Homeಕರ್ನಾಟಕಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ರೋಹಿತ್ ಚಕ್ರತೀರ್ಥ ಬಂಧನ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಲಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಎಲ್ಲಾ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳು ಭಾಗವಹಿಸಲಿವೆ

- Advertisement -
- Advertisement -

ಪರಿಷ್ಕೃತ ಪಠ್ಯಪುಸ್ತಗಳಲ್ಲಿ ನಾಡಿನ ಮಹನಿಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರ ಬೆನ್ನಿಗೆ ನಿಂತ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ – ಕರ್ನಾಟಕ’ದ ವತಿಯಿಂದ ಜೂನ್ 18ರ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದೆ.

ಪ್ರತಿಭಟನಾ ಮೆರವಣಿಗೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದಿಂದ ಪ್ರಾರಂಭವಾಗಲಿದ್ದು ಫ್ರೀಡಂ ಪಾರ್ಕ್‌‌ನಲ್ಲಿ ಸಮಾವೇಶಗೊಳ್ಳಲಿದೆ. ಬೃಹತ್‌ ಹೋರಾಟಕ್ಕೆ ರಾಜ್ಯದ ಎಲ್ಲಾ ಸಮುದಾಯದ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ‌ ಸಂಘ ಸಂಸ್ಥೆಗಳು, ದಲಿತ ಸಮುದಾಯದ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಕೀಲರ ಒಕ್ಕೂಟಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಹೋರಾಟ ಸಮಿತಿಯ ಸಂಚಾಲಕರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ನಾಡಿನ ಆರುವರೆಕೋಟಿ ಜನರನ್ನು ಅಪಮಾನಗೊಳಿಸುವ ಹಾಗು ನಾಡೇ ತಲೆತಗ್ಗಿಸುವ ಅನೇಕ ಅಸಹ್ಯ ಪ್ರಮಾದಗಳು ನಡೆದಿವೆ. ಶಾಲೆಯ ಮುಗ್ಧಮಕ್ಕಳಿಗೆ ‘ಬ್ರಾಹ್ಮಣ ಮಾತ್ರ ಶ್ರೇಷ್ಠ-ಮೇಲು, ಇನ್ನುಳಿದವರೆಲ್ಲರೂ ಕನಿಷ್ಟ-ಕೀಳು’ ಎಂಬ ಒಂದಂಶದ ವಿಷವುಣಿಸಲು ಪಠ್ಯ ಪರಿಷ್ಕರಣಾ ಸಮಿತಿ ಹೊರಟಿದೆ. ಈ ತಂತ್ರದ ಬಣ್ಣ ಬಯಲಾಗಿದ್ದು, ಸಮಿತಿಯು ರಾಜ್ಯದ ಜನತೆಯ ಮುಂದೆ ಬೆತ್ತಲಾಗಿ ತಲೆತಗ್ಗಿಸಿ ನಿಂತಿದೆ. ಜೊತೆಗೆ ಈ ಸಮಿತಿಯ ಪರವಹಿಸಿ ಮಾತಾಡುತ್ತಿದ್ದ ಸರ್ಕಾರವೂ ಈಗ ಒಂದೊಂದೇ ಸತ್ಯ ಹೊರಬಂದ ಮೇಲೆ ಮುಜುಗರ ಅನುಭವಿಸುತ್ತಾ ತಿಣುಕುತ್ತಿದೆ” ಎಂದು ಹೋರಾಟ ಸಮಿತಿಯು ಹೇಳಿದೆ.

ಇದನ್ನೂ ಓದಿ: ಹಳೆಯ ಪಠ್ಯಪುಸ್ತಕ ರದ್ದಿಗೆ ಹಾಕಿದರೆ ಜನರ ಕೈ ಸೇರುವ ಭಯ; ಪುಸ್ತಕಗಳನ್ನೇ ನಾಶಪಡಿಸಲು ಮುಂದಾದ ಸರ್ಕಾರ?

“ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯನ್ನು ಕಳೆದ ಐದು ವರ್ಷಗಳ‌ ಹಿಂದೆಯೇ ವಿರೂಪಗೊಳಿಸಿ ವಿಕೃತಿ ಮೆರೆದಿದ್ದ, ನಾಡಧ್ವಜವನ್ನು ತನ್ನ ಒಳ ಉಡುಪಿಗೆ ಹೋಲಿಸಿ ಬರೆದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷನನ್ನಾಗಿ ಸರ್ಕಾರ ನೇಮಿಸಿದ್ದೇ ಈ ಎಲ್ಲಾ ರಾಧಾಂತಗಳಿಗೆ ಕಾರಣವಾಗಿದೆ.‌ ತನ್ನ ಜಾತಿ ಮಾತ್ರ ಶ್ರೇಷ್ಠ ಎಂದು ನಂಬಿಕೊಂಡಿರುವ ಈ ವ್ಯಕ್ತಿ ಮತ್ತು ಸಮಿತಿಯು ದುರುದ್ದೇಶಿತ ಪೂರ್ವಕವಾಗಿ ಹಿಂದಿನ ಪ್ರೊ.ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯಗಳಲ್ಲಿದ್ದ ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಮಹಿಳಾ ಲೇಖಕರ ಕವಿಗಳ ಪಾಠಗಳನ್ನು ತೆಗೆದು ಭಾಗಶಃ ಬ್ರಾಹ್ಮಣರ ಪಠ್ಯಗಳನ್ನೇ ಅಲ್ಲಿ ಹಾಕಲಾಗಿದೆ.

