Homeರಾಷ್ಟ್ರೀಯಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಎನ್‌ಎಸ್‌ಎ ಅಜಿತ್‌ ದೋವಲ್‌‌‌ ಅವರು ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸುತ್ತೇವೆಂದು ಭರವಸೆ ನೀಡಿದ್ದಾಗಿ ಇರಾನ್‌ ಹೇಳಿದೆ

- Advertisement -
- Advertisement -

ಇರಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್ ಅವರು ಬುಧವಾರ ಭಾರತಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಬಿಜೆಪಿಯ ಮಾಜಿ ವಕ್ತಾರೆ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಉಭಯ ದೇಶಗಳ ನಾಯಕರ ನಡುವೆ ನಡೆದ ಚರ್ಚೆಗಳ ಬಗ್ಗೆ ಮತ್ತೆ ಎಲ್ಲ ಚಿತ್ತ ಹೊರಳಿದೆ.

ನೂಪುರ್ ಶರ್ಮಾ ವಿರುದ್ಧ ತೀವ್ರವಾಗಿ ಟೀಕಿಸಿದ ಅರಬ್ ರಾಷ್ಟ್ರಗಳಲ್ಲಿ ಇರಾನ್ ಕೂಡ ಸೇರಿದ್ದರೂ, ದ್ವಿಪಕ್ಷೀಯ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗಿಲ್ಲ ಎಂದು ಭಾರತದ ಉನ್ನತ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರವಾದಿ ವಿರುದ್ಧ ಮಾಡಲಾಗಿದ್ದ ವಿವಾದಾತ್ಮಕ ಹೇಳಿಕೆಯನ್ನು ಉಲ್ಲೇಖಿಸಿ, ಟ್ವೀಟ್‌ಗಳು ಮತ್ತು ಕಾಮೆಂಟ್‌ಗಳು ಭಾರತ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದರು.

ಇದನ್ನೂ ಓದಿ: ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು: ಇರಾನ್‌ಗೆ ಎನ್‌ಎಸ್‌ಎ ಅಜಿತ್‌ ದೋವಲ್‌‌

ಆದಾಗ್ಯೂ, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಬುಧವಾರ ನಡೆದ ಸಭೆಯಲ್ಲಿ ಹೊಸೈನ್ ಅಮೀರ್ ಅಬ್ದೊಲ್ಲಾಹಿಯಾನ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಗಳು ಹೇಳಿವೆ. “ಪ್ರವಾದಿ ಮುಹಮ್ಮದ್‌ ಅವರ ವಿರುದ್ಧ ಮಾಡಲಾಗಿರುವ ವಿವಾದಾತ್ಮಕ ಹೇಳಿಕೆಗಳಿಂದ  ಉಂಟಾಗಿರುವ ‘ನಕಾರಾತ್ಮಕ ವಾತಾವರಣ’ ವನ್ನು ಅಬ್ದುಲ್ಲಾಹಿಯನ್ ಸೂಚಿಸಿದ್ದಾರೆ” ಎಂದು ಇಂಡಿಯಾ ಟುಡೇ ಇರಾನಿನ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

“ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಭಾರತ ಭರವಸೆ ನೀಡಿದೆ” ಎಂದು ಇರಾನ್‌ ತಿಳಸಿದೆ. ಎನ್‌ಎಸ್‌ಎ ಅಜಿತ್ ದೋವಲ್‌ ಅವರು, “ಅಪರಾಧಿಗಳ ವಿರುದ್ಧ ಗಂಭೀರವಾಗಿ ವ್ಯವಹರಿಸಲಾಗುವುದು ಎಂದು ಹೇಳಿದ್ದಾರೆ” ಎಂದು ಅದು ಉಲ್ಲೇಖಿಸಿದೆ.

ಬುಧವಾರ ರಾತ್ರಿ ದ್ವಿಪಕ್ಷೀಯ ಕಾರ್ಯತಂತ್ರದ ಮಾತುಕತೆ ನಡೆಸಲು ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಮತ್ತು ಇತರ ಭಾರತೀಯ ಅಧಿಕಾರಿಗಳನ್ನು ಭೇಟಿಯಾದ ಬಗ್ಗೆ ಅಮಿರ್‌ ಅಬ್ದೊಲ್ಲಾಹಿಯಾನ್ ಟ್ವೀಟ್‌ನಲ್ಲಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಒಳಗೊಳ್ಳದ ಮಾದರಿಯ ಸರ್ಕಾರಕ್ಕೆ ವಿದೇಶದಿಂದ ಬಂದೊದಗಿದ ಘಾಸಿ

ಇರಾನ್ ಮತ್ತು ಭಾರತ ಎರಡೂ ದೇಶಗಳು ದೈವಿಕ ಧರ್ಮಗಳು ಮತ್ತು ಇಸ್ಲಾಮಿಕ್ ಪವಿತ್ರತೆಗಳನ್ನು ಗೌರವಿಸುವ ಅಗತ್ಯವನ್ನು ಒಪ್ಪಿಕೊಂಡಿವೆ ಮತ್ತು ವಿಭಜಕ ಹೇಳಿಕೆಗಳನ್ನು ವಿರೋಧಿಸಿವೆ ಎಂದು ಅವರು ಹೇಳಿದ್ದು, “ಭಾರತವು ಸಹಾನುಭೂತಿ ಮತ್ತು ಸಹಿಷ್ಣುತೆಯ ನಾಡು” ಎಂದು ಹೊಗಳಿದ್ದಾರೆ.

ಇದಲ್ಲದೆ, ಗದ್ದಲ ಮತ್ತು ಗಲಾಟೆಗಳು ಭಾರತಕ್ಕೆ ಹೊಂದಿಕೆಯಾಗುವುದಿಲ್ಲ ಅಥವಾ ಭಾರತದಲ್ಲಿ ಇದು ಬೇರೂರಿರಿಲ್ಲ ಎಂದು ಅವರು ಹೇಳಿದ್ದಾರೆ. ಈ ರೀತಿಯ ವಿವಾದಾತ್ಮಕ ಹೇಳಿಕೆಯನ್ನು ಭಾರತದ ಎಲ್ಲಾ ಧರ್ಮಗಳ ಅನುಯಾಯಿಗಳು ವಿರೋಧಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...