Homeಕರ್ನಾಟಕಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

ಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

“ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ...”

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿ ರೂಪಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬರುತ್ತಿತ್ತು, ಈಗ ಸ್ಮಾರ್ತ ಬ್ರಾಹ್ಮಣರು, ಸಮಿತಿಯ ಎಡವಟ್ಟಿನ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾಘವಾಂಕ ರಚಿತ ಕಾವ್ಯ ಭಾಗವನ್ನು ಒಂಬತ್ತನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ  ನೀಡಲಾಗಿದೆ. “ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು” ಪದ್ಯದ ಕುರಿತ ಅಭ್ಯಾಸ ಭಾಗದಲ್ಲಿ ಶಂಕರಾಚಾರ್ಯರಿಗೆ ಅವಮಾನ ಮಾಡಲಾಗಿದೆ ಎಂದು ಸ್ಮಾರ್ತ ಬ್ರಾಹ್ಮಣರು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


‘ಭಾಷೆಯ ಸೊಬಗು’
ಎಂಬ ಅಭ್ಯಾಸ ಭಾಗವನ್ನು ಚಕ್ರತೀರ್ಥ ಸಮಿತಿ ಸೇರಿಸಿದ್ದು ಅಲ್ಲಿನ ಸಾಲುಗಳು ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ.

“ಕನ್ನಡದಲ್ಲಿರುವ ಶ, ಷ, ಸ ವರ್ಣಗಳಿಗೆ ಉಚ್ಚಾರದಲ್ಲಿ ವ್ಯತ್ಯಾಸಗಳಿವೆ ಎಂಬುದನ್ನು ಗಮನಿಸಿ. ಈ ಮೂರು ವರ್ಣ (ಅಥವಾ ಅಕ್ಷರ)ಗಳನ್ನು ಬಳಸುವಾಗ ನಾವು ಅರ್ಥ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು. ಉದಾಹರಣೆಗೆ ಶಕಲ- ಒಂದು ಸಣ್ಣ ತುಂಡು ಅಥವಾ ಸಣ್ಣ ಭಾಗ ಎಂದು ಅರ್ಥ. ಆದರೆ ಸಕಲ ಎಂದಾಗ ಇಡಿಯಾದ, ಪೂರ್ಣವಾದ, ಎಲ್ಲ- ಎಂಬ ಅರ್ಥಗಳು ಬರುತ್ತವೆ. ಎರಡೂ ಪರಸ್ಪರ ವಿರುದ್ಧಾರ್ಥಗಳನ್ನು ಕೊಡುವ ಪದಗಳು!

ಹಾಗೆಯೇ, ಶಂಕರ ಎಂದರೆ ಮಂಗಳವನ್ನುಂಟುಮಾಡುವವನು, ಶಿವ ಎಂದು ಅರ್ಥ. ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ.

ಶರ್ವ ಎಂಬುದು ಶಿವ ಮತ್ತು ವಿಷ್ಣು ದೇವರುಗಳಿಗೆ ಇರುವ ಒಂದು ಹೆಸರು ಸರ್ವ ಎಂದರೆ ಎಲ್ಲ ಅಥವಾ ಸಮಗ್ರ ಎಂದು ಅರ್ಥವಾಗುತ್ತದೆ. ದೋಷ ಎಂದರೆ ತಪ್ಪು ಎಂಬರ್ಥವೂ ಹೊಮ್ಮಿದರೆ ದೋಸ ಎಂಬುದು ದೋಸೆಯ ಅಪಭ್ರಂಶವಾಗಿ ಇಂದು ಬಳಕೆಯಲ್ಲಿರುವ ಪದವಾಗಿದೆ. ಹಾಗೆಯೇ ಶರ ಎಂದರೆ ಬಾಣ ಎಂಬ ಅರ್ಥವಾದರೆ ಸರ ಎಂಬುದು ಕೊರಳಮಾಲೆ ಎಂಬ ಅರ್ಥವನ್ನು ಕೊಡುತ್ತದೆ. ಹೀಗೆ ಅಕ್ಷರಗಳ ವ್ಯತ್ಯಾಸವಾದಾಗ ಅರ್ಥವ್ಯತ್ಯಾಸವಾಗುವ ಶಬ್ದಗಳನ್ನು ಪಟ್ಟಿ ಮಾಡಿ.

 

 ಹೀಗೆ ಅಭ್ಯಾಸ ಪಠ್ಯವನ್ನು ರೂಪಿಸಲಾಗಿದೆ.

