Homeಅಂಕಣಗಳುಜನಪರ ಹೋರಾಟಗಾರರ ಅಕ್ರಮ ಬಂಧನ

ಜನಪರ ಹೋರಾಟಗಾರರ ಅಕ್ರಮ ಬಂಧನ

- Advertisement -
- Advertisement -

| ಗೌರಿ ಲಂಕೇಶ್
ಜೂನ್ 3, 2009 (ಸಂಪಾದಕೀಯದಿಂದ) |

ಮಾನವತಾವಾದಿ ಬಿನಾಯಕ್ ಸೇನ್‍ರವರ ಅಕ್ರಮ ಬಂಧನ ಕುರಿತಂತೆ ಬರಹಗಾರ ಅಸೀಮ್ ಶ್ರೀವಾಸ್ತವ ಅವರು ಇತ್ತೀಚೆಗೆ ಬರೆದಿರುವ ಲೇಖನದಲ್ಲಿ ಹಲವು ಸ್ವಾರಸ್ಯಕರವಾದ ಸಂಗತಿಗಳಿವೆ. ಅವನ್ನು ಇಲ್ಲಿ ನೀಡಬೇಕೆನಿಸುತ್ತಿದೆ.
ಮೊದಲನೆಯದು ಇಬ್ಬರು ಖ್ಯಾತ ಅಮೆರಿಕನ್ನರ ನಡುವೆ ಸಂಭವಿಸಿದ್ದು.
ಮೆಕ್ಸಿಕೋ ದೇಶದ ಮೇಲೆ ಅಮೆರಿಕ ದಾಳಿ ಮಾಡಿದಾಗ ಖ್ಯಾತ ನಿಸರ್ಗವಾದಿ ಹೆನ್ರಿ ಥೋರೊ ಅದನ್ನು ಪ್ರತಿಭಟಿಸಿದರಲ್ಲದೆ, ತಮ್ಮ ಸರ್ಕಾರದ ನಿಲುವಿನ ವಿರುದ್ಧ ತಮ್ಮ ವಿರೋಧವನ್ನು ವ್ಯಕ್ತಪಡಿಸಲು ತೆರಿಗೆಗಳನ್ನು ಕಟ್ಟಲು ನಿರಾಕರಿಸಿದ್ದರು. ಆಗ ಅಮೆರಿಕನ್ ಸರ್ಕಾರ ಥೋರೊ ಅವರನ್ನು ಬಂಧಿಸಿ ಜೈಲಿಗಟ್ಟಿತು.
ಥೋರೊ ಅವರ ಸ್ನೇಹಿತ ಮತ್ತು ಹಿತೈಷಿಯಾಗಿದ್ದ ಹಾರ್ವರ್ಡ್ ವಿಶ್ವವಿದ್ಯಾಲಯದ ಖ್ಯಾತ ಬರಹಗಾರ ರಾಲ್ಫನಾಲ್ವ ಎಮರ್ಸನ್ ಥೋರೊರನ್ನು ನೋಡಲು ಜೈಲಿಗೆ ಬಂದರು. ಜೈಲಿನ ಸರಳುಗಳ ಹಿಂದಿದ್ದ ಥೋರೊ ಅವರನ್ನು ಕಂಡು ಎಮರ್ಸನ್ ಅವರು “ನೀನು ಇದರೊಳಗೆ ಏನು ಮಾಡುತ್ತಿದ್ದೀಯಾ?” ಎಂದು ಕೇಳಿದರು. ಆಗ ಥೋರೊ “ನೀನು ಹೊರಗಡೆ ಏನು ಮಾಡುತ್ತಿದ್ದೀಯಾ?” ಎಂದು ಮರುಪ್ರಶ್ನೆ ಹಾಕುವ ಮೂಲಕ ಉತ್ತರಿಸಿದರು. ಅದನ್ನು ಕೇಳಿ ಎಮರ್ಸನ್‍ರವರ ಮುಖ ನಾಚಿಕೆಯಿಂದ ಕೆಂಪೇರಿತು.
ಅಂದರೆ, ತನ್ನಂಥವರನ್ನೇ ಸರ್ಕಾರ ಬಂಧಿಸಿರುವಾಗ ಎಮರ್ಸನ್ ಥರದ ಜನ ಹೊರಗಡೆ ಏನು ಮಾಡುತ್ತಿದ್ದಾರೆ ಎಂಬುದೇ ಥೋರೊ ಅವರ ಪ್ರಶ್ನೆಯಾಗಿತ್ತು.
ಎರಡನೆ ಸಂಗತಿ ಎರಡು ರೀತಿಯ ಜನರ ಪಟ್ಟಿಗಳಿಗೆ ಸಂಬಂಧಪಟ್ಟಿದ್ದು.
ಮೊದಲನೆ ಪಟ್ಟಿಯಲ್ಲಿ ಸಾಕ್ರೆಟೀಸ್, ನೆಲ್ಸನ್ ಮಂಡೇಲ, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಜಯಪ್ರಕಾಶ್ ನಾರಾಯಣ್, ಫೈಜ್ ಅಹಮ್ಮದ್ ಫೈಜ್, ಬಿನಾಯಕ್ ಸೇನ್, ಇರೋಮ್ ಶರ್ಮಿಳಾ, ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ಹೆನ್ರಿ ಥೋರೊ ಮತ್ತು ಫ್ರೆಡೋರ್ ದಸ್ತೋವಸ್ಕಿ ತರಹದ ಜನ ಇದ್ದಾರೆ. ಅವರೆಲ್ಲರ ನಡುವೆ ಒಂದು ಸಾಮ್ಯತೆ ಇದೆ. ಆ ಸಾಮ್ಯತೆ ಏನು?
