Homeಮುಖಪುಟಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

ಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧದ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡ ಪಕ್ಷದ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಬಿಜೆಪಿ ಸಂಸದೆ, ಮಾಲೆಗಾಂವ್ ಸ್ಫೋಟದ ಆರೋಪಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಭಾರತ, ಇದು ಹಿಂದೂಗಳಿಗೆ ಸೇರಿದ್ದು, ಸನಾತನ ಧರ್ಮ ಇಲ್ಲಿ ಉಳಿಯುತ್ತದೆ. ಅದನ್ನು ಜೀವಂತವಾಗಿಡುವುದು ನಮ್ಮ ಜವಾಬ್ದಾರಿ. ನಾವು ಅದನ್ನು ಮಾಡುತ್ತೇವೆ” ಎಂದಿದ್ದಾರೆ.

ನೂಪುರ್ ಶರ್ಮಾ ಅವರು ಕೊಲೆ ಬೆದರಿಕೆ ಕರೆಗಳನ್ನು ಸ್ವೀಕರಿಸಿದ್ದಾರೆಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಯಾವುದೇ ನಂಬಿಕೆ ಇಲ್ಲದವರು ಇದೇ ಕೃತ್ಯ ಎಸಗುತ್ತಾರೆ. ಕಮಲೇಶ್ ತಿವಾರಿ ಏನೋ ಹೇಳಿ ಕೊಲೆಯಾದರು. ಬೇರೆಯವರು [ನೂಪುರ್ ಶರ್ಮಾ] ಏನೋ ಹೇಳಿದರು, ಅವರಿಗೆ ಕೊಲೆ ಬೆದರಿಕೆ ಕೂಡ ಬಂದಿದೆ. ಅವರು ನಮ್ಮ ದೇವರು, ದೇವತೆಗಳನ್ನು ವಿರೂಪಗೊಳಿಸುತ್ತಾರೆ. ಅದರ ಬಗ್ಗೆ ಚಲನಚಿತ್ರಗಳನ್ನೂ ಮಾಡುತ್ತಾರೆ. ಹಲವು ವರ್ಷಗಳಿಂದಲೂ ಇದನ್ನು ಮಾಡುತ್ತಿದ್ದಾರೆ. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ” ಎಂದಿದ್ದಾರೆ.

ಹಿಂದುತ್ವ ನಾಯಕ ಕಮಲೇಶ್ ತಿವಾರಿ, ಪ್ರವಾದಿ ಮುಹಮ್ಮದ್ ವಿರುದ್ಧ ಹೇಳಿಕೆ ನೀಡಿ ಶಿಕ್ಷೆಗೊಳಗಾಗಿದ್ದರು. ಅಕ್ಟೋಬರ್ 18, 2019ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ತಮ್ಮ ಮನೆಯ ಹೊರಗೆ ಕಮಲೇಶ್‌ ತಿವಾರಿ ಕೊಲೆಯಾಗಿದ್ದರು.

ತಿವಾರಿ ಅವರು ಹಿಂದೂ ಮಹಾಸಭಾದ “ಸ್ವಯಂ ಘೋಷಿತ” ಕಾರ್ಯಾಧ್ಯಕ್ಷರಾಗಿದ್ದರು. ಅಲ್ಲದೆ ಹಿಂದೂ ಮಹಾಸಭಾದ ಟಿಕೆಟ್‌ನಲ್ಲಿ 2012ರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು ಎಂದು ವರದಿಗಳು ಹೇಳುತ್ತವೆ.

