Homeಕರ್ನಾಟಕಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ಮೈಸೂರು: ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತು ಚರ್ಚೆ ಆಯೋಜನೆ!

ಬೇಕಂತಲೇ ಆರ್‌ಎಸ್‌ಎಸ್‌ ಕುರಿತು ಚರ್ಚೆ ಇಟ್ಟಿದ್ದೇವೆ: ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಉದ್ಧಟತನ!

- Advertisement -
- Advertisement -

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ಚಕ್ರವರ್ತಿ ಸೂಲಿಬೆಲೆ ಆಹ್ವಾನಿಸಿ ವಿವಾದಕ್ಕೆ ಕಾರಣವಾಗಿದ್ದ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಮತ್ತೊಂದು ವಿವಾದಕ್ಕೆ ಆಹ್ವಾನ ನೀಡಿದ್ದಾರೆ.

“ಜೂ. 12ರಿಂದ ಆರಂಭವಾಗಲಿರುವ ಗ್ರೀಷ್ಮ ರಂಗಾಯಣೋತ್ಸವದಲ್ಲಿ ಬೇಕಂತಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಚರ್ಚೆ ಇಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಟಕೋತ್ಸವದ ಕುರಿತು ಮಾಹಿತಿ ನೀಡಲು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪವಾಗಿದೆ. “ಗ್ರೀಷ್ಮ ರಂಗಾಯಣೋತ್ಸವದಲ್ಲಿ ಆರ್‌ಎಸ್‌ಎಸ್‌ ಕುರಿತಾದ ಚರ್ಚೆ ಅಗತ್ಯವಿತ್ತೇ? ರಂಗಾಯಣಕ್ಕೂ ಸಂಘ ಪರಿವಾರಕ್ಕೂ ಏನು ಸಂಬಂಧ?” ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಪ್ರಸ್ತುತ ರಾಜ್ಯದಲ್ಲಿ ಸಂಘ ಪರಿವಾರದ ಕುರಿತು ಚರ್ಚೆಯಾಗುತ್ತಿದೆ. ಅದರ ಬಗ್ಗೆ ತಿಳಿಯಲೆಂದು ವಿಚಾರ ಪ್ರಸ್ತಾಪ ಮಾಡಿದ್ದೇವೆ” ಎಂದು ಅಡ್ಡಂಡ ಕಾರ್ಯಪ್ಪ ಸಮರ್ಥಿಸಿಕೊಂಡಿದ್ದಾರೆ.

“ವಿವಾದ ಬೆಳೆಸಲೆಂದು ಈ ವಿಚಾರವನ್ನು ತರಲಾಗಿದೆಯೇ?” ಎಂಬ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, “ವಿವಾದವಿಲ್ಲದೇ ಏನಾದರೂ ಸಾಧ್ಯವಾಗುತ್ತದೆಯೇ? 32 ವರ್ಷಗಳಿಂದ ರಂಗಾಯಣದಲ್ಲಿ ಏನು ಚರ್ಚೆ ನಡೆದಿದೆ ನಿಮಗೂ ಗೊತ್ತಿದೆ. ಆರ್‌ಎಸ್‌ಎಸ್‌ ಕುರಿತು ಚರ್ಚೆಯಾದರೇ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

“ಆರ್‌ಎಸ್‌ಎಸ್‌ ಪ್ರಾಂತೀಯ ಸರ ಸಂಚಾಲಕರಾದ ಮಾ.ವೆಂಕಟರಾಮ್‌ ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ನಾನೇಕೆ ಆರ್‌ಎಸ್‌ಎಸ್‌ನಲ್ಲಿ ಇದ್ದೇನೆ ಎಂಬ ವಿಷಯದ ಕುರಿತು ಮಾತಾಡಲಿದ್ದಾರೆ. ಸಂವಾದದ ವೇಳೆ ಅವರಿಗೆ ಪ್ರಶ್ನೆ ಕೇಳಬಹುದು. ಚರ್ಚೆಯಾದರೇ ತಪ್ಪೇನು? ರಂಗಾಯಣದಲ್ಲಿ ಒಂದೇ ವಿಚಾರ ಚರ್ಚೆಯಾಗಬೇಕೆ?” ಎಂದೂ ಪ್ರತಿಕ್ರಿಯಿಸಿದ್ದಾರೆ.

