ಲಾ ಮಾಧ್ಯಮಗಳು,ಕಲಬೆರಕೆಗಳು ಸಗಣಿ ತಿಂತಿದ್ವ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...