Homeಕರ್ನಾಟಕಧರ್ಮಮಾರ್ಗದಲ್ಲಿ ಹೇಗೆ ನಡೆಯಬೇಕೆಂದು ತಿಳಿಸಿದ ಕೃತಿ ‘ಮನುಸ್ಮೃತಿ’: ಹೊಸ ಪಠ್ಯದಲ್ಲಿ ಉಲ್ಲೇಖ!

ಧರ್ಮಮಾರ್ಗದಲ್ಲಿ ಹೇಗೆ ನಡೆಯಬೇಕೆಂದು ತಿಳಿಸಿದ ಕೃತಿ ‘ಮನುಸ್ಮೃತಿ’: ಹೊಸ ಪಠ್ಯದಲ್ಲಿ ಉಲ್ಲೇಖ!

- Advertisement -
- Advertisement -

ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪರಿಶೀಲಿಸಲಾಗಿರುವ ಪಠ್ಯದಲ್ಲಿರುವ ಹಲವು ತಪ್ಪಗಳು, ವಿವಾದಾತ್ಮಕ ಸಂಗತಿಗಳು ಮುನ್ನೆಲೆಗೆ ಬರುತ್ತಿವೆ. ಈ ವಿದ್ಯಮಾನಕ್ಕೆ ‘ಮನುಸ್ಮೃತಿ’ಯ ಕುರಿತು ಬರೆದಿರುವ ಸಾಲು ಸೇರಿಕೊಂಡಿದೆ.

ಸಮಾಜ ಧರ್ಮಮಾರ್ಗದಲ್ಲಿ ನಡೆಯಲು ತಿಳಿಸಿದ ಕೃತಿಗಳ ಪಟ್ಟಿಯಲ್ಲಿ ‘ಮನುಸ್ಮೃತಿ’ಯೂ ಸೇರಿಕೊಂಡಿದೆ.

ರೋಹಿತ್‌ ಚಕ್ರತೀರ್ಥ ಸಮಿತಿಯು ‘ಸನಾತನ ಧರ್ಮ’ ಎಂಬ ಪಾಠವನ್ನು ಎಂಟನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸಿದೆ. ವೇದ, ವೇದ ಸಾಹಿತ್ಯ, ವೇದ ಸ್ವರೂಪ, ಸಂಹಿತೆ, ಬ್ರಾಹ್ಮಣ, ಆರಣ್ಯಕ, ಉಪನಿಷತ್ತು, ಆಸ್ತಿಕ ಮತ್ತು ನಾಸ್ತಿಕ ಪಂಥಗಳು, ಸ್ಮೃತಿ ಸಾಹಿತ್ಯದ ಮೂರು ವಿಭಾಗಗಳು, ಮತಗಳು ಹಾಗೂ ಮತಾಚಾರ್ಯರು, ಜೈನ ಮತ್ತು ಬೌದ್ಧ ಮತಗಳು, ವಿಗ್ರಹಾರಾಧನೆ ಆರಂಭ, ಐಕ್ಯ ಇದ್ದರೂ ವೈವಿಧ್ಯಮಯ ಧರ್ಮ- ಇತ್ಯಾದಿ ಉಪಶೀರ್ಷಿಕೆಗಳಲ್ಲಿ ಪಾಠವನ್ನು ಸಮಿತಿ ರೂಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸ್ಮೃತಿ ಸಾಹಿತ್ಯದ ಮೂರು ವಿಭಾಗಗಳು’ ಉಪಶೀರ್ಷಿಕೆಯಲ್ಲಿ ಬರೆಯುತ್ತಾ, “ಧರ್ಮಶಾಸ್ತ್ರವು ವ್ಯಕ್ತಿಯ ಧಾರ್ಮಿಕ ಬದುಕಿಗೆ ಮತ್ತು ಸುಸಂಸ್ಕೃತ ಸಮಾಜ ವ್ಯವಸ್ಥೆಗೆ ಅಗತ್ಯವಾದ ನಿಯಮಗಳನ್ನು ತಿಳಿಸುತ್ತದೆ. ಮನುಸ್ಮೃತಿ, ಯಾಜ್ಞವಲ್ಕ್ಯ ಸ್ಮೃತಿ, ಪರಾಶನ ಸ್ಮೃತಿ ಮುಂತಾದ ಹಲವು ಗ್ರಂಥಗಳಲ್ಲಿ ಸಮಾಜವು ಧರ್ಮಮಾರ್ಗದಲ್ಲಿ ಹೇಗೆ ನಡೆಯಬೇಕೆಂಬ ಸೂಚನೆಗಳಿವೆ” ಎಂದು ಉಲ್ಲೇಖಿಸಲಾಗಿದೆ.

