Homeಚಳವಳಿನೂತನ ಪಠ್ಯ: ರಾಜ್ಯದ ಜಿಲ್ಲೆಗಳ ಮಾಹಿತಿಗೆ ಕತ್ತರಿ, ದೇವೇಗೌಡರ ಭಾವಚಿತ್ರ ಸೇರಿದಂತೆ ಹಲವು ವಿವರಗಳಿಗೆ ಕೋಕ್‌!

ನೂತನ ಪಠ್ಯ: ರಾಜ್ಯದ ಜಿಲ್ಲೆಗಳ ಮಾಹಿತಿಗೆ ಕತ್ತರಿ, ದೇವೇಗೌಡರ ಭಾವಚಿತ್ರ ಸೇರಿದಂತೆ ಹಲವು ವಿವರಗಳಿಗೆ ಕೋಕ್‌!

ಇದು ಪ್ರಾದೇಶಿಕ ವಾದವನ್ನು ಕಿತ್ತುಹಾಕಿ ಒಂದು ದೇಶ- ಒಂದು ಸಂಸ್ಕೃತಿ ಎಂಬ ಸಿದ್ದಾಂತ ಹೇರಲು ನಡೆಸುತ್ತಿರುವ ಯತ್ನವೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಅದ್ವಾನಗಳು ದಿನೇ ದಿನೇ ಹೊರಬರುತ್ತಿವೆ. ಸರ್ಕಾರವೇನೂ ಸಮಿತಿ ವಿಸರ್ಜನೆ ಮಾಡಿ ಕೈ ತೊಳೆದುಕೊಂಡಿದೆ. ಆದರೆ ಅವರು ಮಾಡಿರುವ ಅದ್ವಾನಗಳನ್ನು ಸರಿಪಡಿಸಲು ತೀವ್ರ ಕಸರತ್ತು ಮಾಡಲಾಗಿದೆ. ಸಮಿತಿಯು ನೂತನ ಪಠ್ಯದ 6 ನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕ ಭಾಗ-1 ರಲ್ಲಿದ್ದ ‘ನಮ್ಮ ಕರ್ನಾಟಕ’ ಪಾಠಕ್ಕೇ ಕತ್ತರಿ ಆಡಿಸಿದ್ದು, ಕರ್ನಾಟಕ ಎನ್ನುವ ಪರಿಕಲ್ಪನೆಗೆ ಧಕ್ಕೆ ತರುವ ರೀತಿಯಲ್ಲಿ ತಿದ್ದುಪಡಿ ಮಾಡಿರುವುದು ಬೆಳಕಿಗೆ ಬಂದಿದೆ.

ಈ ಹಿಂದೆ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯು ನಮ್ಮ ಕರ್ನಾಟಕ ಪಠ್ಯದಲ್ಲಿ ಕರ್ನಾಟಕದ ಸಮಸ್ತ 28 ಜಿಲ್ಲೆಗಳ ಬಗ್ಗೆ ಸಂಪೂರ್ಣ ಚಿತ್ರ ಸಹಿತ ಮಾಹಿತಿ ನೀಡಿತ್ತು. ಜಿಲ್ಲೆಗಳು ಯಾವ ಸಂದರ್ಭದಲ್ಲಿ ರಚನೆಯಾದವು? ಪ್ರತಿ ಜಿಲ್ಲೆಗಳ ಸಾಂಸ್ಕೃತಿಕ ಕೊಡುಗೆಯೇನು ಎಂಬುದನ್ನು ಸವಿವರವಾಗಿ ಉಲ್ಲೇಖಿಸಲಾಗಿತ್ತು. ಪ್ರತಿ ಜಿಲ್ಲೆಗಳ ಸಾಧಕರನ್ನು ಚಿತ್ರ ಸಮೇತ ಪರಿಚಯಿಸಲಾಗಿತ್ತು. ಅದನ್ನು ಓದಿದ ಮಕ್ಕಳಿಗೆ ನಮ್ಮ ನಾಡಿನ ಬಗ್ಗೆ ಹೆಮ್ಮೆ ಅನಿಸುತ್ತಿತ್ತು. ನಾಡಿನ ಬಗೆಗಿನ ಪ್ರೀತಿ, ಗೌರವ ಹಿಮ್ಮಡಿಯಾಗುತ್ತಿತ್ತು. ಆದರೆ ರೋಹಿತ್ ಚಕ್ರತೀರ್ಥ ಸಮಿತಿ ಆ ಪಠ್ಯಕ್ಕೆ ಕತ್ತರಿ ಹಾಕಿಬಿಟ್ಟಿದೆ.

