Homeಕರ್ನಾಟಕಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

- Advertisement -
- Advertisement -

ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆಗೊಳಗಾದ ಯುವತಿ, ತನ್ನ ಪೋಷಕರ ವಿರುದ್ಧ ಬೇಸರ ವ್ಯಕ್ತಪಡಿಸಿ ಸಾವಿಗೂ ಮುನ್ನ ಬರೆದಿದ್ದರು ಎನ್ನಲಾದ ಮೂರು ಪುಟದ ಪತ್ರ ಲಭ್ಯವಾಗಿದೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಾಲಿನಿ (17), ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯ ಕೊಲೆ ಮಾಡುವ ಮಟ್ಟಕ್ಕೆ ಪೋಷಕರು ಹೊರಟರು. ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನಿಂದ ಕೆಲವು ಮಾಹಿತಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಯುವಕ ನೀಡುತ್ತಿದ್ದು, ಶಾಲಿನಿ ಬರೆದಿದ್ದಳು ಎನ್ನಲಾದ ಪತ್ರ ಹಾಗೂ ಆಕೆಯ ಕಾಲ್‌ರೆಕಾರ್ಡ್‌‌ಗಳನ್ನು ಪೊಲೀಸರಿಗೆ ನೀಡಿದ್ದಾನೆ.

ಪತ್ರದಲ್ಲಿ ಏನಿದೆ?

ಶಾಲಿನಿ ತನ್ನ ಸಾವಿನ ಕುರಿತು ಮೊದಲೇ ಊಹಿಸಿರುವುದು ಈ ಪತ್ರದಿಂದ ತಿಳಿದುಬರುತ್ತದೆ. ತನಗಾಗಿರುವ ಹಿಂಸೆಯ ಈ ಪತ್ರ ಮುಖೇನ ಪೊಲೀಸರಿಗೆ ತಿಳಿಸುವ ಯತ್ನವನ್ನು ಶಾಲಿನಿ ಮಾಡಿದ್ದಾರೆ.

“ನನ್ನ ಜೀವನದಲ್ಲಿ ಜಿಗುಪ್ಸೆ ಬರುವಂತೆ ಕೆಲವು ವ್ಯಕ್ತಿಗಳು ನಡೆದುಕೊಂಡಿದ್ದಾರೆ. ಆದ್ದರಿಂದ ನನ್ನ ಜೀವನವನ್ನು ಇಲ್ಲಿಗೆ ಮುಗಿಸಲು ತೀರ್ಮಾನಿಸಿದ್ದೇನೆ. ನನ್ನ ತಂದೆ ಸುರೇಶ್‌, ತಾಯಿ ಬೇಬಿ, ಪಕ್ಕದ ಊರಿನ ನಿವಾಸಿಗಳಾದ ಸಂಗೀತ, ಗಣೇಶ್‌ ದಂಪತಿ, ಅದೇ ಊರಿನ ಮತ್ತೊಬ್ಬ ನಿವಾಸಿ ಪ್ರತಾಪ್‌ ಮತ್ತು ನನ್ನ ಚಿಕ್ಕಪ್ಪಂದಿರಾದ ಅರುಣಾ, ರವಿ ನನ್ನ ಸಾವಿಗೆ ಕಾರಣರು” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಕಾನೂನಿನ ಪ್ರಕಾರ ನಮಗೆ ವಯಸ್ಸಾದ ಬಳಿಕ ಮದುವೆಯಾಗಲು ಇಚ್ಚಿಸಿದ್ದೆವು. ಆದರೆ ಮಂಜು (ಪ್ರೀತಿಸಿದ ಹುಡುಗ) ಬೇರೆ ಜಾತಿಯವನೆಂದು ಮನೆಯವರು ಕಿರುಕುಳ ಕೊಟ್ಟಿದ್ದಾರೆ. ಕೆಟ್ಟ ಮಾತುಗಳನ್ನು ನನ್ನ ತಂದೆ ತಾಯಿಗಳು ಆಡಿದ್ದಾರೆ. ಈ ಕೆಟ್ಟ ಪದಗಳನ್ನು ನನ್ನಿಂದ ಅರಗಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಪೋಷಕರಿಗೆ ಸರಿಯಾಗಿ ತಿಳಿಹೇಳಿ. ನಾನು ಮರಣ ಹೊಂದಿದ ಬಳಿಕ ನನ್ನ ತಂದೆ ತಾಯಿ ನಾನು ಪ್ರೀತಿಸಿದ ಹುಡುಗನಿಗೆ ತೊಂದರೆ ಕೊಟ್ಟರೆ ನನ್ನ ಪೋಷಕರಿಗೆ ಶಿಕ್ಷೆ ಕೊಡಿ. ಮುಂದಿನ ಜನ್ಮ ಇದ್ದರೆ ನಿಮ್ಮಂಥವರ ಮಗಳಾಗಿ ಹುಟ್ಟುತ್ತೇನೆ” ಎಂದು ಶಾಲಿನಿ ಪೊಲೀಸರಿಗೆ ತಿಳಿಸಿದ್ದಾರೆ.

