Homeಕರ್ನಾಟಕರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ಬಿಜೆಪಿಯ ನಿಜವಾದ ‘ಬಿ ಟೀಮ್‌’ ಕಾಂಗ್ರೆಸ್‌ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಮತ್ತು ಜೆಡಿಎಸ್ ಕಿತ್ತಾಟದ ನಡುವೆ ಬಿಜೆಪಿ ಮೂರು ಸ್ಥಾನಗಳನ್ನು ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದಿದೆ. ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನ ಬಿಜೆಪಿಗೆ, ಒಂದು ಸ್ಥಾನ ಕಾಂಗ್ರೆಸ್‌ಗೆ ಸಿಕ್ಕಿದೆ. ಜೆಡಿಎಸ್‌ ಮುಖಭಂಗ ಅನುಭವಿಸಿದೆ.

ಬಿಜೆಪಿಯ ನಿರ್ಮಲಾ ಸೀತಾರಾಮ್‌ (46 ಮತ), ನಟ ಜಗ್ಗೇಶ್‌ (44 ಮತ), ಲಹರ್‌ ಸಿಂಗ್‌ (33 ಮತ) ಗೆದ್ದರೆ, ಕಾಂಗ್ರೆಸ್‌ನಿಂದ ಜೈರಾಂ ರಮೇಶ್‌ (46 ಮತ) ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಕುಪೇಂದ್ರ ರೆಡ್ಡಿ 30 ಮತ, ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಮನ್ಸೂರ್‌ ಖಾನ್‌ 25 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿರ್ಮಲಾ ಮತ್ತು ಜೈರಾಂ ರಮೇಶ್‌ ಮೊದಲ ಪ್ರಾಶಸ್ತ್ಯದ ತಲಾ 46 ಮತಗಳನ್ನು ಪಡೆದರು. ಜಗ್ಗೇಶ್‌ ಮೊದಲ ಪ್ರಾಶಸ್ತ್ಯದ 44 ಮತ ಗಳಿಸಿದರು. ಲಹರ್‌ ಸಿಂಗ್‌ ಮೊದಲ ಪ್ರಾಶಸ್ತ್ಯದಲ್ಲಿ (33) ಒಂದು ಹೆಚ್ಚುವರಿ ಮತ, ಎರಡನೇ ಪ್ರಾಶಸ್ತ್ಯದಲ್ಲಿ ಎರಡು ಹೆಚ್ಚುವರಿ ಮತಗಳನ್ನು ಪಡೆದರು. ಈ ಎರಡೂ ಮತಗಳು ಕಾಂಗ್ರೆಸ್ ಕಡೆಯಿಂದ ಬಂದಿವೆ ಎನ್ನಲಾಗಿದೆ.

ಜೆಡಿಎಸ್‌ನ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಕಾಂಗ್ರೆಸ್‌ಗೆ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಬಿಜೆಪಿ ಅಭ್ಯೃರ್ಥಿಗೆ ಅಡ್ಡ ಮತದಾನ ಮಾಡಿದರು. “ನಾನು ಕಾಂಗ್ರೆಸ್‌ನಲ್ಲಿದ್ದೆ. ಕಾಂಗ್ರೆಸ್ ಪ್ರೀತಿಸುತ್ತೇನೆ” ಎಂದು ಶ್ರೀನಿವಾಸಗೌಡ ಹೇಳಿಕೆ ನೀಡಿದರು.

ಬಿಜೆಪಿ ಬಿ ಟೀಮ್ ಯಾರೆಂಬುದು ಬಯಲಾಗಿದೆ: ಕುಮಾರಸ್ವಾಮಿ ವಾಗ್ದಾಳಿ

ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಬಿ ಟೀಮ್ ಯಾವುದು? ಬಿಜೆಪಿಯ ಬಾಲಂಗೋಚಿ ಯಾರು ಎನ್ನುವುದು ಜಗಜ್ಜಾಹೀರು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಪಕ್ಷಗಳು ತಮ್ಮ ರಾಜಕೀಯ ಸ್ವಾರ್ಥ ಸಾಧನೆಗೆ ಪ್ರಾದೇಶಿಕ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡಿವೆ ಹಾಗೂ ಪ್ರಜಾಪ್ರಭುತ್ವದ ಬೆನ್ನಿಗಿರಿಯುವ ಹೀನ ಕೃತ್ಯ ಎಸಗಿವೆ. ಚುನಾವಣಾ ವ್ಯವಷ್ಟೆಯನ್ನೆ ಅಣಕ ಮಾಡುವೆ ಎಂದು ಅವರು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರು ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ತಮ್ಮ ಪಕ್ಷದ ಅಲ್ಪಸಂಖ್ಯಾತ ಅಭ್ಯರ್ಥಿ ಮನ್ಸೂರ್ ಖಾನ್ ಅವರ ಸೋಲಿಗೂ ಕಾರಣರಾಗಿದ್ದಾರೆ. ಜತೆಗೆ, ಮನಸಿನಲ್ಲಿ ನಂಜು ತುಂಬಿಕೊಂಡು ಜೆಡಿಎಸ್ ಅಭ್ಯರ್ಥಿ ಪರಾಜಯಕ್ಕೂ ಕಾರಣರಾಗಿದ್ದಾರೆ. ಜಾತ್ಯತೀತ ಶಕ್ತಿಗಳನ್ನು ಹತ್ತಿಕ್ಕಿ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವಿಗೆ ನೇರ ಕಾರಣ ಸಿದ್ದರಾಮಯ್ಯ. ಅವರ ಢೋಂಗಿ ಸೈದ್ದಾಂತಿಕ ಮುಖವಾಡ ಈ ಚುನಾವಣೆ ಮೂಲಕ ಕಳಚಿ ಬಿದ್ದಿದೆ ಎಂದಿದ್ದಾರೆ.