ಪಠ್ಯದಲ್ಲಿ ಉಲ್ಲೇಖಿಸಲಾಗಿದ್ದ ಜಿಲ್ಲೆಗಳ ಮಹತ್ವವನ್ನು ಕಿತ್ತು ಹಾಕಲಾಗಿದೆ. ಬದಲಿಗೆ ನಾಲ್ಕು ವಲಯಗಳಾಗಿ ಮಾತ್ರ ವಿಂಗಡಿಸಿ ಅಲ್ಪಸ್ವಲ್ಪ ಮಾಹಿತಿ ಮಾತ್ರ ಉಳಿಸಿಕೊಳ್ಳಲಾಗಿದೆ. ಅಲ್ಲದೆ ಮಂಡ್ಯ ಜಿಲ್ಲೆಯ ಅಸ್ಮಿತೆ ಟಿಪ್ಪು ಸುಲ್ತಾನ್, ಹಾಸನ ಜಿಲ್ಲೆಯಲ್ಲಿ ಹುಟ್ಟಿ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಎಚ್.ಡಿ ದೇವೇಗೌಡರವರ ಭಾವಚಿತ್ರ ಸೇರಿದಂತೆ ಅಪರೂಪದ, ಮಹತ್ವದ ಭಾವಚಿತ್ರಗಳನ್ನು ಪಠ್ಯದಿಂದ ಕಿತ್ತು ಹಾಕಲಾಗಿದೆ. ಅದರ ವಿವರ ಇಲ್ಲಿದೆ.

ಹಳೆಯ ಪಠ್ಯಪುಸ್ತಕದಲ್ಲಿದ್ದ ವಿವರಗಳು

ನೂತನ ಪಠ್ಯದಲ್ಲಿ ಕೈಬಿಡಲಾಗಿರುವ ಮಾಹಿತಿಗಳು ಮತ್ತು ಭಾವಚಿತ್ರಗಳು

ಬೆಂಗಳೂರು ನಗರ: ಜಿಲ್ಲೆಯ ವಿಧಾನಸೌಧ, ಟಿಪ್ಪು ಅರಮನೆ, ಸೆಂಟ್ ಮೆರೀಸ್ ಚರ್ಚ್, ಜಾಮೀಯ ಮಸೀದಿ ಮಾಹಿತಿ ಮತ್ತು ಫೋಟೊಗಳನ್ನು ಕೈಬಿಡಲಾಗಿದೆ.

ರಾಮನಗರ: ಜಿಲ್ಲೆಯ ಚನ್ನಪಟ್ಟಣ ಗೊಂಬೆಗಳು.

ಚಿಕ್ಕಬಳ್ಳಾಪುರ: ಜಿಲ್ಲೆಯ ಕೈವಾರ ತಾತಯ್ಯ, ಕೈವಾರ ದೇವಾಲಯ, ವಿಧುರಾಶ್ವತ್ಥ ವೀರಸೌಧ, ನಂದಿದುರ್ಗ.

ಕೋಲಾರ: ಜಿಲ್ಲೆಯ ಅಂತರಗಂಗೆ, ಹೈದರಾಲಿ ದರ್ಗಾ.

ತುಮಕೂರು: ಜಿಲ್ಲೆಯ ಮಧುಗಿರಿ ಏಕಶಿಲಾ ಬೆಟ್ಟ, ದೇವರಾಯನ ದುರ್ಗ.

ಚಿತ್ರದುರ್ಗ: ಜಿಲ್ಲೆಯ ಚಿತ್ರದುರ್ಗ ಬೆಟ್ಟ, ಮದಕರಿ‌ ನಾಯಕ.

ಹಿಂದಿನ ಪಠ್ಯದಲ್ಲಿದ್ದ ಮಾಹಿತಿ

ದಾವಣಗೆರೆ: ಜಿಲ್ಲೆಯ ಶಾಂತಿಸಾಗರ ಕೆರೆ.

ಶಿವಮೊಗ್ಗ: ಜಿಲ್ಲೆಯ ಜೋಗ್ ಜಲಪಾತ, ಕುಪ್ಪಳ್ಳಿ ಕುವೆಂಪು ಮನೆ.

