Homeಮುಖಪುಟಹೈದ್ರಾಬಾದ್ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ತೆಲಂಗಾಣ ಪೊಲೀಸರ ಚಿಂತನೆ

ಹೈದ್ರಾಬಾದ್ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ತೆಲಂಗಾಣ ಪೊಲೀಸರ ಚಿಂತನೆ

- Advertisement -
- Advertisement -

ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರಣೆಯ ಸಮಯದಲ್ಲಿ ಐವರು ಸಿಸಿಎಲ್‌ಗಳನ್ನು (ಕಾನೂನಿನ ಪ್ರಕ್ರಿಯೆಯಲ್ಲಿ ತೊಡಗಿರುವ ಮಕ್ಕಳು) ವಯಸ್ಕರಂತೆ ಪರಿಗಣಿಸುವಂತೆ ಬಾಲ ನ್ಯಾಯ ಮಂಡಳಿಗೆ ತೆಲಂಗಾಣ ಪೊಲೀಸರು ಅರ್ಜಿ ಸಲ್ಲಿಸಲು ಚಿಂತನೆ ನಡೆಸುತ್ತಿದ್ದಾರೆ.

ಆರೋಪಿಗಳಿಗೆ ಗರಿಷ್ಠ ಶಿಕ್ಷೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸಚಿವ ಕೆ.ಟಿ.ರಾಮರಾವ್ ಪೊಲೀಸರನ್ನು ಅಭಿನಂದಿಸಿದ್ದಾರೆ. ಮೇ 28 ರಂದು 17 ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಐವರು ಬಾಲಾಪರಾಧಿಗಳು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಒಬ್ಬ ಬಾಲಾಪರಾಧಿ ಸಂತ್ರಸ್ತೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಆದರೆ ಅಪರಾಧದಲ್ಲಿ ಆತ ಭಾಗಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈದರಾಬಾದ್ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಪಿಟಿಐಗೆ ತಿಳಿಸಿದ್ದು, “ಆರೋಪಿಗಳಿಗೆ ಗರಿಷ್ಠ ಶಿಕ್ಷೆಯನ್ನು ಖಾತ್ರಿಪಡಿಸಿಕೊಳ್ಳಲು ಐವರನ್ನೂ ವಯಸ್ಕರಂತೆ ಪರಿಗಣಿಸಲು ಮಂಡಳಿಯ ಮುಂದೆ ಮನವಿ ಸಲ್ಲಿಸಲು ಮುಂದಾಗಿದ್ದೇವೆ. ಘೋರ ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಕಠಿಣ ಸೆಕ್ಷನ್‌ಗಳನ್ನು ಅನ್ವಯಿಸಲಾಗಿದೆ. ಈ ಕಾನೂನಿನ ಶಿಕ್ಷೆಯ ಪ್ರಕಾರ ಸಾಯುವವರೆಗೂ ಜೈಲಿನಲ್ಲಿರುಬಹುದು ಅಥವಾ ಮರಣದಂಡನೆಯಾಗಬಹುದು” ಎಂದಿದ್ದಾರೆ.

ಪ್ರಕರಣವು ಈಗ ತನಿಖೆಯಲ್ಲಿದೆ. ಚಾರ್ಜ್‌ಶೀಟ್ ಸಲ್ಲಿಸಿದ ನಂತರ, ಐವರು ಸಿಸಿಎಲ್‌ಗಳನ್ನು ವಯಸ್ಕರಂತೆ ವಿಚಾರಣೆಗೆ ಒಳಪಡಿಸುವಂತೆ ಶಿಫಾರಸು ಮಾಡಲು ಬಾಲ ನ್ಯಾಯ ಮಂಡಳಿಗೆ (ಜೆಜೆಬಿ) ವಿನಂತಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. “ಇಲ್ಲದಿದ್ದರೆ ಅವರು ಬಾಲಾಪರಾಧಿಗಳಾಗಿ ಉಳಿಯುತ್ತಾರೆ. ಕೇವಲ ಮೂರು ವರ್ಷಗಳ ಶಿಕ್ಷೆಗೆ ಒಳಗಾಗುತ್ತಾರೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ತೆಲಂಗಾಣ ರಾಷ್ಟ್ರರಕ್ಷಣಾ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ  ಕೆ.ಟಿ.ರಾಮರಾವ್‌ ಟ್ವೀಟ್ ಮಾಡಿದ್ದು, “ನಾನು ತೆಲಂಗಾಣ ಪೊಲೀಸರ ನಿಲುವನ್ನು ಸ್ವಾಗತಿಸುತ್ತೇನೆ ಹಾಗೂ ಬೆಂಬಲಿಸುತ್ತೇನೆ. ಅತ್ಯಾಚಾರದಂತಹ ಘೋರ ಅಪರಾಧವನ್ನು ಮಾಡುವಷ್ಟು ವಯಸ್ಕರಾಗಿದ್ದರೆ, ಅವರನ್ನು ವಯಸ್ಕರಂತೆ ಶಿಕ್ಷಿಸಬೇಕು. ಆದರೆ ಬಾಲಾಪರಾಧಿಯಾಗಿ ಪರಿಗಣಿಸಬಾರದು” ಎಂದಿದ್ದಾರೆ.

ಸ್ಥಳೀಯ ನ್ಯಾಯಾಲಯವು ಕಸ್ಟಡಿಗೆ ನೀಡಿದ ನಂತರ ಸೆರೆಮನೆಯಲ್ಲಿದ್ದ ವಯಸ್ಕ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಅಪರಾಧದ ದೃಶ್ಯವನ್ನು ಮರುಸೃಷ್ಟಿ ಮಾಡುವುದು ಸೇರಿದಂತೆ ಪ್ರಕರಣದ ಹೆಚ್ಚಿನ ತನಿಖೆಯ ಭಾಗವಾಗಿ ಆರೋಪಿಯನ್ನು ಕಸ್ಟಡಿ ವಿಚಾರಣೆಗೆ ಒಳಪಡಿಸಲು ಪೊಲೀಸರು ಕೋರಿದ್ದಾರೆ.

ಸಂಬಂಧಿತ ಬೆಳವಣಿಗೆಯಲ್ಲಿ, ಜುವೆನೈಲ್ ಜಸ್ಟಿಸ್ ಬೋರ್ಡ್ ಪ್ರತಿಕ್ರಿಯೆ ನೀಡಿದ್ದು, ಜೂನ್ 10 ರಿಂದ ನಾಲ್ಕು ದಿನಗಳ ಕಾಲ ವಿಚಾರಣೆಗಾಗಿ ಮೂವರು ಸಿಸಿಎಲ್‌ಗಳನ್ನು ಪೊಲೀಸ್ ಕಸ್ಟಡಿಗೆ ನೀಡಲು ಒಪ್ಪಿಗೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...