Homeಮುಖಪುಟಪರಿಷ್ಕೃತ ಪಠ್ಯ ಪುಸ್ತಕ ಜಾರಿಯಾಗಲು ಬಿಡುವುದಿಲ್ಲ: ಸಿದ್ದರಾಮಯ್ಯ

ಪರಿಷ್ಕೃತ ಪಠ್ಯ ಪುಸ್ತಕ ಜಾರಿಯಾಗಲು ಬಿಡುವುದಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ನಾಡಿನ ದಾರ್ಶನಿಕರು, ಸಾಹಿತಿಗಳು, ಮಹಾಪುರುಷರಿಗೆ ಕಿಂಚಿತ್ತು ಅವಮಾನವಾದರೂ ಅದನ್ನು ನಾವು ಖಂಡಿತವಾಗಿ ಸಹಿಸುವುದಿಲ್ಲ, ಅಂತಹ ಪಠ್ಯ ಪುಸ್ತಕ ಜಾರಿಯಾಗಲು ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ನಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಿ, ಹಿಂದಿನ ಪಠ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿದರು.

“ಪಠ್ಯಪುಸ್ತಕ ಮಕ್ಕಳಲ್ಲಿ ವೈಜ್ಞಾನಿಕತೆ, ವೈಚಾರಿಕತೆಯನ್ನು ಬೆಳೆಸಬೇಕೆ ವಿನಃ ಕೋಮುದ್ವೇಷ ವೈಷಮ್ಯವನ್ನಲ್ಲ. ಮಕ್ಕಳ ಮನಸಲ್ಲಿ ವಿಷಬೀಜ ಬಿತ್ತಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ತರಾಟೆಗೆ ತೆಗೆದುಕೊಂಡರು.

ಪಠ್ಯ ಪುಸ್ತಕ ರಚಿಸುವವರು ಅಂಬೇಡ್ಕರ್, ಬಸವಣ್ಣ, ಕುಂವೆಂಪುರವರಿಗೆ ಹಾಗೂ ಹಲವು ಸ್ವಾಮಿಗಳಿಗೆ ಅವಮಾನ ಮಾಡಿದ್ದಾರೆ. ರೋಹಿತ್ ಚಕ್ರತೀರ್ಥನ ಸಮಿತಿಯು ಶಾಲಾ ಪಠ್ಯಪುಸ್ತಕಗಳಲ್ಲಿದ್ದ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ ಹಾಗೂ ಸಮಾಜ ಸುಧಾರಕರು ಮತ ಪ್ರವರ್ತಕರು ಮುಂತಾದ ಲೇಖಕರ ಕೃತಿಗಳನ್ನು ತಿರುಚಿದ್ದು ಮಾತ್ರವಲ್ಲದೆ ಅವರ ಪರಿಚಯವನ್ನು ಯದ್ವತದ್ವ ಮಾಡಿ, ನಾಡಗೀತೆಗೆ ಹಾಗೂ ರಾಷ್ಟ್ರಕವಿ ಕುವೆಂಪುರವರಿಗೆ ಅಪಮಾನ ಮಾಡಿದ ಈ ಸಮಿತಿಯನ್ನು ಈ ಕೂಡಲೆ ವಜಾಗೊಳಿಸುವಂತೆ ಆಗ್ರಹಿಸಿದರು.

ನಿಜವಾದ ಅರ್ಹತೆಯಿರುವ ಶಿಕ್ಷಣತಜ್ಞರ ಸಮಿತಿಯ ಮೂಲಕ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಗಳನ್ನು ಸರಿಪಡಿಸಬೇಕು ಹಾಗೂ ನಾಡಿನ ಸಂಸ್ಕೃತಿ, ಪರಂಪರೆ, ಸಂವಿಧಾನದ ಆಶಯಗಳ ಬಗ್ಗೆ ಗೌರವವಿರುವವರನ್ನು ನೇಮಿಸಬೇಕು. ಅಲ್ಲದೆ ಯಡವಟ್ಟುಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ; ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಪಠ್ಯಪುಸ್ತಕ ಪರಿಷ್ಕರಣೆಯಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವು ತಲೆತಗ್ಗಿಸಬೇಕಾದ ಪರಿಸ್ಥಿತಿ ಎದುರಾಗಿದೆ, ಪೂರ್ವಗ್ರಹ ಪೀಡಿತ ವ್ಯಕ್ತಿಯಿಂದ ಪಠ್ತಪುಸ್ತಕ ಪರಿಷ್ಕರಣೆ ಮಾಡಿಸಿರುವುದು ನಾಡು-ನುಡಿ ಸಂಸ್ಕೃತಿಗೆ ಮಾಡಿರುವ ದ್ರೋಹ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಪರಿಷತ್ ವಿಪಕ್ಷ ನಾಯಕರಾದ ಬಿ.ಕೆ ಹರಿಪ್ರಸಾದ್, ಹಿರಿಯ ಕಾಂಗ್ರೆಸ್ ಮುಖಂಡರಾದ ಆರ್‌.ವಿ ದೇಶಪಾಂಡೆ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...