Homeಕರ್ನಾಟಕಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

- Advertisement -
- Advertisement -

ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆಗೊಳಗಾದ ಯುವತಿ, ತನ್ನ ಪೋಷಕರ ವಿರುದ್ಧ ಬೇಸರ ವ್ಯಕ್ತಪಡಿಸಿ ಸಾವಿಗೂ ಮುನ್ನ ಬರೆದಿದ್ದರು ಎನ್ನಲಾದ ಮೂರು ಪುಟದ ಪತ್ರ ಲಭ್ಯವಾಗಿದೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಾಲಿನಿ (17), ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯ ಕೊಲೆ ಮಾಡುವ ಮಟ್ಟಕ್ಕೆ ಪೋಷಕರು ಹೊರಟರು. ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನಿಂದ ಕೆಲವು ಮಾಹಿತಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಯುವಕ ನೀಡುತ್ತಿದ್ದು, ಶಾಲಿನಿ ಬರೆದಿದ್ದಳು ಎನ್ನಲಾದ ಪತ್ರ ಹಾಗೂ ಆಕೆಯ ಕಾಲ್‌ರೆಕಾರ್ಡ್‌‌ಗಳನ್ನು ಪೊಲೀಸರಿಗೆ ನೀಡಿದ್ದಾನೆ.

ಪತ್ರದಲ್ಲಿ ಏನಿದೆ?

ಶಾಲಿನಿ ತನ್ನ ಸಾವಿನ ಕುರಿತು ಮೊದಲೇ ಊಹಿಸಿರುವುದು ಈ ಪತ್ರದಿಂದ ತಿಳಿದುಬರುತ್ತದೆ. ತನಗಾಗಿರುವ ಹಿಂಸೆಯ ಈ ಪತ್ರ ಮುಖೇನ ಪೊಲೀಸರಿಗೆ ತಿಳಿಸುವ ಯತ್ನವನ್ನು ಶಾಲಿನಿ ಮಾಡಿದ್ದಾರೆ.

“ನನ್ನ ಜೀವನದಲ್ಲಿ ಜಿಗುಪ್ಸೆ ಬರುವಂತೆ ಕೆಲವು ವ್ಯಕ್ತಿಗಳು ನಡೆದುಕೊಂಡಿದ್ದಾರೆ. ಆದ್ದರಿಂದ ನನ್ನ ಜೀವನವನ್ನು ಇಲ್ಲಿಗೆ ಮುಗಿಸಲು ತೀರ್ಮಾನಿಸಿದ್ದೇನೆ. ನನ್ನ ತಂದೆ ಸುರೇಶ್‌, ತಾಯಿ ಬೇಬಿ, ಪಕ್ಕದ ಊರಿನ ನಿವಾಸಿಗಳಾದ ಸಂಗೀತ, ಗಣೇಶ್‌ ದಂಪತಿ, ಅದೇ ಊರಿನ ಮತ್ತೊಬ್ಬ ನಿವಾಸಿ ಪ್ರತಾಪ್‌ ಮತ್ತು ನನ್ನ ಚಿಕ್ಕಪ್ಪಂದಿರಾದ ಅರುಣಾ, ರವಿ ನನ್ನ ಸಾವಿಗೆ ಕಾರಣರು” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಕಾನೂನಿನ ಪ್ರಕಾರ ನಮಗೆ ವಯಸ್ಸಾದ ಬಳಿಕ ಮದುವೆಯಾಗಲು ಇಚ್ಚಿಸಿದ್ದೆವು. ಆದರೆ ಮಂಜು (ಪ್ರೀತಿಸಿದ ಹುಡುಗ) ಬೇರೆ ಜಾತಿಯವನೆಂದು ಮನೆಯವರು ಕಿರುಕುಳ ಕೊಟ್ಟಿದ್ದಾರೆ. ಕೆಟ್ಟ ಮಾತುಗಳನ್ನು ನನ್ನ ತಂದೆ ತಾಯಿಗಳು ಆಡಿದ್ದಾರೆ. ಈ ಕೆಟ್ಟ ಪದಗಳನ್ನು ನನ್ನಿಂದ ಅರಗಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಪೋಷಕರಿಗೆ ಸರಿಯಾಗಿ ತಿಳಿಹೇಳಿ. ನಾನು ಮರಣ ಹೊಂದಿದ ಬಳಿಕ ನನ್ನ ತಂದೆ ತಾಯಿ ನಾನು ಪ್ರೀತಿಸಿದ ಹುಡುಗನಿಗೆ ತೊಂದರೆ ಕೊಟ್ಟರೆ ನನ್ನ ಪೋಷಕರಿಗೆ ಶಿಕ್ಷೆ ಕೊಡಿ. ಮುಂದಿನ ಜನ್ಮ ಇದ್ದರೆ ನಿಮ್ಮಂಥವರ ಮಗಳಾಗಿ ಹುಟ್ಟುತ್ತೇನೆ” ಎಂದು ಶಾಲಿನಿ ಪೊಲೀಸರಿಗೆ ತಿಳಿಸಿದ್ದಾರೆ.

