Homeಕರ್ನಾಟಕಪಠ್ಯಪುಸ್ತಕ ಮತ್ತು ದಲಿತ ಚಿಂತನೆಗಳ ಹೊರಗಿಡುವಿಕೆ

ಪಠ್ಯಪುಸ್ತಕ ಮತ್ತು ದಲಿತ ಚಿಂತನೆಗಳ ಹೊರಗಿಡುವಿಕೆ

- Advertisement -
- Advertisement -

ಭಾರತದ ಬಹುಸಂಖ್ಯಾತ ಮತೀಯವಾದವು ತನ್ನ ರಾಜಕೀಯ ಸಾಮಾಜಿಕ ಧಾರ್ಮಿಕ ಐಡಿಯಾಲಜಿಯನ್ನು ಹೇರಲು ಹೇಗೆ ಪಠ್ಯಪುಸ್ತಕಗಳನ್ನು ಪ್ರಮುಖ ಮಾಧ್ಯಮವಾಗಿಸಿಕೊಳ್ಳುತ್ತದೆ ಎಂಬುದು, ಈಚಿನ ಪಠ್ಯಪರಿಷ್ಕರಣೆಯ ಪ್ರಕರಣದಲ್ಲಿ ಸಾರ್ವಜನಿಕಗೊಂಡಿದೆ. ಈ ವಿವಾದದಲ್ಲಿ ಬಹಿರಂಗಗೊಂಡಿರುವ ಇನ್ನೊಂದು ಮುಖವೆಂದರೆ, ಅದು ಏನೆಲ್ಲವನ್ನು ಆಚೆಗಿಡುತ್ತದೆ ಅಥವಾ ಒಳಗೊಳ್ಳಲು ಅಳುಕುತ್ತದೆ ಎನ್ನುವುದು. ಅದು ಒಳಗೊಳ್ಳಲು ನಿರಾಕರಿಸುವ ಸಂಗತಿಗಳಲ್ಲಿ ಮುಸ್ಲಿಮರ ಕೊಡುಗೆ, ಸ್ತ್ರೀಸಮಾನತೆ
ಅಥವಾ ಲಿಂಗತಾರತಮ್ಯ ವಿರೋಧ, ಜಾತಿವಾದ ನಿರಾಕರಣೆ, ಸಮಾಜವಾದಿ ಆಶಯ ಹಾಗೂ ದಲಿತ ಚಿಂತನೆಗೆ ಸಂಬಂಧಿಸಿದವಾಗಿವೆ. ಈ ಟಿಪ್ಪಣಿಯಲ್ಲಿ ಕೊನೆಯ ಅಂಶದ ಬಗ್ಗೆ ಮಾತ್ರ ವಿಶ್ಲೇಷಿಸಲು ಯತ್ನಿಸಿದೆ.

