Homeಕರ್ನಾಟಕಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

- Advertisement -
- Advertisement -

ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆಗೊಳಗಾದ ಯುವತಿ, ತನ್ನ ಪೋಷಕರ ವಿರುದ್ಧ ಬೇಸರ ವ್ಯಕ್ತಪಡಿಸಿ ಸಾವಿಗೂ ಮುನ್ನ ಬರೆದಿದ್ದರು ಎನ್ನಲಾದ ಮೂರು ಪುಟದ ಪತ್ರ ಲಭ್ಯವಾಗಿದೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಾಲಿನಿ (17), ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯ ಕೊಲೆ ಮಾಡುವ ಮಟ್ಟಕ್ಕೆ ಪೋಷಕರು ಹೊರಟರು. ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನಿಂದ ಕೆಲವು ಮಾಹಿತಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಯುವಕ ನೀಡುತ್ತಿದ್ದು, ಶಾಲಿನಿ ಬರೆದಿದ್ದಳು ಎನ್ನಲಾದ ಪತ್ರ ಹಾಗೂ ಆಕೆಯ ಕಾಲ್‌ರೆಕಾರ್ಡ್‌‌ಗಳನ್ನು ಪೊಲೀಸರಿಗೆ ನೀಡಿದ್ದಾನೆ.

ಪತ್ರದಲ್ಲಿ ಏನಿದೆ?

ಶಾಲಿನಿ ತನ್ನ ಸಾವಿನ ಕುರಿತು ಮೊದಲೇ ಊಹಿಸಿರುವುದು ಈ ಪತ್ರದಿಂದ ತಿಳಿದುಬರುತ್ತದೆ. ತನಗಾಗಿರುವ ಹಿಂಸೆಯ ಈ ಪತ್ರ ಮುಖೇನ ಪೊಲೀಸರಿಗೆ ತಿಳಿಸುವ ಯತ್ನವನ್ನು ಶಾಲಿನಿ ಮಾಡಿದ್ದಾರೆ.

“ನನ್ನ ಜೀವನದಲ್ಲಿ ಜಿಗುಪ್ಸೆ ಬರುವಂತೆ ಕೆಲವು ವ್ಯಕ್ತಿಗಳು ನಡೆದುಕೊಂಡಿದ್ದಾರೆ. ಆದ್ದರಿಂದ ನನ್ನ ಜೀವನವನ್ನು ಇಲ್ಲಿಗೆ ಮುಗಿಸಲು ತೀರ್ಮಾನಿಸಿದ್ದೇನೆ. ನನ್ನ ತಂದೆ ಸುರೇಶ್‌, ತಾಯಿ ಬೇಬಿ, ಪಕ್ಕದ ಊರಿನ ನಿವಾಸಿಗಳಾದ ಸಂಗೀತ, ಗಣೇಶ್‌ ದಂಪತಿ, ಅದೇ ಊರಿನ ಮತ್ತೊಬ್ಬ ನಿವಾಸಿ ಪ್ರತಾಪ್‌ ಮತ್ತು ನನ್ನ ಚಿಕ್ಕಪ್ಪಂದಿರಾದ ಅರುಣಾ, ರವಿ ನನ್ನ ಸಾವಿಗೆ ಕಾರಣರು” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಕಾನೂನಿನ ಪ್ರಕಾರ ನಮಗೆ ವಯಸ್ಸಾದ ಬಳಿಕ ಮದುವೆಯಾಗಲು ಇಚ್ಚಿಸಿದ್ದೆವು. ಆದರೆ ಮಂಜು (ಪ್ರೀತಿಸಿದ ಹುಡುಗ) ಬೇರೆ ಜಾತಿಯವನೆಂದು ಮನೆಯವರು ಕಿರುಕುಳ ಕೊಟ್ಟಿದ್ದಾರೆ. ಕೆಟ್ಟ ಮಾತುಗಳನ್ನು ನನ್ನ ತಂದೆ ತಾಯಿಗಳು ಆಡಿದ್ದಾರೆ. ಈ ಕೆಟ್ಟ ಪದಗಳನ್ನು ನನ್ನಿಂದ ಅರಗಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಪೋಷಕರಿಗೆ ಸರಿಯಾಗಿ ತಿಳಿಹೇಳಿ. ನಾನು ಮರಣ ಹೊಂದಿದ ಬಳಿಕ ನನ್ನ ತಂದೆ ತಾಯಿ ನಾನು ಪ್ರೀತಿಸಿದ ಹುಡುಗನಿಗೆ ತೊಂದರೆ ಕೊಟ್ಟರೆ ನನ್ನ ಪೋಷಕರಿಗೆ ಶಿಕ್ಷೆ ಕೊಡಿ. ಮುಂದಿನ ಜನ್ಮ ಇದ್ದರೆ ನಿಮ್ಮಂಥವರ ಮಗಳಾಗಿ ಹುಟ್ಟುತ್ತೇನೆ” ಎಂದು ಶಾಲಿನಿ ಪೊಲೀಸರಿಗೆ ತಿಳಿಸಿದ್ದಾರೆ.