ರಾಮಾಯಣ ಮಹಾಭಾರತ ಐತಿಹಾಸಿಕ ಕೃತಿ

“ಸ್ಮೃತಿ ಸಾಹಿತ್ಯದ ಎರಡನೆ ಭಾಗ ಐತಿಹಾಸ ಗ್ರಂಥಗಳೆನಿಸುವ ರಾಮಾಯಣ, ಮಹಾಭಾರತ; ಹದಿನೆಂಟು ಪುರಾಣಗಳು ಹಾಗೂ ಅಷ್ಟೇ ಸಂಖ್ಯೆಯ ಉಪಪುರಾಣಗಳು. ಅಂತೆಯೇ ಪೌರಾಣಿಕ ಉಪನಿಷತ್ತುಗಳು ಹಾಗೂ ಪೌರಾಣಿಕ ಗೀತೆಗಳು ಈ ಭಾಗದಲ್ಲಿ ಬರುತ್ತವೆ” ಎಂಬ ವಿವರಣೆಯನ್ನು ಇದೇ ಪಾಠದಲ್ಲಿ ಬರೆಯಲಾಗಿದೆ. ರಾಮಾಯಣ ಮತ್ತು ಮಹಾಭಾರತಗಳನ್ನು ಇತಿಹಾಸ ಪಠ್ಯಗಳೆಂದು ಸಂಘಪರಿವಾರ ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದು, ಈಗ ಆ ಪ್ರತಿಪಾದನೆ ಪಠ್ಯವನ್ನೂ ಸೇರಿದೆ.

ಮನುಸ್ಮೃತಿಯನ್ನು ಸುಟ್ಟು ಹಾಕಿದ್ದರು ಬಾಬಾ ಸಾಹೇಬರು

ಒಂದೆಡೆ “ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌” ಎಂಬ ಸಾಲನ್ನು ಕಿತ್ತು ಹಾಕಿರುವ ಸಮಿತಿ, ಅದೇ ಅಂಬೇಡ್ಕರ್‌ ಅವರು ಸುಟ್ಟು ಹಾಕಿದ ‘ಮನುಸ್ಮೃತಿ’ಯನ್ನು ಶ್ಲಾಘಿಸಿರುವುದು ಪಠ್ಯದಲ್ಲಿ ಕಂಡು ಬರುತ್ತಿದೆ.

ಶೂದ್ರರು, ಮಹಿಳೆಯರು ಮತ್ತು ಪಂಚಮರನ್ನು ಅಂತ್ಯಂತ ನಿಷ್ಕೃತವಾಗಿ ಕಾಣುವ ಮನುಸ್ಮೃತಿಯನ್ನು ಡಾ.ಬಿ.ಆರ್‌.ಅಂಬೇಡ್ಕರ್‌ ಸಾರ್ವಜನಿಕವಾಗಿ ಸುಟ್ಟು ಹಾಕಿ ಪ್ರತಿಭಟಿಸಿದ್ದು ಈಗ ಇತಿಹಾಸ.

ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ ಭಾರತೀಯ ಸುಪ್ತ ಮನಸ್ಸನ್ನು ಆಳುತ್ತಿರುವ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಡಾ‌. ಬಿ.ಆರ್. ಅಂಬೇಡ್ಕರ್ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಿದ ದಿನವದು.

ಭಾರತದ ಹಿಂದೂ ಮನಸ್ಸು ಬದಲಾಗಬಹುದು, ಹಿಂದೂ ಧರ್ಮವನ್ನು ಒಳಗಿದ್ದುಕೊಂಡೇ ಸುಧಾರಿಸಬಹುದೇನೋ ಎನ್ನುವ ನಂಬಿಕೆಯಲ್ಲಿ ಮಹಾಡ್, ಚೌಡಾರ್ ಸತ್ಯಾಗ್ರಹಗಳನ್ನು ನಡೆಸಿದ ಅಂಬೇಡ್ಕರ್ ಅವರಿಗೆ ದೊಡ್ಡ ನಿರಾಶೆ ಕಾದಿತ್ತು. ಆಗಿನ ಸರ್ಕಾರ 1923 ರಲ್ಲೆ The Bole Resolution ಮೂಲಕ ಸಾರ್ವಜನಿಕ ಹಣದಲ್ಲಿ ನಿರ್ಮಾಣವಾಗಿರುವ ಕೆರೆಗೆಳು, ಬಾವಿಗಳು, ಧರ್ಮಶಾಲೆಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಮುಕ್ತವಾಗಿರಬೇಕು ಅನ್ನುವ ಕಾಯ್ದೆ ತಂದಿದ್ದರೂ ಅಸ್ಪೃಶ್ಯರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ತಮಗೆ ಇದ್ದ ಹಕ್ಕನ್ನು ಪಡೆಯುವುದಕ್ಕಾಗಿಯೇ ಅಂಬೇಡ್ಕರ್ ಚೌಡಾರ್ ಕೆರೆ ನೀರನ್ನು ಸಾರ್ವಜನಿಕವಾಗಿ ಕುಡಿಯುವ ಚಳುವಳಿಯನ್ನು ಆಯೋಜಿಸಿದರು. ಆದರೆ ಅಸ್ಪೃಶ್ಯರು ಮುಟ್ಟಿದ್ದಕ್ಕಾಗಿ ಕೆರೆಯೆ ಮಲಿನವಾಯಿತೆಂದು ಗೋಳಾಡಿದ ಸವರ್ಣೀಯ ಜನ ಹಸುವಿನ ಸಗಣಿ, ಗಂಜಲ, ಹಾಲು, ತುಪ್ಪ, ಮೊಸರನ್ನು ಸುರಿದು ವೇದಗಳನ್ನು ಪಠಿಸುತ್ತಾ ಕೆರೆಯ ‘ಶುದ್ದೀಕರಣ’ ಮಾಡಿದರು. ದಲಿತರು ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಿದರೆ ವಿದ್ಯಾವಂತ, ಪ್ರಗತಿಪರ ಹಿಂದೂಗಳು ಅವರ ಜೊತೆಗೂಡಿ ಹೋರಾಟ ಮಾಡಬಹುದು ಹಿಂದೂ ಧರ್ಮ ಸುಧಾರಣೆಗೆ ಇದು ಕೂಡ ನೆರವಾಗಬಹುದು ಎಂಬ ಅಂಬೇಡ್ಕರ್ ನಿರೀಕ್ಷೆ ಸುಳ್ಳಾಯಿತು. ಮಹಾಡ್, ಚೌಡಾರ್ ಸತ್ಯಾಗ್ರಹಗಳಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಹಿಂಸಾತ್ಮಕವಾದ ದಾಳಿಗಳನ್ನು ಮೇಲ್ಜಾತಿಗಳು ಮಾಡಿದವು.

