Homeಕರ್ನಾಟಕಆದೇಶವಿಲ್ಲದೆ ಪಠ್ಯ ಪರಿಷ್ಕರಣೆ: ಸಂಪುಟದಿಂದ ಬಿ.ಸಿ.ನಾಗೇಶ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು

ಆದೇಶವಿಲ್ಲದೆ ಪಠ್ಯ ಪರಿಷ್ಕರಣೆ: ಸಂಪುಟದಿಂದ ಬಿ.ಸಿ.ನಾಗೇಶ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು

“ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ?”

- Advertisement -
- Advertisement -

ಸ್ಪಷ್ಟವಾದ ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕಗಳ ಪರಿಷ್ಕರಿಸಲು ಒಬ್ಬ ಕಿಡಿಗೇಡಿ ಟ್ರೋಲರ್‌ನಿಗೆ ಅವಕಾಶ ನೀಡಿ, ಈಗ ಆತ ಮಾಡಿಟ್ಟಿರುವ ಕೊಳಕುಗಳನ್ನೆಲ್ಲ ತಲೆಮೇಲೆ ಇಟ್ಟುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ವಜಾಮಾಡಬೇಕು ಮತ್ತು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ತಿಕ ಕ್ಷೇತ್ರವನ್ನೇ ಅಲ್ಲೋಲಕಲ್ಲೋಲ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಕ್ಕೆ ಕಾರಣಕರ್ತರಾಗಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಗಳು ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಪರಿಷ್ಕರಣೆಯಂತಹ ಅತ್ಯಂತ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತ: ವಿಕೃತನಾದ ಒಬ್ಬ ಯಕಶ್ಚಿತ್ ಟ್ರೋಲರ್‌‌ನಿಗೆ ಒಪ್ಪಿಸಿ, ಅವನು ಮಾಡುವ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿಟ್ಟಿರುವ ರಾಡಿಗಳನ್ನೆಲ್ಲ ಸಮರ್ಥಿಸುತ್ತಾ ಕೂತಿರುವ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ? ಈ ಮೌಖಿಕ ಸೂಚನೆಯಲ್ಲಿ ಕೆಲಸಮಾಡಿಸಿ ಅಮಾಯಕ ಗುತ್ತಿಗೆದಾರನನ್ನು ಬಲಿ ಪಡೆದಿರುವ ಈ ಸರ್ಕಾರ ಈಗ ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಠ್ಯಪುಸ್ತಕ ಸಮಿತಿಯ ವಿಕೃತ ಅಧ್ಯಕ್ಷ ಮತ್ತು ಅವನ ಗ್ಯಾಂಗ್, ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿದೆ. ಇಂತಹ ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ತರಗತಿಗಳಲ್ಲಿ ಬೋಧನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ. ಮೊದಲು ಶಿಕ್ಷಣ ಸಚಿವರನ್ನು ವಜಾಮಾಡಿ, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷನನ್ನು ಬಂಧಿಸಿ ಸರ್ಕಾರಕ್ಕೆ ಆತನಿಂದ ಆಗಿರುವ ನಷ್ಟವನ್ನು ಕಕ್ಕಿಸಿ ಮತ್ತು ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ ಎಂದು ಆಗ್ರಹಿಸಿದ್ದಾರೆ.

ಇಷ್ಟೆಲ್ಲ ತಪರಾಕಿಗಳ ನಂತರವೂ ಮುಖ್ಯಮಂತ್ರಿಗಳು ಸಂಘ ಪರಿವಾರ ಒಡ್ಡಿರುವ ನೇಣಿಗೆ ಕೊರಳೊಡ್ಡುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ. ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ದದ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ಪಕ್ಷ ಕಟಿಬದ್ದವಾಗಿದೆ. ನಮ್ಮ ಕಾರ್ಯಕರ್ತರು ಈ ಹೋರಾಟವನ್ನು ಜಿಲ್ಲೆ, ತಾಲೂಕು, ಹೋಬಳಿ ಮಟ್ಟಕ್ಕೂ ಕೊಂಡೊಯ್ಯಲಿದ್ದಾರೆ. ಆಗ ಮುಖ್ಯಮಂತ್ರಿಗಳ ತಲೆದಂಡ ಅವರ ಪಕ್ಷಕ್ಕೂ ಅನಿವಾರ್ಯವಾಗಬಹುದು ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...