ಏನಿದು ಗ್ರೀಷ್ಮ ರಂಗೋತ್ಸವ?

“ರಂಗಾಯಣ ಮೈಸೂರು ತನ್ನ ಚಟುವಟಿಕೆಯನ್ನು ನಿರಂತರಗೊಳಿಸಲು ಸದಾ ಪ್ರಯತ್ನಿಸುತ್ತಿರುತ್ತದೆ. ಮಳೆಗಾಲ ಸಮೀಪಿಸುತ್ತಿದ್ದಂತೆ ಗ್ರೀಷ್ಮ ಋತುವಿನಲ್ಲಿ ರಂಗಾಯಣದಲ್ಲಿ ಈಗಾಗಲೇ ಸಿದ್ಧಪಡಿಸಿ ಪ್ರದರ್ಶನಗೊಂಡಿರುವ ನಾಟಕಗಳ ಹಬ್ಬ ಆಚರಿಸಲು ರ್ನಿರಿಸಲಾಗಿದೆ. ಅದೇ ಗ್ರೀಷ್ಮ ರಂಗಾಯಣೋತ್ಸವ” ಎಂದು ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

‘ಭಾರತೀಯ ರಂಗವಿದ್ಯಾಲಯ’ದ 2021-22ನೇ ಸಾಲಿನ ವಿದ್ಯಾರ್ಥಿಗಳ ಪರೀಕ್ಷೆಗಳು ನಡೆದಿದ್ದು, ಒಂದು ವರ್ಷದ ರಂಗಶಿಕ್ಷಣ ಡಿಪ್ಲೊಮಾ ಮುಗಿದಿದೆ. ಎರಡು ಚಾತುರ್ಮಾಸಗಳಲ್ಲಿ ಸಿದ್ಧಪಡಿಸಲಾಗದ ನಾಲ್ಕು ನಾಟಕಗಳಾದ- ‘ಪ್ರಮೀಳಾರ್ಜುನೀಯಂ’, ‘ವಾಸಾಂಸಿ ಜೀರ್ಣಾನಿ’, ‘ಬೆಕ್ಕು ಬಾವಿ’, ‘ವಿದಿಶಾ ಪ್ರಹಸನ’- ಪ್ರದರ್ಶನ ಆಯೋಜಿಸಲಾಗಿದೆ. ಇದರ ಜೊತೆಗೆ ಕಿರಿಯ ರೆಪರ್ಟರಿ ಕಲಾವಿದರಿಂದ- ‘ಕೃಷ್ಣೇಗೌಡನ ಆನೆ’, ‘ಮೂಕನ ಮಕ್ಕಳ’ ನಾಟಕಗಳನ್ನು, ಸಂವಿಧಾನದ ಆಶಯ ತಂಡದಿಂದ- ‘ಸೂತ್ರದಾರ’, ಹಿರಿಯ ರೆಪರ್ಟರಿ ಕಲಾವಿದರಿಂದ ‘ಮಿಸ್ಟರ್ ಬೋಗೀಸ್‌’ ನಾಟಕ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜೂನ್‌ 12ರಿಂದ 19ರವರೆಗೆ ‘ಗ್ರೀಷ್ಮ ರಂಗಾಯಣೋತ್ಸವ’ ನಡೆಯಲಿದೆ. ಪ್ರತಿದಿನ ಸಂಜೆ 6.30ಕ್ಕೆ ಭೂಮಿಗೀತದಲ್ಲಿ ನಾಟಕಗಳು ಪ್ರದರ್ಶನಗೊಳ್ಳಲಿವೆ. ಇದರ ಜೊತೆಗೆ ಹಬ್ಬದ ಸಂದರ್ಭದಲ್ಲಿ ಪ್ರತಿದಿನ ಸಂಜೆ 4ರಿಂದ 5ರವರೆಗೆ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಕಲಾವಿದರೊಂದಿಗೆ ಸಂವಾದ ಆಯೋಜಿಸಲಾಗಿದೆ. ಜೂನ್‌ 17ರಂದು ಆರ್‌ಎಸ್‌ಎಸ್‌ ಕುರಿತು ಚರ್ಚೆಯನ್ನು ಬೇಕಂತಲೇ ಆಯೋಜಿಸಿದ್ದೇವೆ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...