Homeಅಂಕಣಗಳುಜನಪರ ಹೋರಾಟಗಾರರ ಅಕ್ರಮ ಬಂಧನ

ಜನಪರ ಹೋರಾಟಗಾರರ ಅಕ್ರಮ ಬಂಧನ

- Advertisement -
- Advertisement -

| ಗೌರಿ ಲಂಕೇಶ್
ಜೂನ್ 3, 2009 (ಸಂಪಾದಕೀಯದಿಂದ) |

ಮಾನವತಾವಾದಿ ಬಿನಾಯಕ್ ಸೇನ್‍ರವರ ಅಕ್ರಮ ಬಂಧನ ಕುರಿತಂತೆ ಬರಹಗಾರ ಅಸೀಮ್ ಶ್ರೀವಾಸ್ತವ ಅವರು ಇತ್ತೀಚೆಗೆ ಬರೆದಿರುವ ಲೇಖನದಲ್ಲಿ ಹಲವು ಸ್ವಾರಸ್ಯಕರವಾದ ಸಂಗತಿಗಳಿವೆ. ಅವನ್ನು ಇಲ್ಲಿ ನೀಡಬೇಕೆನಿಸುತ್ತಿದೆ.
ಮೊದಲನೆಯದು ಇಬ್ಬರು ಖ್ಯಾತ ಅಮೆರಿಕನ್ನರ ನಡುವೆ ಸಂಭವಿಸಿದ್ದು.
ಮೆಕ್ಸಿಕೋ ದೇಶದ ಮೇಲೆ ಅಮೆರಿಕ ದಾಳಿ ಮಾಡಿದಾಗ ಖ್ಯಾತ ನಿಸರ್ಗವಾದಿ ಹೆನ್ರಿ ಥೋರೊ ಅದನ್ನು ಪ್ರತಿಭಟಿಸಿದರಲ್ಲದೆ, ತಮ್ಮ ಸರ್ಕಾರದ ನಿಲುವಿನ ವಿರುದ್ಧ ತಮ್ಮ ವಿರೋಧವನ್ನು ವ್ಯಕ್ತಪಡಿಸಲು ತೆರಿಗೆಗಳನ್ನು ಕಟ್ಟಲು ನಿರಾಕರಿಸಿದ್ದರು. ಆಗ ಅಮೆರಿಕನ್ ಸರ್ಕಾರ ಥೋರೊ ಅವರನ್ನು ಬಂಧಿಸಿ ಜೈಲಿಗಟ್ಟಿತು.
ಥೋರೊ ಅವರ ಸ್ನೇಹಿತ ಮತ್ತು ಹಿತೈಷಿಯಾಗಿದ್ದ ಹಾರ್ವರ್ಡ್ ವಿಶ್ವವಿದ್ಯಾಲಯದ ಖ್ಯಾತ ಬರಹಗಾರ ರಾಲ್ಫನಾಲ್ವ ಎಮರ್ಸನ್ ಥೋರೊರನ್ನು ನೋಡಲು ಜೈಲಿಗೆ ಬಂದರು. ಜೈಲಿನ ಸರಳುಗಳ ಹಿಂದಿದ್ದ ಥೋರೊ ಅವರನ್ನು ಕಂಡು ಎಮರ್ಸನ್ ಅವರು “ನೀನು ಇದರೊಳಗೆ ಏನು ಮಾಡುತ್ತಿದ್ದೀಯಾ?” ಎಂದು ಕೇಳಿದರು. ಆಗ ಥೋರೊ “ನೀನು ಹೊರಗಡೆ ಏನು ಮಾಡುತ್ತಿದ್ದೀಯಾ?” ಎಂದು ಮರುಪ್ರಶ್ನೆ ಹಾಕುವ ಮೂಲಕ ಉತ್ತರಿಸಿದರು. ಅದನ್ನು ಕೇಳಿ ಎಮರ್ಸನ್‍ರವರ ಮುಖ ನಾಚಿಕೆಯಿಂದ ಕೆಂಪೇರಿತು.
ಅಂದರೆ, ತನ್ನಂಥವರನ್ನೇ ಸರ್ಕಾರ ಬಂಧಿಸಿರುವಾಗ ಎಮರ್ಸನ್ ಥರದ ಜನ ಹೊರಗಡೆ ಏನು ಮಾಡುತ್ತಿದ್ದಾರೆ ಎಂಬುದೇ ಥೋರೊ ಅವರ ಪ್ರಶ್ನೆಯಾಗಿತ್ತು.
ಎರಡನೆ ಸಂಗತಿ ಎರಡು ರೀತಿಯ ಜನರ ಪಟ್ಟಿಗಳಿಗೆ ಸಂಬಂಧಪಟ್ಟಿದ್ದು.
ಮೊದಲನೆ ಪಟ್ಟಿಯಲ್ಲಿ ಸಾಕ್ರೆಟೀಸ್, ನೆಲ್ಸನ್ ಮಂಡೇಲ, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಜಯಪ್ರಕಾಶ್ ನಾರಾಯಣ್, ಫೈಜ್ ಅಹಮ್ಮದ್ ಫೈಜ್, ಬಿನಾಯಕ್ ಸೇನ್, ಇರೋಮ್ ಶರ್ಮಿಳಾ, ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ಹೆನ್ರಿ ಥೋರೊ ಮತ್ತು ಫ್ರೆಡೋರ್ ದಸ್ತೋವಸ್ಕಿ ತರಹದ ಜನ ಇದ್ದಾರೆ. ಅವರೆಲ್ಲರ ನಡುವೆ ಒಂದು ಸಾಮ್ಯತೆ ಇದೆ. ಆ ಸಾಮ್ಯತೆ ಏನು?
