Homeಕರ್ನಾಟಕಕನ್ನಡ ವಿರೋಧಿ ಪರಿಷ್ಕರಿಸಿರುವ ಪಠ್ಯಗಳು ಬೇಡವೇ ಬೇಡ: ಕರವೇ ನಾರಾಯಣಗೌಡ

ಕನ್ನಡ ವಿರೋಧಿ ಪರಿಷ್ಕರಿಸಿರುವ ಪಠ್ಯಗಳು ಬೇಡವೇ ಬೇಡ: ಕರವೇ ನಾರಾಯಣಗೌಡ

- Advertisement -
- Advertisement -

ಕನ್ನಡ ವಿರೋಧಿಯು ಪರಿಷ್ಕರಣೆ ಮಾಡಿರುವ ಪಠ್ಯದಲ್ಲಿ‌ ನೂರೆಂಟು ಹುಳುಕುಗಳಿವೆ. ಅವುಗಳನ್ನು ಕನ್ನಡದ ಮಕ್ಕಳು ಓದುವ ಅವಶ್ಯಕತೆ ಇಲ್ಲ. ಹಾಗಾಗಿ ಹಳೇ ಪಠ್ಯಗಳನ್ನೆ ಮಕ್ಕಳಿಗೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ನಾರಾಯಣಗೌಡ ಒತ್ತಾಯಿಸಿದ್ದಾರೆ.

ಸರ್ಕಾರ ಕೆಲವು ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡುವ ಭರವಸೆ ನೀಡಿದೆ. ಆದರೆ ಇಡೀ ಪರಿಷ್ಕರಣೆಯೇ ವಿಕೃತವಾಗಿದೆ. ಕನ್ನಡ ಬಾವುಟವಿದ್ದ ಚಿತ್ರವನ್ನು ತೆಗೆಯಲಾಗಿದೆ, ಕುವೆಂಪು, ದೇವನೂರು ಅವರ ಭಾವಚಿತ್ರಗಳನ್ನು ಕುತ್ಸಿತ ಮನಸ್ಥಿತಿಯಿಂದ ತೆಗೆಯಲಾಗಿದೆ. ಕನ್ನಡ ರಾಜ್ಯೋತ್ಸವದ ಪಾಠವನ್ನೇ ಕಿತ್ತುಹಾಕಲಾಗಿದೆ ಎಂದು ಅವರು ದೂರಿದ್ದಾರೆ.

ಕನ್ನಡ ನೆಲದ ವೀರರಾಣಿ ಅಬ್ಬಕ್ಕನ ಚರಿತ್ರೆಯನ್ನು ತೆಗೆದು ಹಾಕಲಾಗಿದೆ. ಕನಕದಾಸರು, ಪುರಂದರ ದಾಸರು, ಶಿಶುನಾಳ ಶರೀಫರ ಮತ್ತು ಇತರ ಭಕ್ತಪಂಥದ ಮಹಾನುಭಾವರ ಪರಿಚಯವಿದ್ದ ಲೇಖನ ತೆಗೆಯಲಾಗಿದೆ. ಬಸವಣ್ಣನವರ ಚರಿತ್ರೆ ವಿರೂಪಗೊಳಿಸಲಾಗಿದೆ, ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಬಳಸಿದ್ದ ಸಂವಿಧಾನಶಿಲ್ಪಿ ಎಂಬ ಪದವನ್ನು ಕಿತ್ತುಹಾಕಲಾಗಿದೆ. ಇಂತಹ ಪಠ್ಯಗಳನ್ನು ನಮ್ಮ ಮಕ್ಕಳು ಓದಬೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಆಡಿಸು ನೋಡು ಬೀಳಿಸಿ ನೋಡು ಎಂಬ ಚಿ.ಉದಯಶಂಕರ್ ಅವರ ಕವಿತೆಯನ್ನು ಬಳಸಿ, ಆರ್.ಎನ್.ಜಯಗೋಪಾಲ್ ಅವರ ಹೆಸರನ್ನು ಬಳಸಲಾಗಿದೆ. ಪರಿಷ್ಕರಣಾ ಸಮಿತಿಯವರ ಸ್ನೇಹಿತರೆಂಬ ಕಾರಣಕ್ಕೆ ವಿರೂಪಗೊಂಡ ಕೃತಿಚೌರ್ಯದ ಪದ್ಯ ಬಳಸಲಾಗಿದೆ. ಪಿ.ಲಂಕೇಶ್, ಸಾ.ರಾ.ಅಬೂಬಕರ್ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ನಾಡಿನ ಪ್ರಖ್ಯಾತ ಸಾಹಿತಿಗಳು, ಕವಿಗಳ ಲೇಖನ, ಪದ್ಯಗಳನ್ನು ಯಾವ ಕಾರಣವನ್ನೂ ಒದಗಿಸದೆ ಕಿತ್ತುಹಾಕಲಾಗಿದೆ. ಕನ್ನಡಿಗರಿಗೆ, ಕನ್ನಡ ಸಂಸ್ಕೃತಿಗೆ ಯಾವ ಸಂಬಂಧವೂ ಇಲ್ಲದ ಲೇಖಕರಿಗೆ ಮಣೆ ಹಾಕಲಾಗಿದೆ. ಕನ್ನಡಿಗರ ಇತಿಹಾಸವನ್ನು ಕುಬ್ಜಗೊಳಿಸುವ ಪ್ರಯತ್ನ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟೆಲ್ಲ ಇದ್ದ ಮೇಲೆ, ಈ ಪರಿಷ್ಕರಣೆಗಳನ್ನು ಇಟ್ಟುಕೊಳ್ಳುವುದರಲ್ಲಿ ಯಾವ ಅರ್ಥವೂ ಇಲ್ಲ. ಎಷ್ಟು ತೇಪೆ ಹಾಕಿದರೂ ಅದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ತೇಪೆ ಕೆಲಸ ಕೈಬಿಟ್ಟು ಇಡಿಯಾಗಿ ಪರಿಷ್ಕರಣೆಯನ್ನು ಸರ್ಕಾರ ತಿರಸ್ಕರಿಸಬೇಕು. ತಡಮಾಡದೇ ಈ ವರ್ಷ ವಿದ್ಯಾರ್ಥಿಗಳಿಗೆ ಹಳೆಯ ಪಠ್ಯವನ್ನೇ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪಿಯುಸಿ ಪಠ್ಯ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...