ತಿವಾರಿಯವರ ಹತ್ಯೆಗೆ ಸಂಬಂಧಿಸಿದ ನಿರೂಪಣೆಯನ್ನು ಇಲ್ಲಿ ಗಮನಿಸಬೇಕು. ಪೊಲೀಸರು ಮುಸ್ಲಿಂ ಧರ್ಮಗುರುಗಳ ಮೇಲೆ ಆರೋಪ ಹೊರಿಸಿದ್ದರು. ಆದರೆ ತಿವಾರಿ ಕುಟುಂಬವು ಹತ್ಯೆಯ ವಿಚಾರದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಮತ್ತು ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರವನ್ನು ದೂಷಿಸಿದ ನಂತರ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿತು. ಥಾಥೇರಿ ನಿವಾಸಿಯಾಗಿರುವ ಸ್ಥಳೀಯ ಬಿಜೆಪಿ ಮುಖಂಡ ಶಿವಕುಮಾರ್ ಗುಪ್ತಾ ಅವರು ‘ದೇವಸ್ಥಾನ ವಿವಾದ’ದ ಹಿನ್ನೆಲೆಯಲ್ಲಿ ತಿವಾರಿ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ತಿವಾರಿ ಅವರ ತಾಯಿ ಮತ್ತು ಸೋದರಳಿಯ ಹೇಳಿಕೊಂಡಿದ್ದರು.

ನೂಪುರ್ ಶರ್ಮಾ ಅವರಲ್ಲದೆ, ಮತ್ತೊಬ್ಬ ಬಿಜೆಪಿ ನಾಯಕ ನವೀನ್ ಜಿಂದಾಲ್ ಕೂಡ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇದು ಭಾರತದಲ್ಲಿ ಮಾತ್ರವಲ್ಲದೆ ಗಲ್ಫ್ ರಾಷ್ಟ್ರಗಳಲ್ಲಿಯೂ ಪ್ರತಿಭಟನೆಗೆ ಕಾರಣವಾಯಿತು. ನಂತರ ಬಿಜೆಪಿ ಕ್ರಮ ಜರುಗಿಸಿತು. ಶರ್ಮಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತು. ಜಿಂದಾಲ್ ಅವರನ್ನು ಹೊರಹಾಕಿತು.

ಇದನ್ನೂ ಓದಿರಿ: ಒಳಗೊಳ್ಳದ ಮಾದರಿಯ ಸರ್ಕಾರಕ್ಕೆ ವಿದೇಶದಿಂದ ಬಂದೊದಗಿದ ಘಾಸಿ

ಪ್ರವಾದಿ ಮೊಹಮ್ಮದ್ ವಿರುದ್ಧದ ಹೇಳಿಕೆಗಳಿಗಾಗಿ ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನವದೆಹಲಿಯ ಜಾಮಾ ಮಸೀದಿಯ ಹೊರಗೆ, ಉತ್ತರ ಪ್ರದೇಶದ ಸಹರಾನ್‌ಪುರ, ಕೋಲ್ಕತ್ತಾದ ಪಾರ್ಕ್ ಸರ್ಕಸ್ ಪ್ರದೇಶದಲ್ಲಿ ಮತ್ತು ಭಾರತದ ಇತರ ನಗರಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿವೆ.

ಪ್ರಜ್ಞಾ ಸಿಂಗ್ ಠಾಕೂರ್ ಇಂತಹ ವಿವಾದಾತ್ಮಕ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ನವೆಂಬರ್ 2019ರಲ್ಲಿ, ಠಾಕೂರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ‘ದೇಶಭಕ್ತ’ (ದೇಶಭಕ್ತ) ಎಂದು ಕರೆದಿದ್ದರು. ಇದು ಸಂಸತ್ತಿನಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

ಮೇ 2019ರಲ್ಲಿ ಲೋಕಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಪ್ರಜ್ಞಾ ಅವರು, “ನಾಥೂರಾಮ್‌ ಗೋಡ್ಸೆ ಒಬ್ಬ ದೇಶಭಕ್ತ. ಆತ ದೇಶಭಕ್ತನಾಗಿಯೇ ಉಳಿಯುತ್ತಾನೆ. ಆತನನ್ನು ಭಯೋತ್ಪಾದಕ ಎಂದು ಕರೆಯುವ ಜನರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಂಥವರಿಗೆ ಈ ಚುನಾವಣೆಯಲ್ಲಿ ತಕ್ಕ ಪ್ರತ್ಯುತ್ತರ ನೀಡಲಾಗುವುದು” ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...