ಎರಡನೆ ಪಟ್ಟಿಯಲ್ಲಿ ಒಸಾಮಾ ಬಿನ್ ಲಾಡನ್, ಜಗದೀಶ್ ಟೈಟ್ಲರ್, ಸಜ್ಜನ ಕುಮಾರ್, ನರೇಂದ್ರ ಮೋದಿ, ಜ್ಯೋತಿ ಬಸು, ಬಾಳಾ ಠಾಕ್ರೆ, ಜಾರ್ಜ್ ಬುಷ್, ಟೋನಿ ಬ್ಲೇರ್, ಡೊನಾಲ್ಡ್ ರಮ್ಸ್‍ಫೆಲ್ಟ್, ಡಿಕ್ ಚೆನಿ, ಹಿಟ್ಲರ್ ಮತ್ತು ಜೋಸೆಫ್ ಸ್ಟಾಲಿನ್ ಥರದವರಿದ್ದಾರೆ. ಇವರೆಲ್ಲರ ನಡುವೆಯೂ ಒಂದು ರೀತಿಯ ಸಾಮ್ಯತೆ ಇದೆ. ಈ ಸಾಮ್ಯತೆ ಏನು?
ಮೊದಲನೆ ಪಟ್ಟಿಯಲ್ಲಿರುವವರೆಲ್ಲರೂ ಸರ್ಕಾರ ನಡೆಸುತ್ತಿದ್ದ ಅನ್ಯಾಯಗಳನ್ನು ಪ್ರತಿಭಟಿಸಿದ್ದಕ್ಕೆ ಜೈಲಿಗೆ ದೂಡಲ್ಪಟ್ಟವರು. ಎರಡನೇ ಪಟ್ಟಿಯಲ್ಲಿರುವವರು ಸಾಮೂಹಿಕ ಮಾರಣಹೋಮಕ್ಕೆ ಕಾರಣೀಭೂತರಾಗಿದ್ದರೂ, ಎಂದೂ ಶಿಕ್ಷೆಗೆ ಗುರಿಯಾಗದೆ ಸಮಾಜದಲ್ಲಿ ಮೆರೆದವರು.
ಶ್ರೀವಾಸ್ತವ ಅವರ ಲೇಖನದಲ್ಲಿನ ಮೂರನೆ ಸಂಗತಿ ದಾಮೋದರ್ ರಥ್ ಎಂಬಾತನನ್ನು ಕುರಿತದ್ದು, ಒರಿಸ್ಸಾದ ಭಿನ್ನಮತೀಯರಾದ ರಥ್ ಅವರು ಕೆಲ ವರ್ಷಗಳ ಹಿಂದೆ ಒಂದು ಜೈಲಿನ ಬಾಗಿಲಲ್ಲಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಅವರ ಬೇಡಿಕೆ ಏನಾಗಿತ್ತೆಂದರೆ ಒರಿಸ್ಸಾ ಸರ್ಕಾರ ತನ್ನ ಪೆದ್ದುತನದಿಂದಾಗಿ ಹಲವಾರು ಅಮಾಯಕ ಜನರನ್ನು ಅಕ್ರಮಬಾಗಿ ಜೈಲಿನಲ್ಲಿಟ್ಟಿದ್ದರಿಂದ ತನ್ನನ್ನೂ ಜೈಲಿನಲ್ಲಿ ಬಂಧಿಸಬೇಕೆಂಬುದೇ ಆಗಿತ್ತು.
ರಥ್‍ರವರು ಹೀಗೆ ತಮ್ಮ ಉಪವಾಸ ಸತ್ಯಾಗ್ರಹವನ್ನು ಹತ್ತು ದಿನಗಳ ಕಾಲ ಮುಂದುವರೆಸಿದಾಗ ಕೊನೆಗೂ ಜೈಲಧಿಕಾರಿಯೊಬ್ಬ ಬಂದು “ನೀನು ಯಾಕೆ ಇಷ್ಟು ಕಷ್ಟ ಅನುಭವಿಸುತ್ತಿದ್ದೀಯಾ?” ಎಂದು ಕೇಳಿದ. ಆಗ ರಥ್ “ಜೈಲಿನ ಹೊರಗಡೆಗಿಂತ ಜೈಲಿನೊಳಗೇ ಉತ್ತಮ ಜನರಿದ್ದಾರೆ. ಅದಕ್ಕೆ” ಎಂದು ಉತ್ತರಿಸಿದರು. ಮರುಕ್ಷಣವೇ ರಥ್‍ರವರ ಮಿತ್ರರನ್ನು ಬಂಧಮುಕ್ತರನ್ನಾಗಿಸಲಾಯಿತು.
ಶ್ರೀವಾಸ್ತವ ಅವರ ಲೇಖನದ ಸಾರಾಂಶ ಇವತ್ತು ಭಯೋತ್ಪಾದನೆಯನ್ನು ನಿಗ್ರಹಿಸುವ ನೆಪದಲ್ಲಿ ಸರ್ಕಾರಗಳು ಮಾನವ ಹಕ್ಕುಗಳ ಉಲ್ಲಂಘನೆಗಳಲ್ಲಿ ತೊಡಗಿದೆ. ಆದರೆ ನಾವು ನಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕಿದ್ದರೆ ಸರ್ಕಾರವೇ ಭಯೋತ್ಪಾದಕನಂತೆ ವರ್ತಿಸುವುದನ್ನು ನಾವೆಲ್ಲರೂ ಜೊತೆಗೂಡಿ ತಡೆಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...