Homeಮುಖಪುಟಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

ಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

- Advertisement -
- Advertisement -

“ಚಿತ್ರ ಕಲಾವಿದರಿಗೆ ಲಲಿತಕಲಾ ಅಕಾಡೆಮಿಯಿದೆ, ಬರಹಗಾರ-ಲೇಖಕರಿಗೆ ಸಾಹಿತ್ಯ ಅಕಾಡೆಮಿ ಇದೆ, ಹಾಗಾದರೆ, ಕಾರ್ಟೂನಿಸ್ಟ್‌ಗಳಿಗೆ ಯಾಕೆ ಅಂತದ್ದೇ ಒಂದು ಸಂಸ್ಥೆ ಇರಬಾರದು” ಎನ್ನುತ್ತಾರೆ ಖ್ಯಾತ ವ್ಯಂಗ್ಯಚಿತ್ರಕಾರರಾದ ವಿ.ಜಿ. ನರೇಂದ್ರ ಅವರು. ತಮ್ಮ ಈ ಕನಸನ್ನು ಬೆನ್ನುಬಿಡದೆ, ’ಇಂಡಿಯನ್
ಇನ್‌ಸ್ವಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್’ ಎಂಬ ಸಂಸ್ಥೆಯ ಮೂಲಕ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಯನ್ನು ಪ್ರಾರಂಭಿಸಿ ಅದರ ಮೇಲ್ವಿಚಾರಕರಾಗಿ ಮುನ್ನಡೆಸುತ್ತಿದ್ದಾರೆ.

ಬೆಂಗಳೂರಿನ ಎಂ.ಜಿ.ರೋಡ್‌ನ ಟ್ರಿನಿಟಿ ಸರ್ಕಲ್‌ಗೆ ಲಂಬದಲ್ಲಿರುವ ಮಿಡ್‌ಫೋರ್ಡ್ ಗಾರ್ಡನ್ ರಸ್ತೆಯಲ್ಲಿರುವ ಮಿಡ್‌ಫೋರ್ಡ್ ಹೌಸ್‌ನ ನೆಲಮಾಳಿಗೆಯಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ದೇಶದ ಮೊದಲ ಕಾರ್ಟೂನ್ ಗ್ಯಾಲರಿ. ಇದೀಗ ಈ ಕಾರ್ಟೂನ್ ಗ್ಯಾಲರಿಗೆ 15ನೇ ವರ್ಷದ ಸಂಭ್ರಮ. 2007ರ ಆಗಸ್ಟ್ 16ರಂದು ಇದನ್ನು ರಾಜ್ಯದ ರಾಜ್ಯಪಾಲರಾಗಿದ್ದ ಟಿ.ಎನ್ ಚತುರ್ವೇದಿ ಅವರು ಉದ್ಘಾಟಿಸಿದ್ದರು. ಆ ವೇಳೆ ರಾಜ್ಯದ ಖ್ಯಾತ ವ್ಯಂಗ್ಯಚಿತ್ರಕಾರರಾದ ಬಿ.ವಿ. ರಾಮಮೂರ್ತಿ, ವಿ.ಜಿ. ನರೇಂದ್ರ ಮತ್ತು ಬಿ.ಜಿ. ಗುಜ್ಜಾರಪ್ಪ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು.

