Homeಮುಖಪುಟಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಚಡ್ಡಿಯನ್ನು ದಲಿತರ ಮೇಲೆ ಹೊರಿಸಲಾಗಿದೆ... ಪಠ್ಯಪುಸ್ತಕ ಪರಿಶೀಲನೆಯನ್ನು ಬ್ರಾಹ್ಮಣರಿಗೆ ವಹಿಸಲಾಗಿದೆ... ಅಂಬೇಡ್ಕರ್‌ ಅವರು ಸ್ವಾಭಿಮಾನದ ಬದುಕನ್ನು ಹೇಳಿದರು.. ಆದರೆ ಬಿಜೆಪಿಯಲ್ಲಿನ ದಲಿತರು ಏನನ್ನು ಸಾರಲು ಹೊರಟಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ಪಠ್ಯ ಪರಿಷ್ಕರಣೆ ಮಾಡಲು ಮುಂದಾದ ಬಿಜೆಪಿ ಸರ್ಕಾರಕ್ಕೆ ಇನ್ನಿಲ್ಲದ ಹೊಡೆತ ಬಿದ್ದಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಯಡವಟ್ಟುಗಳು ದಿನ ಕಳೆದಂತೆ ಹೆಚ್ಚಾಗುತ್ತಲೇ ಇವೆ. ಮೊದ ಮೊದಲು ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು ಅದನ್ನು ವಿರೋಧಿಸಿದವರು. ಆ ನಂತರ ಸಾಹಿತಿಗಳು ಪಠ್ಯ ವಾಪಸ್ ಮಾಡಿದರು. ಕುವೆಂಪುರವರಿಗೆ, ಅಂಬೇಡ್ಕರ್‌ರವರಿಗೆ, ಬಸವಣ್ಣನವರಿಗೆ ಅವಮಾನವಾದಾಗ ದಲಿತರು, ಒಕ್ಕಲಿಗರು, ಲಿಂಗಾಯತರು ದೊಡ್ಡ ಮಟ್ಟದಲ್ಲಿ ವಿರೋಧಿಸಿದರು. ಸ್ವಾಮೀಜಿಗಳು ಬೀದಿಗೆ ಬಂದು ಹೋರಾಡಿದರು. ಈಗ ಪಠ್ಯದಲ್ಲಿ ಶಂಕರಾಚಾರ್ಯರಿಗೂ ಅವಮಾನವಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಸ್ಮಾರ್ತ ಬ್ರಾಹ್ಮಣ ಮಠಗಳು ಆಕ್ರೋಶ ಹೊರ ಹಾಕುವ ಸೂಚನೆ ಕಾಣುತ್ತಿದೆ.

ಇಂತಹ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡಿರುವ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಿದೆ. ಪಠ್ಯ ಪರಿಷ್ಕರಣೆಯಲ್ಲಿ ತಪ್ಪಾಗಿವೆ ಎಂದಿರುವ ಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಹೊಸದಾಗಿ ಪಠ್ಯ ಮುದ್ರಿಸುವುದಾಗಿ ಹೇಳುತ್ತಿದ್ದಾರೆ. ಹೇಗಾದರೂ ಮಾಡಿ ಈ ವಿಷಯದಿಂದ ಜನರನ್ನು ಡೈವರ್ಟ್ ಮಾಡಲು ಯತ್ನಿಸಿದ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಚಡ್ಡಿ ಕಳಿಸುವ ಅಭಿಯಾನ ಮಾಡಲು ಮುಂದಾಯಿತು. ಆದರೆ ದಲಿತರಿಗೆ ಚಡ್ಡಿ ಸಂಗ್ರಹಿಸುವ ಮತ್ತು ಚಡ್ಡಿ ಹೊರುವಂತೆ ಮಾಡುವ ಮೂಲಕ ಅದು ಮತ್ತೆ ಜಾತೀಯತೆ ಮೆರೆದು ಆ ಅಭಿಯಾನ ತನಗೆ ತಿರುಗುಬಾಣವಾಗುವಂತೆ ಮಾಡಿಕೊಂಡಿದೆ.

ಇದೆಲ್ಲ ಶುರುವಾಗಿದ್ದು ಹೀಗೆ..

ನಾಡಿನೆಲ್ಲೆಡೆ ಪಠ್ಯ ವಿವಾದ ತಾರಕಕ್ಕೇರಿತ್ತು. ತೀವ್ರ ವಿರೋಧವಿದ್ದರೂ ಸಹ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರ ಪರವಾಗಿ ವಾದಿಸಿದ್ದರು. ಹೋರಾಟನಿರತರನ್ನು ಹೀಯಾಳಿಸಿದ್ದರು. ಇದರಿಂದ ಕ್ರೋಧಗೊಂಡ NSUI ಕಾರ್ಯಕರ್ತರು ಜೂನ್ 01 ರಂದು ತಿಪಟೂರಿನ ನಾಗೇಶ್‌ರವರ ಮನೆ ಮುಂದೆ ಪ್ರತಿಭಟನೆ ನಡೆಸಿದರು. RSS ಚಡ್ಡಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಸಿಎಂ, ಗೃಹಸಚಿವ ಎಲ್ಲರೂ ಖಂಡಿಸಿದ್ದರು. ತುಮಕೂರು ಸಂಸದ ಬಸವರಾಜುರವರು ಚಡ್ಡಿ ನಮ್ಮ ಬ್ರಾಂಡ್ ಅದನ್ನು ಸುಟ್ಟಿದ್ದು ತಪ್ಪು ಎಂದರು. NSUI ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ 24 ಜನರ ವಿರುದ್ಧ FIR ದಾಖಲಿಸಿ ಬಂಧಿಸಲಾಯಿತು.

