Homeಕರ್ನಾಟಕಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

ಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

- Advertisement -
- Advertisement -

ರಾಜ್ಯದ ಸಾಹಿತಿಗಳು, ಪ್ರಾಧ್ಯಾಪಕರು ಮತ್ತು ಶಿಕ್ಷಣ ತಜ್ಞರನ್ನು ಬಿಟ್ಟು ಶಿಕ್ಷಣ ಸಚಿವರು ಅವನು ಯಾವಾನೋ ಚರಂಡಿಯಲ್ಲಿ ಇರಬೇಕಾದವನನ್ನು ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ‌ ಹರಿಪ್ರಸಾದ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವನು ಪ್ರೊಫೆಸರ್ ಎಂದು ಹೇಳಿ ಜವಾಬ್ದಾರಿ ಕೊಟ್ಟಿದ್ದಾರೆ ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಕೆ ಹರಿಪ್ರಸಾದ್‌, “ನಾನು ಫ್ರೋಫೆಸರ್ ಅಲ್ಲ ಎಂದು ಅವನೇ ಹೇಳಿಕೆ ನೀಡಿದ್ದಾನೆ. ಶಿಕ್ಷಣ ಸಚಿವರು ಸಿಇಟಿ ಫ್ರೋಫೆಸರ್ ಅಂತಾ ಹೇಳ್ತಿದಾರೆ. ಏನೂ ಅರ್ಹತೆ ಇಲ್ಲದವರನ್ನ ಕರೆ ತಂದು ನಾಗಪುರದ ಹಿಡನ್ ಕಾರ್ಯಸೂಚಿಗಳನ್ನ ಜಾರಿಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಅಷ್ಟು ಸುಲಭವಾಗಿ ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದೇ ಮತ, ಒಂದೇ ಜಾತಿ, ಒಂದೇ ದೇವರು ಎಂದು ದೇಶದ ಏಕತೆಯ ಸಂದೇಶ ಸಾರಿದ ಮಹನೀಯರ ವಿಚಾರಧಾರೆಗಳನ್ನ ಪಠ್ಯದಿಂದ ಕೈ ಬಿಡಲಾಗಿದೆ. ರಾಣಿ ಅಬ್ಬಕ್ಕ, ನಾರಾಯಣ ಗುರುಗಳ ಪಾಠ ಕೈ ಬಿಟ್ಟಿರುವುದರ ಬಗ್ಗೆ ಜನರಿಗೆ ಮನದಟ್ಟಾಗಿದ್ದು, ಸರ್ಕಾರಕ್ಕೆ ಬಿಸಿ‌ಮುಟ್ಟಿಸಲು ಸನ್ನದ್ಧರಾಗಿದ್ದಾರೆ. ಆರೆಸ್ಸೆಸ್‌‌ ಕಾರ್ಯಸೂಚಿಯನ್ನು ಹಿಂಬಾಗಿಲಿನಿಂದ ಅನುಷ್ಠಾನಕ್ಕೆ ತರುವ ಪ್ರಯತ್ನಗಳ ಬಗ್ಗೆ ಮನದಟ್ಟಾಗಿದೆ. ಸ್ವಾರ್ಥಕ್ಕಾಗಿ ಯಾರನ್ನ ಬೇಕಾದರೂ ಬಲಿ ಕೊಡುತ್ತಾರೆ ಎಂಬುದು ಅರ್ಥವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

“ರೋಹಿತ್ ಚಕ್ರತೀರ್ಥನೋ, ವಕ್ರತೀರ್ಥನೋ ಎಂಬುದು ಗೊತ್ತಿಲ್ಲ. ನಾಗಪುರ ವಿಶ್ವವಿದ್ಯಾಲಯದಿಂದ ಬಂದ ಇವರುಗಳಿಗೆ ಜವಾಬ್ದಾರಿ ಇಲ್ಲ. ಪಠ್ಯ ಪುಸ್ತಕದಲ್ಲಿ ನಾಳೆ ಆರೆಸ್ಸೆಸ್ ಸೇರಿಸುವ ಅಂಶಗಳಿಗೆ ಪುರಾವೆ ಇರುವುದಿಲ್ಲ. ಆರೆಸ್ಸೆಸ್‌‌ಗೆ ಪುರಾವೆ ಇಲ್ಲ, ಅದು ನೊಂದಾಯಿತ ಸಂಸ್ಥೆಯೇ ಅಲ್ಲ, ಅದಕ್ಕೆ ಅಸ್ಥಿತ್ವವೇ ಇಲ್ಲ. ಖಾಕಿ ಚೆಡ್ಡಿ, ಕರಿ ಟೋಪಿಯನ್ನ ಸುಡುವ ಮೂಲಕ ಅವರ ಅಸ್ತಿತ್ವ ನಾಶಪಡಿಸುವುದನ್ನೇ ಸಿದ್ದರಾಮಯ್ಯನವರು ‘ಚಡ್ಡಿ ಸುಡುವ ಅಭಿಯಾನ’ ಎಂದು ಹೇಳಿದ್ದಾರೆ” ಎಂದು ಅವರು ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