ಇದನ್ನೂ ಓದಿರಿ: ಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

ಇದಾದ ಒಂಬತ್ತು ತಿಂಗಳ ನಂತರ ಚೌಡಾರ್ ಸತ್ಯಾಗ್ರಹವನ್ನು ಅಂಬೇಡ್ಕರ್ ಆಯೋಜಿಸಿದರು. ಆಗ ಮತ್ತೆ ಸವರ್ಣೀಯರು ಹಿಂದೂಗಳು ಚೌಡಾರ್ ಕೆರೆ ಸಾರ್ವಜನಿಕ ಆಸ್ತಿಯಲ್ಲ ಖಾಸಗಿ ಸ್ವತ್ತು ಎಂದು ಕೋರ್ಟಿಗೆ ಹೋದರು. ಸತ್ಯಾಗ್ರಹ ತಡೆಯಲು ಪ್ರಯತ್ನ ಮಾಡಿದರು. ಇಷ್ಟೆಲ್ಲ ಪ್ರತಿಕೂಲ ಸನ್ನಿವೇಶಗಳ ನಡುವೆಯೂ ಸತ್ಯಾಗ್ರಹ ನಡೆಸಿದ ಅಂಬೇಡ್ಕರ್ ಡಿಸೆಂಬರ್ 25, 1927 ರಂದು ಹಿಂದೂ ಧರ್ಮದ ಆಧಾರವಾಗಿರುವ, ಬ್ರಾಹ್ಮಣ್ಯವನ್ನು ಎತ್ತಿ ಹಿಡಿಯುವ ಸೈದ್ದಾಂತಿಕ ಗ್ರಂಥವಾಗಿರುವ ‘ಮನುಸ್ಮೃತಿ’ಯನ್ನು ಸಾರ್ವಜನಿಕವಾಗಿ ಸುಟ್ಟು ಹಿಂದೂ ಧರ್ಮದ ಕರ್ಮಠತನ, ಅಸಮಾನತೆಯ ವಿರುದ್ಧ ಸಮರ ಸಾರಿದರು.

ವಿಶೇಷವೆಂದರೆ ಈ ಸಮಾವೇಶದಲ್ಲಿ ಮನುಸ್ಮೃತಿಗೆ ಸಾರ್ವಜನಿಕವಾಗಿ ಬೆಂಕಿ ಇಟ್ಟವರು ಬಾಪೂಸಾಹೇಬ ಸಹಸ್ರಬುದ್ಧೆ ಎನ್ನುವ ಪ್ರಗತಿಪರ ಬ್ರಾಹ್ಮಣರು. ಇದಾದ ಮೇಲೆ ಹಿಂದೂ ಧರ್ಮದ ಒಳಗಿದ್ದು ಅದನ್ನು ಸುಧಾರಿಸುವುದು ಸಾಧ್ಯವಿಲ್ಲ ಎಂದು ಮನಗಂಡು ಅಂಬೇಡ್ಕರ್ ಹಿಂದೂ ಧರ್ಮ ತ್ಯಜಿಸುವ ನಿರ್ಧಾರ ಮಾಡಿದರು‌. ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದು ಸಾರ್ವಜನಿಕವಾಗಿ ಘೋಷಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...