ಅದರ ನಂತರವೂ ಗ್ಯಾಲರಿಯಲ್ಲಿ ನಿರಂತರವಾಗಿ ಪ್ರದರ್ಶನಗಳನ್ನು ನಡೆಸುತ್ತಲೇ ಬರಲಾಗುತ್ತಿದೆ. ತಿಂಗಳಿಗೆ ಒಂದು ಪ್ರದರ್ಶನದಂತೆ ಇದುವರೆಗೂ ಸುಮಾರು 180ಕ್ಕಿಂತಲೂ ಹೆಚ್ಚಿನ ವ್ಯಂಗ್ಯ ಪ್ರದರ್ಶನಗಳನ್ನು ನಡೆಸಲಾಗಿದೆ. “ಇದೀಗ 181ನೇ ವ್ಯಂಗ್ಯಚಿತ್ರ ಪ್ರದರ್ಶನ ಪ್ರಾರಂಭವಾಗಿದ್ದು, ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಪ್ರಧಾನ ವ್ಯಂಗ್ಯಚಿತ್ರಕಾರ ಇ.ಪಿ. ಉನ್ನಿ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ” ಎಂದು ವಿ.ಜಿ. ನರೇಂದ್ರ ಅವರು ಹೇಳುತ್ತಾರೆ. “ಉನ್ನಿ ಅವರು ಈ ಪ್ರದರ್ಶನಕ್ಕೆಂದೇ ಬೆಂಗಳೂರಿನ ವಿಶೇಷ ಸ್ಥಳಗಳ ಸುಮಾರು 12 ಚಿತ್ರಗಳನ್ನು ರಚಿಸಿದ್ದು, ಆ ಚಿತ್ರಗಳನ್ನೂ ಈ ಪ್ರದರ್ಶನಕ್ಕೆ ಇಟ್ಟಿದ್ದೇವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂಬರುವ ಆಗಸ್ಟ್ ತಿಂಗಳಲ್ಲಿ ’ಇಂಡಿಯನ್ ಕಾರ್ಟೂನ್’ ಗ್ಯಾಲರಿ ತನ್ನ ಯಶಸ್ವಿ ಹದಿನೈದನೇ ವಾರ್ಷಿಕೋತ್ಸವವನ್ನು ಆಚರಿಸಲಿದೆ. ಈ ವೇಳೆ ಭಾರತದ ಎಲ್ಲಾ ವ್ಯಂಗ್ಯಚಿತ್ರಕಾರರ ವ್ಯಂಗ್ಯಚಿತ್ರಗಳ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತದೆ.

ತನ್ನ ಹೆಸರು ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ಎಂದಿದ್ದರೂ ಇದು ಕೇವಲ ಭಾರತೀಯ ವ್ಯಂಗ್ಯ ಚಿತ್ರಕಾರರಿಗೆ ಮಾತ್ರ ಸೀಮಿತವಾಗಿಲ್ಲ. ಅಮೆರಿಕ, ಇಂಗ್ಲೆಂಡ್, ಚೀನಾ ಸೇರಿದಂತೆ ವಿದೇಶಿ ವ್ಯಂಗ್ಯಚಿತ್ರಕಾರರ ಪ್ರದರ್ಶನಗಳನ್ನೂ ನಡೆಸುತ್ತಿದೆ. ಗ್ಯಾಲರಿಗೆ ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಗಳಿಂದಲೂ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಾರೆ ಎನ್ನುತ್ತಾರೆ ವಿ.ಜಿ. ನರೇಂದ್ರ.

ಗ್ಯಾಲರಿಯಲ್ಲಿ ಕೇವಲ ವ್ಯಂಗ್ಯಚಿತ್ರ ಪ್ರದರ್ಶನ ಮಾಡುವುದಲ್ಲದೆ ವ್ಯಂಗ್ಯಚಿತ್ರಕಾರ್ತಿ ಮಾಯಾ ಕಾಮತ್ ಅವರ ನೆನಪಿನಲ್ಲಿ ಪ್ರತಿವರ್ಷ ’ಅಂತಾರಾಷ್ಟ್ರೀಯ ಕಾರ್ಟೂನ್ ಸ್ಪರ್ಧೆ’ಯನ್ನೂ ನಡೆಸಲಾಗುತ್ತಿದೆ. ಈ ಸ್ಪರ್ಧಾರ್ಥಿಗಳಿಗೆ ಒಟ್ಟು ಒಂದು ಲಕ್ಷ ರೂಪಾಯಿ ಬಹುಮಾನಗಳನ್ನು ವಿತರಿಸಲಾಗುತ್ತದೆ. ಇದನ್ನು ಕಳೆದ 14 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಈ ವೇಳೆ ಆಯಾ ವರ್ಷದ ಉದಯೋನ್ಮುಖ ವ್ಯಂಗ್ಯಚಿತ್ರಕಾರರನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ವಿ.ಜಿ. ನರೇಂದ್ರ ಹೇಳುತ್ತಾರೆ.

