Homeಅಂತರಾಷ್ಟ್ರೀಯಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು: ಇರಾನ್‌ಗೆ ಎನ್‌ಎಸ್‌ಎ ಅಜಿತ್‌ ದೋವಲ್‌‌ ಭರವಸೆ

ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು: ಇರಾನ್‌ಗೆ ಎನ್‌ಎಸ್‌ಎ ಅಜಿತ್‌ ದೋವಲ್‌‌ ಭರವಸೆ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅಪರಾಧಿಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ರಾಷ್ಟ್ರೀಯ ಭದ್ರತಾ ಸಂಸ್ಥೆ(ಎನ್‌ಎಸ್‌ಎ) ಮುಖ್ಯಸ್ಥ ಅಜಿತ್ ದೋವಲ್‌‌ ಅವರು ಇರಾನ್‌ ಸರ್ಕಾರಕ್ಕೆ ಹೇಳಿದ್ದಾರೆ ಎಂದು TOI ವರದಿ ಮಾಡಿದೆ. ಇಂತಹ ವ್ಯಕ್ತಿಗಳ ಜೊತೆಗೆ ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳ ಮಟ್ಟದಲ್ಲಿ ಇತರರಿಗೆ ಪಾಠವಾಗುವ ರೀತಿಯಲ್ಲಿ ವ್ಯವಹರಿಸಲಾಗುವುದು ಎಂದು ಅವರ ಹೇಳಿದ್ದಾರೆ.

ಪ್ರವಾದಿ ಮುಹಮ್ಮದ್‌ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರೆ ಮತ್ತು ದೆಹಲಿ ಮಾಧ್ಯಮ ಮುಖ್ಯಸ್ಥ ನೀಡಿದ ಅವಹೇಳನಕಾರಿ ಹೇಳಿಕೆಗಳ ವಿರುದ್ಧ, ಗಲ್ಪ್‌ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿದ ನಂತರ ಪಕ್ಷವು ಒಬ್ಬರನ್ನು ಅಮಾನತುಗೊಳಿಸಿದ್ದು, ಇನ್ನೊಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದೆ. ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್ ಅವರು ಅಜಿತ್ ದೋವಲ್ ಜೊತೆಗೆ ನಡೆದ ಸಭೆಯ ಸಂದರ್ಭದಲ್ಲಿ ವಿವಾದದ ಬಗ್ಗೆ ಪ್ರಸ್ತಾಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇರಾನ್ ಸರ್ಕಾರದ ಹೇಳಿಕೆಯ ಪ್ರಕಾರ, “ಎನ್‌ಎಸ್‌ಎ ಅಜಿತ್ ದೋವಲ್ ಸಭೆಯಲ್ಲಿ, ಪ್ರವಾದಿಯ ಬಗ್ಗೆ ಭಾರತ ಸರ್ಕಾರದ ಗೌರವವನ್ನು ಪುನರುಚ್ಚರಿಸಿದರು. ತಪ್ಪು ಮಾಡಿದವರನ್ನು ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳ ಮಟ್ಟದಲ್ಲಿ ಇತರರಿಗೆ ಪಾಠವಾಗುವ ರೀತಿಯಲ್ಲಿ ವ್ಯವಹರಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೇಸ್‌‌ಬುಕ್‌ನಲ್ಲಿ ‘ನೂಪುರ್ ಶರ್ಮಾ’ ಬೆಂಬಲಿಸಿದ ಬಿಜೆಪಿ ಯುವಮೋರ್ಚಾ ನಾಯಕನ ವಿರುದ್ಧ ಎಫ್‌ಐಆರ್‌‌

ವಿವಾದದ ಬಗ್ಗೆ ಭಾರತ ಮತ್ತು ಇರಾನ್ ನಡುವಿನ ದೀರ್ಘಕಾಲದ ನಾಗರಿಕತೆ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹೃದಯದಿಂದ ನೆನಪಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಬ್ದುಲ್ಲಾಹಿಯನ್ ಕರೆ ಮಾಡಿದ್ದಾರೆ ಎಂದು ಇರಾನ್ ಹೇಳಿದೆ.

“ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರ ಉಪಕ್ರಮಗಳ ಕುರಿತು ಚರ್ಚಿಸಿದರು. ಕೋವಿಡ್ ನಂತರದ ಯುಗದಲ್ಲಿ ವಿನಿಮಯವನ್ನು ವೇಗಗೊಳಿಸಲು ಎರಡೂ ದೇಶಗಳು ಕೆಲಸ ಮಾಡಬೇಕು ಎಂದು ಪ್ರಧಾನಿ ಒತ್ತಿ ಹೇಳಿದರು” ಎಂದು ಇರಾನ್‌ ಹೇಳಿಕೆಯಲ್ಲಿ ಹೇಳಿದೆ.

“ಪ್ರಧಾನ ಮಂತ್ರಿ ಮೋದಿಯವರು ಇರಾನ್ ವಿದೇಶಾಂಗ ಸಚಿವರಿಗೆ ತಮ್ಮ ಶುಭಾಶಯಗಳನ್ನು ಗೌರವಾನ್ವಿತ ಅಧ್ಯಕ್ಷ ಇಬ್ರಾಹಿಂ ರೈಸಿಗೆ ರವಾನಿಸಲು ವಿನಂತಿಸಿದರು. ಶೀಘ್ರದಲ್ಲಿಯೇ ಇರಾನ್ ಅಧ್ಯಕ್ಷರನ್ನು ಭೇಟಿಯಾಗಲು ಎದುರುನೋಡುತ್ತಿದ್ದೇವೆ” ಎಂದು ಇರಾನ್ ಸಚಿವರೊಂದಿಗಿನ ಮೋದಿ ಭೇಟಿಯ ಕುರಿತು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

“ಭಾರತ ಮತ್ತು ಇರಾನ್ ನಡುವಿನ ಶತಮಾನಗಳ ಹಳೆಯ ನಾಗರಿಕತೆಯ ಸಂಬಂಧಗಳ ಮತ್ತಷ್ಟು ಅಭಿವೃದ್ಧಿಯ ಕುರಿತು ಉಪಯುಕ್ತ ಚರ್ಚೆಗಾಗಿ ವಿದೇಶಾಂಗ ಸಚಿವ ಹೊಸೈನ್ ಅಮಿರ್‌ ಅಬ್ದೊಲ್ಲಾಹಿಯಾನ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ನಮ್ಮ ಸಂಬಂಧಗಳು ಎರಡೂ ದೇಶಗಳಿಗೆ ಪರಸ್ಪರ ಪ್ರಯೋಜನವನ್ನು ನೀಡಿವೆ. ಜೊತೆಗೆ ಪ್ರಾದೇಶಿಕ ಭದ್ರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಿದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮಂತ ಕಲಬೆರಕೆ ಮಾಧ್ಯಮಗಳು,ದೇಶದ್ರೋಹಿ ಕಮ್ಯೂನಿಸ್ಟ್ ರು ,ಕೆಲ ಗುಲಾಮರು ಇರೋವರೆಗೂ ಈ ದೇಶದ ಘನತೆಗೆ ತೊಂದರೆ ಖಚಿತ ,ಹೆಚ್ಚು ಕಾಲ ನಿಮ್ಮ ಆಟ ನಡೆಯಲ್ಲಾ ಈ ದೇಶದಲ್ಲಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...