Homeರಾಷ್ಟ್ರೀಯಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಎನ್‌ಎಸ್‌ಎ ಅಜಿತ್‌ ದೋವಲ್‌‌‌ ಅವರು ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸುತ್ತೇವೆಂದು ಭರವಸೆ ನೀಡಿದ್ದಾಗಿ ಇರಾನ್‌ ಹೇಳಿದೆ

- Advertisement -
- Advertisement -

ಇರಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್ ಅವರು ಬುಧವಾರ ಭಾರತಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಬಿಜೆಪಿಯ ಮಾಜಿ ವಕ್ತಾರೆ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಉಭಯ ದೇಶಗಳ ನಾಯಕರ ನಡುವೆ ನಡೆದ ಚರ್ಚೆಗಳ ಬಗ್ಗೆ ಮತ್ತೆ ಎಲ್ಲ ಚಿತ್ತ ಹೊರಳಿದೆ.

ನೂಪುರ್ ಶರ್ಮಾ ವಿರುದ್ಧ ತೀವ್ರವಾಗಿ ಟೀಕಿಸಿದ ಅರಬ್ ರಾಷ್ಟ್ರಗಳಲ್ಲಿ ಇರಾನ್ ಕೂಡ ಸೇರಿದ್ದರೂ, ದ್ವಿಪಕ್ಷೀಯ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿಲ್ಲ ಎಂದು ಭಾರತದ ಉನ್ನತ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರವಾದಿ ವಿರುದ್ಧ ಮಾಡಲಾಗಿದ್ದ ವಿವಾದಾತ್ಮಕ ಹೇಳಿಕೆಯನ್ನು ಉಲ್ಲೇಖಿಸಿ, ಟ್ವೀಟ್‌ಗಳು ಮತ್ತು ಕಾಮೆಂಟ್‌ಗಳು ಭಾರತ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದರು.

ಇದನ್ನೂ ಓದಿ: ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು: ಇರಾನ್‌ಗೆ ಎನ್‌ಎಸ್‌ಎ ಅಜಿತ್‌ ದೋವಲ್‌‌

ಆದಾಗ್ಯೂ, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಬುಧವಾರ ನಡೆದ ಸಭೆಯಲ್ಲಿ ಹೊಸೈನ್ ಅಮೀರ್ ಅಬ್ದೊಲ್ಲಾಹಿಯಾನ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಗಳು ಹೇಳಿವೆ. “ಪ್ರವಾದಿ ಮುಹಮ್ಮದ್‌ ಅವರ ವಿರುದ್ಧ ಮಾಡಲಾಗಿರುವ ವಿವಾದಾತ್ಮಕ ಹೇಳಿಕೆಗಳಿಂದ  ಉಂಟಾಗಿರುವ ‘ನಕಾರಾತ್ಮಕ ವಾತಾವರಣ’ ವನ್ನು ಅಬ್ದುಲ್ಲಾಹಿಯನ್ ಸೂಚಿಸಿದ್ದಾರೆ” ಎಂದು ಇಂಡಿಯಾ ಟುಡೇ ಇರಾನಿನ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

“ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಭಾರತ ಭರವಸೆ ನೀಡಿದೆ” ಎಂದು ಇರಾನ್‌ ತಿಳಸಿದೆ. ಎನ್‌ಎಸ್‌ಎ ಅಜಿತ್ ದೋವಲ್‌ ಅವರು, “ಅಪರಾಧಿಗಳ ವಿರುದ್ಧ ಗಂಭೀರವಾಗಿ ವ್ಯವಹರಿಸಲಾಗುವುದು ಎಂದು ಹೇಳಿದ್ದಾರೆ” ಎಂದು ಅದು ಉಲ್ಲೇಖಿಸಿದೆ.

ಬುಧವಾರ ರಾತ್ರಿ ದ್ವಿಪಕ್ಷೀಯ ಕಾರ್ಯತಂತ್ರದ ಮಾತುಕತೆ ನಡೆಸಲು ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಮತ್ತು ಇತರ ಭಾರತೀಯ ಅಧಿಕಾರಿಗಳನ್ನು ಭೇಟಿಯಾದ ಬಗ್ಗೆ ಅಮಿರ್‌ ಅಬ್ದೊಲ್ಲಾಹಿಯಾನ್ ಟ್ವೀಟ್‌ನಲ್ಲಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಒಳಗೊಳ್ಳದ ಮಾದರಿಯ ಸರ್ಕಾರಕ್ಕೆ ವಿದೇಶದಿಂದ ಬಂದೊದಗಿದ ಘಾಸಿ

ಇರಾನ್ ಮತ್ತು ಭಾರತ ಎರಡೂ ದೇಶಗಳು ದೈವಿಕ ಧರ್ಮಗಳು ಮತ್ತು ಇಸ್ಲಾಮಿಕ್ ಪವಿತ್ರತೆಗಳನ್ನು ಗೌರವಿಸುವ ಅಗತ್ಯವನ್ನು ಒಪ್ಪಿಕೊಂಡಿವೆ ಮತ್ತು ವಿಭಜಕ ಹೇಳಿಕೆಗಳನ್ನು ವಿರೋಧಿಸಿವೆ ಎಂದು ಅವರು ಹೇಳಿದ್ದು, “ಭಾರತವು ಸಹಾನುಭೂತಿ ಮತ್ತು ಸಹಿಷ್ಣುತೆಯ ನಾಡು” ಎಂದು ಹೊಗಳಿದ್ದಾರೆ.

ಇದಲ್ಲದೆ, ಗದ್ದಲ ಮತ್ತು ಗಲಾಟೆಗಳು ಭಾರತಕ್ಕೆ ಹೊಂದಿಕೆಯಾಗುವುದಿಲ್ಲ ಅಥವಾ ಭಾರತದಲ್ಲಿ ಇದು ಬೇರೂರಿರಿಲ್ಲ ಎಂದು ಅವರು ಹೇಳಿದ್ದಾರೆ. ಈ ರೀತಿಯ ವಿವಾದಾತ್ಮಕ ಹೇಳಿಕೆಯನ್ನು ಭಾರತದ ಎಲ್ಲಾ ಧರ್ಮಗಳ ಅನುಯಾಯಿಗಳು ವಿರೋಧಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....