ಅಲ್ಲದೆ ಉಳಿಸಿಕೊಂಡಿರುವ ಅಧ್ಯಾಯಗಳಲ್ಲಿ ಅನೇಕ ಮಹನೀಯರಿಗೆ ಅವಮಾನವಾಗುವಂತೆ ಕೆಲವು ಸಾಲುಗಳನ್ನು ತೆಗೆದಿರುವುದು, ಸೇರಿಸಿರುವುದು ಮತ್ತು ತಿದ್ದಿರುವುದು ಸಾಬೀತಾಗಿದೆ‌‌. ಈ ದ್ವೇಷಯುಕ್ತ ಪಠ್ಯಗಳನ್ನು ಮಕ್ಕಳಿಗೆ ವಿತರಿಸಿ ಬೋಧಿಸಿದರೆ ರಾಜ್ಯದ ಇಡೀ ಶಾಲಾ ವಾತಾವರಣವೇ ಕೋಮುವಾದದ ಗೂಡಾಗುವ ಅಪಾಯವಿದೆ‌” ಎಂದು ಹೋರಾಟ ಸಮಿತಿ ಎಚ್ಚರಿಸಿದೆ.

“ಕುವೆಂಪು ಆದಿಯಾಗಿ ಬುದ್ಧ ಮಹಾವೀರ ಬಸವಣ್ಣ ವಾಲ್ಮೀಕಿ ಸಾವಿತ್ರಿಫುಲೆ ಪೆರಿಯಾರ್ ರಾಮಸ್ವಾಮಿ ನಾಯ್ಕರ್, ನಾರಾಯಣಗುರು, ಸಂಗೊಳ್ಳಿ ರಾಯಣ್ಣ, ಕನಕದಾಸರು, ಸುರಪುರ ನಾಯಕರು, ಅಕ್ಕಮಹಾದೇವಿ, ಟಿಪ್ಪುಸುಲ್ತಾನ್, ಬಾಬಾಸಾಹೇಬ್ ಅಂಬೇಡ್ಕರ್, ಸಿದ್ಧಗಂಗಾಸ್ವಾಮೀಜಿಗಳು, ಆದಿಚುಂಚನಗಿರಿ‌ ಬಾಲಗಂಗಾಧರ ಸ್ವಾಮೀಜಿಗಳಿಗೆ ಸಮಿತಿಯು ಪಠ್ಯಪರಿಷ್ಕರಣೆಯಲ್ಲಿ ಎಸಗಿರುವ ಅವಮಾನವನ್ನು ಖಂಡಿಸಬೇಕಾದದ್ದು ರಾಜ್ಯದ ಪ್ರತಿಯೊಬ್ಬ ಪ್ರಜ್ಞಾವಂತನ ಕರ್ತವ್ಯವಾಗಿದೆ” ಎಂದು ಹೋರಾಟ ಸಮಿತಿಯೂ ಪ್ರತಿಪಾದಿಸಿದೆ.

ಇದನ್ನೂ ಓದಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

“ರೋಹಿತ್ ಚಕ್ರತೀರ್ಥನ ಸಮಿತಿಯಿಂದಾದ ದೋಷಪೂರಿತ ಪರಿಷ್ಕರಣಾ ಪಠ್ಯಗಳನ್ನು ವಾಪಸ್ ಪಡೆದು ಹಿಂದಿನ ಪಠ್ಯಗಳನ್ನೇ ಮಕ್ಕಳಿಗೆ ಒದಗಿಸಬೇಕು. ನಾಡಗೀತೆಯನ್ನು ವಿರೂಪಗೊಳಿಸಿ, ನಾಡಧ್ವಜವನ್ನು ಅವಮಾನಿಸಿದ್ದಲ್ಲದೆ ಈಗಿನ ಪರಿಷ್ಕೃತ ಪಠ್ಯಪುಸ್ತಗಳಲ್ಲಿ ಅನೇಕ ಮಹನೀಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ವಿವಾದಿತ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷನನ್ನಾಗಿ ನೇಮಿಸಿ ಆತನ ಬೆನ್ನಿಗೆ ನಿಂತು ಈ ಎಲ್ಲಾ ಕೆಟ್ಟಬೆಳವಣಿಗೆ ಅನಾಹುತ ಮತ್ತು ನಷ್ಟಗಳಿಗೆ ನೇರ ಕಾರಣವಾಗಿರುವ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಹೋರಾಟ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...