Homeಕರ್ನಾಟಕಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

ಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

- Advertisement -
- Advertisement -

ಆದೇಶ ಇಲ್ಲದೆ ಪಠ್ಯ ಪರಿಷ್ಕರಣೆ ಮಾಡಿರುವ ಸಂಗತಿ ವರಿದಿಯಾಗಿದ್ದು, ಸರ್ಕಾರದ ನಿರ್ಲಕ್ಷದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಬಿ.ಸಿ.ನಾಗೇಶ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ.

ಆದೇಶವಿಲ್ಲದೆ ಪಠ್ಯಪರಿಷ್ಕರಣೆಯಾಗಿರುವ ಕುರಿತು ಕನ್ನಡದ ವಿಶ್ವಾಸಾರ್ಹ ದಿನಪತ್ರಿಕೆ ‘ಪ್ರಜಾವಾಣಿ’ ವರದಿ ಮಾಡಿದೆ. “2022–23ನೇ ಸಾಲಿಗೆ ಪರಿಷ್ಕೃತ ಪಠ್ಯಪುಸ್ತಕಗಳನ್ನುಮುದ್ರಿಸಿ ವಿತರಿಸುವ ಬಗ್ಗೆ ಮಾರ್ಚ್‌ 9 ರಂದು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ, ‘ಪಠ್ಯಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿ, ಮುದ್ರಿಸಲು ಸೂಚಿಸಲಾಗಿದೆ’ ಎಂಬ ಉಲ್ಲೇಖವಿದೆ” ಎಂದು ವರದಿ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರದ ಕೆಲಸವನ್ನೋ ಅಥವಾ ಕಾಮಗಾರಿಗೆ ಅನುದಾನ ಕೊಡಿಸಿಯೇ ತೀರುವೆಎಂಬ ವಿಶ್ವಾಸ ಇರುವ ಮುಖ್ಯಮಂತ್ರಿ ಅಥವಾ ಸಚಿವರು ಅಧಿಕೃತ ಆದೇಶ ಇಲ್ಲದೇ ಕೆಲಸ ಮಾಡಿಸುತ್ತಾರೆ. ಕೆಲಸ ಮುಗಿದ ಮೇಲೆ ಘಟನೋತ್ತರ ಅನುಮತಿ/ ಆದೇಶ ಹೊರಡಿಸುವ ಪರಿಪಾಟ ಇದೆ. ಮೌಖಿಕ ಸೂಚನೆ ಮೇರೆಗೆ ಪಠ್ಯಪುಸ್ತಕ ಪರಿಷ್ಕರಣೆಗೆ ಅವಕಾಶ ಕೊಟ್ಟು, ಬಳಿಕ ಆದೇಶ ಹೊರಡಿಸಿರುವುದು ತಕರಾರಿಗೆ ಕಾರಣವಾಗಿದೆ” ಎಂದು ವರದಿ ಹೇಳಿದೆ.

“ಸರ್ಕಾರದ ನಿಯಮಗಳ ಅನುಸಾರ, ವರದಿ ಸಲ್ಲಿಸಿದ ಬಳಿಕ ಪರಿಷ್ಕರಣೆ ಅಗತ್ಯವಿದ್ದಲ್ಲಿ ವಿಷಯ ತಜ್ಞರ ಸಮಿತಿ ರಚಿಸಬೇಕಾಗಿತ್ತು ಅಥವಾ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಗೆ ಪರಿಷ್ಕರಣೆ ಮಾಡುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಬೇಕಿತ್ತು. ಸದರಿ ಆದೇಶದಲ್ಲಿ ನಿಯಮ ಮತ್ತು ಷರತ್ತುಗಳನ್ನು ನೀಡಬೇಕಿತ್ತು. ಆ ಕೆಲಸ ಆಗಿಯೇ ಇಲ್ಲ ಎಂದು ಇಲಾಖೆ ಮೂಲಗಳು ಹೇಳಿವೆ” ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ: ಸ್ಪಷ್ಟನೆಗೆ ನಕಾರ

