Homeರಾಷ್ಟ್ರೀಯಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ...

ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ!

ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ

- Advertisement -
- Advertisement -

ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿವೆ. ಈ ಪೈಕಿ 27 ಚುನಾಯಿತ ನಾಯಕರಿಗೆ ಇಂತಹ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದ್ದು, ಧಾರ್ಮಿಕ ವಿಚಾರಗಳ ಕುರಿತು ಹೇಳಿಕೆ ನೀಡುವ ಮುನ್ನ ಪಕ್ಷದಿಂದ ಅನುಮತಿ ಪಡೆಯುವಂತೆ ಸೂಚಿಸಲಾಗಿದೆ.

ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಮತ್ತು ದೆಹಲಿ ಬಿಜೆಪಿ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಅವರ ವಿರುದ್ಧ ಕ್ರಮ ಕೈಗೊಂಡ ನಂತರ ಪಕ್ಷವು ಈ ಬಗ್ಗೆ ಕಾರ್ಯಪ್ರವೃತ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ 8 ವರ್ಷಗಳಿಂದ (ಸೆಪ್ಟೆಂಬರ್ 2014 ರಿಂದ ಮೇ 3, 2022 ರವರೆಗೆ) ನಾಯಕರ ಹೇಳಿಕೆಗಳನ್ನು ಐಟಿ ತಜ್ಞರ ಸಹಾಯದಿಂದ ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಸುಮಾರು 5,200 ಹೇಳಿಕೆಗಳು ಅನಗತ್ಯವೆಂದು ಕಂಡುಬಂದಿದೆ. 2,700 ಹೇಳಿಕೆಗಳ ಪದಗಳು ಸೂಕ್ಷ್ಮವಾಗಿರುವುದು ಕಂಡುಬಂದಿದೆ. 38 ನಾಯಕರ ಹೇಳಿಕೆಗಳನ್ನು ಧಾರ್ಮಿಕ ನಂಬಿಕೆಗಳಿಗೆ ನೋವುಂಟು ಮಾಡುವ ವರ್ಗದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: ಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ ಬಂಧನ

ಅನಂತ್ ಕುಮಾರ್ ಹೆಗಡೆ, ಶೋಭಾ ಕರಂದ್ಲಾಜೆ, ಗಿರಿರಾಜ್ ಸಿಂಗ್, ತಥಾಗತ ರೈ, ಪ್ರತಾಪ್ ಸಿಂಹ, ವಿನಯ್ ಕಟಿಯಾರ್, ಮಹೇಶ್ ಶರ್ಮಾ, ಟಿ.ರಾಜ ಸಿಂಗ್, ವಿಕ್ರಮ್ ಸಿಂಗ್ ಸೈನಿ, ಸಾಕ್ಷಿ ಮಹಾರಾಜ್, ಸಂಗೀತ್ ಸೋಮ್ ಸೇರಿದಂತೆ ಹಲವು ಬಿಜೆಪಿ ನಾಯಕರು ದ್ವೇಷದ ಭಾಷಣ ಮಾಡುತ್ತಾರೆ ಎಂದು ಪಕ್ಷವು ನಿರ್ಧರಿಸಿದೆ ಎಂದು ದೈನಿಕ್ ಬಾಸ್ಕರ್‌ ವರದಿ ಮಾಡಿದೆ.

ಕುವೈತ್: ಭಾರತದಲ್ಲಿ ತಯಾರಾದ ವಸ್ತುಗಳ ಮಾರಾಟ ಸ್ಥಗಿತ

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಅರಬ್ ರಾಷ್ಟ್ರಗಳಲ್ಲಿ ಭಾರತವನ್ನು ಬಹಿಷ್ಕರಿಸುವಂತೆ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್‌ ಆಗಿದೆ. ಈ ಮಧ್ಯೆ, ಕುವೈತ್‌ನ ಕೆಲವು ಸೂಪರ್‌ ಮಾರ್ಕೆಟ್‌ಗಳಲ್ಲಿ ಭಾರತದಲ್ಲಿ ತಯಾರಾದ ಉತ್ಪನ್ನಗಳ ಮಾರಾಟವನ್ನು ನಿಲ್ಲಿಸಿವೆ.

ದೇಶದ ಆಡಳಿತ ಪಕ್ಷದ ನಾಯಕರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿದ್ದು, ಇದಕ್ಕಾಗಿ ನೀವು ಕ್ಷಮೆಯಾಚಿಸಬೇಕು ಎಂದು ಕುವೈತ್ ಸರ್ಕಾರ ಆಗ್ರಹಿಸಿದೆ. ಯುಎಇ, ಜೋರ್ಡಾನ್ ಮತ್ತು ಇಂಡೋನೇಷ್ಯಾ ಸೇರಿದಂತೆ ವಿಶ್ವದ 17 ರಾಷ್ಟ್ರಗಳು ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

OIC ಹೇಳಿಕೆ ಅನಗತ್ಯ: ಭಾರತ

ಮುಸ್ಲಿಮರ ಹಕ್ಕುಗಳ ರಕ್ಷಣೆಯನ್ನು ಖಾತ್ರಿಪಡಿಸುವಂತೆ ‘ಇಸ್ಲಾಮಿಕ್ ಸಹಕಾರ ಸಂಘಟನೆ’ (OIC)  ವಿಶ್ವಸಂಸ್ಥೆಗೆ ಒತ್ತಾಯಿಸಿದೆ. ಒಐಸಿ ಹೇಳಿಕೆಗೆ ಭಾರತ ಆಕ್ಷೇಪ ವ್ಯಕ್ತಪಡಿಸಿದ್ದು, ಅದನ್ನು ‘ಸಂಕುಚಿತ’ ಎಂದು ಬಣ್ಣಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಕೆಲವು ಜನರ ಅಸಭ್ಯ ಹೇಳಿಕೆಗಳು ಭಾರತ ಸರ್ಕಾರವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The argument which put forward is confusing. Ruling patty leaders statement is government’s statement and it’s impact is fatal. Govt.has take actions against them control them.

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...