ಈ ಕುರಿತು ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು ಒಂದು ಚಡ್ಡಿ ಸುಟ್ಟರೆ ಕೇಸ್ ಹಾಕಿ ಬಂಧಿಸುವುದಾದರೆ ತಾನೂ RSS ಚಡ್ಡಿ ಸುಡುವುದಾಗಿ ಘೋಷಿಸಿದ್ದರು. ಕಳೆದ ಒಂದು ತಿಂಗಳಿನಿಂದ ಆರ್‌ಎಸ್‌ಎಸ್‌ ವಿರುದ್ಧ ಸಮರ ಹೂಡಿರುವ ಅವರು #AryanRSS ಹ್ಯಾಷ್‌ಟ್ಯಾಗ್‌ ಅಡಿಯಲ್ಲಿ ಏಕೆ ಆರ್‌ಎಸ್‌ಎಸ್‌ನಲ್ಲಿ ದಲಿತರಿಗೆ ಮುಖ್ಯ ಸ್ಥಾನ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದರು. ಮುಂದುವರಿದು ಅದು ಭಯೋತ್ಪಾದಕ ಸಂಘಟನೆ, ಹಾಗಾಗಿ ಅದನ್ನು ಕಂಡರೆ ನನಗೆ ಭಯ ಎಂದಿದ್ದ ಅವರು ಆರ್ಯನ್ನರು ಈ ದೇಶದ ಮೂಲನಿವಾಸಿಗಳಲ್ಲ, ಬದಲಿಗೆ ಹೊರಗಿನಿಂದ ಬಂದವರು ಎಂದಿದ್ದರು. ಇದಕ್ಕೆ ಹಲವಾರು ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡಿದ್ದರು. ಆಗ ಮತ್ತೆ ಸಿದ್ದರಾಮಯ್ಯನವರು ನಾನು ಕೇಳಿದ್ದು RSSಗೆ. ಏಕೆ ಬಿಜೆಪಿ ನಾಯಕರು ಉತ್ತರಿಸುತ್ತೀರಿ? RSS ನಾಯಕರಿಗೆ ಅಷ್ಟು ಧೈರ್ಯವಿಲ್ಲವೆ ಎಂದು ಛೇಡಿಸಿದ್ದರು.

ಹೀಗೆ ಸಿದ್ದರಾಮಯ್ಯನವರು ಚಡ್ಡಿ ಸುಡುವುದಾಗಿ ಹೇಳಿದ್ದಕ್ಕೆ ಪ್ರತಿಯಾಗಿ ಬಿಜೆಪಿ ನಾವೇ ಹಳೆ ಚಡ್ಡಿ ಕಳಿಸುತ್ತೇವೆ ಎಂಬ ಅಭಿಯಾನ ಆರಂಭಿಸಿದರು. ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿಯವರು ಪತ್ರಿಕಾಗೋಷ್ಟಿ ನಡೆಸಿ “ಬಿಜೆಪಿ ಪರಿಶಿಷ್ಟ ಮೋರ್ಚಾದ ಕಾರ್ಯಕರ್ತರು ಚಡ್ಡಿಗಳನ್ನು ಸಂಗ್ರಹಿಸುತ್ತಾರೆ. ಅವುಗಳನ್ನು ಬಿಜೆಪಿ ಮುಖಂಡರು ಸಿದ್ದರಾಮಯ್ಯನವರಿಗೆ ಕಳಿಸಿಕೊಡುತ್ತಾರೆ” ಎಂದು ಹೇಳಿದ್ದರು. ಅಷ್ಟು ಮಾತ್ರವಲ್ಲದೇ ತಾವೇ ಚಡ್ಡಿಗಳ ಮೂಟೆಯನ್ನು ತಲೆಯ ಮೇಲೊತ್ತಿಕೊಂಡು ಪ್ರತಿಭಟನೆ ನಡೆಸಿದ್ದರು. ಆ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಕೊಳಕು ಚಡ್ಡಿಗಳನ್ನು ಸಂಗ್ರಹಿಸುವ, ಹೊರುವ ಕೆಲಸವನ್ನು ಬಿಜೆಪಿಯಲ್ಲಿನ ದಲಿತರು ಮಾತ್ರವೇ ಏಕೆ ಮಾಡಬೇಕು? ಬಿ.ಸಿ ನಾಗೇಶ್, ತೇಜಸ್ವಿ ಸೂರ್ಯ, ಸುರೇಶ್ ಕುಮಾರ್‌ರಂತಹ ಬ್ರಾಹ್ಮಣರೇಕೆ ಹೊರಬಾರದು ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು, “ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ” ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ. ಆರ್.ಎಸ್.ಎಸ್‌ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು “ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆ” ಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ. ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ. ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ‌ನಿಮಗೆ‌ ನಾನು ನೀಡುವ ಸಲಹೆ” ಎಂದು ಹೇಳುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಅದಲ್ಲದೆ ಹಲವಾರು ಜನರು “ತೇಜಸ್ವಿ ಸೂರ್ಯ, ಸಚಿವ ಬಿ.ಸಿ.ನಾಗೇಶ್ ಅಥವಾ ಸುರೇಶಕುಮಾರ್ ಚಡ್ಡಿ ತಲೆಮೇಲೆ ಹೊತ್ತು ಸಿದ್ಧರಾಮಯ್ಯ ವಿರುದ್ಧ ಪ್ರತಿಭಟಿಸುವುದಾದರೆ ಬಳಸಿದ ನಮ್ಮ ಹಳೆ ಚಡ್ಡಿ ಕೊಡಲು ನಾವೂ ಸಿದ್ಧ” ಎಂದು ಸವಾಲು ಹಾಕಿದರು. ಆದರೆ ಬಿಜೆಪಿ ಹಾಗೆ ಮಾಡಲೇ ಇಲ್ಲ…

