Homeಮುಖಪುಟಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಚಡ್ಡಿಯನ್ನು ದಲಿತರ ಮೇಲೆ ಹೊರಿಸಲಾಗಿದೆ... ಪಠ್ಯಪುಸ್ತಕ ಪರಿಶೀಲನೆಯನ್ನು ಬ್ರಾಹ್ಮಣರಿಗೆ ವಹಿಸಲಾಗಿದೆ... ಅಂಬೇಡ್ಕರ್‌ ಅವರು ಸ್ವಾಭಿಮಾನದ ಬದುಕನ್ನು ಹೇಳಿದರು.. ಆದರೆ ಬಿಜೆಪಿಯಲ್ಲಿನ ದಲಿತರು ಏನನ್ನು ಸಾರಲು ಹೊರಟಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ಪಠ್ಯ ಪರಿಷ್ಕರಣೆ ಮಾಡಲು ಮುಂದಾದ ಬಿಜೆಪಿ ಸರ್ಕಾರಕ್ಕೆ ಇನ್ನಿಲ್ಲದ ಹೊಡೆತ ಬಿದ್ದಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಯಡವಟ್ಟುಗಳು ದಿನ ಕಳೆದಂತೆ ಹೆಚ್ಚಾಗುತ್ತಲೇ ಇವೆ. ಮೊದ ಮೊದಲು ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು ಅದನ್ನು ವಿರೋಧಿಸಿದವರು. ಆ ನಂತರ ಸಾಹಿತಿಗಳು ಪಠ್ಯ ವಾಪಸ್ ಮಾಡಿದರು. ಕುವೆಂಪುರವರಿಗೆ, ಅಂಬೇಡ್ಕರ್‌ರವರಿಗೆ, ಬಸವಣ್ಣನವರಿಗೆ ಅವಮಾನವಾದಾಗ ದಲಿತರು, ಒಕ್ಕಲಿಗರು, ಲಿಂಗಾಯತರು ದೊಡ್ಡ ಮಟ್ಟದಲ್ಲಿ ವಿರೋಧಿಸಿದರು. ಸ್ವಾಮೀಜಿಗಳು ಬೀದಿಗೆ ಬಂದು ಹೋರಾಡಿದರು. ಈಗ ಪಠ್ಯದಲ್ಲಿ ಶಂಕರಾಚಾರ್ಯರಿಗೂ ಅವಮಾನವಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಸ್ಮಾರ್ತ ಬ್ರಾಹ್ಮಣ ಮಠಗಳು ಆಕ್ರೋಶ ಹೊರ ಹಾಕುವ ಸೂಚನೆ ಕಾಣುತ್ತಿದೆ.

ಇಂತಹ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡಿರುವ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಿದೆ. ಪಠ್ಯ ಪರಿಷ್ಕರಣೆಯಲ್ಲಿ ತಪ್ಪಾಗಿವೆ ಎಂದಿರುವ ಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಹೊಸದಾಗಿ ಪಠ್ಯ ಮುದ್ರಿಸುವುದಾಗಿ ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ಈ ವಿಷಯದಿಂದ ಜನರನ್ನು ಡೈವರ್ಟ್ ಮಾಡಲು ಯತ್ನಿಸಿದ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಚಡ್ಡಿ ಕಳಿಸುವ ಅಭಿಯಾನ ಮಾಡಲು ಮುಂದಾಯಿತು. ಆದರೆ ದಲಿತರಿಗೆ ಚಡ್ಡಿ ಸಂಗ್ರಹಿಸುವ ಮತ್ತು ಚಡ್ಡಿ ಹೊರುವಂತೆ ಮಾಡುವ ಮೂಲಕ ಅದು ಮತ್ತೆ ಜಾತೀಯತೆ ಮೆರೆದು ಆ ಅಭಿಯಾನ ತನಗೆ ತಿರುಗುಬಾಣವಾಗುವಂತೆ ಮಾಡಿಕೊಂಡಿದೆ.

ಇದೆಲ್ಲ ಶುರುವಾಗಿದ್ದು ಹೀಗೆ..

ನಾಡಿನೆಲ್ಲೆಡೆ ಪಠ್ಯ ವಿವಾದ ತಾರಕಕ್ಕೇರಿತ್ತು. ತೀವ್ರ ವಿರೋಧವಿದ್ದರೂ ಸಹ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರ ಪರವಾಗಿ ವಾದಿಸಿದ್ದರು. ಹೋರಾಟನಿರತರನ್ನು ಹೀಯಾಳಿಸಿದ್ದರು. ಇದರಿಂದ ಕ್ರೋಧಗೊಂಡ NSUI ಕಾರ್ಯಕರ್ತರು ಜೂನ್ 01 ರಂದು ತಿಪಟೂರಿನ ನಾಗೇಶ್‌ರವರ ಮನೆ ಮುಂದೆ ಪ್ರತಿಭಟನೆ ನಡೆಸಿದರು. RSS ಚಡ್ಡಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಸಿಎಂ, ಗೃಹಸಚಿವ ಎಲ್ಲರೂ ಖಂಡಿಸಿದ್ದರು. ತುಮಕೂರು ಸಂಸದ ಬಸವರಾಜುರವರು ಚಡ್ಡಿ ನಮ್ಮ ಬ್ರಾಂಡ್ ಅದನ್ನು ಸುಟ್ಟಿದ್ದು ತಪ್ಪು ಎಂದರು. NSUI ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ 24 ಜನರ ವಿರುದ್ಧ FIR ದಾಖಲಿಸಿ ಬಂಧಿಸಲಾಯಿತು.