ಮೈಸೂರು: ಜಿಲ್ಲೆಯ ಸಂತ ಫಿಲೊಮಿನ ಚರ್ಚ್, ಜಗನ್ ಮೋಹನ ಪ್ಯಾಲೇಸ್, ಚಾಮುಂಡಿಬೆಟ್ಟ, ಬೈಲಕುಪ್ಪೆ ಬುದ್ಧವಿಹಾರ.

ಚಾಮರಾಜನಗರ: ಜಿಲ್ಲೆಯ ಮಲೈ ಮಹದೇಶ್ವರ ದೇವಾಲಯ, ಬಂಡೀಪುರ.

ಹಾಸನ: ಜಿಲ್ಲೆಯ ಬೇಲೂರು ಚನ್ನಕೇಶವ ದೇವಾಲಯ, ಹಳೇಬೀಡು ಹೊಯ್ಸಳೇಶ್ವರ ದೇವಾಲಯ, ಮಾಜಿ ಪ್ರಧಾನಮಂತ್ರಿ ಎಚ್.ಡಿ ದೇವೇಗೌಡರು.

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಶಾರದಾಂಬಾ ದೇವಾಲಯ, ಬಾಬಾಬುಡನ್ ಗಿರಿ ದರ್ಗಾ, ಸೇಂಟ್ ಆಂಡ್ರೂಸ್ ಚರ್ಚ್.

ಮಂಡ್ಯ: ಜಿಲ್ಲೆಯ ಕೃಷ್ಣರಾಜಸಾಗರ, ಶ್ರೀರಂಗಪಟ್ಟಣ ದೇವಾಲಯ, ದರಿಯಾ ದೌಲತ್ ಬಾಗ್.

ಕೊಡಗು: ಜಿಲ್ಲೆಯ ವಿರಾಜಪೇಟೆ ಚರ್ಚ್, ತಲಕಾವೇರಿ.

ಹಿಂದಿನ ಪಠ್ಯದಲ್ಲಿದ್ದ ಮಾಹಿತಿ

ದಕ್ಷಿಣ ಕನ್ನಡ: ಜಿಲ್ಲೆಯ ಮೂಡಬಿದಿರೆ ಸಾವಿರ ಕಂಬಗಳ ಬಸದಿ, ಧರ್ಮಸ್ಥಳ ಮಂಜುನಾಥ ದೇವಾಲಯ, ಉಲ್ಲಾಳ ಜುಮ್ಮಾ ಮಸೀದಿ, ಸಂತ ಅಲೋಸಿಯಸ್ ಚರ್ಚ್.

ಉಡುಪಿ‌: ಜಿಲ್ಲೆಯ ಶ್ರೀಕೃಷ್ಣ ದೇವಾಲಯ, ಕಾರ್ಕಳದ ಗೊಮ್ಮಟ, ಸೇಂಟ್ ಲಾರೆನ್ಸ್ ಚರ್ಚ್, ಮಂಗಳೂರು ಬಂದರು.

ಕಲಬುರಗಿ: ಜಿಲ್ಲೆಯ ಖ್ವಾಜಾ ಬಂದೇ ನವಾಜ್

ಬೀದರ್: ಜಿಲ್ಲೆಯ ಬಿದರಿ ಕಲೆ, ಗುರುದ್ವಾರ, ಬೀದರ್ ಕೋಟೆ.

ರಾಯಚೂರು: ಜಿಲ್ಲೆಯ ಶಾಖೋತ್ಪನ್ನ ವಿದ್ಯುತ್ ಕೇಂದ್ರ, ಮಸ್ಕಿ ಅಶೋಕ ಶಿಲಾಶಾಸನ.

ಕೊಪ್ಪಳ: ಜಿಲ್ಲೆಯ ಇಟಗಿ ಮಹಾದೇವ ದೇವಾಲಯ.

ಬಳ್ಳಾರಿ: ಜಿಲ್ಲೆಯ ತೋರಣಗಲ್ಲಿನ‌ ಕಾರ್ಖಾನೆ.

ವಿಜಯನಗರ: ಜಿಲ್ಲೆಯ ಹಂಪಿ, ಕನ್ನಡ ವಿಶ್ವವಿದ್ಯಾಲಯ.

ಹಿಂದಿನ ಪಠ್ಯದಲ್ಲಿದ್ದ ಮಾಹಿತಿ

ಹಾವೇರಿ: ಜಿಲ್ಲೆಯ ಕನಕದಾಸ, ಸರ್ವಜ್ಞ ಕವಿ.

