Homeಕರ್ನಾಟಕರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ಬಿಜೆಪಿಯ ನಿಜವಾದ ‘ಬಿ ಟೀಮ್‌’ ಕಾಂಗ್ರೆಸ್‌ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಮತ್ತು ಜೆಡಿಎಸ್ ಕಿತ್ತಾಟದ ನಡುವೆ ಬಿಜೆಪಿ ಮೂರು ಸ್ಥಾನಗಳನ್ನು ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದಿದೆ. ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನ ಬಿಜೆಪಿಗೆ, ಒಂದು ಸ್ಥಾನ ಕಾಂಗ್ರೆಸ್‌ಗೆ ಸಿಕ್ಕಿದೆ. ಜೆಡಿಎಸ್‌ ಮುಖಭಂಗ ಅನುಭವಿಸಿದೆ.

ಬಿಜೆಪಿಯ ನಿರ್ಮಲಾ ಸೀತಾರಾಮ್‌ (46 ಮತ), ನಟ ಜಗ್ಗೇಶ್‌ (44 ಮತ), ಲಹರ್‌ ಸಿಂಗ್‌ (33 ಮತ) ಗೆದ್ದರೆ, ಕಾಂಗ್ರೆಸ್‌ನಿಂದ ಜೈರಾಂ ರಮೇಶ್‌ (46 ಮತ) ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಕುಪೇಂದ್ರ ರೆಡ್ಡಿ 30 ಮತ, ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಮನ್ಸೂರ್‌ ಖಾನ್‌ 25 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿರ್ಮಲಾ ಮತ್ತು ಜೈರಾಂ ರಮೇಶ್‌ ಮೊದಲ ಪ್ರಾಶಸ್ತ್ಯದ ತಲಾ 46 ಮತಗಳನ್ನು ಪಡೆದರು. ಜಗ್ಗೇಶ್‌ ಮೊದಲ ಪ್ರಾಶಸ್ತ್ಯದ 44 ಮತ ಗಳಿಸಿದರು. ಲಹರ್‌ ಸಿಂಗ್‌ ಮೊದಲ ಪ್ರಾಶಸ್ತ್ಯದಲ್ಲಿ (33) ಒಂದು ಹೆಚ್ಚುವರಿ ಮತ, ಎರಡನೇ ಪ್ರಾಶಸ್ತ್ಯದಲ್ಲಿ ಎರಡು ಹೆಚ್ಚುವರಿ ಮತಗಳನ್ನು ಪಡೆದರು. ಈ ಎರಡೂ ಮತಗಳು ಕಾಂಗ್ರೆಸ್ ಕಡೆಯಿಂದ ಬಂದಿವೆ ಎನ್ನಲಾಗಿದೆ.

ಜೆಡಿಎಸ್‌ನ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಕಾಂಗ್ರೆಸ್‌ಗೆ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಬಿಜೆಪಿ ಅಭ್ಯೃರ್ಥಿಗೆ ಅಡ್ಡ ಮತದಾನ ಮಾಡಿದರು. “ನಾನು ಕಾಂಗ್ರೆಸ್‌ನಲ್ಲಿದ್ದೆ. ಕಾಂಗ್ರೆಸ್ ಪ್ರೀತಿಸುತ್ತೇನೆ” ಎಂದು ಶ್ರೀನಿವಾಸಗೌಡ ಹೇಳಿಕೆ ನೀಡಿದರು.

ಬಿಜೆಪಿ ಬಿ ಟೀಮ್ ಯಾರೆಂಬುದು ಬಯಲಾಗಿದೆ: ಕುಮಾರಸ್ವಾಮಿ ವಾಗ್ದಾಳಿ

ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಬಿ ಟೀಮ್ ಯಾವುದು? ಬಿಜೆಪಿಯ ಬಾಲಂಗೋಚಿ ಯಾರು ಎನ್ನುವುದು ಜಗಜ್ಜಾಹೀರು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಪಕ್ಷಗಳು ತಮ್ಮ ರಾಜಕೀಯ ಸ್ವಾರ್ಥ ಸಾಧನೆಗೆ ಪ್ರಾದೇಶಿಕ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡಿವೆ ಹಾಗೂ ಪ್ರಜಾಪ್ರಭುತ್ವದ ಬೆನ್ನಿಗಿರಿಯುವ ಹೀನ ಕೃತ್ಯ ಎಸಗಿವೆ. ಚುನಾವಣಾ ವ್ಯವಷ್ಟೆಯನ್ನೆ ಅಣಕ ಮಾಡುವೆ ಎಂದು ಅವರು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರು ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ತಮ್ಮ ಪಕ್ಷದ ಅಲ್ಪಸಂಖ್ಯಾತ ಅಭ್ಯರ್ಥಿ ಮನ್ಸೂರ್ ಖಾನ್ ಅವರ ಸೋಲಿಗೂ ಕಾರಣರಾಗಿದ್ದಾರೆ. ಜತೆಗೆ, ಮನಸಿನಲ್ಲಿ ನಂಜು ತುಂಬಿಕೊಂಡು ಜೆಡಿಎಸ್ ಅಭ್ಯರ್ಥಿ ಪರಾಜಯಕ್ಕೂ ಕಾರಣರಾಗಿದ್ದಾರೆ. ಜಾತ್ಯತೀತ ಶಕ್ತಿಗಳನ್ನು ಹತ್ತಿಕ್ಕಿ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವಿಗೆ ನೇರ ಕಾರಣ ಸಿದ್ದರಾಮಯ್ಯ. ಅವರ ಢೋಂಗಿ ಸೈದ್ದಾಂತಿಕ ಮುಖವಾಡ ಈ ಚುನಾವಣೆ ಮೂಲಕ ಕಳಚಿ ಬಿದ್ದಿದೆ ಎಂದಿದ್ದಾರೆ.