ಈ ಕುರಿತು ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು ಒಂದು ಚಡ್ಡಿ ಸುಟ್ಟರೆ ಕೇಸ್ ಹಾಕಿ ಬಂಧಿಸುವುದಾದರೆ ತಾನೂ RSS ಚಡ್ಡಿ ಸುಡುವುದಾಗಿ ಘೋಷಿಸಿದ್ದರು. ಕಳೆದ ಒಂದು ತಿಂಗಳಿನಿಂದ ಆರ್‌ಎಸ್‌ಎಸ್‌ ವಿರುದ್ಧ ಸಮರ ಹೂಡಿರುವ ಅವರು #AryanRSS ಹ್ಯಾಷ್‌ಟ್ಯಾಗ್‌ ಅಡಿಯಲ್ಲಿ ಏಕೆ ಆರ್‌ಎಸ್‌ಎಸ್‌ನಲ್ಲಿ ದಲಿತರಿಗೆ ಮುಖ್ಯ ಸ್ಥಾನ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದರು. ಮುಂದುವರಿದು ಅದು ಭಯೋತ್ಪಾದಕ ಸಂಘಟನೆ, ಹಾಗಾಗಿ ಅದನ್ನು ಕಂಡರೆ ನನಗೆ ಭಯ ಎಂದಿದ್ದ ಅವರು ಆರ್ಯನ್ನರು ಈ ದೇಶದ ಮೂಲನಿವಾಸಿಗಳಲ್ಲ, ಬದಲಿಗೆ ಹೊರಗಿನಿಂದ ಬಂದವರು ಎಂದಿದ್ದರು. ಇದಕ್ಕೆ ಹಲವಾರು ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡಿದ್ದರು. ಆಗ ಮತ್ತೆ ಸಿದ್ದರಾಮಯ್ಯನವರು ನಾನು ಕೇಳಿದ್ದು RSSಗೆ. ಏಕೆ ಬಿಜೆಪಿ ನಾಯಕರು ಉತ್ತರಿಸುತ್ತೀರಿ? RSS ನಾಯಕರಿಗೆ ಅಷ್ಟು ಧೈರ್ಯವಿಲ್ಲವೆ ಎಂದು ಛೇಡಿಸಿದ್ದರು.

ಹೀಗೆ ಸಿದ್ದರಾಮಯ್ಯನವರು ಚಡ್ಡಿ ಸುಡುವುದಾಗಿ ಹೇಳಿದ್ದಕ್ಕೆ ಪ್ರತಿಯಾಗಿ ಬಿಜೆಪಿ ನಾವೇ ಹಳೆ ಚಡ್ಡಿ ಕಳಿಸುತ್ತೇವೆ ಎಂಬ ಅಭಿಯಾನ ಆರಂಭಿಸಿದರು. ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿಯವರು ಪತ್ರಿಕಾಗೋಷ್ಟಿ ನಡೆಸಿ “ಬಿಜೆಪಿ ಪರಿಶಿಷ್ಟ ಮೋರ್ಚಾದ ಕಾರ್ಯಕರ್ತರು ಚಡ್ಡಿಗಳನ್ನು ಸಂಗ್ರಹಿಸುತ್ತಾರೆ. ಅವುಗಳನ್ನು ಬಿಜೆಪಿ ಮುಖಂಡರು ಸಿದ್ದರಾಮಯ್ಯನವರಿಗೆ ಕಳಿಸಿಕೊಡುತ್ತಾರೆ” ಎಂದು ಹೇಳಿದ್ದರು. ಅಷ್ಟು ಮಾತ್ರವಲ್ಲದೇ ತಾವೇ ಚಡ್ಡಿಗಳ ಮೂಟೆಯನ್ನು ತಲೆಯ ಮೇಲೊತ್ತಿಕೊಂಡು ಪ್ರತಿಭಟನೆ ನಡೆಸಿದ್ದರು. ಆ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಕೊಳಕು ಚಡ್ಡಿಗಳನ್ನು ಸಂಗ್ರಹಿಸುವ, ಹೊರುವ ಕೆಲಸವನ್ನು ಬಿಜೆಪಿಯಲ್ಲಿನ ದಲಿತರು ಮಾತ್ರವೇ ಏಕೆ ಮಾಡಬೇಕು? ಬಿ.ಸಿ ನಾಗೇಶ್, ತೇಜಸ್ವಿ ಸೂರ್ಯ, ಸುರೇಶ್ ಕುಮಾರ್‌ರಂತಹ ಬ್ರಾಹ್ಮಣರೇಕೆ ಹೊರಬಾರದು ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು, “ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ” ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ. ಆರ್.ಎಸ್.ಎಸ್‌ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು “ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆ” ಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ. ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ. ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ‌ನಿಮಗೆ‌ ನಾನು ನೀಡುವ ಸಲಹೆ” ಎಂದು ಹೇಳುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಅದಲ್ಲದೆ ಹಲವಾರು ಜನರು “ತೇಜಸ್ವಿ ಸೂರ್ಯ, ಸಚಿವ ಬಿ.ಸಿ.ನಾಗೇಶ್ ಅಥವಾ ಸುರೇಶಕುಮಾರ್ ಚಡ್ಡಿ ತಲೆಮೇಲೆ ಹೊತ್ತು ಸಿದ್ಧರಾಮಯ್ಯ ವಿರುದ್ಧ ಪ್ರತಿಭಟಿಸುವುದಾದರೆ ಬಳಸಿದ ನಮ್ಮ ಹಳೆ ಚಡ್ಡಿ ಕೊಡಲು ನಾವೂ ಸಿದ್ಧ” ಎಂದು ಸವಾಲು ಹಾಕಿದರು. ಆದರೆ ಬಿಜೆಪಿ ಹಾಗೆ ಮಾಡಲೇ ಇಲ್ಲ…