ಇಲ್ಲಿ ದಲಿತ ಚಿಂತನೆಯೆಂದರೆ, ಜಾತಿಪದ್ಧತಿಯ ಕ್ರೌರ್ಯವನ್ನು ಕಾಣಿಸುವ, ದಲಿತರೇ ರೂಢಿಸಿಕೊಂಡಿರುವ ಭಾಷೆ, ಆಹಾರ, ಆಚರಣೆಗಳನ್ನು ಘನತೀಕರಿಸುವ; ಅಂಬೇಡ್ಕರ್ ಹಾಗೂ ಬೌದ್ಧಧಮ್ಮವನ್ನು ವಿಮೋಚನೆಯ ಹಾದಿಯೆಂದು ಕಾಣಿಸುವ ಆಶಯವುಳ್ಳ ಸಂಗತಿಗಳು. ತನ್ನ ಸಾಮಾಜಿಕ ರಾಜಕೀಯ ಬುನಾದಿಯ ವಿಸ್ತರಣೆಗಾಗಿ ದಲಿತರನ್ನು ಒಳಗೊಳ್ಳುವ, ಅವರಿಗೆ ಸ್ಥಾನಮಾನ ಕಲ್ಪಿಸುವ, ತನ್ನ ಸಿದ್ಧಾಂತದ ಪ್ರಚಾರಕ್ಕೆ ಬಳಸುವ ರಾಜಕಾರಣವನ್ನು ಮತೀಯವಾದವು ಸಮರ್ಥವಾಗಿ ಮಾಡಿಕೊಂಡು ಬಂದಿದೆ. ಅಂಬೇಡ್ಕರ್‌ವಾದದಲ್ಲಿ ರೂಪುಗೊಂಡ ದಲಿತ ನಾಯಕರನ್ನು ಕೂಡ ಒಳಗೊಂಡಿರುವುದು, ಅದರ ಸೈದ್ಧಾಂತಿಕ ತಂತ್ರಗಾರಿಕೆ ಮತ್ತು ರಾಜಕೀಯ ಯಶಸ್ಸಿನ ದೊಡ್ಡ ಸಾಧನೆಯಾಗಿದೆ. ಕಾಂಗ್ರೆಸ್ಸನ್ನು ಮತ್ತು ಮುಸ್ಲಿಮರನ್ನು ದುರುಳೀಕರಿಸಲು ಅಂಬೇಡ್ಕರ್ ಅವರು ನಿರ್ದಿಷ್ಟ ಚಾರಿತ್ರಿಕ ಸಂದರ್ಭದಲ್ಲಿ ಬರೆದ ಬರೆಹಗಳನ್ನು ತಂತ್ರಗಾರಿಕೆಯಿಂದ ಕೂಡ ವ್ಯಾಖ್ಯಾನಿಸುತ್ತಿದೆ. ಹಾಗಿದ್ದರೂ ಬಾಬಾಸಾಹೇಬರು ಪ್ರತಿಪಾದಿಸಿದ, ದಲಿತರ ವಿಮೋಚನೆಗೆ ಹಾದಿಹಾಸುವ ದಲಿತ ಚಿಂತನೆಯ ಮೇಲ್ಕಾಣಿಸಿದ ನಾಲ್ಕು ಅಂಶಗಳನ್ನು ಒಳಗೊಳ್ಳಲು ಅದು ಯಾಕೆ ಹಿಂಜರಿಯುತ್ತದೆ? ಯಾಕೆಂದರೆ, ಈ ನಾಲ್ಕು ಅಂಶಗಳು, ಹಿಂದುತ್ವದ ರಾಜಕಾರಣವನ್ನು, ಅರ್ಥಾತ್ ಅದರ ತಿರುಳಾದ ಬ್ರಾಹ್ಮಣವಾದವನ್ನು ಒಳಗಿನಿಂದಲೇ ಆಸ್ಫೋಟಿಸುತ್ತವೆ. ಹೀಗಾಗಿಯೇ ಅದು ಚೆನ್ನಣ್ಣ ವಾಲೀಕಾರರು ಬಾಬಾಸಾಹೇಬರ ಮೇಲೆ ಬರೆದ ಹಾಡನ್ನು ಕೈಬಿಟ್ಟಿದೆ. ಅರವಿಂದ ಮಾಲಗತ್ತಿಯವರ ಬುದ್ಧ ಮತ್ತು ಆತನ ಧಮ್ಮವನ್ನು ಕುರಿತ ಹಾಡನ್ನು ಹೊರಗಿಟ್ಟಿದೆ. ಬಸವಣ್ಣ ಅಂಬೇಡ್ಕರ್ ಬುದ್ಧ ಕುವೆಂಪು ಭಗತ್‌ಸಿಂಗ್ ಕುರಿತ ಅದರ ಆಳದಲ್ಲಿರುವ ಈ ಅಳುಕು ಮತ್ತು ಆತಂಕಗಳು, ಅದು ಮುಸ್ಲಿಮರ ಕ್ರೈಸ್ತರ ವಿರೋಧಿ ಎಂಬ ಜನಪ್ರಿಯ ಮಿಥ್ಯೆಯನ್ನು ಒಡೆದುಹಾಕಿವೆ. ಅದು ಕಟ್ಟಲಿರುವ ಸಮಾಜದಲ್ಲಿ ಮತ್ತು ದೇಶದಲ್ಲಿ ಯಾವೆಲ್ಲ ಸಂಗತಿಗಳು ಇರುತ್ತವೆ ಮತ್ತು ಇರುವುದಿಲ್ಲ ಎಂಬುದರ ಮುನ್ನೋಟವನ್ನು ಒದಗಿಸಿವೆ. ಆದ್ದರಿಂದ ಪರಿಷ್ಕೃತ ಪಠ್ಯಗಳು, ಮತೀಯವಾದಿ ಭಾರತದ ಪರಿಕಲ್ಪನೆಯಲ್ಲಿ (ಐಡಿಯಾ ಆಫ್ ಇಂಡಿಯಾ) ಯಾವೆಲ್ಲ ಮೌಲ್ಯಗಳ ಹೇರಿಕೆಯಾಗುತ್ತದೆ, ಯಾವನ್ನು ಬದಿಗೆ ಸರಿಸಲಾಗುತ್ತದೆ ಮತ್ತು ಯಾವನ್ನು ಮರೆಮಾಚಲಾಗುತ್ತದೆ ಎಂಬುದರ ಪ್ರಾತ್ಯಕ್ಷಿತೆಗಳಾಗಿವೆ. ಈ ಹಿನ್ನೆಲೆಯಲ್ಲಿ ಮತೀಯ ನಂಜಿನ ಪಠ್ಯಪುಸ್ತಕಗಳನ್ನು ಪ್ರತಿರೋಧಿಸುವ ಚಳವಳಿಯಲ್ಲಿ, ಬಸವ, ಕುವೆಂಪು, ಬುದ್ಧ ಮತ್ತು ಅಂಬೇಡ್ಕರ್ ನದಿಗಳು ಕೂಡಿರುವುದು ಆಕಸ್ಮಿಕವಾಗಿಲ್ಲ. ಈ ಪ್ರತಿರೋಧದ ಆಂದೋಲನವನ್ನು ದೇವನೂರರು ತಮ್ಮ ಪಠ್ಯ ಹಿಂತೆಗೆಯುವ ಮೂಲಕ ಆರಂಭಿಸಿರುವುದು ಕೂಡ ಆಕಸ್ಮಿಕವಾಗಿಲ್ಲ.


ಇದನ್ನೂ ಓದಿ: ಒಳಗೊಳ್ಳದ ಮಾದರಿಯ ಸರ್ಕಾರಕ್ಕೆ ವಿದೇಶದಿಂದ ಬಂದೊದಗಿದ ಘಾಸಿ

ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...