ಇಷ್ಟೇ ಅಲ್ಲದೆ ಗ್ಯಾಲರಿಯಲ್ಲಿ ಕಾರ್ಟೂನ್ ರಚಿಸುವ ಕಾರ್ಯಾಗಾರಗಳನ್ನು ಕೂಡಾ ನಡೆಸಲಾಗುತ್ತದೆ. ಈವರೆಗೆ ಇಲ್ಲಿ ಸುಮಾರು 30 ಯಶಸ್ವಿ ಕಾರ್ಯಾಗಾರಗಳು ನಡೆದಿದ್ದು, ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಜನರು ಭಾಗವಹಿಸಿದ್ದಾರೆ. ಕಾರ್ಯಾಗಾರಗಳ ಬಗ್ಗೆ ಮಾತನಾಡುವ ವಿ.ಜಿ.ನರೇಂದ್ರ, “ವ್ಯಂಗ್ಯಚಿತ್ರ ಜಗತ್ತಿನಲ್ಲಿ ಮಹಿಳಾ ಕಾರ್ಟೂನಿಸ್ಟ್‌ಗಳು ಕಡಿಮೆ ಇದ್ದಾರೆ ಎಂಬ ಅಪವಾದವಿದೆ. ಇದು ನಿಜ ಕೂಡಾ ಆಗಿದೆ. ಆದರೆ ನಮ್ಮ ಕಾರ್ಯಾಗಾರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ ಅರ್ಧಕ್ಕರ್ಧ ಜನರು ಮಹಿಳೆಯರಾಗಿದ್ದರು. ಇದು ತುಂಬಾ ಆಶಾದಾಯಕ ಬೆಳವಣಿಗೆಯಾಗಿದೆ” ಎಂದು ಸಂತಸ ವ್ಯಕ್ತಪಡಿಸುತ್ತಾರೆ.

ಇಂಡಿಯನ್ ಕಾರ್ಟೂನ್ ಗ್ಯಾಲರಿ ಕೇವಲ ವ್ಯಂಗ್ಯಚಿತ್ರಗಳ ಪ್ರದರ್ಶನ ಮಾತ್ರ ಮಾಡುವುದಲ್ಲದೆ, ವ್ಯಂಗ್ಯಚಿತ್ರಗಳ ಬಗೆಗಿನ ಸುಮಾರು 3 ಸಾವಿರ ಅತೀ ಅಪರೂಪದ ಪುಸ್ತಕಗಳ ಗ್ರಂಥಾಲಯವನ್ನೂ ಹೊಂದಿದೆ. “ಇಲ್ಲಿರುವ ಪುಸ್ತಕಗಳು ಭಾರತದ ಬೇರೆಲ್ಲೂ ಸಿಗದಿರುವಷ್ಟು ಅಪರೂಪದ್ದಾಗಿದ್ದು, ಅದಕ್ಕೆ ಸಾಕ್ಷಿ ಎಂಬಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಂದ ವ್ಯಂಗ್ಯಚಿತ್ರಗಳ ಬಗ್ಗೆ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಗ್ಯಾಲರಿಗೆ ಭೇಟಿ ನೀಡುತ್ತಾರೆ” ಎಂದು ನರೇಂದ್ರ ಹೇಳುತ್ತಾರೆ. ಗ್ರಂಥಾಲಯಗಳ ಜೊತೆಗೆ ವ್ಯಂಗ್ಯಚಿತ್ರ ಪುಸ್ತಕಗಳ ಮಾರಾಟವನ್ನೂ ಗ್ಯಾಲರಿ ಮಾಡುತ್ತಿದೆ.

“ಗ್ಯಾಲರಿಗೆ ಎಲ್ಲರಿಗೂ ಉಚಿತ ಪ್ರವೇಶವಿದ್ದು, ಗ್ಯಾಲರಿಯ ಸದಸ್ಯತನವನ್ನೂ ಪಡೆದುಕೊಳ್ಳಬಹುದಾಗಿದೆ. ತಿಂಗಳಿಗೆ ಸುಮಾರು 2 ಸಾವಿರಕ್ಕಿಂತಲೂ ಹೆಚ್ಚಿನ ಜನರು ಗ್ಯಾಲರಿಗೆ ಭೇಟಿ ನೀಡುತ್ತಿದ್ದು ಅದರಲ್ಲೂ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದುಹೋಗುತ್ತಾರೆ” ಎನ್ನುತ್ತಾರೆ ನರೇಂದ್ರ ಅವರು. “ಕೊರೊನಾ ಸಮಯದಲ್ಲಿ ಗ್ಯಾಲರಿಯಲ್ಲಿ ಜನರ ಓಡಾಟ ಇದ್ದಿರಲಿಲ್ಲ ಎನ್ನುವುದನ್ನು ಬಿಟ್ಟರೆ, ಉಳಿದ ಎಲ್ಲಾ ಸಮಯದಲ್ಲೂ ಗ್ಯಾಲರಿಗೆ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಲೇ ಇದ್ದಾರೆ” ಎಂದು ಖುಷಿ ವ್ಯಕ್ತಪಡಿಸುತ್ತಾರೆ ಅವರು.