“ಪಠ್ಯಪುಸ್ತಕ ಪರಿಷ್ಕರಣೆ – ಮೇಲ್ವರ್ಗದವರಿಗೆ. ಚಡ್ಡಿ ಹೊರುವ ಕೆಲಸ – ದಲಿತರಿಗೆ. ಇದು ಬಿಜೆಪಿಯ ಆಧುನಿಕ ಮನುಧರ್ಮ. ದಲಿತರೊಬ್ಬರು RSSನವರು ಬಳಸಿ ಬಿಸಾಡಿದ ಚಡ್ಡಿ ಹೊತ್ತಿದ್ದು ಮಲ ಹೊರುವ ಪದ್ಧತಿಗಿಂತ ಬಿನ್ನವೇನಲ್ಲ. ನಾರಾಯಣಸ್ವಾಮಿ ಅಣ್ಣ, ಅಂಬೇಡ್ಕರ್‌ರವರು ಶೋಷಿತರ ತಲೆಯ ಮೇಲೆ ಕಿರೀಟವನ್ನ ಕಾಣಬಯಸಿದ್ದರೇ ಹೊರತು ಚಡ್ಡಿಗಳನ್ನಲ್ಲ” ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಜೆಪಿಯು ಪಠ್ಯಪುಸ್ತಕದಲ್ಲಿ ಅಂಬೇಡ್ಕರ್‌ ಕುರಿತ ಪಠ್ಯದಲ್ಲಿ ಬದಲಾವಣೆ ಮಾಡಿ ಸಂವಿಧಾನ ಶಿಲ್ಪಿ ಪದವನ್ನೇ ಕಿತ್ತು ಹಾಕಿದೆ. ಜೊತೆಗೆ ಅವರು ಬೌದ್ಧಧರ್ಮಕ್ಕೆ ಸೇರಿದ್ದು ಏಕೆಂಬ ಮಾಹಿತಿಯನ್ನು ತಿರುಚಲಾಗಿದೆ. ಹಲವಾರು ದಲಿತ ಲೇಖಕರ ಪಠ್ಯ ಕೈಬಿಟ್ಟಿದೆ. ಮತ್ತೊಂದು ಕಡೆ ದಲಿತರ ಮೇಲೆ ಹಳೆ ಚಡ್ಡಿಗಳನ್ನು ಹೊರಿಸುತ್ತಿದೆ. ಹೀಗೆ ನೇರನೇರಾ ವರ್ಣಾಶ್ರಮ ಪದ್ದತಿಯನ್ನು ಜಾರಿ ಮಾಡುತ್ತಿದೆ ಎಂಬ ಆರೋಪ ದಟ್ಟವಾಗಿದೆ.

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಈ ನಿಟ್ಟಿನಲ್ಲಿ ಪಠ್ಯಪುಸ್ತಕ ವಿವಾದದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಚಡ್ಡಿ ಕಳಿಸುವ ಅಭಿಯಾನ ಹಮ್ಮಿಕೊಂಡ ಬಿಜೆಪಿ ಅಲ್ಲಿಯೂ ಹಿನ್ನಡೆ ಅನುಭವಿಸಿದೆ. ನಾಲ್ವರು ಬಿಜೆಪಿ ಶಾಸಕರೆ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿದ್ದಾರೆ. ಎಲ್ಲಾ ಸಮುದಾಯದ ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ತಾನು ಏನೂ ಬೇಕಾದರೆ ಮಾಡಿ ಜಯಿಸಿಕೊಳ್ಳಬಲ್ಲೆ ಎಂಬುದು ಸುಲಭದ ಮಾತಲ್ಲ ಎಂಬುದನ್ನು ಈ ಪ್ರಕರಣಗಳು ಸಾಬೀತು ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...