ಪಠ್ಯಪುಸ್ತಕ ಪರಿಶೀಲನೆಯ ಅಧ್ವಾನಗಳು ಒಂದೊಂದಾಗಿ ಚರ್ಚೆಗೆ ಬರುತ್ತಿರುವಲ್ಲಿ ‘ಪ್ರಜಾವಾಣಿ’ ಕೆಲಸವೂ ಮುಖ್ಯವಾಗಿದೆ. ಜನಾಕ್ರೋಶಕ್ಕೆ ಮಣಿದು ಸರ್ಕಾರ ಕೆಲವು ತಿದ್ದುಪಡಿಗಳನ್ನೂ ಮಾಡಿಕೊಂಡಿದೆ. (ಉದಾಹರಣೆಗೆ: ಭಗತ್‌ಸಿಂಗ್‌ ಪಾಠಕ್ಕೆ ಕೋಕ್‌ ಎಂಬ ವರದಿಯನ್ನು ಮೊದಲಿಗೆ ‘ಪ್ರಜಾವಾಣಿ’ ಮಾಡಿತ್ತು. ಜನಾಕ್ರೋಶಕ್ಕೆ ಮಣಿದು ಸರ್ಕಾರ ಆ ಪಠ್ಯವನ್ನು ಸೇರಿಸಿಕೊಂಡಿದೆ). ಆದರೆ ಪಠ್ಯಪುಸ್ತಕಕ್ಕೆ ಸಂಬಂಧಿಸಿ ವಿವಿಧ ಮಾಧ್ಯಮಗಳು ನಿರಂತರ ವರದಿ ಮಾಡುತ್ತಿರುವುದರಿಂದ ಬಿ.ಸಿ.ನಾಗೇಶ್ ವಿಚಲಿತರಾದಂತೆ ಕಾಣುತ್ತಿದೆ.

‘ಪ್ರಜಾವಾಣಿ’ಯ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ವರದಿಗಾರರು ಸಚಿವ ಬಿ.ಸಿ.ನಾಗೇಶ್ ಅವರನ್ನು ಸಂಪರ್ಕಿಸಿದಾಗ, “ದಿನಕ್ಕೊಂದು ವರದಿಯನ್ನು ಪ್ರಜಾವಾಣಿಯವರು ಮಾಡುತ್ತಿದ್ದಾರೆ. ಅವರಿಗೆ ನಾವು ಪ್ರತಿಕ್ರಿಯೆ ನೀಡಬೇಕಿಲ್ಲ. ನಾರಾಯಣಗುರು ಪಾಠ ಇಲ್ಲ ಎಂದವರು ಅವರೇ, ಭಗತ್‌ಸಿಂಗ್ ಪಾಠಕ್ಕೆ ಕೊಕ್ ಎಂದವರೂ ಅವರೇ. ಎಲ್ಲದ್ದಕ್ಕೂ ಉತ್ತರ ಕೊಡೋಣವೇ? ಅವರು ಬರೆಯಲಿ, ನಾವು ಜನಕ್ಕೆ ಉತ್ತರ ಕೊಡುತ್ತೇವೆ” ಎಂದು ಹೇಳಿ ಕಾಲ್‌ ಕಟ್ ಮಾಡಿದರು. ವರದಿಗಳಿಗೆ ಯಾವುದೇ ಸ್ಪಷ್ಟನೆಯನ್ನು ಸಚಿವರು ನೀಡಲಿಲ್ಲ.

ಜನಾಕ್ರೋಶ

ಆದೇಶ ಇಲ್ಲದೇ ಪಠ್ಯ ಪರಿಷ್ಕರಣೆ ಮಾಡಿರುವ ಕುರಿತು ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ವಿಷಯ ಹೊರ ಬಂದ ಬಳಿಕ ಅನೇಕರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸರ್ಕಾರ ನಿಯಮಬಾಹಿರವಾಗಿ ನಡೆದುಕೊಂಡಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಇದು ಸಂತೋಷ್‌ ಪಾಟೀಲ್ ಕೇಸ್‌

“ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಸಂತೋಷ್ ಪಾಟೀಲ್‌ ಕಾರ್ಯಾದೇಶ (Work order) ಇಲ್ಲದೇ ಕೆಲಸ ಮಾಡಿರುವುದೇ ಅಕ್ರಮ ಎಂದು ಆಡಳಿತ ಪಕ್ಷದವರು ವಾದ ಮಾಡಿದ್ದರು. ಈಗ ಇಲ್ಲಿ ಆಗಿರುವುದೇನು? ಆದೇಶ ಇಲ್ಲದೇ ಸಚಿವರ ಮೌಖಿಕ ಸೂಚನೆಯ ಮೇರೆಗೆ ಸಣ್ಣ ನೀರಿನಟ್ಯಾಂಕ್ ಕೂರಿಸಬಹುದು; ಚರಂಡಿ ಸ್ವಚ್ಛ ಮಾಡಬಹುದು ಅಥವಾ ಅಂತಹ ಯಾವುದಾದರೂ ತುರ್ತು ಕಾಮಗಾರಿ ಕೈಗೊಂಡರೆ ಒಪ್ಪಬಹುದು. ಲಕ್ಷಾಂತರ ಮಕ್ಕಳ ಕಲಿಕಾ ಭವಿಷ್ಯ ನಿರ್ಧರಿಸುವ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ಹೀಗೆ ಮಾಡಬಹುದೇ? ಹಾಗಾದರೆ ಈ ಸರ್ಕಾರದಲ್ಲಿ ಇನ್ನೂ ಏನೇನು ಆದೇಶವಿಲ್ಲದೇ ಮಂತ್ರಿ-ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ನಡೆದಿರಬಹುದು?” ಎಂದು ಡಾ.ಎಚ್.ವಿ.ವಾಸು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ನೂತನ ಪಠ್ಯ ಪುಸ್ತಕ: ಐವರು ಬಿಜೆಪಿ ನಾಯಕರಿಂದ ವಿರೋಧ

