Homeಕರ್ನಾಟಕ‘ಹತ್ತು ದಿನದಲ್ಲಿ ಪಠ್ಯದಲ್ಲಿರುವ ಲೋಪ ತಿದ್ದಿ’: ಸರ್ಕಾರಕ್ಕೆ ಗಡುವು ನೀಡಿದ ಲಿಂಗಾಯತ ಮಠಾಧೀಶರು

‘ಹತ್ತು ದಿನದಲ್ಲಿ ಪಠ್ಯದಲ್ಲಿರುವ ಲೋಪ ತಿದ್ದಿ’: ಸರ್ಕಾರಕ್ಕೆ ಗಡುವು ನೀಡಿದ ಲಿಂಗಾಯತ ಮಠಾಧೀಶರು

- Advertisement -
- Advertisement -

ಸಮಾಜ ಸುಧಾರಕ ಬಸವಣ್ಣನವರ ಬಗ್ಗೆ ಶಾಲಾ ಪಠ್ಯ ಪುಸ್ತಕದಲ್ಲಿ ಆಗಿರುವ ಲೋಪದೋಷಗಳನ್ನು ಸರ್ಕಾರ ಹತ್ತು ದಿನಗಳ ಒಳಗಾಗಿ ಸರಿಪಡಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಉತ್ತರ ಕರ್ನಾಟಕದ ಪ್ರಮುಖ ಲಿಂಗಾಯತ ಮಠಾಧೀಶರು ಸರ್ಕಾರಕ್ಕೆ ಎಚ್ಚರಿಕೆಯ ಜೊತೆಗೆ ಗಡುವು ನೀಡಿದ್ದಾರೆ. ಧಾರವಾಡದ ಕಲ್ಯಾಣ ನಗರದಲ್ಲಿರುವ ಶ್ರೀಸಿದ್ದರಾಮೇಶ್ವರ ಮಾರ್ಗದರ್ಶಿಯಲ್ಲಿ ಮಂಗಳವಾರ ಸುದೀರ್ಘ ಐದು ಗಂಟೆಗಳ ಸಭೆ ನಡೆಸಿದ 21 ಲಿಂಗಾಯತ ಮಠಾಧೀಶರು ಈ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.

“ಸಮಾಜ ವಿಜ್ಞಾನ ಭಾಗ-1ರ 9ನೇ ತರಗತಿ ಪಠ್ಯಪುಸ್ತಕವನ್ನು ಶೀಘ್ರ ಬದಲಿಸಬೇಕು. ಹತ್ತು ದಿನಗಳ ಒಳಗೆ ಬದಲಿಸಲು ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ರೂಪಿಸುತ್ತೇವೆ” ಎಂದು ಸಾಣೆಹಳ್ಳಿ ತರಳುಬಾಳು ಮಹಾಸಂಸ್ಥಾನದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಠಾಧೀಶರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಣೆಹಳ್ಳಿ ಸ್ವಾಮೀಜಿ, “9ನೇ ತರಗತಿಗೆ ಇರುವ ಸಮಾಜ ವಿಜ್ಞಾನ ಭಾಗ 1ರ ಪಠ್ಯದಲ್ಲಿ ಹಲವು ದೋಷಗಳನ್ನು ಗುರುತಿಸಿದ್ದೇನೆ. ವೈದಿಕ ಪರಂಪರೆಯನ್ನು ಬಿಂಬಿಸುವ ಕೆಲಸವನ್ನು ವ್ಯವಸ್ಥಿತವಾಗಿ ಈ ಪಠ್ಯದಲ್ಲಿ ನಡೆಸಲಾಗಿದೆ” ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ

“ವೈದಿಕ ಪರಂಪರೆ ಧಿಕ್ಕರಿಸಿದ್ದ ಬಸವಣ್ಣನವರಿಗೆ ಯಾವುದೇ ಶೈವ ಗುರುಗಳು ದೀಕ್ಷೆ ಕೊಟ್ಟಿಲ್ಲ. ಆದರೆ ಪುಸ್ತಕದಲ್ಲಿ ಮಾತ್ರ ಶೈವ ಗುರುಗಳು ದೀಕ್ಷೆ ಕೊಟ್ಟರು ಎಂಬ ಉಲ್ಲೇಖವಿದೆ. ಈ ಸಂಬಂಧ ನಾವು ಮಠಾಧೀಶರು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಕೊಟ್ಟಿದ್ದೇವೆ. ಅವರು ಬಸವೇಶ್ವರರ ಪಠ್ಯದಲ್ಲಿರುವ ದೋಷಗಳನ್ನು ಸರಿಪಡಿಸುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಮಗ್ರವಾಗಿ ಚರ್ಚೆ ಮಾಡಿದ್ದೇವೆ. ಮುಂದೆ ಪಠ್ಯದಲ್ಲಿ ಎಲ್ಲಿಯೂ ಕೂಡ ಬಸವ ತತ್ವಕ್ಕೆ ಅಪಚಾರ ಆಗಬಾರದು. ಬಸವ ತತ್ವವನ್ನು ಸರಳವಾಗಿ ಬಿಂಬಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಬಸವೇಶ್ವರರು ಮತ್ತು ಅವರ ಪ್ರತಿಪಾದಿಸುತ್ತಿದ್ದ ವಿಷಯಗಳ ಬಗ್ಗೆ ನಾವೇ ಹೊಸ ಪಠ್ಯವೊಂದನ್ನು ರಚಿಸಿ, ಮುಖ್ಯಮಂತ್ರಿಗೆ ಕಳುಹಿಸುತ್ತೇವೆ. ಅದನ್ನು ಸರ್ಕಾರ ಒಪ್ಪಿಕೊಂಡರೆ ಸಂತೋಷ ಪಡುತ್ತೇವೆ. ನಾಳೆಯೇ ಎಲ್ಲರೂ ಸೇರಿ ಒಂದು ಮನವಿ ಕೊಡುತ್ತೇವೆ. ಈಗ ಇರುವ ಪಠ್ಯವನ್ನು ಹತ್ತು ದಿನಗಳಲ್ಲಿ ಬದಲಿಸಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ಉಗ್ರ ರೀತಿಯ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

ಎಲ್ಲ ಮಹನೀಯರ ಪಠ್ಯವೂ ಸರಿಯಾಗಲಿ

ಪಠ್ಯ ಪುಸ್ತಕದಲ್ಲಿ ಕೇವಲ ಬಸವಣ್ಣ ಮಾತ್ರವಲ್ಲ, ಕುವೆಂಪು, ಡಾ ಬಿ.ಆರ್.ಅಂಬೇಡ್ಕರ್, ನಾರಾಯಣಗುರು ಸೇರಿದಂತೆ ಎಲ್ಲ ಮಹನೀಯರ ಕುರಿತು ಆಗಿರುವ ಲೋಪದೋಷಗಳನ್ನು ಕೂಡಲೇ ಸರ್ಕಾರ ಸರಿ ಮಾಡಬೇಕು. ಕೆಲವು ಸಾಹಿತಿಗಳು ಈಗಾಗಲೇ ತಮ್ಮ ಲೇಖನಗಳನ್ನು ಹಿಂದಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಆದರೆ ಲೋಪದೋಷ ಸರಿಪಡಿಸಿದರೆ ಅವರು ಮರಳಿ ಕೊಡುವ ವಿಶ್ವಾಸವಿದೆ ಎಂದು ಗದಗ ತೋಂಟದಾರ್ಯ ಮಠದ ಡಾ ತೋಂಟದ ಸಿದ್ದರಾಮ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವುಗಳಿಗೆ ಸರ್ಕಾರ ಗಮನ ಕೊಡದೇ ನೇರವಾಗಿ ಬಸವ ತತ್ವ ಮತ್ತು ವಚನ ಸಾಹಿತ್ಯವನ್ನು ಗಮನದಲ್ಲಿಟ್ಟುಕೊಂಡು ಲೋಪದೋಷಗಳನ್ನು ತಿದ್ದುಪಡಿ ಮಾಡಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಸ್ವಾಮೀಜಿಗಳು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...