ಗದಗ: ಜಿಲ್ಲೆಯ ಕುಮಾರವ್ಯಾಸ, ವೀರನಾರಾಯಣ ಗುಡಿ.

ವಿಜಯಪುರ: ಜಿಲ್ಲೆಯ ಗೋಳಗುಮ್ಮಟ, ಕೂಡಲಸಂಗಮ ಐಕ್ಯ ಮಂಟಪ.

ಬಾಗಲಕೋಟೆ: ಜಿಲ್ಲೆಯ ಅಬೂಬಕರ್ ದರ್ಗಾ, ಐಹೊಳೆ ದೇವಾಲಯ.

ಬೆಳಗಾವಿ: ಜಿಲ್ಲೆಯ ಸಕ್ಕರೆ ಕಾರ್ಖಾನೆ.

ಉತ್ತರ ಕನ್ನಡ: ಜಿಲ್ಲೆಯ ಕೈಗಾ ವಿದ್ಯುತ್ ಕೇಂದ್ರ, ಸೀಬರ್ಡ್ ನೌಕಾನೆಲೆ.

ಇದಿಷ್ಟೇ ಅಲ್ಲದೆ ಹಿಂದಿನ ಪಠ್ಯದಲ್ಲಿ ಪ್ರತಿ‌ ಜಿಲ್ಲೆಯ ಪ್ರಸಿದ್ಧ ದೇಗುಲ, ಚರ್ಚ್, ಬಸದಿ, ಮಸೀದಿ, ವಿಹಾರ, ಗುರುದ್ವಾರಗಳ ಬಗ್ಗೆ ಪರಿಚಯವಿತ್ತು. ಪ್ರತಿ ಜಿಲ್ಲೆ ಸ್ಥಾಪನೆಗೊಂಡ ವರ್ಷವಿತ್ತು. ಪ್ರತಿ ಜಿಲ್ಲೆಯ ಪ್ರಸಿದ್ಧ ಆಚರಣೆಗಳಿದ್ದವು. ನದಿಗಳ ಹೆಸರಿತ್ತು, ಅಣೆಕಟ್ಟೆಗಳಿತ್ತು, ಸಾಹಿತಿಗಳ ಹೆಸರಿತ್ತು, ಕಾಡುಗಳ ಹೆಸರಿತ್ತು, ಬೆಳೆಯುವ ಬೆಳೆ, ತಿನ್ನುವ ಆಹಾರ, ಆಳಿದ ರಾಜಮನೆತನ ಇತ್ಯಾದಿ ಇತ್ಯಾದಿಗಳಿತ್ತು. ಇಡೀ ಕರ್ನಾಟಕದ ಚಿತ್ರಣವೇ ಕಣ್ಣ ಮುಂದೆ ಬರುವಂತಿತ್ತು. ಅದೆಲ್ಲವನ್ನು ನೂತನ ಸಮಿತಿ ಕಿತ್ತು ಹಾಕಿದೆ.

ಈ ‘ನಮ್ಮ ಕರ್ನಾಟಕ’ ಪಾಠದ ಜಿಲ್ಲೆಗಳ ವಿಶಿಷ್ಟತೆ ತಿಳಿಸುವ ಈ ಭಾಗಗಳನ್ನು ಏಕೆ ತೆಗೆದು ಹಾಕಲಾಗಿದೆ? ನಮ್ಮ ಜಿಲ್ಲೆಗಳಿಂದ ರಾಜ್ಯ, ರಾಜ್ಯದಿಂದ ದೇಶ ಅಲ್ಲವೇ? ಬರೀ ದೇಶದ ಮಾಹಿತಿ ಇದ್ದು ರಾಜ್ಯಗಳ, ಜಿಲ್ಲೆಗಳ ಮಾಹಿತಿಯನ್ನು ನಮ್ಮ ಮಕ್ಕಳು ತಿಳಿಯಬಾರದೆ? ಇದು ಪ್ರಾದೇಶಿಕ ವಾದವನ್ನು ಕಿತ್ತುಹಾಕಿ ಒಂದು ದೇಶ- ಒಂದು ಸಂಸ್ಕೃತಿ ಎಂಬ ಸಿದ್ದಾಂತ ಹೇರಲು ನಡೆಸುತ್ತಿರುವ ಯತ್ನವೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. India is becoming one more Talibhan type style working.
    Present trend and events happening in our state . It is the sign of Talibhan type of culture.
    For this solution is counter action like Indipendentce movement i.e non cooperation movement to start from public against the Govt.

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...