‘ಖಾಕಿ ಚೆಡ್ಡಿ, ಕರಿ ಟೋಪಿ, ದೊಣ್ಣೆ ಹಿಡಿದುಕೊಂಡವರು ಈ ದೇಶವನ್ನ ಕಾಪಾಡುತ್ತಿದ್ದಾರೆ ಎನ್ನುವ ಮೂಲಕ ಈ ದೇಶದ ಮಿಲಿಟರಿ, ಅರೆಸೇನೆ, ಪೊಲೀಸ್ ವ್ಯವಸ್ಥೆಯನ್ನ ಬಿಜೆಪಿ ಅವಮಾನಿಸುತ್ತಿದೆ. 100 ವರ್ಷಗಳ ಈಚೆಗೆ ಬಂದ ಇವರು ನಾವು ಮಾತ್ರ ಹಿಂದೂ ಧರ್ಮವನ್ನ ಕಾಪಾಡುತ್ತೇವೆ ಎಂದು ಜನರ ಕಣ್ಣಿಗೆ ಮಣ್ಣರೆಚುವ ತಂತ್ರ ಮಾಡುತ್ತಿದ್ದಾರೆ. ವೇದ ಉಪನಿಷತ್ತು, ಭಗವದ್ಗೀತೆ ಸೇರಿದಂತೆ ಎಲ್ಲೂ ಕೂಡಾ ಖಾಕಿ ಚೆಡ್ಡಿ, ಕರಿ ಟೋಪಿಯ ಉಲ್ಲೇಖವಿಲ್ಲ. ಪ್ರಪಂಚದಲ್ಲಿ ಇದು ಕಾಣ ಸಿಗುವುದು ಜರ್ಮನಿಯ ಹಿಟ್ಲರ್ ಸೇನೆಯಲ್ಲಿ ಮಾತ್ರ. ಸುಳ್ಳು ಹೇಳುವುದೇ ಅವರ ಕಾಯಕ, ದೇಶವನ್ನ ಧರ್ಮಾಂಧತೆಯ ಅಫೀಮಿನಿಂದ ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಈಗ ಖಾಕಿ ಚೆಡ್ಡಿ ಬದಲು ಪ್ಯಾಂಟ್ ಬಂದಿದೆ. ಇದು ಅವರ ಅಸ್ಮಿತೆಯನ್ನೇ ಅವರು ಕಳೆದು ಕೊಂಡಿರುವುದರ ಸಂಕೇತ. ಸರಳತೆ, ತ್ಯಾಗ ಎಂದು ಹೇಳುತ್ತಿದ್ದವರು ಈಗ ಯಾಕೆ ಪ್ಯಾಂಟ್ ಗೆ ಬದಲಾಯಿಸಿದ್ದಾರೆ? ಅದಕ್ಕೆ ಕಾರಣ 40% ಕಮಿಷನ್. ಕಮಿಷನ್ ಹಣದಿಂದಲೇ ಪ್ಯಾಂಟ್ ಹಾಗೂ ಹತ್ತು ಲಕ್ಷದ ಕೋಟ್ ಬಂದಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪಿಯುಸಿ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

“ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ದವಾಗಿದ್ದವರು ಆರೆಸ್ಸೆಸ್‌. ಹಿಂದಿ ಭಾಷಿಕ ರಾಜ್ಯಗಳು ಬಿಟ್ಟು ಬೇರೆ ಕಡೆ ಅವರ ಪ್ರಭಾವ ಬೀರಿದೆಯಾ? ದೇಶ ಅಂದ್ರೆ ಕೇವಲ ಹಿಂದಿ ರಾಜ್ಯಗಳಲ್ಲ. ಎಲ್ಲರನ್ನೂ ಒಳಗೊಳ್ಳಬೇಕೆಂದು ನೆಹರೂ ಅವರು ತಮ್ಮ ಸಂಪುಟದಲ್ಲಿ ಸೈದ್ದಾಂತಿಕ ಭಿನ್ನಾಭಿಪ್ರಾಯ ಇದ್ದ ಶ್ಯಾಂ ಪ್ರಸಾದ್ ಮುಖರ್ಜಿಯನ್ನು ಸಚಿವರನ್ನಾಗಿ ಮಾಡಿದ್ದರು. ಅಂಬೇಡ್ಕರ್ ಅವರಿಗೂ ಅವಕಾಶ ನೀಡಿದ್ದರು‌. ಕೆಲವು ಮುಸ್ಲಿಂ ಲೀಗ್‌ನವರಿಗೂ ಸಚಿವ ಸ್ಥಾನ ನೀಡಲಾಗಿತ್ತು. ನರೇಂದ್ರ ಮೋದಿ ಬಂದ ಮೇಲೆ ಅವರ ವಿರುದ್ಧ ಮಾತಾಡುವವರು ದೇಶದ್ರೋಹಿಗಳೆಂದು ಪಟ್ಟ ಕಟ್ಟಲಾಗ್ತಿದೆ. ಎಂಟು ವರ್ಷಗಳಲ್ಲಿ ದೇಶಕ್ಕೆ ಒಂದೇ ಒಂದು ಕೆಲಸ ಮಾಡಲಿಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...