Homeರಾಷ್ಟ್ರೀಯ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ವಿಶ್ವಬ್ಯಾಂಕ್ ವರದಿ ಸೂಚಿಸಿದೆ

- Advertisement -
- Advertisement -

ಬಿಜೆಪಿಯ ಮೋದಿ ಸರ್ಕಾರದ ಸ್ವಚ್ಛ ಭಾರತ ಅಭಿಯಾನದ ನಡುವೆಯೂ, ಭಾರತವು ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯವನ್ನು ಹೊಂದಿರುವ ದೇಶವಾಗಿದೆ ಹೊರಹೊಮ್ಮಿದೆ. ವಿಶ್ವಬ್ಯಾಂಕ್ ಬಿಡುಗಡೆ ಮಾಡಿರುವ ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2022’ರ ವರದಿಯು, ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೊನೆಯ 180 ನೇ ಸ್ಥಾನದಲ್ಲಿದೆ ಎಂದು ಸೂಚಿಸಿದೆ.

ಭಾರತದ ನೆರೆಯ ದೇಶಗಳಾದ ಬಾಂಗ್ಲಾದೇಶ, ಮ್ಯಾನ್ಮಾರ್, ಪಾಕಿಸ್ತಾನ ಮತ್ತು ವಿಯೆಟ್ನಾಂ ಕೂಡ ಭಾರತಕ್ಕಿಂತ ಉತ್ತಮ ಸ್ಥಾನದಲ್ಲಿದೆ. ಭ್ರಷ್ಟಾಚಾರ ನಿಯಂತ್ರಣ, ಕಾನೂನಿನ ನಿಯಮ ಮತ್ತು ಸರ್ಕಾರದ ಪರಿಣಾಮಕಾರಿತ್ವದಂತಹ ವಿವಿಧ ಕ್ರಮಗಳಲ್ಲಿ ಕೂಡಾ ಭಾರತವು ಕಳಪೆ ಅಂಕಗಳನ್ನು ಗಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡೆನ್ಮಾರ್ಕ್ ದೇಶವೂ ಸುಸ್ಥಿರತೆ ಮತ್ತು ಪರಿಸರ ಆರೋಗ್ಯ ವಿಭಾಗಗಳಲ್ಲಿ ಮೊದಲ ಸ್ಥಾನದಲ್ಲಿದ್ದು, ಯುಕೆ, ಫಿನ್‌ಲ್ಯಾಂಡ್‌, ಮಾಲ್ಟಾ, ಸ್ವೀಡನ್‌ ದೇಶಗಳು ನಂತರದ ಸ್ಥಾನಗಳನ್ನು ಕಾಯ್ದುಕೊಂಡಿದೆ.

ಇದನ್ನೂ ಓದಿ: ಪ್ರಧಾನಿಯೊಂದಿಗಿನ ಮಾತುಕತೆಗಳಲ್ಲಿ ಪ್ರವಾದಿ ನಿಂದನೆ ಬಗ್ಗೆ ಇರಾನ್‌ ಉಲ್ಲೇಖಿಸಿಲ್ಲ: ಭಾರತ

ಭಾರತದ ನೆರೆಯ ದೇಶಗಳಾದ ಚೀನಾ ಈ ಪಟ್ಟಿಯಲ್ಲಿ 160 ನೇ ಸ್ಥಾನದಲ್ಲಿದ್ದು, ನೇಪಾಳ 162ನೇ ಸ್ಥಾನದಲ್ಲಿದೆ. ಭೂತಾನ್ 85 ನೇ ಸ್ಥಾನದಲ್ಲಿದ್ದು, ಪಾಕಿಸ್ತಾನ 176, ಮಯನ್ಮಾರ್‌ 179, ಮಾಲ್ಡೀವ್ 113, ಶ್ರೀಲಂಕಾ 132, ಬಾಂಗ್ಲಾದೇಶ 177 ಮತ್ತು ಅಫ್ಘಾನಿಸ್ಥಾನ 81ನೇ ಸ್ಥಾನದಲ್ಲಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ನೆರೆಯ ರಾಷ್ಟ್ರಗಳ ಸ್ಥಾನ (ಆಧಾರ 2022 EPI Results)

‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ-2020’ ರಲ್ಲಿ ಭಾರತವು 180 ದೇಶಗಳಲ್ಲಿ 168 ನೇ ಸ್ಥಾನದಲ್ಲಿತ್ತು. ಈ ವರ್ಷದ ಪಟ್ಟಿಯಲ್ಲಿ ದೇಶದ ಪರಿಸರ ಆರೋಗ್ಯ ಅವನತಿಯತ್ತ ಸಾಗಿದೆ ಎಂದು ಸೂಚಿಸಿದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕವನ್ನು ಮೊದಲ ಬಾರಿಗೆ 2002 ರಲ್ಲಿ ವಿವಿಧ ದೇಶಗಳ ಪರಿಸರ ಸಮರ್ಥನೀಯತೆಯನ್ನು ಅಳೆಯುವ ಸೂಚ್ಯಂಕವಾಗಿ ಸ್ಥಾಪಿಸಲಾಯಿತು. ಇದನ್ನು ವಿಶ್ವ ಆರ್ಥಿಕ ವೇದಿಕೆ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸ್ಥಾಪಿಸಲಾಯಿತು.

ಇದನ್ನೂ ಓದಿ: ಮಾತು ಮರೆತ ಭಾರತ; ದಲಿತ್ ಫೈಲ್ಸ್: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಸಾಸನೂರು ಹತ್ಯಾಕಾಂಡ

“ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ಹವಾಮಾನ ಬದಲಾವಣೆಯ ಕಾರ್ಯಕ್ಷಮತೆ, ಪರಿಸರ ಆರೋಗ್ಯ ಮತ್ತು ಪರಿಸರ ವ್ಯವಸ್ಥೆಯ ಚೈತನ್ಯದ ಮೇಲೆ 180 ದೇಶಗಳಿಗೆ ಶ್ರೇಯಾಂಕ ನೀಡಿದೆ. ಈ ಸೂಚಕಗಳು ಸ್ಥಾಪಿತ ಪರಿಸರ ನೀತಿ ಗುರಿಗಳಿಗೆ ದೇಶಗಳು ಎಷ್ಟು ನಿಕಟವಾಗಿವೆ ಎಂಬುದಕ್ಕೆ ರಾಷ್ಟ್ರೀಯ ಪ್ರಮಾಣದಲ್ಲಿ ಪ್ರಮಾಣವನ್ನು ಒದಗಿಸುತ್ತವೆ” ಎಂದು ವರದಿ ಹೇಳುತ್ತದೆ.

ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತ ಮತ್ತು ಇತರ ದೇಶಗಳ ಕಡಿಮೆ ಅಂಕಗಳು ಹವಾಮಾನ ಬದಲಾವಣೆ, ಗಾಳಿ ಮತ್ತು ನೀರಿನ ಗುಣಮಟ್ಟದಂತಹ ವಿವಿಧ ಸಮರ್ಥನೀಯ ಕ್ರಮಗಳ ಮೇಲೆ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿದೆ ಎಂದು ವರದಿಯು ಸೂಚಿಸುತ್ತವೆ.

ಆದರೆ ಈ ವಿಶ್ವ ಬ್ಯಾಂಕಿನ ವರದಿಗೆ ಬಿಜೆಪಿಯ ಮೋದಿ ನೇತೃತ್ವದ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಪರಿಸರ ಸಚಿವಾಲಯವು, ‘ಪರಿಸರ ಕಾರ್ಯಕ್ಷಮತೆ ಸೂಚ್ಯಂಕ ವಿಶ್ಲೇಷಣೆಯನ್ನು ಸ್ವೀಕರಿಸುವುದಿಲ್ಲ’ ಎಂದು ಹೇಳಿದೆ.

ಇದನ್ನೂ ಓದಿ: ಪ್ರವಾದಿಯನ್ನು ಅವಹೇಳನ ಮಾಡಿದ ಬಿಜೆಪಿಯ ತಪ್ಪಿಗೆ ಭಾರತ ಯಾಕೆ ಕ್ಷಮೆ ಕೇಳಬೇಕು?: ಮೋದಿಗೆ ಕೆಟಿಆ‌‌ರ್‌ ಪ್ರಶ್ನೆ

“ವರದಿಯ ಲೇಖಕರು ತಪ್ಪಾಗಿ ವಿಶ್ಲೇಷಿಸಿದ್ದಾರೆ. ಪಕ್ಷಪಾತದ ಮಾಪನಗಳು ಮತ್ತು ಪಕ್ಷಪಾತದ ಲೆಕ್ಕಾಚಾಗಳ ಬಳಕೆಯಿಂದಾಗಿ ಭಾರತವು ಅತ್ಯಂತ ಕೆಳಗಿನ ಶ್ರೇಣಿಗೆ ಹೋಗುವಂತಾಯಿತು ಎಂದು ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...