Homeಅಂಕಣಗಳುಜನಪರ ಹೋರಾಟಗಾರರ ಅಕ್ರಮ ಬಂಧನ

ಜನಪರ ಹೋರಾಟಗಾರರ ಅಕ್ರಮ ಬಂಧನ

- Advertisement -
- Advertisement -

| ಗೌರಿ ಲಂಕೇಶ್
ಜೂನ್ 3, 2009 (ಸಂಪಾದಕೀಯದಿಂದ) |

ಮಾನವತಾವಾದಿ ಬಿನಾಯಕ್ ಸೇನ್‍ರವರ ಅಕ್ರಮ ಬಂಧನ ಕುರಿತಂತೆ ಬರಹಗಾರ ಅಸೀಮ್ ಶ್ರೀವಾಸ್ತವ ಅವರು ಇತ್ತೀಚೆಗೆ ಬರೆದಿರುವ ಲೇಖನದಲ್ಲಿ ಹಲವು ಸ್ವಾರಸ್ಯಕರವಾದ ಸಂಗತಿಗಳಿವೆ. ಅವನ್ನು ಇಲ್ಲಿ ನೀಡಬೇಕೆನಿಸುತ್ತಿದೆ.
ಮೊದಲನೆಯದು ಇಬ್ಬರು ಖ್ಯಾತ ಅಮೆರಿಕನ್ನರ ನಡುವೆ ಸಂಭವಿಸಿದ್ದು.
ಮೆಕ್ಸಿಕೋ ದೇಶದ ಮೇಲೆ ಅಮೆರಿಕ ದಾಳಿ ಮಾಡಿದಾಗ ಖ್ಯಾತ ನಿಸರ್ಗವಾದಿ ಹೆನ್ರಿ ಥೋರೊ ಅದನ್ನು ಪ್ರತಿಭಟಿಸಿದರಲ್ಲದೆ, ತಮ್ಮ ಸರ್ಕಾರದ ನಿಲುವಿನ ವಿರುದ್ಧ ತಮ್ಮ ವಿರೋಧವನ್ನು ವ್ಯಕ್ತಪಡಿಸಲು ತೆರಿಗೆಗಳನ್ನು ಕಟ್ಟಲು ನಿರಾಕರಿಸಿದ್ದರು. ಆಗ ಅಮೆರಿಕನ್ ಸರ್ಕಾರ ಥೋರೊ ಅವರನ್ನು ಬಂಧಿಸಿ ಜೈಲಿಗಟ್ಟಿತು.
ಥೋರೊ ಅವರ ಸ್ನೇಹಿತ ಮತ್ತು ಹಿತೈಷಿಯಾಗಿದ್ದ ಹಾರ್ವರ್ಡ್ ವಿಶ್ವವಿದ್ಯಾಲಯದ ಖ್ಯಾತ ಬರಹಗಾರ ರಾಲ್ಫನಾಲ್ವ ಎಮರ್ಸನ್ ಥೋರೊರನ್ನು ನೋಡಲು ಜೈಲಿಗೆ ಬಂದರು. ಜೈಲಿನ ಸರಳುಗಳ ಹಿಂದಿದ್ದ ಥೋರೊ ಅವರನ್ನು ಕಂಡು ಎಮರ್ಸನ್ ಅವರು “ನೀನು ಇದರೊಳಗೆ ಏನು ಮಾಡುತ್ತಿದ್ದೀಯಾ?” ಎಂದು ಕೇಳಿದರು. ಆಗ ಥೋರೊ “ನೀನು ಹೊರಗಡೆ ಏನು ಮಾಡುತ್ತಿದ್ದೀಯಾ?” ಎಂದು ಮರುಪ್ರಶ್ನೆ ಹಾಕುವ ಮೂಲಕ ಉತ್ತರಿಸಿದರು. ಅದನ್ನು ಕೇಳಿ ಎಮರ್ಸನ್‍ರವರ ಮುಖ ನಾಚಿಕೆಯಿಂದ ಕೆಂಪೇರಿತು.
ಅಂದರೆ, ತನ್ನಂಥವರನ್ನೇ ಸರ್ಕಾರ ಬಂಧಿಸಿರುವಾಗ ಎಮರ್ಸನ್ ಥರದ ಜನ ಹೊರಗಡೆ ಏನು ಮಾಡುತ್ತಿದ್ದಾರೆ ಎಂಬುದೇ ಥೋರೊ ಅವರ ಪ್ರಶ್ನೆಯಾಗಿತ್ತು.
ಎರಡನೆ ಸಂಗತಿ ಎರಡು ರೀತಿಯ ಜನರ ಪಟ್ಟಿಗಳಿಗೆ ಸಂಬಂಧಪಟ್ಟಿದ್ದು.
ಮೊದಲನೆ ಪಟ್ಟಿಯಲ್ಲಿ ಸಾಕ್ರೆಟೀಸ್, ನೆಲ್ಸನ್ ಮಂಡೇಲ, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಜಯಪ್ರಕಾಶ್ ನಾರಾಯಣ್, ಫೈಜ್ ಅಹಮ್ಮದ್ ಫೈಜ್, ಬಿನಾಯಕ್ ಸೇನ್, ಇರೋಮ್ ಶರ್ಮಿಳಾ, ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ಹೆನ್ರಿ ಥೋರೊ ಮತ್ತು ಫ್ರೆಡೋರ್ ದಸ್ತೋವಸ್ಕಿ ತರಹದ ಜನ ಇದ್ದಾರೆ. ಅವರೆಲ್ಲರ ನಡುವೆ ಒಂದು ಸಾಮ್ಯತೆ ಇದೆ. ಆ ಸಾಮ್ಯತೆ ಏನು?