“ಜಾತಿ ಎಂಬ ಕೆಟ್ಟ ಪಿಡುಗು ನನ್ನನ್ನು ಬಲಿ ತೆಗೆದುಕೊಂಡಿದೆ… ಬೇರೆಯವರ ಮಾತು ಕೇಳಿ ಮಕ್ಕಳಿಗೆ ಕೆಟ್ಟ ಪದಗಳಿಂದ ಬೈಯ್ಯುವುದು, ಸಿಕ್ಕಸಿಕ್ಕದರಲ್ಲಿ ಹೊಡೆಯುವುದನ್ನು ನಿಲ್ಲಿಸಲು ಹೇಳಿ” ಎಂದು ಹೇಳುತ್ತಾ ತನ್ನ ಮೇಲಾಗಿರುವ  ಹಲ್ಲೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

“ನಾವಿಬ್ಬರೂ ತುಂಬಾ ಪ್ರತಿಸಿದ್ದೆವು. ನನಗೆ 18 ವರ್ಷ ತುಂಬಿದ ನಂತರ ಮದುವೆಯಾಗಿ ಜೀವನದಲ್ಲಿ ಚೆನ್ನಾಗಿರಬೇಕು ಎಂದು ನೂರೆಂದು ಆಸೆ ಕಟ್ಟಿದ್ದೆವು. ಆದರೆ ಅದು ಸಾಧ್ಯವಾಗಲೂ ಯಾರೂ ಬಿಡಲಿಲ್ಲ…” ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ಪತ್ರದ ಕುರಿತು ಮಾಹಿತಿ ನೀಡಿದ ಪಿರಿಯಾಪಟ್ಟಣ ಪೊಲೀಸ್ ಅಧಿಕಾರಿ ಕುಮಾರ್‌, “ಇದು ಡೆತ್‌ ನೋಟ್‌ ಏನಲ್ಲ. ಇದು ಪತ್ರವಷ್ಟೇ. ಈ ಪತ್ರವನ್ನು ಶಾಲಿನಿ ಬರೆದು ತನಗೆ ತಲುಪಿಸಿರುವುದಾಗಿ ಹುಡುಗ ಹೇಳುತ್ತಿದ್ದಾರೆ. ಆದರೆ ಅದು ಶಾಲಿನಿಯೇ ಬರೆದದ್ದೋ, ಬೇರೆ ಯಾರಾದರೂ ಬರೆದದ್ದೋ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಕೊಲೆಯಾಗಿರುವ ಯುವತಿಯ ಕೈಬರಹವನ್ನು ಪರಿಶೀಲಿಸಬೇಕಿದೆ.  ತನ್ನೊಂದಿಗೆ ಶಾಲಿಗೆ ಈ ಕುರಿತು ಮಾತನಾಡಿದ್ದಳು ಎಂದು ಸಿಡಿಯೊಂದನ್ನು ಪೊಲೀಸರಿಗೆ ಮಂಜು ನೀಡಿದ್ದಾರೆ. ತನಿಖೆ ಮುಂದುವರಿದಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...