“ಜಾತಿ ಎಂಬ ಕೆಟ್ಟ ಪಿಡುಗು ನನ್ನನ್ನು ಬಲಿ ತೆಗೆದುಕೊಂಡಿದೆ… ಬೇರೆಯವರ ಮಾತು ಕೇಳಿ ಮಕ್ಕಳಿಗೆ ಕೆಟ್ಟ ಪದಗಳಿಂದ ಬೈಯ್ಯುವುದು, ಸಿಕ್ಕಸಿಕ್ಕದರಲ್ಲಿ ಹೊಡೆಯುವುದನ್ನು ನಿಲ್ಲಿಸಲು ಹೇಳಿ” ಎಂದು ಹೇಳುತ್ತಾ ತನ್ನ ಮೇಲಾಗಿರುವ  ಹಲ್ಲೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

“ನಾವಿಬ್ಬರೂ ತುಂಬಾ ಪ್ರತಿಸಿದ್ದೆವು. ನನಗೆ 18 ವರ್ಷ ತುಂಬಿದ ನಂತರ ಮದುವೆಯಾಗಿ ಜೀವನದಲ್ಲಿ ಚೆನ್ನಾಗಿರಬೇಕು ಎಂದು ನೂರೆಂದು ಆಸೆ ಕಟ್ಟಿದ್ದೆವು. ಆದರೆ ಅದು ಸಾಧ್ಯವಾಗಲೂ ಯಾರೂ ಬಿಡಲಿಲ್ಲ…” ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ಪತ್ರದ ಕುರಿತು ಮಾಹಿತಿ ನೀಡಿದ ಪಿರಿಯಾಪಟ್ಟಣ ಪೊಲೀಸ್ ಅಧಿಕಾರಿ ಕುಮಾರ್‌, “ಇದು ಡೆತ್‌ ನೋಟ್‌ ಏನಲ್ಲ. ಇದು ಪತ್ರವಷ್ಟೇ. ಈ ಪತ್ರವನ್ನು ಶಾಲಿನಿ ಬರೆದು ತನಗೆ ತಲುಪಿಸಿರುವುದಾಗಿ ಹುಡುಗ ಹೇಳುತ್ತಿದ್ದಾರೆ. ಆದರೆ ಅದು ಶಾಲಿನಿಯೇ ಬರೆದದ್ದೋ, ಬೇರೆ ಯಾರಾದರೂ ಬರೆದದ್ದೋ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಕೊಲೆಯಾಗಿರುವ ಯುವತಿಯ ಕೈಬರಹವನ್ನು ಪರಿಶೀಲಿಸಬೇಕಿದೆ.  ತನ್ನೊಂದಿಗೆ ಶಾಲಿಗೆ ಈ ಕುರಿತು ಮಾತನಾಡಿದ್ದಳು ಎಂದು ಸಿಡಿಯೊಂದನ್ನು ಪೊಲೀಸರಿಗೆ ಮಂಜು ನೀಡಿದ್ದಾರೆ. ತನಿಖೆ ಮುಂದುವರಿದಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...