ಮಾಧ್ವರು ಹಾಗೂ ಸ್ಮಾರ್ತ ಬ್ರಾಹ್ಮಣರ ನಡುವಿನ ವಿವಾದ ಇಂದು ಮೊನ್ನೆಯದ್ದಲ್ಲ. ಆದರೆ ವಿವಾದಕ್ಕೆ ಪಠ್ಯಪುಸ್ತಕವೂ ಉಪ್ಪು ಸುರಿದಿದೆ. ಫೇಸ್‌ಬುಕ್‌ನಲ್ಲಿರುವ “ಶ್ರೀಶ್ರೀ ಶಂಕರಾಚಾರ್ಯರ “ನಿಂದಾ ನಿರ್ಮೂಲನ ಅಭಿಯಾನ” ಎಂಬ ಗ್ರೂಪ್‌ನಲ್ಲಿ ಈ ವಿಷಯ ಪ್ರಸ್ತಾಪವಾಗಿದೆ.

ಶ್ರಿನಾಥ್‌ ಋಗ್ವೇದಿ ಎಂಬವರು ಪೋಸ್ಟ್ ಮಾಡಿದ್ದು, “ನೂತನವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥರಿಗೆ ಅಭಿನಂದನೆಗಳು. ಪಠ್ಯ ಪುಸ್ತಕದಲ್ಲಿ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್‌ರ ಮತ್ತು ಚಕ್ರವರ್ತಿ ಸೂಲಿಬೆಲೆಗಳ ಪಾಠ ಪುಸ್ತಕಕ್ಕೆ ತೂಕ ತಂದಿದೆ. ದೇಶಿಯ ವಿಚಾರಗಳನ್ನು ಅಳವಡಿಸಿರುವುದು ಪ್ರಶಂಸನೀಯ. ಆದರೆ 9ನೇ ತರಗತಿಯ ಮಕ್ಕಳಿಗೆ ಉದಾಹರಣೆ ಕೊಡುವಾಗ ಭಾರತದ ಪ್ರಪಥಮ ಆಚಾರ್ಯರಾದ ಜಗದ್ಗುರು ಶಂಕರಾಚಾರ್ಯರ ಹೆಸರನ್ನು ಸಂಕರ ಎಂದರೆ ಕಲಬೆರಿಕೆ ಎಂದು ಹಾಕಿರುವುದು ಖಂಡನೀಯ. ಉಚ್ಚರಣೆಯ ದೋಷಗಳನ್ನು ತಿಳಿಸಿಕೊಡಬೇಕಾದರೆ ಬೇರೆ ಉದಾಹರಣೆ ಸಿಗಲಿಲ್ವಾ ನಿಮಗೆ. ಅದನ್ನು ಹಾಕುವ ಅವಶ್ಯವಾದರೂ ಏನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. “ಬ್ರಾಹ್ಮಣರ ಒಗ್ಗಟ್ಟು ಒಗ್ಗಟ್ಟು ಅಂತಿದ್ದವರು ಈಗ ಬಾಯಿ ಬೊಡ್ಕೊಳ್ಳಿ. ಹುಟ್ಟ ಗುಣ ಸುಟ್ಟರೂ ಹೋಗೋಲ್ಲ ಅಂತ ಗಾದೇನೆ ಇದೆ. ಹಿಂಗಿದ್ದಾಗ ಹೋಗಿ ಹೋಗಿ ಅವನ ಕೈಯಲ್ಲಿ ಪುಸ್ತಕ ಪರಿಷ್ಕರಣೆ ಮಾಡೋಕ್ಕೆ ಬಿಟ್ಟರೆ ಅವರ ಬುದ್ದಿ ತೋರಿಸದೆ ಇರ್ತಾರಾ? ತೋರಿಸಿಯೇ ಬಿಟ್ಟರು ಮಾಧ್ವರು” ಎಂದು ಶ್ರೀಕಾಂತ್‌ ಋಗ್ವೇದಿ ಎಂಬವರು ಕಮೆಂಟ್ ಮಾಡಿದ್ದಾರೆ. ಮುಂದುವರಿದು, “ಬೇರೆ ವಿಷ್ಯಕ್ಕೆ ಎದ್ದನೋ ಬಿದ್ದನೋ ಅಂತ ಮಧ್ಯದಲ್ಲಿ ಬರುತ್ತಿದ್ದ ತ್ರೈಮತಸ್ಥ ಬ್ರಾಹ್ಮಣ ಸಂಘಗಳು ಎಲ್ಲಿ ಹೊದ್ರಿ ಸ್ವಾಮಿ?” ಎಂದು ಪ್ರಶ್ನಿಸಿದ್ದಾರೆ.

ಶಂಕರಾಚಾರ್ಯರನ್ನು ನಿಂದನೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿರುವ ಹಲವು ಪೋಸ್ಟ್‌ಗಳು ಈ ಗ್ರೂಪ್‌ನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...