ಎರಡನೆ ಪಟ್ಟಿಯಲ್ಲಿ ಒಸಾಮಾ ಬಿನ್ ಲಾಡನ್, ಜಗದೀಶ್ ಟೈಟ್ಲರ್, ಸಜ್ಜನ ಕುಮಾರ್, ನರೇಂದ್ರ ಮೋದಿ, ಜ್ಯೋತಿ ಬಸು, ಬಾಳಾ ಠಾಕ್ರೆ, ಜಾರ್ಜ್ ಬುಷ್, ಟೋನಿ ಬ್ಲೇರ್, ಡೊನಾಲ್ಡ್ ರಮ್ಸ್‍ಫೆಲ್ಟ್, ಡಿಕ್ ಚೆನಿ, ಹಿಟ್ಲರ್ ಮತ್ತು ಜೋಸೆಫ್ ಸ್ಟಾಲಿನ್ ಥರದವರಿದ್ದಾರೆ. ಇವರೆಲ್ಲರ ನಡುವೆಯೂ ಒಂದು ರೀತಿಯ ಸಾಮ್ಯತೆ ಇದೆ. ಈ ಸಾಮ್ಯತೆ ಏನು?
ಮೊದಲನೆ ಪಟ್ಟಿಯಲ್ಲಿರುವವರೆಲ್ಲರೂ ಸರ್ಕಾರ ನಡೆಸುತ್ತಿದ್ದ ಅನ್ಯಾಯಗಳನ್ನು ಪ್ರತಿಭಟಿಸಿದ್ದಕ್ಕೆ ಜೈಲಿಗೆ ದೂಡಲ್ಪಟ್ಟವರು. ಎರಡನೇ ಪಟ್ಟಿಯಲ್ಲಿರುವವರು ಸಾಮೂಹಿಕ ಮಾರಣಹೋಮಕ್ಕೆ ಕಾರಣೀಭೂತರಾಗಿದ್ದರೂ, ಎಂದೂ ಶಿಕ್ಷೆಗೆ ಗುರಿಯಾಗದೆ ಸಮಾಜದಲ್ಲಿ ಮೆರೆದವರು.
ಶ್ರೀವಾಸ್ತವ ಅವರ ಲೇಖನದಲ್ಲಿನ ಮೂರನೆ ಸಂಗತಿ ದಾಮೋದರ್ ರಥ್ ಎಂಬಾತನನ್ನು ಕುರಿತದ್ದು, ಒರಿಸ್ಸಾದ ಭಿನ್ನಮತೀಯರಾದ ರಥ್ ಅವರು ಕೆಲ ವರ್ಷಗಳ ಹಿಂದೆ ಒಂದು ಜೈಲಿನ ಬಾಗಿಲಲ್ಲಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಅವರ ಬೇಡಿಕೆ ಏನಾಗಿತ್ತೆಂದರೆ ಒರಿಸ್ಸಾ ಸರ್ಕಾರ ತನ್ನ ಪೆದ್ದುತನದಿಂದಾಗಿ ಹಲವಾರು ಅಮಾಯಕ ಜನರನ್ನು ಅಕ್ರಮಬಾಗಿ ಜೈಲಿನಲ್ಲಿಟ್ಟಿದ್ದರಿಂದ ತನ್ನನ್ನೂ ಜೈಲಿನಲ್ಲಿ ಬಂಧಿಸಬೇಕೆಂಬುದೇ ಆಗಿತ್ತು.
ರಥ್‍ರವರು ಹೀಗೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಹತ್ತು ದಿನಗಳ ಕಾಲ ಮುಂದುವರೆಸಿದಾಗ ಕೊನೆಗೂ ಜೈಲಧಿಕಾರಿಯೊಬ್ಬ ಬಂದು “ನೀನು ಯಾಕೆ ಇಷ್ಟು ಕಷ್ಟ ಅನುಭವಿಸುತ್ತಿದ್ದೀಯಾ?” ಎಂದು ಕೇಳಿದ. ಆಗ ರಥ್ “ಜೈಲಿನ ಹೊರಗಡೆಗಿಂತ ಜೈಲಿನೊಳಗೇ ಉತ್ತಮ ಜನರಿದ್ದಾರೆ. ಅದಕ್ಕೆ” ಎಂದು ಉತ್ತರಿಸಿದರು. ಮರುಕ್ಷಣವೇ ರಥ್‍ರವರ ಮಿತ್ರರನ್ನು ಬಂಧಮುಕ್ತರನ್ನಾಗಿಸಲಾಯಿತು.
ಶ್ರೀವಾಸ್ತವ ಅವರ ಲೇಖನದ ಸಾರಾಂಶ ಇವತ್ತು ಭಯೋತ್ಪಾದನೆಯನ್ನು ನಿಗ್ರಹಿಸುವ ನೆಪದಲ್ಲಿ ಸರ್ಕಾರಗಳು ಮಾನವ ಹಕ್ಕುಗಳ ಉಲ್ಲಂಘನೆಗಳಲ್ಲಿ ತೊಡಗಿದೆ. ಆದರೆ ನಾವು ನಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕಿದ್ದರೆ ಸರ್ಕಾರವೇ ಭಯೋತ್ಪಾದಕನಂತೆ ವರ್ತಿಸುವುದನ್ನು ನಾವೆಲ್ಲರೂ ಜೊತೆಗೂಡಿ ತಡೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...