“ಪಠ್ಯಪುಸ್ತಕ ಪರಿಷ್ಕರಣೆ – ಮೇಲ್ವರ್ಗದವರಿಗೆ. ಚಡ್ಡಿ ಹೊರುವ ಕೆಲಸ – ದಲಿತರಿಗೆ. ಇದು ಬಿಜೆಪಿಯ ಆಧುನಿಕ ಮನುಧರ್ಮ. ದಲಿತರೊಬ್ಬರು RSSನವರು ಬಳಸಿ ಬಿಸಾಡಿದ ಚಡ್ಡಿ ಹೊತ್ತಿದ್ದು ಮಲ ಹೊರುವ ಪದ್ಧತಿಗಿಂತ ಬಿನ್ನವೇನಲ್ಲ. ನಾರಾಯಣಸ್ವಾಮಿ ಅಣ್ಣ, ಅಂಬೇಡ್ಕರ್‌ರವರು ಶೋಷಿತರ ತಲೆಯ ಮೇಲೆ ಕಿರೀಟವನ್ನ ಕಾಣಬಯಸಿದ್ದರೇ ಹೊರತು ಚಡ್ಡಿಗಳನ್ನಲ್ಲ” ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಜೆಪಿಯು ಪಠ್ಯಪುಸ್ತಕದಲ್ಲಿ ಅಂಬೇಡ್ಕರ್‌ ಕುರಿತ ಪಠ್ಯದಲ್ಲಿ ಬದಲಾವಣೆ ಮಾಡಿ ಸಂವಿಧಾನ ಶಿಲ್ಪಿ ಪದವನ್ನೇ ಕಿತ್ತು ಹಾಕಿದೆ. ಜೊತೆಗೆ ಅವರು ಬೌದ್ಧಧರ್ಮಕ್ಕೆ ಸೇರಿದ್ದು ಏಕೆಂಬ ಮಾಹಿತಿಯನ್ನು ತಿರುಚಲಾಗಿದೆ. ಹಲವಾರು ದಲಿತ ಲೇಖಕರ ಪಠ್ಯ ಕೈಬಿಟ್ಟಿದೆ. ಮತ್ತೊಂದು ಕಡೆ ದಲಿತರ ಮೇಲೆ ಹಳೆ ಚಡ್ಡಿಗಳನ್ನು ಹೊರಿಸುತ್ತಿದೆ. ಹೀಗೆ ನೇರನೇರಾ ವರ್ಣಾಶ್ರಮ ಪದ್ದತಿಯನ್ನು ಜಾರಿ ಮಾಡುತ್ತಿದೆ ಎಂಬ ಆರೋಪ ದಟ್ಟವಾಗಿದೆ.

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ಈ ನಿಟ್ಟಿನಲ್ಲಿ ಪಠ್ಯಪುಸ್ತಕ ವಿವಾದದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಚಡ್ಡಿ ಕಳಿಸುವ ಅಭಿಯಾನ ಹಮ್ಮಿಕೊಂಡ ಬಿಜೆಪಿ ಅಲ್ಲಿಯೂ ಹಿನ್ನಡೆ ಅನುಭವಿಸಿದೆ. ನಾಲ್ವರು ಬಿಜೆಪಿ ಶಾಸಕರೆ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿದ್ದಾರೆ. ಎಲ್ಲಾ ಸಮುದಾಯದ ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ತಾನು ಏನೂ ಬೇಕಾದರೆ ಮಾಡಿ ಜಯಿಸಿಕೊಳ್ಳಬಲ್ಲೆ ಎಂಬುದು ಸುಲಭದ ಮಾತಲ್ಲ ಎಂಬುದನ್ನು ಈ ಪ್ರಕರಣಗಳು ಸಾಬೀತು ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...