ಇಷ್ಟು ದಿನ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದರು. ಈಗ ಬಿಜೆಪಿಯ ಅಸಲಿ ಬಿ ಟೀಮ್ ಯಾವುದು ಮತ್ತು ಯಾರು ಎನ್ನುವುದು ದೇಶಕ್ಕೆ ಗೊತ್ತಾಗಿದೆ. ಇನ್ನು ಯಾವ ಮುಖ ಇಟ್ಟುಕೊಂಡು ಸಿದ್ದರಾಮಯ್ಯ ಅವರು ತಾವು ಜಾತ್ಯತೀತ ನಾಯಕ ಎಂದು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ನಮ್ಮ ಮನವಿಗೆ ಸ್ಪಂದಿಸಲಿಲ್ಲ: ಡಿ.ಕೆ.ಶಿವಕುಮಾರ್‌

ಇದು ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ನಾವು ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ಗಮನಿಸಬೇಕಾಗಿದೆ. ನಮಗೆ ನಮ್ಮ ಸ್ನೇಹಿತರು ಯಾರು ಎಂದು ಗೊತ್ತಿದೆ. ಪ್ರತಿಯೊಬ್ಬರಿಗೂ ಆತ್ಮಗೌರವ ಇದೆ. ಹೀಗಾಗಿ ನಾವು ಪಕ್ಷೇತರ ಅಭ್ಯರ್ಥಿ ನಿಲ್ಲಿಸುವಂತೆ ಜೆಡಿಎಸ್ ಪಕ್ಷಕ್ಕೆ ಮನವಿ ಮಾಡಿದ್ದೆವು. ನಾವು ಕೂಡ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಸುವುದಾಗಿ ಮನವಿ ಮಾಡಿದ್ದೆವು. ಇಷ್ಟೇ ಅಲ್ಲದೆ ರೆಹಮಾನ್ ಖಾನ್ ಅವರನ್ನು ಕೂಡ ಜೆಡಿಎಸ್ ನಾಯಕರ ಮನೆಗೆ ಕಳುಹಿಸಿ ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು. ಇಷ್ಟಾದರೂ ಅವರು ನಮ್ಮ ಮನವಿಗೆ ಸ್ಪಂದಿಸಲಿಲ್ಲ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

ನಾವು ಈ ಹಿಂದೆ ಹಲವು ಬಾರಿ ಅವರ ಬೆಂಬಲಕ್ಕೆ ನಿಂತಿದ್ದೇವೆ. ಕಳೆದ ಬಾರಿ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲೂ ನಾವು ಅವರ ಅಭ್ಯರ್ಥಿ ವಿರುದ್ಧ ಪ್ರತಿಸ್ಪರ್ಧಿ ಹಾಕಿರಲಿಲ್ಲ. ಆದರೆ ಕುಮಾರಸ್ವಾಮಿ ಅವರು, ಬಿಜೆಪಿ ಯಾವುದೇ ಅಭ್ಯರ್ಥಿ ಹಾಕಲಿಲ್ಲ ಎಂಬ ಕಾರಣಕ್ಕೆ ನಾವು ಹಾಕಲಿಲ್ಲ ಎಂದು ಹೇಳಿದ್ದಾರೆ. ಅವರು ನಮ್ಮ ಸಹಾಯ ಹಾಗೂ ಮೈತ್ರಿ ಸರ್ಕಾರ ರಚನೆ ವೇಳೆ ನಮ್ಮ ಬೇಷರತ್ ಬೆಂಬಲವನ್ನು ಸ್ಮರಿಸಲಿಲ್ಲ. ಅದು ಅವರ ಆಯ್ಕೆ ಎಂದಿದ್ದಾರೆ.

ಇನ್ನು ಮುಂದೆ ಕಾಂಗ್ರೆಸ್, ಬಿಜೆಪಿ ಜತೆ ಮೈತ್ರಿ ಅಸಾಧ್ಯ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ‘ಅವರಿಗೆ ನಮ್ಮ ಬೆಂಬಲದ ಅಗತ್ಯವಿದ್ದರೆ ನಮ್ಮ ಜತೆ ಚರ್ಚೆ ಮಾಡಬೇಕಿತ್ತು. ನಾವು ಮೊದಲು ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಆದರೂ ಅವರು ನಮ್ಮ ಜತೆ ಚರ್ಚೆ ಮಾಡಲಿಲ್ಲ. ಮೈಸೂರು ಪಾಲಿಕೆ ಚುನಾವಣೆ ಸೇರಿದಂತೆ ಈ ಹಿಂದೆ ಏನೆಲ್ಲಾ ನಡೆದಿವೆ ಎಂದು ಎಲ್ಲರೂ ನೋಡಿದ್ದಾರೆ. ವಿನಾಕಾರಣ ನಮ್ಮ ಶಾಸಕಾಂಗ ಪಕ್ಷದ ನಾಯಕರನ್ನು ಟೀಕಿಸುವುದರಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Kumaraswamy is a benefactor to BJP. Always his contribution is there in BJP’s success in Karnataka. His father and he will never gain anything and not allow Congress to get anything.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...