“ಜಾತಿ ಎಂಬ ಕೆಟ್ಟ ಪಿಡುಗು ನನ್ನನ್ನು ಬಲಿ ತೆಗೆದುಕೊಂಡಿದೆ… ಬೇರೆಯವರ ಮಾತು ಕೇಳಿ ಮಕ್ಕಳಿಗೆ ಕೆಟ್ಟ ಪದಗಳಿಂದ ಬೈಯ್ಯುವುದು, ಸಿಕ್ಕಸಿಕ್ಕದರಲ್ಲಿ ಹೊಡೆಯುವುದನ್ನು ನಿಲ್ಲಿಸಲು ಹೇಳಿ” ಎಂದು ಹೇಳುತ್ತಾ ತನ್ನ ಮೇಲಾಗಿರುವ  ಹಲ್ಲೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

“ನಾವಿಬ್ಬರೂ ತುಂಬಾ ಪ್ರತಿಸಿದ್ದೆವು. ನನಗೆ 18 ವರ್ಷ ತುಂಬಿದ ನಂತರ ಮದುವೆಯಾಗಿ ಜೀವನದಲ್ಲಿ ಚೆನ್ನಾಗಿರಬೇಕು ಎಂದು ನೂರೆಂದು ಆಸೆ ಕಟ್ಟಿದ್ದೆವು. ಆದರೆ ಅದು ಸಾಧ್ಯವಾಗಲೂ ಯಾರೂ ಬಿಡಲಿಲ್ಲ…” ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ಪತ್ರದ ಕುರಿತು ಮಾಹಿತಿ ನೀಡಿದ ಪಿರಿಯಾಪಟ್ಟಣ ಪೊಲೀಸ್ ಅಧಿಕಾರಿ ಕುಮಾರ್‌, “ಇದು ಡೆತ್‌ ನೋಟ್‌ ಏನಲ್ಲ. ಇದು ಪತ್ರವಷ್ಟೇ. ಈ ಪತ್ರವನ್ನು ಶಾಲಿನಿ ಬರೆದು ತನಗೆ ತಲುಪಿಸಿರುವುದಾಗಿ ಹುಡುಗ ಹೇಳುತ್ತಿದ್ದಾರೆ. ಆದರೆ ಅದು ಶಾಲಿನಿಯೇ ಬರೆದದ್ದೋ, ಬೇರೆ ಯಾರಾದರೂ ಬರೆದದ್ದೋ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಕೊಲೆಯಾಗಿರುವ ಯುವತಿಯ ಕೈಬರಹವನ್ನು ಪರಿಶೀಲಿಸಬೇಕಿದೆ.  ತನ್ನೊಂದಿಗೆ ಶಾಲಿಗೆ ಈ ಕುರಿತು ಮಾತನಾಡಿದ್ದಳು ಎಂದು ಸಿಡಿಯೊಂದನ್ನು ಪೊಲೀಸರಿಗೆ ಮಂಜು ನೀಡಿದ್ದಾರೆ. ತನಿಖೆ ಮುಂದುವರಿದಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...