Homeಮುಖಪುಟದಂತ ಸಂಗ್ರಹ ಪ್ರಕರಣ: ಮೋಹನ್‌ಲಾಲ್‌ ವಿರುದ್ಧದ ಆರೋಪ ಕೈಬಿಡಲು ಕೋರ್ಟ್ ನಕಾರ!

ದಂತ ಸಂಗ್ರಹ ಪ್ರಕರಣ: ಮೋಹನ್‌ಲಾಲ್‌ ವಿರುದ್ಧದ ಆರೋಪ ಕೈಬಿಡಲು ಕೋರ್ಟ್ ನಕಾರ!

- Advertisement -
- Advertisement -

ಎರಡು ಜೋಡಿ ದಂತಗಳನ್ನು ಅಕ್ರಮವಾಗಿ ಇರಿಸಿಕೊಂಡಿದ್ದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ನಟ ಮೋಹನ್ ಲಾಲ್ ವಿರುದ್ಧದ ಕಾನೂನು ಪ್ರಕ್ರಿಯೆಗಳನ್ನು ಹಿಂಪಡೆಯುವಂತೆ ಕೇರಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಕೊಚ್ಚಿಯ ವಿಚಾರಣಾ ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್ ಲಾಲ್ ವಿಚಾರಣೆ ಎದುರಿಸಬೇಕಾಗಿರುವುದು ಸ್ಪಷ್ಟವಾಗಿದೆ. ಮೋಹನ್‌ ಲಾಲ್ ಅಕ್ರಮವಾಗಿ ದಂತದ ಕಲಾಕೃತಿಗಳನ್ನು ಇರಿಸಿಕೊಂಡಿದ್ದರು ಎಂದು 2012ರಲ್ಲಿ ಪ್ರಕರಣ ದಾಖಲಾಗಿದ್ದು, ಥೇವರದಲ್ಲಿನ ಅವರ ಮನೆಯಿಂದ ಕಲಾಕೃತಿಗಳನ್ನು ವಶಕ್ಕೆ ಪಡೆಯಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಕರಣವನ್ನು ಮುಂದುವರಿಸುವುದು ವ್ಯರ್ಥ ಕಸರತ್ತಾಗಿದೆ. ನ್ಯಾಯಾಲಯದ ಸಮಯವೂ ವ್ಯರ್ಥವಾಗುತ್ತದೆ” ಎಂದು ರಾಜ್ಯ ಸರ್ಕಾರ ಪ್ರತಿಪಾದಿಸಿದೆ. ಆದರೆ ಕೋರ್ಟ್, “ಮೊದಲ ಆರೋಪಿಯಾಗಿ ಗುರುತಿಸಲಾಗಿರುವ ಮೋಹನ್‌ಲಾಲ್ ಅವರಿಗೆ ನೀಡಲಾದ ಮಾಲೀಕತ್ವ ಪ್ರಮಾಣಪತ್ರದ ಕಾನೂನುಬದ್ಧತೆಯ ಬಗ್ಗೆ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಸವಾಲುಗಳನ್ನು ಬಗೆಹರಿಸದೆ ಅರ್ಜಿಯನ್ನು ತರಾತುರಿಯಲ್ಲಿ ಸಲ್ಲಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದೆ.

“ವಿಚಾರಣೆಯನ್ನು ಹಿಂಪಡೆಯಲು ಸಲ್ಲಿಸಿರುವ ಅರ್ಜಿಯನ್ನು ಅನುಮತಿಸಲು ನಾನು ಒಲವು ತೋರುತ್ತಿಲ್ಲ” ಎಂದು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಅಂಜು ಕ್ಲೀಟಸ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ: Film Review| ಜನ ಗಣ ಮನ: ಸಮೂಹ ಸನ್ನಿಗೊಂದು ಮದ್ದು

ಈ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಯಿಂದ ಹಿಂದೆ ಸರಿಯಲು ಫೆಬ್ರವರಿ 7, 2020ರಂದು ರಾಜ್ಯ ಸರ್ಕಾರ ಒಪ್ಪಿಗೆ ವಿಸ್ತರಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಆದರೆ ನ್ಯಾಯಾಲಯ ತನ್ನ ಆದೇಶದಲ್ಲಿ, “ಈ ಪ್ರಕರಣದಲ್ಲಿ ಯಾವುದೇ ಗೆಜೆಟ್ ನೋಟಿಫಿಕೇಶನ್ ಇರುವುದಿಲ್ಲ. ದಂತಗಳಿಗೆ ಸಂಬಂಧಿಸಿದ ಮಾಲೀಕತ್ವವು ಅನೂರ್ಜಿತವಾಗಿದೆ” ಎಂದು ತಿಳಿಸಿದೆ.

ಜೂನ್ 2012ರಲ್ಲಿ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ಮೋಹನ್‌ ಲಾಲ್‌ ಮನೆಯಿಂದ ನಾಲ್ಕು ಆನೆ ದಂತಗಳನ್ನು ವಶಪಡಿಸಿಕೊಳ್ಳಲಾಯಿತು. ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಯಿತು. ಯಾವುದೇ ಹೆಚ್ಚಿನ ತನಿಖೆ ನಡೆಯದಂತೆ ಪ್ರಕರಣವನ್ನು ಮುಚ್ಚಿ ಹಾಕಲು ತನ್ನ ಪ್ರಭಾವವನ್ನು ಮೋಹನ್‌ ಬಳಸಿದ್ದಾರೆಂದು ದೂರುದಾರರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...