Homeರಾಷ್ಟ್ರೀಯಪ್ರವಾದಿ ನಿಂದನೆ ವಿವಾದ ಹಿನ್ನಲೆ: ಪಕ್ಷದ ಪರವಾಗಿ ಚರ್ಚೆಗಳಲ್ಲಿ ಭಾಗವಹಿಸುವವರಿಗೆ ಹೊಸ ನಿಯಮ ಹೇರಿದ ಬಿಜೆಪಿ

ಪ್ರವಾದಿ ನಿಂದನೆ ವಿವಾದ ಹಿನ್ನಲೆ: ಪಕ್ಷದ ಪರವಾಗಿ ಚರ್ಚೆಗಳಲ್ಲಿ ಭಾಗವಹಿಸುವವರಿಗೆ ಹೊಸ ನಿಯಮ ಹೇರಿದ ಬಿಜೆಪಿ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದ ಪಕ್ಷದ ನಾಯಕಿ, ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಯ ನಂತರ ಒಕ್ಕೂಟ ಸರ್ಕಾರವು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಒತ್ತಡಕ್ಕೆ ಸಿಲುಕಿದೆ. ಈ ನಡುವೆ ಆಡಳಿತಾರೂಢ ಬಿಜೆಪಿ ತನ್ನ ಪಕ್ಷದ ವಕ್ತಾರರು ಮತ್ತು ಟಿವಿ ಚರ್ಚೆಗಳಲ್ಲಿ ಭಾಗವಹಿಸುವ ನಾಯಕರಿಗೆ ಹೊಸ ನಿಯಮಗಳನ್ನು ನಿಗದಿಪಡಿಸಿದೆ.

ಅಧಿಕೃತ ವಕ್ತಾರರು ಮತ್ತು ಪ್ಯಾನೆಲಿಸ್ಟ್‌ಗಳು ಮಾತ್ರ ಟಿವಿ ಚರ್ಚೆಗಳಲ್ಲಿ ಭಾಗವಹಿಸುವುದಾಗಿ ಬಿಜೆಪಿ ಮೂಲಗಳು ಹೇಳಿದ್ದು, ಅವರನ್ನು ಮಾಧ್ಯಮ ಸೆಲ್ ನಿಯೋಜಿಸುತ್ತದೆ. ಹೀಗೆ ಭಾಗವಹಿಸುವರಿಗೆ ಯಾವುದೇ ಧರ್ಮ, ಅದರ ಚಿಹ್ನೆಗಳು ಅಥವಾ ಧಾರ್ಮಿಕ ವ್ಯಕ್ತಿಗಳನ್ನು ಟೀಕಿಸದಂತೆ ಎಚ್ಚರಿಕೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೀವ್ರ ಚರ್ಚೆಯ ವೇಳೆ ಕೂಡಾ ಬಿಜೆಪಿ ಪ್ಯಾನೆಲಿಸ್ಟ್‌ಗಳು ತಮ್ಮ ಗಡಿಯನ್ನು ದಾಟದಂತೆ ನಿರ್ಬಂಧ ಹೇರಲಾಗಿದ್ದು, ಅವರು ತಮ್ಮ ಭಾಷೆಯನ್ನು ಸಂಯಮದಲ್ಲಿಟ್ಟುಕೊಳ್ಳಬೇಕು ಎಂದು ಬಿಜೆಪಿ ಹೇಳಿದೆ. ಯಾವುದೇ ಸಮಯದಲ್ಲಿ ಉದ್ರೇಕಗೊಳ್ಳಬಾರದು ಎಂದು ಪಕ್ಷವು ತಿಳಿಸಿದ್ದು, ಯಾವುದೇ ಪ್ರಚೋದನೆಗೂ ಪಕ್ಷದ ಸಿದ್ಧಾಂತ ಅಥವಾ ಆದರ್ಶಗಳನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಪಕ್ಷವು ತನ್ನ ನಿಯಮದಲ್ಲಿ ಹೇಳಿದೆ.

ಇದನ್ನೂ ಓದಿ: ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ವ್ಯಂಗ್ಯ

ಟಿವಿ ಚರ್ಚೆಯ ವಿಷಯವನ್ನು ಮೊದಲು ಪರಿಶೀಲಿಸಿ, ಅದಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಚಾನೆಲ್‌ನಲ್ಲಿ ಕಾಣಿಸಿಕೊಳ್ಳುವ ಮೊದಲು ಅದರ ಬಗ್ಗೆ ಪಕ್ಷದ ನಿಲುವೇನು ಎಂದು ತಿಳಿದುಕೊಳ್ಳುವಂತೆ ಬಿಜೆಪಿ ತನ್ನ ವಕ್ತಾರರಿಗೆ ಆದೇಶಿಸಿದೆ.

“ಪಕ್ಷದ ವಕ್ತಾರರು ಮತ್ತು ಪ್ಯಾನೆಲಿಸ್ಟ್‌ಗಳು ತಮ್ಮ ಅಜೆಂಡಾದಲ್ಲಿ ಉಳಿಯಬೇಕು. ಅವರು ಯಾವುದೇ ಬಲೆಗೆ ಬೀಳಬಾರದು” ಎಂದು ಪಕ್ಷವು ಹೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ತನ್ನ ವಕ್ತಾರರು ಸರ್ಕಾರದ ಸಮಾಜ ಕಲ್ಯಾಣ ಕಾರ್ಯಗಳತ್ತ ಗಮನ ಹರಿಸಬೇಕೆಂದು ಬಿಜೆಪಿ ಬಯಸುತ್ತಿದೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಸುಮಾರು 10 ದಿನಗಳ ಹಿಂದೆ ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಇದರ ನಂತರ ಪಕ್ಷದ ಮತ್ತೊಬ್ಬ ನಾಯಕ ನವೀನ್ ಜಿಂದಾಲ್ ಪ್ರವಾದಿ ಕುರಿತು ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

ತನ್ನ ನಾಯಕರ ಹೇಳಿಕೆಯನ್ನು ಪಕ್ಷವು ಖಂಡಿಸಿದ್ದು ನೂಪುರ್‌ ಅವರನ್ನು ಅಮಾನತು ಮಾಡಿದ್ದು, ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಒಕ್ಕೂಟ ಸರ್ಕಾರ ಈ ವಿವಾದಾತ್ಮಕ ಹೇಳಿಕೆಗಳಿಂದ ಅಂತರ ಕಾಯ್ದುಕೊಂಡಿದ್ದು, ಅವರನ್ನು “ಫ್ರಿಂಜ್ ಎಲಿಮೆಂಟ್‌ಗಳು” ಎಂದು ಕರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...