‘ಅಧ್ಯಕ್ಷನಿಂದ ಹಣ ವಸೂಲಿ ಮಾಡಿ’

“ಒಂದು ತರಗತಿಯ ಒಂದು ಅಧ್ಯಾಯದ ಪರಿಶೀಲನೆಗೆಂದು ಒಬ್ಬ ಅನರ್ಹ ವಿಕೃತನನ್ನು ನೇಮಿಸಿ, ರಾಜ್ಯದ ಶ್ರೇಷ್ಠ ತಜ್ಞರು ರಚಿಸಿದ್ದ ಎಲ್ಲಾ ತರಗತಿಗಳ ಪಠ್ಯಪುಸ್ತಕಗಳನ್ನು ಯಾವುದೇ ಆದೇಶವಿಲ್ಲದೆಯೂ ಅವನೊಬ್ಬನಿಗೆ ಹಾಳುಗೆಡವಲು ಅವಕಾಶವಿತ್ತು, ಅವನು ಮನಬಂದಂತೆ ತನ್ನ ವಿಕೃತಿಯನ್ನು ಅವುಗಳಲ್ಲಿ ತುಂಬಿಸಿದ್ದನ್ನು ಬೇರೆಯವರಲ್ಲಿ ಪರೀಕ್ಷಿಸದೆಯೇ, ಅಧಿಕಾರಿಗಳನ್ನೂ ಲೆಕ್ಕಿಸದೆಯೇ, ತರಾತುರಿಯಿಂದ ಘಟನೋತ್ತರ ಅನುಮತಿ ಒತ್ತಿ ಮುದ್ರಿಸಿ ರಾಜ್ಯದ ಮಕ್ಕಳಿಗೆ ಪುಸ್ತಕಗಳೇ ಇಲ್ಲದ ಹಾಗೆ ಮಾಡಿದ್ದಷ್ಟೇ ಅಲ್ಲದೇ ಎಲ್ಲಾ ದಾರ್ಶನಿಕರಿಗೂ, ಹಿರಿಯಾತಿಹಿರಿಯ ಸಾಹಿತಿಗಳಿಗೂ, ಎಲ್ಲಾ ಜನವರ್ಗಗಳ ಭಾವನೆಗಳಿಗೂ ಅಪಾರವಾದ ಘಾಸಿಯುಂಟು ಮಾಡಿದ್ದಕ್ಕಾಗಿ ಶಿಕ್ಷಣ ಸಚಿವರು ಇನ್ನೊಂದು ಘಳಿಗೆಯೂ ಮುಂದುವರಿಯದೆ ಕೂಡಲೇ ರಾಜೀನಾಮೆ ನೀಡಬೇಕು, ಯಾವುದೇ ಆದೇಶವಿಲ್ಲದೇ ಈ ದುಷ್ಟ ಕೆಲಸಗಳನ್ನು ಮಾಡಿದ ಅನರ್ಹ ಅಧ್ಯಕ್ಷನನ್ನು ಬಂಧಿಸಿ ಎಲ್ಲಾ ವೆಚ್ಚಗಳನ್ನು ಅವನಿಂದಲೇ ವಸೂಲಿ ಮಾಡಬೇಕು” ಎಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಒತ್ತಾಯಿಸಿದ್ದಾರೆ.

“ಪ್ರಜಾವಾಣಿಯ ಈ ವರದಿಯ ಪ್ರಕಾರ ರೋಹಿತ್ ಸಮಿತಿಗೆ ಪಠ್ಯ ತಿದ್ದುವ ಅಧಿಕಾರವೇ ಇರಲಿಲ್ಲ. ಆದರೂ ಅವನು ತಿದ್ದಿದ್ದಾನೆ. ಅವನು ತಿದ್ದಿದ ನಂತರ ರಾಜ್ಯ ಸರ್ಕಾರ ಅವನ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿದೆ. ಇದನ್ನು ನೋಡಿದರೆ ತಕ್ಷಣವೇ ರೋಹಿತ್ ಮತ್ತು ಸಮಿತಿ ಸದಸ್ಯರ ಬಂಧನ ಆಗಬೇಕು. ಬಸವರಾಜ ಬೊಮ್ಮಾಯಿ ಮತ್ತು ನಾಗೇಶ ಇಬ್ಬರು ರಾಜೀನಾಮೆ ಕೊಡಬೇಕು” ಎಂದು ಬರಹಗಾರ ನಾಗೇಗೌಡ ಕೀಲಾರ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....