Homeಮುಖಪುಟಹೈದ್ರಾಬಾದ್ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ತೆಲಂಗಾಣ ಪೊಲೀಸರ ಚಿಂತನೆ

ಹೈದ್ರಾಬಾದ್ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ತೆಲಂಗಾಣ ಪೊಲೀಸರ ಚಿಂತನೆ

- Advertisement -
- Advertisement -

ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರಣೆಯ ಸಮಯದಲ್ಲಿ ಐವರು ಸಿಸಿಎಲ್‌ಗಳನ್ನು (ಕಾನೂನಿನ ಪ್ರಕ್ರಿಯೆಯಲ್ಲಿ ತೊಡಗಿರುವ ಮಕ್ಕಳು) ವಯಸ್ಕರಂತೆ ಪರಿಗಣಿಸುವಂತೆ ಬಾಲ ನ್ಯಾಯ ಮಂಡಳಿಗೆ ತೆಲಂಗಾಣ ಪೊಲೀಸರು ಅರ್ಜಿ ಸಲ್ಲಿಸಲು ಚಿಂತನೆ ನಡೆಸುತ್ತಿದ್ದಾರೆ.

ಆರೋಪಿಗಳಿಗೆ ಗರಿಷ್ಠ ಶಿಕ್ಷೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸಚಿವ ಕೆ.ಟಿ.ರಾಮರಾವ್ ಪೊಲೀಸರನ್ನು ಅಭಿನಂದಿಸಿದ್ದಾರೆ. ಮೇ 28 ರಂದು 17 ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಐವರು ಬಾಲಾಪರಾಧಿಗಳು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಒಬ್ಬ ಬಾಲಾಪರಾಧಿ ಸಂತ್ರಸ್ತೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಆದರೆ ಅಪರಾಧದಲ್ಲಿ ಆತ ಭಾಗಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈದರಾಬಾದ್ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಪಿಟಿಐಗೆ ತಿಳಿಸಿದ್ದು, “ಆರೋಪಿಗಳಿಗೆ ಗರಿಷ್ಠ ಶಿಕ್ಷೆಯನ್ನು ಖಾತ್ರಿಪಡಿಸಿಕೊಳ್ಳಲು ಐವರನ್ನೂ ವಯಸ್ಕರಂತೆ ಪರಿಗಣಿಸಲು ಮಂಡಳಿಯ ಮುಂದೆ ಮನವಿ ಸಲ್ಲಿಸಲು ಮುಂದಾಗಿದ್ದೇವೆ. ಘೋರ ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಕಠಿಣ ಸೆಕ್ಷನ್‌ಗಳನ್ನು ಅನ್ವಯಿಸಲಾಗಿದೆ. ಈ ಕಾನೂನಿನ ಶಿಕ್ಷೆಯ ಪ್ರಕಾರ ಸಾಯುವವರೆಗೂ ಜೈಲಿನಲ್ಲಿರುಬಹುದು ಅಥವಾ ಮರಣದಂಡನೆಯಾಗಬಹುದು” ಎಂದಿದ್ದಾರೆ.

ಪ್ರಕರಣವು ಈಗ ತನಿಖೆಯಲ್ಲಿದೆ. ಚಾರ್ಜ್‌ಶೀಟ್ ಸಲ್ಲಿಸಿದ ನಂತರ, ಐವರು ಸಿಸಿಎಲ್‌ಗಳನ್ನು ವಯಸ್ಕರಂತೆ ವಿಚಾರಣೆಗೆ ಒಳಪಡಿಸುವಂತೆ ಶಿಫಾರಸು ಮಾಡಲು ಬಾಲ ನ್ಯಾಯ ಮಂಡಳಿಗೆ (ಜೆಜೆಬಿ) ವಿನಂತಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. “ಇಲ್ಲದಿದ್ದರೆ ಅವರು ಬಾಲಾಪರಾಧಿಗಳಾಗಿ ಉಳಿಯುತ್ತಾರೆ. ಕೇವಲ ಮೂರು ವರ್ಷಗಳ ಶಿಕ್ಷೆಗೆ ಒಳಗಾಗುತ್ತಾರೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ತೆಲಂಗಾಣ ರಾಷ್ಟ್ರರಕ್ಷಣಾ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ  ಕೆ.ಟಿ.ರಾಮರಾವ್‌ ಟ್ವೀಟ್ ಮಾಡಿದ್ದು, “ನಾನು ತೆಲಂಗಾಣ ಪೊಲೀಸರ ನಿಲುವನ್ನು ಸ್ವಾಗತಿಸುತ್ತೇನೆ ಹಾಗೂ ಬೆಂಬಲಿಸುತ್ತೇನೆ. ಅತ್ಯಾಚಾರದಂತಹ ಘೋರ ಅಪರಾಧವನ್ನು ಮಾಡುವಷ್ಟು ವಯಸ್ಕರಾಗಿದ್ದರೆ, ಅವರನ್ನು ವಯಸ್ಕರಂತೆ ಶಿಕ್ಷಿಸಬೇಕು. ಆದರೆ ಬಾಲಾಪರಾಧಿಯಾಗಿ ಪರಿಗಣಿಸಬಾರದು” ಎಂದಿದ್ದಾರೆ.

ಸ್ಥಳೀಯ ನ್ಯಾಯಾಲಯವು ಕಸ್ಟಡಿಗೆ ನೀಡಿದ ನಂತರ ಸೆರೆಮನೆಯಲ್ಲಿದ್ದ ವಯಸ್ಕ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಅಪರಾಧದ ದೃಶ್ಯವನ್ನು ಮರುಸೃಷ್ಟಿ ಮಾಡುವುದು ಸೇರಿದಂತೆ ಪ್ರಕರಣದ ಹೆಚ್ಚಿನ ತನಿಖೆಯ ಭಾಗವಾಗಿ ಆರೋಪಿಯನ್ನು ಕಸ್ಟಡಿ ವಿಚಾರಣೆಗೆ ಒಳಪಡಿಸಲು ಪೊಲೀಸರು ಕೋರಿದ್ದಾರೆ.

ಸಂಬಂಧಿತ ಬೆಳವಣಿಗೆಯಲ್ಲಿ, ಜುವೆನೈಲ್ ಜಸ್ಟಿಸ್ ಬೋರ್ಡ್ ಪ್ರತಿಕ್ರಿಯೆ ನೀಡಿದ್ದು, ಜೂನ್ 10 ರಿಂದ ನಾಲ್ಕು ದಿನಗಳ ಕಾಲ ವಿಚಾರಣೆಗಾಗಿ ಮೂವರು ಸಿಸಿಎಲ್‌ಗಳನ್ನು ಪೊಲೀಸ್ ಕಸ್ಟಡಿಗೆ ನೀಡಲು ಒಪ್ಪಿಗೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...