ನೈಸ್ ಕಂಪೆನಿಯ ಮುಖ್ಯಸ್ಥರಾದ ಅಶೋಕ್ ಖೇಣಿ ಇಂಡಿಯನ್ ಕಾರ್ಟೂನ್ ಗ್ಯಾಲರಿಗೆ ಜಾಗವನ್ನು ನೀಡಿ ನೆರವಾಗಿದ್ದಾರೆ ಎಂದು ನರೇಂದ್ರ ಅವರು ನೆನಪಿಸಿಕೊಳ್ಳತ್ತಾರೆ. ”ಅಶೋಕ್ ಅವರಿಗೆ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಕಾರ್ಟೂನಿಸ್ಟ್ ತುಂಬಾ ಋಣಿಯಾಗಿದೆ. ಈ ಕಲೆಯನ್ನು ಬೆಳೆಸಲು ಅವರು ನೀಡಿರುವ ಕೊಡುಗೆ ಶ್ಲಾಘನೀಯ” ಎಂದು ಅವರು ಹೇಳುತ್ತಾರೆ.

ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮಾತನಾಡುವ ನರೇಂದ್ರ ಅವರು, “ವ್ಯಂಗ್ಯಚಿತ್ರ ಕಲೆ ಎನ್ನುವುದು ಆಂಟಿ ಎಸ್ಟಾಬ್ಲಿಷ್‌ಮೆಂಟ್ ಆದದ್ದು. ವ್ಯಂಗ್ಯಚಿತ್ರಕಾರರ ಪ್ರಮುಖ ಕೆಲಸವೇ ಅಧಿಕಾರದಲ್ಲಿ ಇರುವವರನ್ನು ಪ್ರಶ್ನೆ ಮಾಡುವುದು. ಆಡಳಿತಕ್ಕೆ ಚಾಟಿ ಬೀಸಿ ಅವರನ್ನು ಮತ್ತು ಜನರನ್ನು ಎಚ್ಚರಿಸುವುದು. ಇದೇ ಕಾರ್ಟೂನಿಸ್ಟ್‌ಗಳ ಕರ್ತವ್ಯ. ಕೇವಲ ಅಧಿಕಾರದಲ್ಲಿ ಇರುವವರು ಮಾತ್ರವಲ್ಲ, ವಿರೋಧ ಪಕ್ಷಗಳನ್ನೂ ನಾವು ಟೀಕಿಸುತ್ತೇವೆ. ಹಿಂದಿನಿಂದಲೂ ಅದು ನಡೆದುಕೊಂಡು ಬಂದಿದೆ” ಎಂದು ಹೇಳುತ್ತಾರೆ.

“ಸರ್ಕಾರದ ವಿರುದ್ಧ ಕಾರ್ಟೂನ್ ಬರೆದಾಗ ಅದರ ಅಭಿಮಾನಿಗಳು ಕಾರ್ಟೂನಿಸ್ಟ್‌ಗಳ ಮೇಲೆ ಮುಗಿಬೀಳುತ್ತಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಾಗಿದೆ. ಅದಾಗಿಯೂ ಕಾರ್ಟೂನಿಸ್ಟ್‌ಗಳು ತಮ್ಮ ಕೆಲಸವನ್ನು ಮಾಡುತ್ತಾ, ಕಾರ್ಟೂನ್‌ಗಳನ್ನು ಬರೆಯುತ್ತಾ, ಚಾಟಿ ಬೀಸುತ್ತಲೇ ಇದ್ದಾರೆ. ಪತ್ರಿಕೆಗಳನ್ನು ಬೇಕಾದರೆ ಪ್ರಭುತ್ವಕ್ಕೆ ಬಗ್ಗು ಬಡಿಯಬಹುದು, ಆದರೆ ವ್ಯಂಗ್ಯಚಿತ್ರಕಾರರನ್ನು ಬಗ್ಗುಬಡಿಯಲು ಆಗುವುದಿಲ್ಲ, ವ್ಯಂಗ್ಯಚಿತ್ರಗಳ ಹಿರಿಮೆ ಇದು” ಎಂದು ವಿ.ಜಿ. ನರೇಂದ್ರ ಅವರು ಹೆಮ್ಮೆಯಿಂದ ಹೇಳುತ್ತಾರೆ.

ನಗರದ ಮಧ್ಯಭಾಗದಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಗೆ ನೀವೂ ಬೇಟಿ ಕೊಡಿ.


ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...