ಎರಡನೆ ಪಟ್ಟಿಯಲ್ಲಿ ಒಸಾಮಾ ಬಿನ್ ಲಾಡನ್, ಜಗದೀಶ್ ಟೈಟ್ಲರ್, ಸಜ್ಜನ ಕುಮಾರ್, ನರೇಂದ್ರ ಮೋದಿ, ಜ್ಯೋತಿ ಬಸು, ಬಾಳಾ ಠಾಕ್ರೆ, ಜಾರ್ಜ್ ಬುಷ್, ಟೋನಿ ಬ್ಲೇರ್, ಡೊನಾಲ್ಡ್ ರಮ್ಸ್‍ಫೆಲ್ಟ್, ಡಿಕ್ ಚೆನಿ, ಹಿಟ್ಲರ್ ಮತ್ತು ಜೋಸೆಫ್ ಸ್ಟಾಲಿನ್ ಥರದವರಿದ್ದಾರೆ. ಇವರೆಲ್ಲರ ನಡುವೆಯೂ ಒಂದು ರೀತಿಯ ಸಾಮ್ಯತೆ ಇದೆ. ಈ ಸಾಮ್ಯತೆ ಏನು?
ಮೊದಲನೆ ಪಟ್ಟಿಯಲ್ಲಿರುವವರೆಲ್ಲರೂ ಸರ್ಕಾರ ನಡೆಸುತ್ತಿದ್ದ ಅನ್ಯಾಯಗಳನ್ನು ಪ್ರತಿಭಟಿಸಿದ್ದಕ್ಕೆ ಜೈಲಿಗೆ ದೂಡಲ್ಪಟ್ಟವರು. ಎರಡನೇ ಪಟ್ಟಿಯಲ್ಲಿರುವವರು ಸಾಮೂಹಿಕ ಮಾರಣಹೋಮಕ್ಕೆ ಕಾರಣೀಭೂತರಾಗಿದ್ದರೂ, ಎಂದೂ ಶಿಕ್ಷೆಗೆ ಗುರಿಯಾಗದೆ ಸಮಾಜದಲ್ಲಿ ಮೆರೆದವರು.
ಶ್ರೀವಾಸ್ತವ ಅವರ ಲೇಖನದಲ್ಲಿನ ಮೂರನೆ ಸಂಗತಿ ದಾಮೋದರ್ ರಥ್ ಎಂಬಾತನನ್ನು ಕುರಿತದ್ದು, ಒರಿಸ್ಸಾದ ಭಿನ್ನಮತೀಯರಾದ ರಥ್ ಅವರು ಕೆಲ ವರ್ಷಗಳ ಹಿಂದೆ ಒಂದು ಜೈಲಿನ ಬಾಗಿಲಲ್ಲಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಅವರ ಬೇಡಿಕೆ ಏನಾಗಿತ್ತೆಂದರೆ ಒರಿಸ್ಸಾ ಸರ್ಕಾರ ತನ್ನ ಪೆದ್ದುತನದಿಂದಾಗಿ ಹಲವಾರು ಅಮಾಯಕ ಜನರನ್ನು ಅಕ್ರಮಬಾಗಿ ಜೈಲಿನಲ್ಲಿಟ್ಟಿದ್ದರಿಂದ ತನ್ನನ್ನೂ ಜೈಲಿನಲ್ಲಿ ಬಂಧಿಸಬೇಕೆಂಬುದೇ ಆಗಿತ್ತು.
ರಥ್‍ರವರು ಹೀಗೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಹತ್ತು ದಿನಗಳ ಕಾಲ ಮುಂದುವರೆಸಿದಾಗ ಕೊನೆಗೂ ಜೈಲಧಿಕಾರಿಯೊಬ್ಬ ಬಂದು “ನೀನು ಯಾಕೆ ಇಷ್ಟು ಕಷ್ಟ ಅನುಭವಿಸುತ್ತಿದ್ದೀಯಾ?” ಎಂದು ಕೇಳಿದ. ಆಗ ರಥ್ “ಜೈಲಿನ ಹೊರಗಡೆಗಿಂತ ಜೈಲಿನೊಳಗೇ ಉತ್ತಮ ಜನರಿದ್ದಾರೆ. ಅದಕ್ಕೆ” ಎಂದು ಉತ್ತರಿಸಿದರು. ಮರುಕ್ಷಣವೇ ರಥ್‍ರವರ ಮಿತ್ರರನ್ನು ಬಂಧಮುಕ್ತರನ್ನಾಗಿಸಲಾಯಿತು.
ಶ್ರೀವಾಸ್ತವ ಅವರ ಲೇಖನದ ಸಾರಾಂಶ ಇವತ್ತು ಭಯೋತ್ಪಾದನೆಯನ್ನು ನಿಗ್ರಹಿಸುವ ನೆಪದಲ್ಲಿ ಸರ್ಕಾರಗಳು ಮಾನವ ಹಕ್ಕುಗಳ ಉಲ್ಲಂಘನೆಗಳಲ್ಲಿ ತೊಡಗಿದೆ. ಆದರೆ ನಾವು ನಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕಿದ್ದರೆ ಸರ್ಕಾರವೇ ಭಯೋತ್ಪಾದಕನಂತೆ ವರ್ತಿಸುವುದನ್ನು ನಾವೆಲ್ಲರೂ ಜೊತೆಗೂಡಿ ತಡೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...