Homeಕರ್ನಾಟಕಕನ್ನಡ ವಿರೋಧಿ ಪರಿಷ್ಕರಿಸಿರುವ ಪಠ್ಯಗಳು ಬೇಡವೇ ಬೇಡ: ಕರವೇ ನಾರಾಯಣಗೌಡ

ಕನ್ನಡ ವಿರೋಧಿ ಪರಿಷ್ಕರಿಸಿರುವ ಪಠ್ಯಗಳು ಬೇಡವೇ ಬೇಡ: ಕರವೇ ನಾರಾಯಣಗೌಡ

- Advertisement -
- Advertisement -

ಕನ್ನಡ ವಿರೋಧಿಯು ಪರಿಷ್ಕರಣೆ ಮಾಡಿರುವ ಪಠ್ಯದಲ್ಲಿ‌ ನೂರೆಂಟು ಹುಳುಕುಗಳಿವೆ. ಅವುಗಳನ್ನು ಕನ್ನಡದ ಮಕ್ಕಳು ಓದುವ ಅವಶ್ಯಕತೆ ಇಲ್ಲ. ಹಾಗಾಗಿ ಹಳೇ ಪಠ್ಯಗಳನ್ನೆ ಮಕ್ಕಳಿಗೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ನಾರಾಯಣಗೌಡ ಒತ್ತಾಯಿಸಿದ್ದಾರೆ.

ಸರ್ಕಾರ ಕೆಲವು ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡುವ ಭರವಸೆ ನೀಡಿದೆ. ಆದರೆ ಇಡೀ ಪರಿಷ್ಕರಣೆಯೇ ವಿಕೃತವಾಗಿದೆ. ಕನ್ನಡ ಬಾವುಟವಿದ್ದ ಚಿತ್ರವನ್ನು ತೆಗೆಯಲಾಗಿದೆ, ಕುವೆಂಪು, ದೇವನೂರು ಅವರ ಭಾವಚಿತ್ರಗಳನ್ನು ಕುತ್ಸಿತ ಮನಸ್ಥಿತಿಯಿಂದ ತೆಗೆಯಲಾಗಿದೆ. ಕನ್ನಡ ರಾಜ್ಯೋತ್ಸವದ ಪಾಠವನ್ನೇ ಕಿತ್ತುಹಾಕಲಾಗಿದೆ ಎಂದು ಅವರು ದೂರಿದ್ದಾರೆ.

ಕನ್ನಡ ನೆಲದ ವೀರರಾಣಿ ಅಬ್ಬಕ್ಕನ ಚರಿತ್ರೆಯನ್ನು ತೆಗೆದು ಹಾಕಲಾಗಿದೆ. ಕನಕದಾಸರು, ಪುರಂದರ ದಾಸರು, ಶಿಶುನಾಳ ಶರೀಫರ ಮತ್ತು ಇತರ ಭಕ್ತಪಂಥದ ಮಹಾನುಭಾವರ ಪರಿಚಯವಿದ್ದ ಲೇಖನ ತೆಗೆಯಲಾಗಿದೆ. ಬಸವಣ್ಣನವರ ಚರಿತ್ರೆ ವಿರೂಪಗೊಳಿಸಲಾಗಿದೆ, ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಬಳಸಿದ್ದ ಸಂವಿಧಾನಶಿಲ್ಪಿ ಎಂಬ ಪದವನ್ನು ಕಿತ್ತುಹಾಕಲಾಗಿದೆ. ಇಂತಹ ಪಠ್ಯಗಳನ್ನು ನಮ್ಮ ಮಕ್ಕಳು ಓದಬೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಆಡಿಸು ನೋಡು ಬೀಳಿಸಿ ನೋಡು ಎಂಬ ಚಿ.ಉದಯಶಂಕರ್ ಅವರ ಕವಿತೆಯನ್ನು ಬಳಸಿ, ಆರ್.ಎನ್.ಜಯಗೋಪಾಲ್ ಅವರ ಹೆಸರನ್ನು ಬಳಸಲಾಗಿದೆ. ಪರಿಷ್ಕರಣಾ ಸಮಿತಿಯವರ ಸ್ನೇಹಿತರೆಂಬ ಕಾರಣಕ್ಕೆ ವಿರೂಪಗೊಂಡ ಕೃತಿಚೌರ್ಯದ ಪದ್ಯ ಬಳಸಲಾಗಿದೆ. ಪಿ.ಲಂಕೇಶ್, ಸಾ.ರಾ.ಅಬೂಬಕರ್ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ನಾಡಿನ ಪ್ರಖ್ಯಾತ ಸಾಹಿತಿಗಳು, ಕವಿಗಳ ಲೇಖನ, ಪದ್ಯಗಳನ್ನು ಯಾವ ಕಾರಣವನ್ನೂ ಒದಗಿಸದೆ ಕಿತ್ತುಹಾಕಲಾಗಿದೆ. ಕನ್ನಡಿಗರಿಗೆ, ಕನ್ನಡ ಸಂಸ್ಕೃತಿಗೆ ಯಾವ ಸಂಬಂಧವೂ ಇಲ್ಲದ ಲೇಖಕರಿಗೆ ಮಣೆ ಹಾಕಲಾಗಿದೆ. ಕನ್ನಡಿಗರ ಇತಿಹಾಸವನ್ನು ಕುಬ್ಜಗೊಳಿಸುವ ಪ್ರಯತ್ನ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟೆಲ್ಲ ಇದ್ದ ಮೇಲೆ, ಈ ಪರಿಷ್ಕರಣೆಗಳನ್ನು ಇಟ್ಟುಕೊಳ್ಳುವುದರಲ್ಲಿ ಯಾವ ಅರ್ಥವೂ ಇಲ್ಲ. ಎಷ್ಟು ತೇಪೆ ಹಾಕಿದರೂ ಅದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ತೇಪೆ ಕೆಲಸ ಕೈಬಿಟ್ಟು ಇಡಿಯಾಗಿ ಪರಿಷ್ಕರಣೆಯನ್ನು ಸರ್ಕಾರ ತಿರಸ್ಕರಿಸಬೇಕು. ತಡಮಾಡದೇ ಈ ವರ್ಷ ವಿದ್ಯಾರ್ಥಿಗಳಿಗೆ ಹಳೆಯ ಪಠ್ಯವನ್ನೇ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪಿಯುಸಿ ಪಠ್ಯ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...