ಇಷ್ಟು ದಿನ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದರು. ಈಗ ಬಿಜೆಪಿಯ ಅಸಲಿ ಬಿ ಟೀಮ್ ಯಾವುದು ಮತ್ತು ಯಾರು ಎನ್ನುವುದು ದೇಶಕ್ಕೆ ಗೊತ್ತಾಗಿದೆ. ಇನ್ನು ಯಾವ ಮುಖ ಇಟ್ಟುಕೊಂಡು ಸಿದ್ದರಾಮಯ್ಯ ಅವರು ತಾವು ಜಾತ್ಯತೀತ ನಾಯಕ ಎಂದು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ನಮ್ಮ ಮನವಿಗೆ ಸ್ಪಂದಿಸಲಿಲ್ಲ: ಡಿ.ಕೆ.ಶಿವಕುಮಾರ್‌

ಇದು ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ನಾವು ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ಗಮನಿಸಬೇಕಾಗಿದೆ. ನಮಗೆ ನಮ್ಮ ಸ್ನೇಹಿತರು ಯಾರು ಎಂದು ಗೊತ್ತಿದೆ. ಪ್ರತಿಯೊಬ್ಬರಿಗೂ ಆತ್ಮಗೌರವ ಇದೆ. ಹೀಗಾಗಿ ನಾವು ಪಕ್ಷೇತರ ಅಭ್ಯರ್ಥಿ ನಿಲ್ಲಿಸುವಂತೆ ಜೆಡಿಎಸ್ ಪಕ್ಷಕ್ಕೆ ಮನವಿ ಮಾಡಿದ್ದೆವು. ನಾವು ಕೂಡ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಸುವುದಾಗಿ ಮನವಿ ಮಾಡಿದ್ದೆವು. ಇಷ್ಟೇ ಅಲ್ಲದೆ ರೆಹಮಾನ್ ಖಾನ್ ಅವರನ್ನು ಕೂಡ ಜೆಡಿಎಸ್ ನಾಯಕರ ಮನೆಗೆ ಕಳುಹಿಸಿ ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು. ಇಷ್ಟಾದರೂ ಅವರು ನಮ್ಮ ಮನವಿಗೆ ಸ್ಪಂದಿಸಲಿಲ್ಲ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

ನಾವು ಈ ಹಿಂದೆ ಹಲವು ಬಾರಿ ಅವರ ಬೆಂಬಲಕ್ಕೆ ನಿಂತಿದ್ದೇವೆ. ಕಳೆದ ಬಾರಿ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲೂ ನಾವು ಅವರ ಅಭ್ಯರ್ಥಿ ವಿರುದ್ಧ ಪ್ರತಿಸ್ಪರ್ಧಿ ಹಾಕಿರಲಿಲ್ಲ. ಆದರೆ ಕುಮಾರಸ್ವಾಮಿ ಅವರು, ಬಿಜೆಪಿ ಯಾವುದೇ ಅಭ್ಯರ್ಥಿ ಹಾಕಲಿಲ್ಲ ಎಂಬ ಕಾರಣಕ್ಕೆ ನಾವು ಹಾಕಲಿಲ್ಲ ಎಂದು ಹೇಳಿದ್ದಾರೆ. ಅವರು ನಮ್ಮ ಸಹಾಯ ಹಾಗೂ ಮೈತ್ರಿ ಸರ್ಕಾರ ರಚನೆ ವೇಳೆ ನಮ್ಮ ಬೇಷರತ್ ಬೆಂಬಲವನ್ನು ಸ್ಮರಿಸಲಿಲ್ಲ. ಅದು ಅವರ ಆಯ್ಕೆ ಎಂದಿದ್ದಾರೆ.

ಇನ್ನು ಮುಂದೆ ಕಾಂಗ್ರೆಸ್, ಬಿಜೆಪಿ ಜತೆ ಮೈತ್ರಿ ಅಸಾಧ್ಯ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ‘ಅವರಿಗೆ ನಮ್ಮ ಬೆಂಬಲದ ಅಗತ್ಯವಿದ್ದರೆ ನಮ್ಮ ಜತೆ ಚರ್ಚೆ ಮಾಡಬೇಕಿತ್ತು. ನಾವು ಮೊದಲು ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಆದರೂ ಅವರು ನಮ್ಮ ಜತೆ ಚರ್ಚೆ ಮಾಡಲಿಲ್ಲ. ಮೈಸೂರು ಪಾಲಿಕೆ ಚುನಾವಣೆ ಸೇರಿದಂತೆ ಈ ಹಿಂದೆ ಏನೆಲ್ಲಾ ನಡೆದಿವೆ ಎಂದು ಎಲ್ಲರೂ ನೋಡಿದ್ದಾರೆ. ವಿನಾಕಾರಣ ನಮ್ಮ ಶಾಸಕಾಂಗ ಪಕ್ಷದ ನಾಯಕರನ್ನು ಟೀಕಿಸುವುದರಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Kumaraswamy is a benefactor to BJP. Always his contribution is there in BJP’s success in Karnataka. His father and he will never gain anything and not allow Congress to get anything.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...